ಪೂಂಛ್ : ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ದಿಟ್ಟ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದ್ದಾರೆ.
ಲೈನ್ ಆಫ್ ಕಾರ್ಗಿಲ್ (ಎಲ್ಓಸಿ) ಬಳಿ ಪಾಕಿಸ್ತಾನ ಸೇನೆ ಭಾರತದ ಸೇನಾ ನೆಲೆ ಮೇಲೆ ಲಘು ಸ್ವಯಂ ಚಾಲಿತ ಆರ್ಟಿಲರಿ ಗನ್ ಗಳಿಂದ ಶೆಲ್ ಮತ್ತು ಗುಂಡಿನ ದಾಳಿ ನಡೆಸುತ್ತಿದ್ದು, ಭಾರತದ ಯೋಧರು ಗಡಿ ರಕ್ಷಣೆಗೆ ದಿಟ್ಟ ಹೋರಾಟ ನಡೆಸಿದ್ದಾರೆ ಎಂದು ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ಹೇಳಿದ್ದಾರೆ.
ಬೆಳಗಿನ ಜಾವದಿಂದ ನಡೆಯುತ್ತಿರುವ ಗುಂಡಿನ ಕಾಳಗ ಈವರೆಗೂ ಮುಂದುರೆದಿದ್ದು, ಶಸ್ತ್ರ ಸಜ್ಜಿತ ಯೋಧರು ಪ್ರತಿದಾಳಿ ಕೈಗೊಂಡಿದ್ದಾರೆ ಎನ್ನಲಾಗಿದೆ.
ಶನಿವಾರ ಸಂಜೆ ವೇಳೆಯಲ್ಲಿ ಅಮರನಾಥ ಯಾತ್ರಿಕರನ್ನು ಗುರಿಯಾಗಿಸಿಕೊಂಡು ಕೆಲ ಶಂಕಿತರು ಗ್ರೆನೇಡ್ ದಾಳಿ ನಡೆಸಿದ್ದರು. ಈ ವೇಳೆ 10ಕ್ಕೂ ಅಧಿಕ ಯಾತ್ರಾರ್ಥಿಗಳು ಗಾಯಗೊಂಡಿದ್ದರು. ಯಾತ್ರಾರ್ಥಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿ ಪರಾರಿಯಾಗುತ್ತಿದ್ದ ಮೂವರ ಪೈಕ ಭಾರತೀಯ ಯೋಧರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ