Untitled Document
Sign Up | Login    
Dynamic website and Portals
  
September 29, 2017

ಒಂದೆಡೆ ಆಯುಧ ಪೂಜೆ ಸಂಭ್ರಮ: ಇನ್ನೊಂದೆಡೆ ಅರಮನೆ ನಗರಿಯಲ್ಲಿ ಉಕ್ಕಿನ ಹಕ್ಕಿಗಳ ಕಲರವ

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧ ಪೂಜೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧ ಪೂಜೆ

ಮೈಸೂರು : ದೇಶಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆ ನೆರವೇರಿಸಲಾಗುತ್ತಿದೆ. ಇನ್ನು ನಾಡ ಹಬ್ಬ ದಸರಾ ಪ್ರಮುಖ ಕೇಂದ್ರ ಮೈಸೂರು ಅರಮನೆಯಲ್ಲಿಯೂ ಆಯುಧಪೂಜೆ ಕಳೆಕಟ್ಟಿದೆ.

ಅರಮನೆಯಲ್ಲಿ ಪಂಚಲೋಹದ ಪಲ್ಲಕ್ಕಿಯಲ್ಲಿ ಆಯುಧಗಳನ್ನು ತಂದ ರಾಜಪರಿವಾರ ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿತು. ನಂತರ, ಅರಮನೆ ಒಳಗಿನ ಕಲ್ಯಾಣ ಮಂಟಪದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನಡೆಸಿದರು. ಬಳಿಕ ಆನೆ ಬಾಗಿಲು ಬಳಿ ಸೇರಿದ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗಳಿಗೆ ಪೂಜೆ ಸಲ್ಲಿಸಲಾಯಿತು.

ಇನ್ನೊಂದೆಡೆ ಪಂಜಿನ ಕವಾಯಿತು ಮೈಒದಾನದಲ್ಲಿ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಏರ್ ಶೋ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಕ್ಕಿನ ಹಕ್ಕಿಗಳ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ. ಭಾರತೀಯ ವಾಯುಸೇನೆಯ ಮೂರು ಹೆಲಿಕಾಫ್ಟರ್‌‌ಗಳಲ್ಲಿ ಪೆಟಲ್ ಡ್ರಾಪಿಂಗ್, ಸ್ಕೈ ಡ್ರೈವಿಂಗ್ ಹಾಗೂ ಸ್ಲೀದರಿಂಗ್ ಪ್ರದರ್ಶನ ಕಣ್ಮನ ಸೆಳೆಯುತ್ತಿದೆ.

ಈ ನಡುವೆ 407ನೇ ದಸರಾ ಮಹೋತ್ಸವ ಹಿನ್ನಲೆಯಲ್ಲಿ ಅರಮನೆಯಲ್ಲಿ ವಿಶ್ವ ವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಅರಂಭವಾಗಿದ್ದು, ಸಕಲ ಸಿದ್ದತೆಗಳೂ ಪೂರ್ಣಗೊಂಡಿವೆ. ಶನಿವಾರ ಮಧ್ಯಾಹ್ನ 2.15ರ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 4.45ರ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಇತರ ಗಣ್ಯರು ದಸರಾ ಗಜಪಡೆ ಸಾರಥಿ ಅರ್ಜುನ ಹೊತ್ತು ತರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ನಂದಿಧ್ವಜ, ನಿಶಾನೆ ಆನೆ ಬಲರಾಮ, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಪ್ರತಿಬಿಂಬಿಸುವ 40 ಸ್ತಬಟಛಿಚಿತ್ರಗಳು ಹಾಗೂ 40 ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited