ನವದೆಹಲಿ : ಆಮ್ ಆದ್ಮಿ ಪಕ್ಷಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಆಪ್ ಕಾರ್ಯಕರ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಆರೋಪದಲ್ಲಿ ಪಕ್ಷದ ಶಾಸಕ ಶರದ್ ಚೌಹಾನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 19 ರಂದು ನರೇಲಾದಲ್ಲಿ ಆತ್ಮಹತ್ಯೆಗೆ ಶರಣಾದ ಆಪ್ ಕಾರ್ಯಕರ್ತೆ ಸೋನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶರದ್ ಅವರನ್ನು ಬಂಧಿಸಲಾಗಿದೆ.
ಆತ್ಮಹತ್ಯೆಗೆ ಶರಣಾಗುವ ಮುನ್ನ ಸೋನಿ ಆಪ್ ಕಾರ್ಯಕರ್ತ ರಮೇಶ್ ಭಾರದ್ವಾಜ್ ಅವರ ಲೈಂಗಿಕ ಕಿರುಕುಳ ಎಂದು ಆರೋಪಿಸಿದ್ದರು. ಈ ಬಗ್ಗೆ ಜೂನ್ ತಿಂಗಳಿನಲ್ಲೇ ಪೊಲೀಸರಿಗೆ ದೂರನ್ನೂ ಸಲ್ಲಿಸಿದ್ದರು. ಭಾರದ್ವಾಜ್ ಅವರಿಗೆ ಶಾಸಕ ಶರದ್ ಅವರು ರಕ್ಷಣೆ ನೀಡುತ್ತಿದ್ದಾರೆ ಎಂದು ಸೋನಿ ಕುಟುಂಬ ಆರೋಪಿಸಿತ್ತು. ಈಗಾಗಲೇ ಭಾರದ್ವಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.