Untitled Document
Sign Up | Login    
Dynamic website and Portals
  
August 27, 2016

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬೆಂಗಳೂರು : ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ.

ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ ಮಂಜುನಾಥ ರೆಡ್ಡಿ, ರಾಜ್ಯದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಮೇಘರಿಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರ ಗಣ್ಯರು ಆತ್ಮೀಯವಾಗಿ ಸ್ವಾಗತಿಸಿ, ಬರಮಾಡಿಕೊಂಡರು.

ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಲಿರುವ ರಾಷ್ಟ್ರಪತಿ ಪ್ರಣಬ್ ಮುರ್ಜಿ ಹರೆಕೃಷ್ಣ ಗಿರಿಧಾಮದಲ್ಲಿ ಅಕ್ಷಯಪಾತ್ರ ಫೌಂಡೇಷನ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ.28ರಂದು ರಾಷ್ಟ್ರೀಯ ಕಾನೂನು ಶಾಲೆಯ 24ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದು, ಸಯಂಕಾಲ ನವದೆಹಲಿಗೆ ವಾಪಸ್ಸಾಗಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited