Untitled Document
Sign Up | Login    
Dynamic website and Portals
  
July 18, 2016

ಅಧಿವೇಶನದಲ್ಲಿ ರಚನಾತ್ಮಕ ಚರ್ಚೆ ನಡೆಸಲು ಎಲ್ಲಾ ಪಕ್ಷಗಳಿಗೆ ಪ್ರಧಾನಿ ಮನವಿ

Narendra Modi (File Pic) Narendra Modi (File Pic)

ನವದೆಹಲಿ : ಮುಂಗಾರು ಅಧಿವೇಶನದ ವೇಳೆ ಸಂಸತ್ತಿನ ಎರಡೂ ಸದನಗಳಲ್ಲಿ ದೇಶಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಕುರಿತು ರಚನಾತ್ಮಕ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಿದ್ದಾರೆ.

ಅಧಿವೇಶ ಆರಂಭಕ್ಕೂ ಮುನ್ನ ಸಂಸತ್ ಹೊರಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಎಲ್ಲಾ ರಾಜಕೀಯ ಪಕ್ಷಗಳ ಜೊತೆಗೂ ಮಾತನಾಡಿದ್ದೇನೆ. ಪ್ರತಿಯೊಬ್ಬರೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಳ್ಳೆಯ ಚಿತ್ತದಿಂದ ಇದ್ದಾರೆ. ಎಲ್ಲಾ ಪಕ್ಷಗಳುಚರ್ಚೆಯಲ್ಲಿ ಪಾಲ್ಗೊಳ್ಳಲು ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ನನಗೆ ಎಲ್ಲಾ ರಾಜಕೀಯ ಪಕ್ಷಗಳ ಬಗೆಗೂ ವಿಶ್ವಾಸವಿದೆ ಎಂದ ಅವರು, 70ನೇ ಸ್ವಾತಂತ್ರ್ಯ ದಿನಾಚರಣೆಗೆ ಮೊದಲು ಈ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ದೇಶದ ಹಿತದೃಷ್ಟಿಯಿಂದ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲು, ಉತ್ತಮ ಚರ್ಚೆ ನಡೆಸಲು ಬಯಸಿದ್ದೇವೆ ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited