Untitled Document
Sign Up | Login    
Dynamic website and Portals
  
August 2, 2016

ಭಾರತ ಗೋಮೂತ್ರ ರಫ್ತು ಮಾಡಿ ಕೀರ್ತಿಶಾಲಿಯಾಗಲಿ: ರಾಘವೇಶ್ವರ ಶ್ರೀ

ಬೆಂಗಳೂರಿನ ಸಂದೀಪ್ ಅವರಿಗೆ ಶ್ರೀಗಳಿಂದ ಗೋಸೇವಾ ಪುರಸ್ಕಾರ ಬೆಂಗಳೂರಿನ ಸಂದೀಪ್ ಅವರಿಗೆ ಶ್ರೀಗಳಿಂದ ಗೋಸೇವಾ ಪುರಸ್ಕಾರ

ಬೆಂಗಳೂರು : ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. 'ಗಾವೋ ವಿಶ್ವಸ್ಯ ಮಾತರಃ', ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.

ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ ಗೋಮಾಂಸ ರಪ್ತು ಮಾಡಿ ಶ್ರೀಮಂತವಾಗಬೇಕಿಲ್ಲ, ಗೋಮೂತ್ರ ರಪ್ತು ಮಾಡಿ ಕೀರ್ತಿಶಾಲಿಯಾಗಲಿ. ರೋಗ ನೀಡುವ ಗೋಮಾಂಸಕ್ಕಿಂತ ಕ್ಯಾನ್ಸರ್ ನಂತಹ ರೋಗಗಳನ್ನು ಗುಣಪಡಿಸುವ ಗೋಮೂತ್ರವನ್ನು ಪ್ರಪಂಚ ಬಳಸಬೇಕು. ಇಡೀ ವಿಶ್ವವೇ ಗೋಮಾತೆಯ ಕೃಪೆಗೆ ಪಾತ್ರವಾಗಲಿ ಎಂದು ಆಶಿಸಿದರು.

ಬೆಂಗಳೂರಿನ ಸಂದೀಪ್ ಅವರಿಗೆ ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದ ಪೂಜ್ಯ ಶ್ರೀಗಳು, ನಗರವಾಸಿಗಳು ಗ್ರಾಮ ಜೀವನದ ಸ್ವಾದವನ್ನು ಪಡೆಯುವಂತಾಗಬೇಕು. ಗೋಸೇವೆಯಿಂದ ಮಾತ್ರ ಅದು ಸಾಧ್ಯ. ಅಂತಹ ಕೆಲಸವನ್ನು ಮಾಡಿದ ಸಂದೀಪ್ ಅಭಿನಂದನಾರ್ಹರು ಎಂದು ಆಶೀರ್ವದಿಸಿದರು.

ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಸಂತ ಸಂದೇಶ ನೀಡಿ ಭಗವಂತನನ್ನು ಒಲಿಸಿಕೊಳ್ಳಬೇಕಾದರೆ ಗೋವನ್ನು ಆರಾಧಿಸಬೇಕು. ಸಕಲ ದೇವತೆಗಳ ಸನ್ನಿಧಾನವಿರುವ ಗೋವು ಸಂಪತ್ತಿನ ಪ್ರತೀಕ. ಸಂಪತ್ತಿನ ಮೂಲ ಪರಿಸರ, ಆರೋಗ್ಯ, ಸದ್ಭುದ್ಧಿ ಎಲ್ಲವೂ ಗೋವಿನ ಮೂಲ. ಗೋವನ್ನು ಉಪೇಕ್ಷಿಸಿದರೆ ಯಾವುದೇ ಜಾಗತೀಕರಣವೂ, ಅಭಿವೃದ್ದಿಯೂ ಸಾಧ್ಯವಿಲ್ಲ ಎಂದರು.

ಗೋಸೇವಾ ಪುರಸ್ಕಾರ ಪಡೆದ ಬೆಂಗಳೂರಿನ ಸಂದೀಪ್ 'ಗೋಆಧಾರಿತ ತಾರಸಿ ಕೃಷಿ' ಎಂಬ ವಿಷಯದ ಕುರಿತು ಮಾತನಾಡಿದರು. ನಿಯಮಿತ ಸ್ಥಳಾವಕಾಶಗಳಿರುವ ನಗರ ಪ್ರದೇಶಗಳಲ್ಲಿ ತಾರಸಿಯ ಮೇಲೆ ಗವ್ಯಾಧಾರಿತ ಗೊಬ್ಬರಗಳನ್ನು ಉಪಯೋಗಿಸಿ ಹೇಗೆ ಕೈತೋಟ ಮಾಡಬಹುದು? ಹಾಗೂ ಅದರ ಮಹತ್ವವನ್ನು ವಿವರಿಸಿದರು.

ಶ್ರೀಭಾರತೀಪ್ರಕಾಶನವು ಹೊರತಂದ ಸಾಧನಾಪಂಚಕ ಪ್ರವಚನಮಾಲಿಕೆಯ ವಿ.ಸಿ.ಡಿಯನ್ನು ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಗೋಕಥಾಗೀತೆ ಧ್ವನಿಮುದ್ರಿಕೆಯನ್ನು ರಾಘವೇಶ್ವರ ಶ್ರೀಗಳು ಲೋಕಾರ್ಪಣೆ ಮಾಡಿದರು. ಸಭಾಕಾರ್ಯಕ್ರಮದ ನಂತರ ಕಲಾರಾಮದಲ್ಲಿ ತ್ಯಾಗರಾಜ ಶರ್ಮಾ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಹರೀಶೆಮಂಗಳೂರು, ಅಂಬಾಗಿರಿ, ಹಾರ್ಸಿಕಟ್ಟ ವಲಯದವರು ಸರ್ವಸೇವೆಯನ್ನು ನೆರವೇರಿಸಿದರು. ದೇಶಭಂಡಾರಿ ಸಮಾಜದವರು ಪಾದಪೂಜೆ ನಡೆಸಿದರು. ಶ್ರೀಮಠದ ಪದಾಧಿಕಾರಿಗಳು, ಚಾತುರ್ಮಾಸ್ಯ ಸಮಿತಿಯ ಸದಸ್ಯರು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಭರತ್ ಎಂ. ಹೆಗಡೆ ದಂಪತಿಗಳು ಸಭಾಪೂಜೆಯನ್ನು ನೆರವೇರಿಸಿದರು. ವಿದ್ವಾನ್ ಜಗದೀಶ ಶರ್ಮಾ ನಿರೂಪಿಸಿದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited