ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದ ಹಿಂಸಾಚಾರ ಹಾಗೂ ನಿರಂತರ ಕರ್ಫ್ಯೂ ಹೇರಿದ್ದರಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಅವಲೋಕನ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಹತ್ಯೆ ನಂತರ ಕಾಶ್ಮೀರ ಕಣಿವೆಯಲ್ಲಿ ಆರಂಭವಾಗಿರುವ ಹಿಂಸಾಚಾರ, ಪ್ರತಿಭಟನೆಗೆ ಈವರೆಗೂ 44 ಜನ ಬಲಿಯಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ರಾಜ್ಯದ ಒಟ್ಟು 10 ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿತ್ತು.
ನಾಲ್ಕು ಜಿಲ್ಲೆಗಳಾದ ಬಾರಾಮುಲ್ಲಾ, ಬಂಡಿಪೊರಾ, ಬಡಗಮ್ ಗಂದೇರಬಾಲ್ನಲ್ಲಿ ಕರ್ಫ್ಯೂ ಸಡಿಲಿಸಲಾಗಿದ್ದು, ಶಾಲೆಗಳು ಪುನಾರಂಭಕ್ಕೆ ಸಜ್ಜಾಗಿವೆ.
ಕಳೆದ 14 ದಿನಗಳಿಂದ ರಾಜ್ಯಾಂದ್ಯಂತ ಮೊಬೈಲ್ ನೆಟ್ವರ್ಕ್ ಮತ್ತು ಇಂಟರನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.