Untitled Document
Sign Up | Login    
Dynamic website and Portals
  
July 31, 2016

ಪರೀಕ್ಷೆಯಿಂದ ಅಂತಸತ್ವ ಹೊರಬರುತ್ತದೆ: ರಾಘವೇಶ್ವರ ಶ್ರೀ

ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳಿಂದ ಗೋಕಥೆ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳಿಂದ ಗೋಕಥೆ

ಬೆಂಗಳೂರು : ಪೂಜಿಸಬೇಕಾದ್ದನ್ನು ಪೂಜಿಸದಿದ್ದರೆ, ಗೌರವ ಸಲ್ಲಿಸಬೇಕಾದ್ದಲ್ಲಿ ಗೌರವ ಸಲ್ಲಿಸದೇ ಇದ್ದರೆ ಅನರ್ಥ ನಿಶ್ಚಿತ, ಕಾಮಧೇನುವನ್ನು ಅನಾಧರಿಸಿದ ದಿಲೀಪ ಪರಿತಪಿಸುವಂತಾಯಿತು ಎಂದು ಶ್ರೀ ರಾಮಚಂದ್ರಾಪುರ ಮಠಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.

ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ 'ಗೋಕಥೆ'ಯಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು, ನಂದಿನಿ ಧೇನುವಿನ ರಕ್ಷಣೆಗೆ ಸರ್ವಾರ್ಪಣೆಗೆ ಸಿದ್ದವಾಗಿ, ಗೋಭಕ್ತಿ-ಗುರುಭಕ್ತಿ ಮೆರೆದ ಆದರ್ಶ ರಾಜ ದಿಲೀಪನ ಪ್ರಕರಣವನ್ನು ಪ್ರವಚನ, ಗಾಯನ, ರೂಪಕ, ಚಿತ್ರರಚನೆಗಳಿಂದ ಕೂಡಿದ ವಿಶಿಷ್ಟವಾದ ಗೋಕಥಾ ಕಾರ್ಯಕ್ರಮದಲ್ಲಿ ನಿರೂಪಿಸಿದರು.

ನೋವು ಇಲ್ಲದಿದ್ದರೆ ಜೀವನ ಪೂರ್ಣವಾಗುವುದಿಲ್ಲ, ನೋವು-ನಲಿವು ಸೇರಿದರೆ ಜೀವನ ಪೂರ್ಣವಾಗುತ್ತದೆ. ಹಾಗೆಯೇ, ಸುಖದಿಂದ ಇದ್ದ ಆಯೋಧ್ಯೆಯ ದೊರೆಯ ಜೀವನದಲ್ಲು ಮಕ್ಕಳಿಲ್ಲದ ನೋವು ಮನೆಮಾಡಿತು. ದಾರಿಕಾಣದಾದಾಗ ಗುರುವೇ ದಾರಿ ಎಂಬಂತೆ ರಾಜಗುರು ವಸಿಷ್ಠರಲ್ಲಿ ದಿಲೀಪ ತನ್ನನೋವನ್ನು ತೋಡಿಕೊಂಡ. ಸೂರ್ಯವಂಶದ ಭವಿಷ್ಯ ಕತ್ತಲಾಗಲು ಗೋವಿನ ಕುರಿತಾದ ಅನಾಧರವೇ ಕಾರಣ ಎಂದು ಅರಿತ ವಸಿಷ್ಠರು, ನಂದಿನಿ ಧೇನುವಿನ ಸೇವೆಯನ್ನು ಮಾಡಲು ದಿಲೀಪನಿಗೆ ಹೇಳಿದರು.

ಮಾಡುವ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಸಾಧ್ಯ. ಅಂತೆಯೇ ದಿಲೀಪನು ಗೋಸೇವೆಯಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡ. ನಂದಿನೀ ಧೇನುವಿನ ಪ್ರಾಣಕ್ಕೆ ಸಂಚಕಾರ ಎದುರಾದಾಗ, ಹಿಂಜರಿಯದೇ ತನ್ನ ದೇಹಾರ್ಪಣೆಗೆ ಮುಂದಾಗಿ ಗೋಸೇವೆಗೆ ಪರಮಾದರ್ಶವಾದ ಎಂದು ಕಥೆ-ಉಪಕಥೆ, ಗಾಯನಗಳ ಮೂಲಕ ಮನೋಜ್ಞವಾಗಿ ವರ್ಣಿಸಿ, ಪರೀಕ್ಷೆಯಿಂದ ಅಂತಸತ್ವ ಹೊರಬರುತ್ತದೆ ಎಂದು ಶ್ರೀಗಳು ನುಡಿದರು.

ಗೋವಿಗಾದ ಅಪಮಾನದಿಂದ ಸೂರ್ಯವಂಶದ ಭವಿಷ್ಯ ಕತ್ತಲಾಗುವ ಭೀತಿಯಲ್ಲಿತ್ತು, ಎಲ್ಲಿ ತಪ್ಪಗಿರುತ್ತದೆಯೋ, ಅಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂಬಂತೆ ಗೋಸೇವೆಯಿಂದ ಸೂರ್ಯವಂಶ ಬೆಳೆಯಿತು. ತಪ್ಪಿಗೆ ಪ್ರಾಯಶ್ಚಿತ್ತ ಪರಿಹಾರ. ಆದರೇ ತಪ್ಪನ್ನೇ ಮಾಡದಿರುವುದು ಜಾಣತನ. ಹಾಗಾಗಿ ನಾವು ಗೋವಿಗೆ ಅನಾಧರವನ್ನು ತೋರದೇ ಗೋವನ್ನು ಸಲಹೋಣ ಎಂದು ಶ್ರೀಗಳು ಕರೆನೀಡಿದರು.

ಕಥೆಯ ನಿರೂಪಣೆಯ ಜೊತೆಜೊತೆಗೆ ಸಂದರ್ಭಕ್ಕೆ ಹೊಂದುವ ಚಿತ್ರಗಳನ್ನು ನೀರ್ನಳ್ಳಿ ಗಣಪತಿ ಹೆಗಡೆ ಮನಮೋಹಕವಾಗಿ ಚಿತ್ರಿಸಿದರು, ಶ್ರೀಪಾದ್ ಭಟ್, ಕುಮಾರಿ ದೀಪಿಕಾ ಹಾಗೂ ತಂಡದ ಗಾಯನ ಕಥೆಯ ಅಂದವನ್ನು ಹೆಚ್ಚಿಸಿತು, ನಂತರ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರ ಸಾರಥ್ಯದಲ್ಲಿ ಮೂಡಿಬಂದ ರೂಪಕ ಜನರ ಮನತಟ್ಟಿತು.

ಗೋಕಥೆಯ ನಂತರ, ಶ್ರೀಗಳು ಹಾಗೂ ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು, ಗೋಕುಲಕ್ಕೆ ಒಳಿತಾಗಲೆಂಬ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.

ಇದಕ್ಕೂ ಮೊದಲು ಮಧ್ಯಾಹ್ನ ನಡೆದ ಸಭೆಯಲ್ಲಿ ಶ್ರೀಭಾರತೀಪ್ರಕಾಶನವು ಹೊರತಂದಿರುವ ಸಾಧನಾಪಂಚಕ ದೃಶ್ಯಮುದ್ರಿಕೆ ಹಾಗೂ ಗೋನಮನ ಧ್ವನಿಮುದ್ರಿಕೆಯನ್ನು ಪೂಜ್ಯ ಶ್ರೀಗಳು ಲೋಕಾರ್ಪಣೆಗೊಳಿಸಿದರು.

ತುಂಬಿದ ಸಭೆ ಗೋಕಥೆಯನ್ನು ಕಣ್ಣುತುಂಬಿಕೊಂಡಿತು. ಶ್ರೀ ಆರ್ ವಿ ಶಾಸ್ತ್ರೀ, ಕೆನರಾ ಬ್ಯಾಂಕ್ ಮಾಜಿ ಅಧ್ಯಕ್ಷರು, ಶ್ರೀ ನಾರಾಯಣ ರೆಡ್ಡಿ, ಸಾವಯವ ಕೃಷಿ ತಜ್ಞರು, ಶ್ರೀಮಠದ ಪದಾಧಿಕಾರಿಗಳು, ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು. ಚೆನ್ನೈ ವಲಯದ ಪರವಾಗಿ ಕೆನರಾ ಬ್ಯಾಂಕ್ ಮಾಜಿ ನಿರ್ದೇಶಕರಾದ ಭೀಮ ಭಟ್ ಸರ್ವಸೇವೆಯನ್ನು ಸಮರ್ಪಿಸಿದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

ಲೋಕದೊಳಿತಿಗೆ ವೇದ ಪಾರಾಯಣಃ

ಸನಾತನ ಆರ್ಯ ವೈದಿಕ ಪರಂಪರೆಯ ಅಡಿಪಾಯವೆಂದರೆ ವೇದಗಳೇ ಆಗಿವೆ. ಭಾರತ ದೇಶಕ್ಕೆ ಇಂದು ಪ್ರಪಂಚದಾದ್ಯಂತ ಗೌರವ ದೊರಕುತ್ತಿದೆಯೆಂದರೆ ಅದಕ್ಕೆ ಮೂಲ ಕಾರಣ ಭಾರತದ ಆತ್ಮವಾಗಿರುವ ವೇದಗಳೇ ಆಗಿವೆ. ವೇದಗಳು ಪ್ರಪಂಚದಲ್ಲಿರುವ ಎಲ್ಲಾ ಜನರಿಗೂ ಮಂಗಲವನ್ನು ಬಯಸುತ್ತದೆ. ವೇದಗಳಿಗೆ ಶೋಧಕತ್ವ ಹಾಗೂ ಪಾವಕತ್ವ ಎಂಬ ಎರಡು ಶಕ್ತಿಗಳಿವೆ. ವೇದದ ರಕ್ಷಣೆಯೆಂದರೆ ಅಧ್ಯಯನ ಅಧ್ಯಾಪನಗಳಿಂದ ಮಾತ್ರ ಸಾಧ್ಯ. ಆದ್ದರಿಂದ ವೇದಾಧ್ಯಯನ ಮಾಡಿದವರಿಗೆ ಸಮಾಜ ಪಾರಾಯಣಕ್ಕೆ ಅವಕಾಶವನ್ನೊದಗಿಸಿಕೊಟ್ಟಾಗ ಮಾತ್ರ ವೇದದ ರಕ್ಷಣೆ ಸಾಧ್ಯ. ಇದರ ರಕ್ಷಣೆ ಸಮಾಜದ ಹೊಣೆಗಾರಿಕೆಯೂ ಹೌದು. ಹಿಂದೆ ರಾಜಾಶ್ರಯವಿದ್ದ ಸಂದರ್ಭದಲ್ಲಿ ಮಹಾರಾಜರು ವೇದದ ರಕ್ಷಣೆಗಾಗಿ ನಾನಾ ಯೊಜನೆಗಳನ್ನು ಹಮ್ಮಿಕೊಳ್ಳುತ್ತಿದ್ದರು. ಆದರೆ ಬರಬರುತ್ತಾ ಅದು ಕಡಿಮೆಯಾಗುತ್ತಾ ಬಂದಿದೆ. ಆಗ ಮಠಗಳು ಇದರ ಹೊಣೆಗಾರಿಕೆಯನ್ನು ಹೊತ್ತುಕೊಂಡು ರಕ್ಷಣೆಗೆ ಮುಂದಾದವು. ಯಾರು ಚೆನ್ನಾಗಿ ಅಧ್ಯಯನ ಮಾಡಿರುತ್ತಾರೋ ಅವರನ್ನು ಗುರುತಿಸಿ ಗೌರವಿಸಿ ಅವರಿಗೆ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಲಾರಂಭಿಸಿದರು. ಪ್ರಕೃತದಲ್ಲಿ ರಾಮಚಂದ್ರಾಪುರ ಮಠಾಧೀಶರಾದ ಪೂಜ್ಯ ರಾಘವೇಶ್ವರಭಾರತೀ ಮಹಾಸ್ವಾಮಿಗಳು ತಮ್ಮ ಗೋಚಾತುರ್ಮಾಸ್ಯದ ಸಂದರ್ಭದಲ್ಲಿ ಕರ್ನಾಟದ ಮೂರ್ಧನ್ಯ ವೇದ ವಿದ್ವಾಂಸರನ್ನು ಆಹ್ವಾನಿಸಿ ಲೋಕದೊಳಿತಿಗಾಗಿ ವೇದಪಾರಾಯಣ ಸಪ್ತಾಹವನ್ನು ಆಯೋಜಿಸಿದ್ದಾರೆ. ವೇದಮೂರ್ತಿ ಪಳ್ಳತ್ತಡ್ಕ ಶಂಕರನಾರಾಯಣ ಭಟ್ಟ ಘನಪಾಠಿಗಳ ಅಧ್ಯಕ್ಷತೆಯಲ್ಲಿ ಸಮಸ್ತ ಕನ್ನಡಿಗರ ಕ್ಷೇಮಕ್ಕಾಗಿ ಆಯೋಜಿಸಿದ ಈ ಕಾರ್ಯಕ್ರಮ 31.07.2016 ರಂದು ಮುಕ್ತಾಯಗೊಂಡಿತು. ಒಟ್ಟಾರೆ ಸುಮಾರು 8 ಜನ ಘನಪಾಠಿಗಳು ಹಾಗೂ ಸುಮಾರು 50 ಜನ ವೈದಿಕರು ಭಾಗವಹಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited