Untitled Document
Sign Up | Login    
Dynamic website and Portals
  
October 4, 2016

ಸುಪ್ರೀಂ ಆದೇಶದಂತೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸಿದ್ಧ

ಸುಪ್ರೀಂ ಆದೇಶದಂತೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸಿದ್ಧ

ನವದೆಹಲಿ : ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಅ.1 ರಿಂದ 6ರವರೆಗೆ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನಂತೆ ಕರ್ನಾಟಕ ಸರ್ಕಾರ ನೀರು ಹರಿಸಲು ಸಿದ್ಧವಾಗಿದ್ದು, ಈಗಾಗಲೇ 9 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸಿದ್ದವಾಗಿದೆ ಎಂದು ಕರ್ನಾಟಕ ಪರ ವಕೀಲ ಫಾಲಿ ಎಸ್ ನಾರಿಮನ್ ತಿಳಿಸಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಹಾಗೂ ಸೆಪ್ಟೆಂಬರ್ 30ರ ಆದೇಶ ಮಾರ್ಪಾಡು ಆದೇಶ ಕುರಿತಂತೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ಆರಂಭವಾಗಿದ್ದು, ಕರ್ನಾಟಕದ ಪರ ವಕೀಲ ಫಾಲಿ ಎಸ್. ನಾರಿಮನ್ ಅವರು ಸುಪ್ರೀಂ ಆದೇಶ ಪಾಲಿಸುತ್ತಿರುವುದಾಗಿ ಹೇಳಿದರು. ತಮಿಳುನಾಡಿಗೆ 6 ದಿನಗಳ ಕಾಲ ನೀರು ಹರಿಸುತ್ತೇವೆ', 6 ದಿನಗಳಲ್ಲಿ ಒಟ್ಟು 36,000 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ನಾರಿಮನ್ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಕಳೆದ ರಾತ್ರಿಯಿಂದಲೇ 9,000 ಕ್ಯೂಸೆಕ್ಸ್ ನೀರು ಹರಿದಿದೆ. ಅಕ್ಟೋಬರ್ 6ರೊಳಗೆ ಸುಪ್ರೀಂ ಕೋರ್ಟ್ ಆದೇಶ ಪೂರ್ತಿಯಾಗಿ ಕರ್ನಾಟಕ ಪಾಲಿಸಲಿದೆ ಎಂದು ನಾರಿಮನ್ ತಿಳಿಸಿದರು.

ಇದೇ ವೇಳೆ ನಾವು ನಮ್ಮ ಲೆಕ್ಕಾಚಾರದಂತೆ ಆದೇಶ ನೀಡಿದ್ದೇವೆ ನ್ಯಾಯಾಲಯ ತಿಳಿಸಿದ್ದು, ಅಕ್ಟೋಬರ್ 7ರಿಂದ 18ರವರೆಗೆ ಎಷ್ಟು ನೀರು ಬಿಡುತ್ತೀರಿ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ನಾರಿಮನ್ ಅವರು, ನೀರು ಬಿಡುಗಡೆ ಆದೇಶಕ್ಕೆ ಲೆಕ್ಕಾಚಾರವೇ ಮುಖ್ಯವಲ್ಲ. ವಾಸ್ತವ ಸ್ಥಿತಿಯನ್ನು ಪರಿಗಣಿಸಿ ಆದೇಶ ನೀಡಬೇಕಿತ್ತು ಎಂದರು.

ಈ ವೇಳೆ ಅಕ್ಟೋಬರ್ 7ರಿಂದ 17ರವರೆಗೆ ಅಧ್ಯಯನ ತಂಡ ಕರ್ನಾಟಕ, ತಮಿಳುನಾಡಿಗೆ ತೆರಳಿ ಅಧ್ಯಯನ ಮಾಡಲಿ, 18ರಂದು ವಿಚಾರಣೆ ನಡೆಸುತ್ತೇವೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Legal

  • ಕಾವೇರಿ ಜಲ ವಿವಾದ: ಆದೇಶ ನಿರಾಕರಿಸುತ್ತಿರುವ ರಾಜ್ಯದ ನಡೆಗೆ ಸುಪ್ರೀಂ ಅಸಮಾಧಾನ
  • ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.
  • ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದಿಂದ ಅಫಿಡವಿಟ್
  • ಕಾವೇರಿ ಜಲ ವಿವಾದ: ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ನೀರು ಬಿಡಲು ಸುಪ್ರೀಂ ಆದೇಶ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited