Untitled Document
Sign Up | Login    
Dynamic website and Portals
  
September 15, 2016

ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣ: ಏಪ್ರಿಲ್ ನಿಂದ ಸಂಚಾರ

ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣ: ಏಪ್ರಿಲ್ ನಿಂದ ಸಂಚಾರ

ಬೆಂಗಳೂರು : ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್‍ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಮಾತನಾಡಿದ ಅವರು, ಮೊದಲನೇ ಹಂತದ 42 ಕಿ ಮೀ ಪೈಕಿ, 11 ಕಿ ಮೀ ಹೊರತುಪಡಿಸಿ 29 ಕಿ ಮೀ ಈಗಾಗಲೇ ಮೆಟ್ರೋ ಸಂಚಾರಕ್ಕೆ ಸಮರ್ಪಿತವಾಗಿದೆ. ಈ 11 ಕಿ ಮೀ ಮಾರ್ಗದಲ್ಲಿ ನಾಲ್ಕು ಕಿ ಮೀ ಸುರಂಗ ಮಾರ್ಗವಿದೆ. ಸುರಂಗ ಮಾರ್ಗದ ಕಾಮಗಾರಿಗಳಲ್ಲಿ ಕೇವಲ 15 ಮೀಟರ್ ಕಾಮಗಾರಿಗಳು ಮಾತ್ರ ಬಾಕಿ ಇದೆ. ಅಂತೆಯೇ, ಹಳಿ ಅಳವಡಿಕೆ, ವಿದ್ಯುತ್ ಸಂಪರ್ಕ, ಪ್ರಾಯೋಗಿಕ ಸಂಚಾರ ಎಲ್ಲವೂ ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳುತ್ತವೆ. ಏಪ್ರಿಲ್‍ನಲ್ಲಿ ಮೊದಲ ಹಂತದ 13,800 ಕೋಟಿ ರೂ ವೆಚ್ಚದ ಈ ಸಂಪೂರ್ಣ ಮಾರ್ಗವು ಕಾರ್ಯಾಚರಣೆಗೆ ಮುಕ್ತವಾಗಲಿದೆ ಎಂದರು.

ಪ್ರಸ್ತುತ ಮೆಟ್ರೋದಲ್ಲಿ ಪ್ರತಿದಿನ ಸರಾಸರಿ 1.8 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಮೊದಲ ಹಂತದ ಕಾರ್ಯಾಚರಣೆ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾದಲ್ಲಿ, ಪ್ರತಿ ದಿನ ಐದು ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆ ಇದೆ.

ನಮ್ಮ ಮೆಟ್ರೋದ ಎರಡನೇ ಹಂತದ 72 ಕಿ ಮೀ ಕಾಮಗಾರಿಗಳೂ ಪ್ರಗತಿಯಲ್ಲಿವೆ. ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ಹಾಗೂ ಕನಕಪುರ ರಸ್ತೆಯಿಂದ ನೈಸ್ ರಸ್ತೆಯ ಕೂಡು ರಸ್ತೆಯವರೆಗೆ ಈಗಾಗಲೇ ಕಾಮಗಾರಿಗಳು ಪ್ರಾರಂಭವಾಗಿವೆ. ಎಲೆಕ್ಟ್ರಾನಿಕ್ಸ್ ಸಿಟಿಯಿಂದ ವೈಟ್‍ಫೀಲ್ಡ್ ವರೆಗಿನ 16 ಕಿ ಮೀ ಮಾರ್ಗಕ್ಕೆ ಮಾಸಾಂತ್ಯದೊಳಗೆ ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಎರಡನೇ ಹಂತದ ಯೋಜನೆಗೆ 26,400 ಕೋಟಿ ರೂ ವೆಚ್ಚವಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತಲಾ ಶೇಕಡಾ 20 ರಷ್ಟು ವೆಚ್ಚವನ್ನು ಭರಿಸಲಿವೆ. ಉಳಿದ ಶೇಕಡಾ 60 ರಷ್ಟು ಮೊತ್ತವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಸಂಪನ್ಮೂಲ ಕ್ರೋಢೀಕರಿಸಲಿದೆ.

ಇದರ ಜೊತೆಗೆ, ಕೇಂದ್ರೀಯ ರೇಷ್ಮೆ ಮಂಡಳಿಯಿಂದ ಕೃಷ್ಣರಾಜಪುರಂವರೆಗೆ 18 ಕಿ ಮೀ ನಮ್ಮ ಮೆಟ್ರೋ ಎರಡನೇ ಹಂತದ ಎ ಭಾಗ ಎಂದು ಆಧ್ಯತೆಯ ಮೇರೆಗೆ ರೂಪಿಸಿ, 3500 ಕೋಟಿ ರೂ ಹೆಚ್ಚುವರಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 20 ರೊಳಗಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಸೂಚಿಸಲಾಗಿದೆ. ಅಲ್ಲದೆ, ಯೋಜನಾ ಅನುಷ್ಠಾನಕ್ಕೆ ಅಗತ್ಯವಿರುವ ವೆಚ್ಚವನ್ನು ಮೆಟ್ರೋ ಸ್ವಾಮ್ಯದಲ್ಲಿರುವ ಭೂಮಿ ಹರಾಜು, ವಿನೂತನ ಆರ್ಥಿಕ ತಂತ್ರಗಳು ಹಾಗೂ ಸಾಲ ಪಡೆಯುವ ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸಲು ಉದ್ದೇಶಿಸಲಾಗಿದೆ.

ನಮ್ಮ ಮೆಟ್ರೋ ಎರಡನೇ ಹಂತವು 2020 ಇಸವಿಯ ವೇಳೆಗೆ ಪೂರ್ಣಗೊಳ್ಳಲಿವೆ. ಆದರೆ, ಎರಡನೇ ಹಂತದ ಎ ಭಾಗದ ಈ ಯೋಜನೆಯನ್ನು ಮೊದಲನೇ ಹಂತದ ಅನುಭವದ ಆಧಾರದ ಮೇರೆಗೆ ಎರಡು ವರ್ಷಗಳ ಮುನ್ನವೇ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಮೆಟ್ರೋ ಎರಡನೇ ಹಂತವು ಅನುಷ್ಠಾನಗೊಂಡಲ್ಲಿ ಪ್ರತಿದಿನ 15 ಲಕ್ಷ ಪ್ರಯಾಣಿಕರು ಸಂಚರಿಸಲು ಅನುಕೂಲವಾಗಲಿದೆ. ಇದರಿಂದ ರಾಜ್ಯದ ರಾಜಧಾನಿಯ ಸಂಚಾರದ ಮೇಲಿನ ಒತ್ತಡವೂ ಗಣನೀಯವಾಗಿ ಕಡಿಮೆಯಾಗಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ರೇಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕಾನಾಮಿಕ್ ಸರ್ವೀಸ್ (ರೈಟ್ಸ್) ಸಂಸ್ಥೆಯು ಒಂಭತ್ತು ಪರ್ಯಾಯ ಮಾರ್ಗಗಳನ್ನು ನೀಲನಕ್ಷೆಯನ್ನು ದಾಖಲಿಸಿ ಕಾರ್ಯ ಸಾಧನಾ ವರದಿಯನ್ನು ಸಲ್ಲಿಸಿದೆ. ಸಾರ್ವಜನಿಕರ ಪ್ರತಿಕ್ರಿಯೆ ಪಡೆಯಲು ಈ ಮಾಹಿತಿಯನ್ನು ಅಂತರ್ಜಾಲ ತಾಣದಲ್ಲಿ ಪ್ರಕಟಿಸಿ, ಒಂದು ತಿಂಗಳ ಕಾಲಾವಕಾಶ ನೀಡಿ, ಸಾರ್ವಜನಿಕ ಅಭಿಪ್ರಾಯ ಪಡೆದು ಸಾಧಕ-ಬಾಧಕಗಳನ್ನು ಪರಿಶೀಲಿಸಿ ಈ ನಿಟ್ಟಿನಲ್ಲಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗಿನ 1800 ಕೋಟಿ ರೂ ಯೋಜನಾ ವೆಚ್ಚದ ಉಕ್ಕಿನ ಮೇಲ್ಸೇತುವೆ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited