Untitled Document
Sign Up | Login    
Dynamic website and Portals
  
September 8, 2016

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ

ಬೆಂಗಳೂರು : ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.

ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ‘ಮರ್ನೆವಾಲಾ ಕ್ಯಾ ನಹಿ ಕಾಯೇಗಾ’ ಎಂಬ ಹಿಂದಿ ನುಡಿಗಟ್ಟನ್ನು ಉಲ್ಲೇಖಿಸಿ ಮಾತನಾಡಿದ ಶ್ರೀಗಳು, ಇಂದು ಕಾಡಿನ ನಾಶ, ಗೋಮಾಳ- ಕೆರೆಗಳ ಅತಿಕ್ರಮಣಗಳಿಂದಾಗಿ ಹಸುಗಳಿಗೆ ಮೇವು ಇಲ್ಲದಂತಾಗಿ, ತಿನ್ನಲು ಏನೂ ಇಲ್ಲದ ಅವು ಬೀದಿಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ವಸ್ತುಗಳನ್ನು ತಿನ್ನುತ್ತಿವೆ. ಪ್ಲಾಸ್ಟಿಕ್ ಜೀರ್ಣವಾಗದೆ, ಮಾರಣಾಂತಿಕೆ ನೋವಿನೊಂದಿಗೆ ಸಾವನ್ನಪ್ಪುತ್ತಿವೆ. ಹಾಗಾಗಿ ಗೋವುಗಳು ಸಂಚರಿಸುವ ಜಾಗಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸುವುದು ಅನಿವಾರ್ಯವಾಗಿದೆ ಎಂದರು.

ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸಲು ಹಾಗೂ ಗೋವು ಸಂಚರಿಸುವ ಜಾಗಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಕುರಿತು ಶ್ರೀರಾಮಚಂದ್ರಾಪುರಮಠವು ಬೃಹತ್ ಆಂದೋಲನವನ್ನು ಹಂಮ್ಮಿಕೊಂಡಿದ್ದು, ‘ಅಮೃತಪಥ’ ಎಂದು ಹೆಸರಿಸಲಾಗಿದೆ. ಗೋವಿನ ಬಗ್ಗೆ ಕಳಕಳಿ ಇರುವವರೆಲ್ಲರೂ ಈ ಆಂದೋಲನದಲ್ಲಿ ಭಾಗವಹಿಸಬಹುದಾಗಿದ್ದು, ಗೋವುಗಳಿಗೆ ಮೃತ್ಯುಪಥವಾಗಿರುವ ಪರಿಸರವನ್ನು ಅಮೃತಪಥವನ್ನಗಿಸಬೇಕಾಗಿದೆ. ಇದು ಸರ್ಕಾರದ ಕರ್ತವ್ಯವಾಗಿದ್ದು, ಸ್ವಚ್ಛಭಾರತ ಅಭಿಯಾನದಂತಹ ಯೋಜನೆಗಳನ್ನುಈ ದಿಶೆಯಲ್ಲಿ ಬಳಸಲು ಸರ್ಕಾರಗಳು ಗಮನ ಹರಿಸಬೇಕಾಗಿದೆ ಎಂದರು.

ಬೀದರ್ ಚಿದಂಬರಾಶ್ರಮದ ಷ. ಬ್ರ. ಶ್ರೀಶ್ರೀ ಶಿವಕುಮಾರ ಮಹಾಸ್ವಾಮಿಗಳು, ಸಂತಸಂದೇಶ ನೀಡಿ, ಗಂಗಾಮಾತಾ, ಗೋಮಾತಾ, ಗೀತಾಮಾತ ಹಾಗೂ ಭಾರತಮಾತಾ ನಮಗೆ ಪವಿತ್ರವಾಗಿದ್ದು, ನಮ್ಮ ಮಕ್ಕಳಿಗೆ ನಾವು ಸಂಸ್ಕಾರವನ್ನು ನೀಡದಿರುವ ಪರಿಣಾಮ ಅವರಿಗೆ ಇವುಗಳ ಬಗ್ಗೆ ಅರಿವಿಲ್ಲ ಎಂದು ವಿಷಾಧಿಸಿದ ಅವರು, ಶ್ರೀ ರಾಮಚಂದ್ರಾಪುರ ಮಠಮಂಗಲ ಗೋಯಾತ್ರೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಕರೆನೀಡಿದರು.

ಕಲಾವಿದರಾಗಿ, ಕಲೆಗಳ ಮೂಲಕವೇ ಗೋಸೇವೆಯಲ್ಲಿ ತೊಡಗಿಕೊಂಡಿರುವ ಶ್ರೀಧರಹೊಳ್ಳ ದಂಪತಿಗಳು ಹಾಗೂ ಪಂಚಗವ್ಯ ಗುರುಕುಲಮ್ ನ ಆಚಾರ್ಯ ನಿರಂಜನ ವರ್ಮಾಜಿ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಶ್ರೀಭಾರತೀಪ್ರಕಾಶನವು ಹೊರತಂದ ಋಗ್ವೇದ ಪಂಚ ಸೂಕ್ತ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಸಾನ್ನಿಧ್ಯವಹಿಸಿದ್ದ ಸಂತರು ಲೋಕಾರ್ಪಣೆ ಮಾಡಿದರು. ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ಸುಬ್ರಹ್ಮಣ್ಯಂ ಅಕ್ಯಾಡಮಿ ಆಫ ಪರ್ಫಾರ್ಮಿಂಗ್ ಆರ್ಟ ವಿದ್ಯಾರ್ಥಿಗಳ ವಾಯೋಲಿನ್ ವಾದನ ನಡೆಯಿತು.

ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಪಂಚಗವ್ಯ ಗುರುಕುಲಮ್ ಇದರ ಸದಸ್ಯರು ಉಪಸ್ಥಿತರಿದ್ದು ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited