Untitled Document
Sign Up | Login    
Dynamic website and Portals
  
August 18, 2016

ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

ಬೆಂಗಳೂರು : ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ, ಸೃಷ್ಟಿಯ ಅದ್ಭುತವಾದ ಗೋವಿನ ಹಾಲು, ಗೋಮೂತ್ರ ಹಾಗೂ ಗೋಮಯಾದಿಗಳನ್ನು ಬಳಸಬೇಕು ಹೊರತು ಮಾಂಸಕ್ಕಾಗಿ ಗೋಹತ್ಯೆ ಮಾಡಿ, ಗೋಕುಲವನ್ನೇ ವಿನಾಶಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.

ಗೋವಿಗೂ ಶಿವನಿಗೂ ವ್ಯತ್ಯಾಸವಿಲ್ಲ, ಶಿವನು ವಿಷವನ್ನು ತನ್ನೊಳಗೇ ಇಟ್ಟುಕೊಂಡು ಜಗತ್ತಿಗೆ ಶುಭವನ್ನು ಅನುಗ್ರಹಿಸುವನು, ಹಾಗೇಯೇ ಗೋವೂ ಕೂಡ ಸೇವಿಸುವ ಆಹಾರದಲ್ಲಿ ವಿಷದ ಅಂಶ ಇದ್ದರೆ ತನ್ನೊಳಗೇ ಇಟ್ಟುಕೊಂಡು, ಅಮೃತ ಸದೃಶವಾದ ಹಾಲನ್ನು ನೀಡುತ್ತದೆ. ಲಕ್ನೋ ಕೃಷಿ ವಿಶ್ವವಿದ್ಯಾಲಯದ ಸಂಶೋಧನೆಯು ಇದನ್ನು ದೃಡಪಡಿಸಿದೆ ಎಂದು ಹೇಳಿದರು.

ಪಂಚಗವ್ಯ ಚಿಕಿತ್ಸೆಯ ಮೂಲಕ ಕ್ಯಾನ್ಸರ್ ಇತ್ಯಾದಿ ರೋಗಗಳಿಂದ ಬಳಲುತ್ತಿದ್ದ 10,000 ಕ್ಕೂ ಅಧಿಕ ರೋಗಿಗಳನ್ನು ಗುಣಪಡಿಸಿದ ಡಾ. ಡಿ.ಪಿ ರಮೇಶ್ ಹಾಗೂ 10,000ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಿದ ಶೈಲೇಶ್ ಹೊಳ್ಳ ಅವರಿಗೆ ಗೋಸೇವಾಪುರಸ್ಕಾರವನ್ನು ಅನುಗ್ರಹಿಸಿದ ಶ್ರೀಗಳು, ವಿಷವನ್ನು ಉಂಡರೂ ಅಮೃತವನ್ನೇ ನೀಡುವ ಮಾತೃವಾತ್ಸಲ್ಯದ ಗೋವನ್ನು ಸಂತರು, ವೈದ್ಯರು , ಲೇಖಕರು , ಎಲ್ಲರೂ ಸೇರಿ ಉಳಿಸಿ ಬೆಳೆಸಬೇಕು ಎಂದು ಆಗ್ರಹಿಸಿದರು.

ಕೊಡಗಿನ ಮುದ್ದಿನಕಟ್ಟೆ ಮಠದ ಶ್ರೀ ಷ.ಬ್ರ ಅಭಿನವ ಸಿದ್ದಲಿಂಗ ಶಿವಾಚಾರ್ಯಸ್ವಾಮಿಗಳವರು ಸಂತಸಂದೇಶ ನೀಡಿ,ಇಂದು ಗೋವನ್ನು ನಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ . ಚಿನ್ನವನ್ನು ಒಡಲೊಳಗೆ ತುಂಬಿಕೊಂಡಿರುವ ಗೋವನ್ನು ಕೊಲ್ಲುವುದು, ಚಿನ್ನಕ್ಕಾಗಿ ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಲ್ಲುವ ಕಥೆಯಂತಾಗುತ್ತದೆ. ಶ್ರೀರಾಮಚಂದ್ರಾಪುರಮಠದ ಗೋ ಆಂದೋಲನ ಅನುಕರಣೀಯ ಎಂದರು.

ಡಾ. ಡಿ.ಪಿ ರಮೇಶ್ ಹಾಗೂ ಶೈಲೇಶ್ ಹೊಳ್ಳ ಅವರುಗಳಿಗೆ ಪೂಜ್ಯ ಶ್ರೀಗಳು ಗೋಸೇವಾಪುರಸ್ಕಾರವನ್ನು ಅನುಗ್ರಹಿಸಿದರು. ಶ್ರೀಭಾರತೀಪ್ರಕಾಶನವು ಹೊರತಂದ ಸನಾತನ ಭಾರತ ಎಂಬ ಪುಸ್ತಕವನ್ನು ರಾಘವೇಶ್ವರಶ್ರೀಗಳು ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯಮುದ್ರಿಕೆಯನ್ನು ಮುದ್ದಿನಕಟ್ಟೆ ಮಠದ ಶ್ರೀಗಳು ಲೋಕಾರ್ಪಣೆ ಮಾಡಿದರು. ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ಕು. ಅಖಿಲಾ ಭಟ್ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಭಟ್ಕಳ, ಭವತಾರಿಣಿ ಹಾಗೂ ಮರವಂತೆ ವಲಯದವರು ಸರ್ವಸೇವೆಯನ್ನು ನೆರವೆರಿಸಿದರು. ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಅರವಿಂದ ಬಂಗಲಗಲ್ಲು ಹಾಗೂ ರಾಘವೇಂದ್ರ ಕಡ್ನಮನೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited