ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ ಧ್ವಜ ಪೂಜೆ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ್ದೇನೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕೆರೆ, ಕಟ್ಟೆಗಳು ತುಂಬಿವೆ, ಕುಡಿಯುವ ನೀರಿಗೆ, ಬೆಳೆಗೆ ಹೆಚ್ಚಿನ ತೊಂದರೆ ಉಂಟಾಗುವುದಿಲ್ಲ. ಇನ್ನು ರೈತರೆಲ್ಲ ಸಂತಸದಿಂದಿದ್ದಾರೆ. ಜನರು ದಸರಾದಲ್ಲಿ ಉತ್ಸಾಹದಿಂದ ಭಾಗಿಯಾಗಿದ್ದಾರೆ. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯಗಳು ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ದಸರಾದಲ್ಲಿ ಕೂದಾ ನಾನೇ ಪೂಜೆ ಸಲ್ಲಿಸುತ್ತೇನೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.