Untitled Document
Sign Up | Login    
Dynamic website and Portals
  
August 23, 2016

ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೂ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ

Siddaramaiah (File Pic) Siddaramaiah (File Pic)

ಬೆಂಗಳೂರು : ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೂ ಈ ಬಾರಿ ನಿಗಮ ಮಂಡಳಿಗಳಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಇಪ್ಪತ್ತಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಈ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರ ಜೊತೆ ಇದೇ 26 ರಂದು ದೆಹಲಿಗೆ ದೌಡಾಯಿಸಲಿದ್ದಾರೆ.

ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ವಂಚಿತರಾಗಿದ್ದ ಹಲವು ಶಾಸಕರು ಸೇರಿದಂತೆ ಮೂರಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿರುವ ಶಾಸಕರಿಗೆ ಪ್ರಮುಖ ನಿಗಮ ಮಂಡಳಿಗಳ ಸ್ಥಾನಗಳನ್ನು ನೀಡುವ ಸೂತ್ರ ಹೆಣೆಯಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು 30:30:40 ಅನುಪಾತದ ಮೇಲೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೇಮಕಾತಿಯನ್ನು ನಿರ್ಧರಿಸಲಾಗಿದೆ.

ಶೇ.30ರಷ್ಟು ಶಾಸಕರಿಗೆ, ಶೇ.30ರಷ್ಟು ಕಡಿಮೆ ಅಂತರದಲ್ಲಿ ಸೋತವರಿಗೆ, ಶೇ.40ರಷ್ಟು ಕಾರ್ಯಕರ್ತರಿಗೆ ಅಧ್ಯಕ್ಷ ಸ್ಥಾನವನ್ನು ನೀಡಲು ತೀರ್ಮಾನಿಸಿದ್ದು, ಇದಕ್ಕೆ ಹೈಕಮಾಂಡ್ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಶಾಸಕರಾದ ಮಾಲೀಕಯ್ಯ ಗುತ್ತೇದಾರ್, ನರೇಂದ್ರಸ್ವಾಮಿ, ಗೋಪಾಲ ಪೂಜಾರಿ, ಮನೋಹರ್ ತಹಸೀಲ್ದಾರ್, ಬಿ.ಆರ್.ಯಾವಗಲ್, ಬಿ.ಜಿ.ಗೋವಿಂದಪ್ಪ, ಶ್ರೀನಿವಾಸ್, ಡಾ.ಸುಧಾಕರ್, ತುಕಾರಾಮ್, ಬಿ.ಡಿ.ಇನಾಂದಾರ್, ಸಿದ್ದು ನ್ಯಾಮೇಗೌಡ, ಆರ್.ದೇವರಾಜ್, ಎಸ್.ಟಿ.ಸೋಮಶೇಖರ್, ಮುನಿರತ್ನ, ಶಿವಾನಂದಪಾಟೀಲ್ ಸೇರಿದಂತೆ ಬಹುತೇಕರು ನಿಗಮ ಮಂಡಳಿಗಳ ಅಧ್ಯಕ್ಷರಾಗಲಿದ್ದಾರೆ.

ಇದಲ್ಲದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರ ಸೇವೆಯನ್ನು ಪರಿಗಣಿಸಿ ನಿಗಮ ಮಂಡಳಿಗಳ ಹುದ್ದೆಯನ್ನು ಪ್ರಾದೇಶಿಕವಾರು, ಜಾತಿವಾರು, ಸಾಮಾಜಿಕ ನ್ಯಾಯದಡಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಮಂತ್ರಿ ಸ್ಥಾನ ಪಡೆಯಲು ವಿಫಲರಾದವರಿಗೆ ಆಯಾಕಟ್ಟಿನ ನಿಗಮ ಮಂಡಳಿಗಳ ಅಧ್ಯಕ್ಷಗಿರಿಯನ್ನು ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ಇರುವವರಿಗೂ ಕೂಡ ಅಧಿಕಾರ ಒದಗಿಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಘಟಕಗಳಿಂದ ಶಿಫಾರಸ್ಸಾಗಿ ಬರುವ ಹೆಸರುಗಳಿಗೆ ಮೊದಲ ಆದ್ಯತೆ ಕೊಡಲು ಆಲೋಚಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited