ನವದೆಹಲಿ : ಜುಲೈ.26,1999ರ ಕಾರ್ಗಿಲ್ ಯುದ್ಧ ನಡೆದು 17 ವರ್ಷ. ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ. ಯೋಧರ ವೀರೋಚಿತ ತ್ಯಾಗಗಳು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.
1999 ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧರ ವೀರತ್ವ ಹಾಗೂ ತ್ಯಾಗಗಳನ್ನು ದೇಶ ಎಂದಿಗೂ ಮರೆಯುವುದಿಲ್ಲ. ದೇಶದೊಳಗೆ ನುಸುಳಿದ್ದವರಿಗೆ ಸರಿಯಾದ ಉತ್ತರ ನೀಡಿದ್ದ ಯೋಧರ ಶೌರ್ಯವನ್ನು ದೇಶ ಸದಾ ನೆನಪಿಸಿಕೊಳ್ಳುತ್ತದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿ ಎ ಸರ್ಕಾರದ ಸದೃಢ ನಾಯಕತ್ವವನ್ನೂ ಸ್ಮರಿಸಿದ ಮೋದಿ, 1999 ರ ಯುದ್ಧದಲ್ಲಿ ಭಾರತದ ಗೆಲುವಿಗೆ ಕಾರಣವಾದ ರಾಜಕೀಯ ನಾಯಕತ್ವವನ್ನೂ ನಾವು ಇಂದು ಹೆಮ್ಮೆಯಿಂದ ಸ್ಮರಿಸುತ್ತೇವೆ ಎಂದು ತಿಳಿಸಿದ್ದಾರೆ.