ಬೆಂಗಳೂರು : ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೇಲಿನಿಂದ ಕೆರೆಗೆ ಜಿಗಿಯುವ ಸಾಹಸಮಯ ದೃಶ್ಯ ಚಿತ್ರೀಕರಿಸುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಖಳನಟರಾದ ಉದಯ್ ಹಾಗೂ ಅನಿಲ್ ಶವಕ್ಕಾಗಿ ಕಳೆದ 20 ಗಂಟೆಗಳಿಂದ ಶೋಧಕಾರ್ಯ ನಡೆಸುತ್ತಿದ್ದು, ಮಂಗಳವಾರವೂ ಮುಂದುವರಿದಿದೆ.
ಈ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕ ನಟರಾಗಿ ಅಭಿನಯಿಸುತ್ತಿದ್ದರು.
ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ 2 ಅಗ್ನಿಶಾಮಕ ದಳದ ಸಿಬ್ಬಂದಿ ಎನ್ ಡಿಆರ್ ಎಫ್ ತಂಡದ ಸಿಬ್ಬಂದಿಗಳು ರಬ್ಬರ್ ಬೋಟ್ ಬಳಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನೀರು ಹೆಚ್ಚು ಕಲುಷಿತಗೊಂಡಿದ್ದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ನೀರಿನ ಕೆಳಭಾಗದಲ್ಲಿ ಹೆಚ್ಚಿನ ಕಲುಷಿತವಿದೆ. ಹೀಗಾಗಿ ನೀರಿನ ಆಳದಲ್ಲಿ ಹುದುಗಿರುವ ಶವ ಕಾಣಿಸುತ್ತಿಲ್ಲ. ಇಬ್ಬರೂ ನಟರು ಬಿದ್ದಿರುವ ಸ್ಥಳದಲ್ಲಿ ಶೋಧ ಕಾರ್ಯ ಮುಗಿದಿದೆ.