ನವದೆಹಲಿ : ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನದೆದ ಅಂತರ್ ರಾಜ್ಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ಸಂವಹನ ಅತಿ ಮುಖ್ಯ ಎಂದು ಹೇಳಿದರು. ಅಂತರ್ ರಾಜ್ಯ ಸಮಿತಿಯು ಸಹಕಾರ ಒಕ್ಕೂಟ ವ್ಯವಸ್ಥೆ ಮೌಲ್ಯಗಳಿಗೆ ಮಾತ್ರ ಒತ್ತು ನೀಡದೆ ನಾಗರಿಕರ ಉತ್ತಮ ಭವಿಷ್ಯದ ಕಡೆಗೂ ಗಮನ ಹರಿಸಬೇಕು ಎಂದರು.
ರಾಜ್ಯ ಸರ್ಕಾರಗಳು ಗುಪ್ತಚರ ಮಾಹಿತಿಯನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಇದು ದೇಶದಲ್ಲಿ ಕಟ್ಟೆಚ್ಚರ ವಹಿಸಲು ಮತ್ತು ಆಂತರಿಕ ಭದ್ರತೆಯ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.