ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ. ಸರ್ಕಾರಿ ನೌಕರರ ಸಂಘ ಕೂಡಾ ಹೋರಾಟಕ್ಕೆ ಬೆಂಬಲ ಸೂಚಿಸಿರುವುದರಿಂದ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುವುದು ಅನುಮಾನವಾಗಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಹಾಗೂ ಆಟೊ. ಟ್ಯಾಕ್ಸಿಗಳ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ. ಮಾಲ್, ಚಿತ್ರಮಂದಿರಗಳು ಮುಚ್ಚಿರಲಿವೆ.
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಎಪಿಎಂಸಿ ಮಾರುಕಟ್ಟೆಗಳ ವಹಿವಾಟು ಕೂಡ ಸ್ಥಗಿತಗೊಳ್ಳಲಿದೆ. ಇನ್ನು ಕೇಬಲ್ ಆಪರೇಟರ್ಗಳ ಸಂಘ ಕೂಡಾ ಬಂದ್ಗೆ ಬೆಂಬಲ ನೀಡಿರುವುದರಿಂದ ಕೇಬಲ್ನಲ್ಲಿ ತಮಿಳು ಚಾನೆಲ್ಗಳು ಲಭ್ಯವಿರುವುದಿಲ್ಲ.