Untitled Document
Sign Up | Login    
Dynamic website and Portals
  
September 10, 2016

ಕೃತ್ರಿಮ ಗರ್ಭಧಾರಣೆ ಮನುಷ್ಯತ್ವಕ್ಕೆ ವಿರುದ್ಧ: ರಾಘವೇಶ್ವರಶ್ರೀ

ಬೆಂಗಳೂರು : ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿ, ಗೋವುಗಳಿಗೆ ಸಹಜ ಗರ್ಭಧಾರಣೆಗೆ ಅವಕಾಶಕೊಡದೆ, ಕೃತಕ ಗರ್ಭಧಾನ ಮಾಡುವುದು ಗೋವುಗಳ ಹಕ್ಕಿನ ಮೇಲಾಗುತ್ತಿರುವ ಆಕ್ರಮಣವಲ್ಲವೇ, ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯಾಲಯಗಳ ಮೆಟ್ಟಿಲೇರುವ ನಾವು ಗೋವುಗಳ ಹಕ್ಕನ್ನು ಕಸಿಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಶ್ರೀಗಳು, ಸಹಜತೆಗೆ ಶರಣಾಗಬೇಕು, ಅಸಹಜತೆ – ಮನುಷ್ಯನ ಹಸ್ತಕ್ಷೇಪ ಆದರೆ ಅದರಲ್ಲಿ ದೋಷಗಳು ಇದ್ದೇ ಇರುತ್ತದೆ ಎಂದು ಅಭಿಪ್ರಾಯಪಟ್ಟರು.

ದೇಶೀ ಹಸುಗಳಿಗೆ ಮಿಶ್ರತಳಿಯ ಧಾತುವನ್ನು ಬಳಸಿ ಕೃತಕ ಗರ್ಭಧಾನ ಮಾಡುವುದು ಅವೈಜ್ಞಾನಿಕವಾಗಿದ್ದು, ಸಣ್ಣ ತಳಿಯ ಹಸುಗಳಿಗೆ ದೊಡ್ಡ ಗಾತ್ರದ ಹಸುವಿನಿಂದ ಗರ್ಭವಾದರೆ ಕರು ಹೊರಬರಲಾಗದೇ ಹಸು-ಕರು ಎರಡೂ ದುರ್ಮರಣವನ್ನು ಹೊಂದುತ್ತದೆ, ಕೃತ್ರಿಮ ಗರ್ಭಧಾರಣೆ ಮಾಡುವಾಗ ಗರ್ಭಕೋಶಕ್ಕೂ ಹಾನಿಯಾಗುವ ಸಂಭವವಿರುತ್ತದೆ, ಇದರಲ್ಲಿ ಯಶಸ್ಸಿನ ಅಂಶವೂ ಸರಾಸರಿ 50% ಮಾತ್ರ ಆಗಿದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿರುವ ಬ್ರೂಸೆಲ್ಲೋಸಿಸ್ ಮುಂತಾದ ಅನೇಕ ರೋಗಗಳ ಮೂಲ ಕೃತ್ರಿಮ ಗರ್ಭಧಾರಣೆಯಿಂದ ಹುಟ್ಟಿದ ಮಿಶ್ರತಳಿಗಳಲ್ಲಿ ಮಾತ್ರ ಕಾಣಲು ಸಾಧ್ಯ. ಇವೆಲ್ಲದರ ಜೊತೆಗೆ ಮಾನವತೆಯ ಆಧಾರದಮೆಲೆ ಶ್ರೀರಾಮಚಂದ್ರಾಪುರಮಠ ಹಾಗೂ ಶ್ರೀಮಠದ ಬಳಗ ಕೃತ್ರಿಮ ಗರ್ಭಧಾರಣೆಯನ್ನು ವಿರೋಧಿಸುತ್ತದೆ ಎಂದರು.

ಯಾದಗೀರಿ ಸೊಪ್ಪಿನ ಬಸವೇಶ್ವರ ಮಠದ ಪೂಜ್ಯ ಶ್ರೀ ಷ| ಬ್ರ| ಚನ್ನವೀರ ಸ್ವಾಮೀಜಿ ಹಾಗೂ ಶ್ರೀ ಷ.ಬ್ರ. ಗುರುಶಾಂತ ಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಂತಸಂದೇಶ ನೀಡಿ, ಶ್ರೀರಾಮಚಂದ್ರಾಪುರಮಠದ ಗೋಯಾತ್ರೆಗೆ ನಮ್ಮ ಬೆಂಬಲವಿದ್ದು, ಗೋವಿನ ಕುರಿತಾದ ಈ ಮಹಾ ಆಂದೋಲನಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕರೆನೀಡಿದರು.

ಯಕ್ಷಗಾನ ಕಲೆಯ ಮೂಲಕ ವಿಶಿಷ್ಟವಾಗಿ ಕಲೆಯಮೂಲಕವೂ ಗೋವಿನ ಕುರಿತಾಗಿ ಜಾಗೃತಿ ಮೂಡಿಸಲು ಸಾಧ್ಯ ಎನ್ನುವುದನ್ನು ಸಾಧಿಸಿ ತೋರಿಸಿರುವ ಹೊಸನಗರದ ರಾಮಾರ್ಪಣ ಕಲಾವೇದಿಕೆ, ಮಾರುತೀಪುರ ಹಾಗೂ ಗೋಪ್ರೇಮಿ ನ್ಯಾಯವಾದಿ ಬಿ ಎಸ್ ಪೈ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಶ್ರೀಭಾರತೀಪ್ರಕಾಶನವು ಹೊರತಂದ ಗೃಹವಾಸ್ತು ಪುಸ್ತಕ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಸಾನ್ನಿಧ್ಯವಹಿಸಿದ್ದ ಸಂತರು ಲೋಕಾರ್ಪಣೆ ಮಾಡಿದರು. ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ಗೋಪ್ರೀತಿಯ ಮಕ್ಕಳು ಎಂಬ ನಾಟಕವನ್ನು ಮಕ್ಕಳು ನಡೆಸಿಕೊಟ್ಟರು.

ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited