ಶ್ರೀನಗರ : ಶ್ರೀನಗರದ ವಿಮಾನ ನಿಲ್ದಾಣದ ಬಳಿಯಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ನಸುಕಿನ ಜಾವ 4 ಗಂಟೆಯ ವೇಳೆ ಉಗ್ರರು ಹೊಂಚುಹಾಕಿ ಬಿಎಸ್ಎಫ್ 182 ಬೆಟಾಲಿಯನ್ ಪಡೆಯನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಿದ್ದಾರೆ. ಉಗ್ರರ ಗುಂಡೇಟಿಗೆ ಮೂವರು ಯೋಧರು ಗಂಭೀರವಾಗಿ ಗಾಯಗೊಂದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಕ್ಷಣ ಕಾರ್ಯಾಚರಣೆಗಿಳಿದ ಭದ್ರತಾ ಪಡೆ ಸಿಬ್ಬಂದಿಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಆದರೆ ಕೆಲ ಉಗ್ರರು ಸಮೀಪದ ಪಕ್ಕದ ಕಟ್ಟಡದಲ್ಲಿ ಅವಿತು ಕುಳಿತಿದ್ದು ಅವರಿಗಾಗಿ ಭಾರೀ ಕಾರ್ಯಾಚರಣೆ ನಡೆಸುತ್ತಿವೆ.
ಇನ್ನು ಭದ್ರತೆಯ ದೃಷ್ಟಿಯಿಂದ ವಿಮಾಮ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ.