ನವದೆಹಲಿ : ಪ್ರವಾಸಿ ಭಾರತೀಯ ದಿವಸ್ 2017ರ ಪೋರ್ಟಲ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಅನಾವರಣಗೊಳಿಸಿದರು.
ಈ ವೇಳೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಜನವರಿ 7, 8 ಮತ್ತು 9ರಂದು ಪ್ರವಾಸಿ ಭಾರತೀಯ ದಿವಸ್ ಆಚರಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಆಚರಿಸಲು ಈ ಬಾರಿ ಅವಕಾಶ ನೀಡಿರುವುದಕ್ಕೆ ಸಂತಸವಾಗಿದೆ ಎಂದು ತಿಳಿಸಿದರು. ಪ್ರವಾಸಿ ದಿವಸ್ ನಲ್ಲಿ ಭಾಗವಹಿಸಲು ಭಾರತೀಯರಿಗೆ 100ಡಾಲರ್ ಶುಲ್ಕ ವಿದ್ದು, ವಿದೇಶಿಗರ ನೊಂದಣಿಗೆ 150 ಡಾಲರ್ ಶುಲ್ಕ ವಿಧಿಸಲಾಗಿದೆ ಎಂದರು.
ಇದೇ ವೇಳೆ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ನಡೆಸಿ ಕರ್ನಾಟಕದತ್ತ ಉದ್ಯಮಗಳನ್ನು ಸೆಳೆದಿದ್ದೇವೆ. ಈ ವರ್ಷದ ಮೊದಲ 6 ತಿಂಗಳಲ್ಲೇ 68 ಸಾವಿರ ಕೋಟಿ ವಿದೇಶಿ ಬಂಡವಾಳ ಹರಿದು ಬಂದಿದೆ ಎಂದು ತಿಳಿಸಿದರು.