ನ್ನವದೆಹಲಿ : ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ.
ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿ ಹಿನ್ನಲೆಯಲ್ಲಿ ಭಾರತ ಇಸ್ಲಾಮಾಬಾದ್ ನಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶ, ಆಫ್ಘಾನಿಸ್ತಾನ, ಭೂತಾನ್ ಮತ್ತು ನೇಪಾಳ ರಾಷ್ಟ್ರಗಳು ಕೂಡ ಭಾರತವನ್ನು ಬೆಂಬಲಿಸಿ ಸಾರ್ಕ್ ಶೃಂಗಸಭೆ ಬಹಿಷ್ಕರಿಸಿದ್ದವು. ಹೀಗಾಗಿ ಸಾರ್ಕ್ ಶೃಂಗಸಭೆ ರದ್ದಾಗುವುದು ಎಂದು ಭಾವಿಸಲಾಗಿತ್ತು. ಆದರೆ ಇದೀಗ ಸಾರ್ಕ್ ಶೃಂಗಸಭೆಯನ್ನು ರದ್ದು ಮಾಡುವ ಬದಲು ಮುಂದೂಡಲು ನಿರ್ಧರಿಸಲಾಗಿದೆ.
ಉರಿ ಉಗ್ರ ದಾಳಿ ಕುರಿತಂತೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿರುವ ಭಾರತಕ್ಕೆ ಇಸ್ಲಾಮಾಬಾದ್ ನಲ್ಲಿ ಆಯೋಜನೆಯಾಗಿದ್ದ 19ನೇ ಸಾರ್ಕ್ ಶೃಂಗಸಭೆ ವೇದಿಕೆ ಒದಗಿಸಿತು. ಸಭೆಯನ್ನು ಭಾರತ ಪ್ರಧಾನಿ ನರೇಂದ್ರ ಮೋದಿ ಬಹಿಷ್ಕರಿಸುವ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರ ಬೆನ್ನಲ್ಲೇ ಭಾರತದ ಬೆಂಬಲಕ್ಕೆ ನಿಂತ ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಭೂತಾನ್ ಸರ್ಕಾರ ಕೂಡ ಸಭೆಯಲ್ಲಿ ಪಾಲ್ಗೊಳ್ಳಲು ತಾವು ಸಿದ್ಧವಿಲ್ಲ ಎಂದು ಹೇಳಿಹೇಳಿವೆ.
ಈ ಬಗ್ಗೆ ಸಾರ್ಕ್ ಮುಖ್ಯಸ್ಥ ರಾಷ್ಟ್ರ ನೇಪಾಳ ಸಮ್ಮೇಳನ ನಡೆಸಲು ಬೇರೆ ಸ್ಥಳ ಹುಡುಕಾಟದಲ್ಲಿ ತೊಡಗಿದ್ದು, ಇದೇ ಶನಿವಾರ ಈ ಬಗ್ಗೆ ಅಧಿಕೃತ ಹೇಳಿಕೆ ನೀಡುವ ಸಾಧ್ಯತೆ ಇದೆ.
ಸಾರ್ಕ್