ನವದೆಹಲಿ : ಅರುಣಾಚಲ ಪ್ರದೇಶದ ರಾಜ್ಯಪಾಲ ರಾಜ್ ಖೋವಾ ಅವರ ತೀರ್ಮಾನಗಳನ್ನು ರದ್ದು ಪಡಿಸಿರುವ ಸುಪ್ರೀಂ ಕೋರ್ಟ್ ನಬಮ್ ತುಕಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪನೆ ಮಾಡುವಂತೆ ಆದೇಶ ನೀಡಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಅರುಣಾಚಲ ಪ್ರದೇಶದಲ್ಲಿನ ಕಾಂಗ್ರೆಸ್ ಸರಕಾರದ ಪತನಕ್ಕೆ ಕಾರಣವಾಗುವಂತೆ ರಾಜ್ಯಪಾಲ ಜ್ಯೋತಿ ರಾಜ್ ಖೋವಾ ಹೊರಡಿಸಿದ್ದ ಎಲ್ಲ ಆದೇಶಗಳನ್ನು ರದ್ದುಪಡಿಸಿರುವ ನ್ಯಾಯಾಲಯ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಪುನರ್ ಸ್ಥಾಪನೆ ಮಾಡಿದೆ.
ಜಸ್ಟಿಸ್ ಜೆ ಎಸ್ ಖೇಹರ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಡಿಸೆಂಬರ್ 9ರ ಬಳಿಕ ರಾಜ್ಯಪಾಲರು ತೆಗೆದುಕೊಂಡಿರುವ ಎಲ್ಲ ನಿರ್ಧಾರಗಳು ಸಂವಿಧಾನ ಬಾಹಿರವಾಗಿದೆ ರಾಜ್ಯಪಾಲರು ವಿಧಾನಸಭಾ ಅಧಿವೇಶನವನ್ನು ಹಿಂದಕ್ಕೆ ನಿಗದಿಸಿ ಆದೇಶಿಸಿರುವ 2015ರ ಡಿಸೆಂಬರ್ 15ರ ಯಥಾಸ್ಥಿತಿಯನ್ನು ಕಾಯುವಂತೆ ಆದೇಶಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಬಮ್ ತುಕಿ, ಸುಪ್ರೀಂ ಕೋರ್ಟ್ ತೀರ್ಪಿನಿಂದ ನಮಗೆ ಸಂತಸವಾಗಿದೆ. ಸುಪ್ರೀಂ ಕೋರ್ಟ್ ದೇಶದ ಕಾನೂನನ್ನು ಎತ್ತಿಹಿಡಿದಿದೆ ಮತ್ತು ದೇಶವನ್ನು ಕಾಪಾಡಿದೆ ಎಂದು ತಿಳಿಸಿದ್ದಾರೆ.