ರಾಮನಗರ : ಟ್ರಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ಕೆಂಪನಹಳ್ಳಿಯಲ್ಲಿ ಸಂಭವಿಸಿದೆ.
ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟ್ರಕ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರಾಗಿದ್ದು, ಇಬ್ಬರು ಹುಡುಗರು ಹಾಗೂ ಇಬ್ಬರು ಯುವತಿಯರಾಗಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರ ಗುರುತು ಪತ್ತೆಯಾಗಿದ್ದು ನಿಕಿಲ್(21) ಹಾಗೂ ಜೊಹಲ್ ಜಾಕಬ್(21) ಎಂದು ತಿಳಿದು ಬಂದಿದೆ. ಮೃತಪಟ್ಟ ನಾಲ್ವರೂ ರಾಜರಾಜೇಶ್ವರಿ ನಗರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ರಾಮನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಅಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.