Untitled Document
Sign Up | Login    
Dynamic website and Portals
  
August 21, 2016

ಮಂಗಳೂರಿಗೆ ಅಮಿತ್ ಷಾ ಆಗಮನ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರಿಗೆ ಅಮಿತ್ ಷಾ ಆಗಮನ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರು : ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ.

ಚಂಡಿಗಢ-ಕೊಚ್ಚಿವೇಲಿ ಎಕ್ಸ್​ಪ್ರಸ್​ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್​ಗೆ ಬಂದಿಳಿದು, ಸದ್ಯ ಅವರು ರ್ಸಟ್ ಹೌಸ್​ನಲ್ಲಿ ತಂಗಿದ್ದಾರೆ. ಈ ನಡುವೆ ಅಮಿತ್ ಷಾ ರ್ಸಟ್ ಹೌಸ್​ನಲ್ಲಿ ತಂಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಅಲ್ಲಿಗೆ ಆಗಮಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

70ನೇ ಸ್ವಾತಂತ್ರ್ಯೊತ್ಸವ ಬಲಿದಾನ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಷಾ, ನಗರದ ಪಿವಿಎಸ್ ವೃತ್ತ ಬಳಿ ಬಿಜೆಪಿ ಕಚೇರಿ ಮುಂಭಾಗ ‘ಗಿಡ ನೆಡಿ ಪರಿಸರ ಉಳಿಸಿ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಹಾವೀರ ವೃತ್ತದಲ್ಲಿ ತಿರಂಗಾ ಯಾತ್ರೆ ಬೃಹತ್ ವಾಹನ ರ‍್ಯಾಲಿ ಉದ್ಘಾಟಿಸುವರು. ನಂತರ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕನ ಪ್ರತಿಮೆಗೆ ಹಾರಾರ್ಪಣೆ ಮಾಡಿ ‘ಬಲಿದಾನ ಸ್ಮರಣೆ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕೊಣಾಜೆ ಮಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ತಿರಂಗಾ ಯಾತ್ರೆ ಬೃಹತ್ ಸಾರ್ವಜನಿಕ ಸಭೆ’ ನಡೆಯಲಿದ್ದು, ಸಭೆಯನ್ನುದ್ದೇಶಿಸಿ ಷಾ ಮಾತನಾಡಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited