Untitled Document
Sign Up | Login    
Dynamic website and Portals
  

Related News

ಪ್ಯಾರಿಸ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ 120ಕ್ಕೂ ಹೆಚ್ಚು ನಾಗರಿಕರು ಬಲಿ

ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಶುಕ್ರವಾರ ಉಗ್ರರು ನಡೆಸಿದ ದಾಳಿಗೆ 120ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 'ಅಲ್ಲಾಹು ಅಕ್ಬರ್' ಎಂದು ಕೂಗುತ್ತಾ ಉಗ್ರರು ಅಮಾಯಕ ಜನರ ಮೇಲೆ ಗುಂಡಿನ ಮಳೆಗೈದರು ಮತ್ತು ಬಾಂಬ್ ದಾಳಿ ನಡೆಸಿದರು. ಫ್ರಾನ್ಸ್ ಮತ್ತು ಜರ್ಮನಿಗಳ ಮಧ್ಯೆ ಸೌಹಾರ್ಧ...

3 ದೇಶಗಳಲ್ಲಿ ಐಸಿಸ್‌ ಉಗ್ರರ ದಾಳಿ: 50ಕ್ಕೂ ಹೆಚ್ಚು ಬಲಿ

ವಿಶ್ವದ ಹಲವೆಡೆ ಅಟ್ಟಹಾಸ ಮೆರೆಯುತ್ತಿರುವ ಸುನ್ನಿ ಪಂಥೀಯ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಒಂದೇ ದಿನ ಫ್ರಾನ್ಸ್‌, ಟ್ಯುನೀಸಿಯಾ ಮತ್ತು ಕುವೈತ್‌ ನಲ್ಲಿ ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿಗಳನ್ನು ಎಸಗಿದ್ದಾರೆ. ಭಾರಿ ಸಂಖ್ಯೆಯ ಸಾವು ನೋವಿಗೆ ಕಾರಣರಾಗಿದ್ದಾರೆ. ಪಾಶ್ಚಾತ್ಯರು ಮತ್ತು ಶಿಯಾ ಪಂಥೀಯರನ್ನು...

ಅಫ್ಘಾನಿಸ್ತಾನ ಸಂಸತ್ ಭವನದ ಮೇಲೆ ಆತ್ಮಾಹುತಿ ದಾಳಿ

ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಅಫ್ಘಾನಿಸ್ತಾನದ ಸಂಸತ್ ಭವನದ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ. ಸಂಸತ್ ಭವನದ ಒಳಗೆ ಒಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದರೆ, ಸಂಸತ್ ಆವರಣದಲ್ಲಿ ಮೂರು ಬಾಂಬ್ ಸೇರಿದಂತೆ ಒಟ್ಟು ಆರು ಕಡೆ ಸ್ಫೋಟಗೊಂಡಿರುವುದಾಗಿ...

ಪಾಕ್ ಕ್ರಿಕೆಟ್ ಸ್ಟೇಡಿಯಂ ಬಳಿ ಆತ್ಮಾಹುತಿ ದಾಳಿ: ಇಬ್ಬರು ಸಾವು

ಲಾಹೋರ್‌ ನ ಇಲ್ಲಿನ ಗದ್ದಾಫಿ ಕ್ರಿಕೆಟ್‌ ಸ್ಟೇಡಿಯಂ ಸಮೀಪ ರಾತ್ರಿ 9 ಗಂಟೆಗೆ ನಡೆದ ಆತ್ಮಾಹುತಿ ದಾಳಿಯಲ್ಲಿ ಓರ್ವ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತ ಎಸ್‌ ಐ ಅನ್ನು ಅಬ್ದುಲ್‌ ಮಜೀದ್‌ ಎಂದು ಗುರುತಿಸಲಾಗಿದೆ. ಈ ಘಟನೆ...

ಕಾಬೂಲ್ ನಲ್ಲಿ ಆತ್ಮಾಹುತಿ ದಾಳಿ: ಮೂವರ ದುರ್ಮರಣ

ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಾಬೂಲ್ ನ ವಿಮಾನ ನಿಲ್ದಾಣದ ಬಳಿ ಭಯೋತ್ಪಾದಕರು ಆತ್ಮಾಹುತಿ ಕಾರ್ ಬಾಂಬ್ ಸ್ಫೋಟ ನಡೆಸಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ವಿದೇಶಿ ಪ್ರಜೆ ಹಾಗೂ...

ಪಾಕಿಸ್ತಾನದ ಶಾಲೆಯ ಮೇಲೆ ಮತ್ತೆ ದಾಳಿ: ಭದ್ರತಾ ಸಿಬ್ಬಂದಿ ಸಾವು

ಪಾಕಿಸ್ತಾನದಲ್ಲಿ ಸೋಮವಾರ ಮತ್ತೆ ಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಾಲಾ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆರಾ ಘಾಝಿ ಖಾನ್ ಹೈಸ್ಕೂಲ್ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಶಾಲೆಯ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ....

ಉಗ್ರರ ಚೀಟಿ ಪತ್ತೆ: ದೆಹಲಿಯಲ್ಲಿ ಆತ್ಮಾಹುತಿ ದಾಳಿಗೆ ಕಟ್ಟೆಚ್ಚರ

ಕಳೆದ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಸಾಂಬಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿ ಆರು ತಾಸುಗಳ ಶೂಟೌಟ್‌ ನಲ್ಲಿ ಕೊನೆಗೂ ಭಾರತೀಯ ಸೈನಿಕರಿಂದ ಹತರಾಗಿದ್ದ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರಲ್ಲಿ ಒಬ್ಬನು ಸತ್ತು ಬಿದ್ದಲ್ಲಿಯೇ ಸನಿಹದಲ್ಲೇ ಕಂಡು ಬಂದ ಒಂದು ಚೀಟಿಯಲ್ಲಿ...

ರಾಷ್ಟ್ರ ರಾಜಧಾನಿ ಮೇಲೆ ಆತ್ಮಾಹುತಿ ದಾಳಿಯ ಎಚ್ಚರಿಕೆ

ರಾಷ್ಟ್ರ ರಾಜಧಾನಿ ನವದೆಹಲಿ ಮೇಲೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಭಾರೀ ಪ್ರಮಾಣದ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿವೆ. ಪಾಕ್‌ ಮೂಲದ ಜೈಷ್‌ ಎ ಮಹಮ್ಮದ್‌ ಉಗ್ರ ಸಂಘಟನೆಯ ನೇತೃತ್ವದಲ್ಲಿ ದೆಹಲಿಯ ಮೇಲೆ...

ಭಾರತದ ಒಳನುಸುಳಲು ಗಡಿರೇಖೆ ಬಳಿ ಬೀಡುಬಿಟ್ಟ ಉಗ್ರರು

ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ನಡೆಸಲು ಹೊಂಚುಹಾಕಿರುವ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರರು ದೇಶದೊಳಗೆ ನುಗ್ಗಲು ಅಂತಾರಾಷ್ಟ್ರೀಯ ಗಡಿರೇಖೆ ಬಳಿ ಬೀಡುಬಿಟ್ಟಿದ್ದಾರೆಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಗಡಿರೇಖೆಗೆ ಹೊಂದಿಕೊಂಡಿರುವ ಬಾಬಾಭಾಯಿ ಮಸ್ರೂರ್, ಅಭಿಯಲ್ ದೋಗ್ರಾ, ಚಾಪ್ರಾರ್, ಸುಕ್ಮಾಲ್ ಮತ್ತಿತರ ಕಡೆ 8...

ಲಾಹೋರ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 8ಕ್ಕೂ ಹೆಚ್ಚು ಸಾವು

ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಿರುವ ಉಗ್ರರು ಪೊಲೀಸ್ ವಸತಿ ಸಮುಚ್ಚಯದ ಪಕ್ಕದಲ್ಲೇ ಈ ಕೃತ್ಯ ಎಸಗಿದ್ದಾರೆ. ಘಟನೆಯ...

ಸಂಸತ್ ಭವನ, ಪ್ರಧಾನಿ ನಿವಾಸದ ಮೇಲೆ ಆತ್ಮಾಹುತಿ ದಾಳಿ ಸಂಚು

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ವಿಫ‌ಲರಾದ ಭಯೋತ್ಪಾದಕರು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಹಾಗೂ ಸಂಸತ್‌ ಭವನದ ಮೇಲೆ ಆತ್ಮಾಹುತಿ ಬಾಂಬ್‌ ದಾಳಿಗೆ ಸಜ್ಜಾಗಿದ್ದಾರೆ ಎಂದು...

ಬಿಹಾರದಲ್ಲಿ ಬಾಂಬ್ ಸ್ಫೋಟ: ಇಬ್ಬರು ಬಲಿ

ಬಿಹಾರದ ನ್ಯಾಯಾಲಯವೊಂದರ ಬಳಿ ಬಾಂಬ್ ಸ್ಫೋಟ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿನ ಅರಾ ನಗರದಲ್ಲಿನ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ ಓರ್ವ ಮಹಿಳೆ ಹಾಗೂ ಓರ್ವ ಪೊಲೀಸ್ ಪೇದೆ ಸಾವು, 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

ಪಾಕಿಸ್ತಾನದ ಶಾಲೆ ಮೇಲೆ ಉಗ್ರರ ದಾಳಿ: ಬಾಂಬ್ ಸ್ಫೋಟಕ್ಕೆ 12 ವಿದ್ಯಾರ್ಥಿಗಳು ಬಲಿ

'ಪಾಕಿಸ್ತಾನ'ದ ಪೇಷಾವರ್ ನಲ್ಲಿ ಉಗ್ರರು ಬಾಂಬ್ ಸ್ಫೋಟಿಸಿದ್ದು 12 ಜನ ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಡಿ.16ರಂದು ಮಧ್ಯಾಹ್ನದ ವೇಳೆಯಲ್ಲಿ ಪೇಷಾವರ್ ನಲ್ಲಿರುವ ಶಾಲೆಗೆ ನುಗ್ಗಿದ ಉಗ್ರರು ಬಾಂಬ್ ಸ್ಫೋಟಿಸಿದ್ದು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಆರು ಜನ ಉಗ್ರರು ಶಾಲಾ...

ಪಾಕಿಸ್ತಾನ ಶಾಲೆಯಲ್ಲಿ ಉಗ್ರರ ದಾಳಿಗೆ ಬಲಿಯಾದವರ ಸಂಖ್ಯೆ110ಕ್ಕೆ ಏರಿಕೆ

'ಪಾಕಿಸ್ತಾನ'ದಲ್ಲಿ ಉಗ್ರರು ನಡೆಸಿರುವ ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾಗಿರುವವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ. ಸೇನಾ ಶಾಲೆಯನ್ನು ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ 110ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ಸೇನಾ ಸಮವಸ್ತ್ರದಲ್ಲಿ ಶಾಲೆಯೊಳಗೆ...

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗೆ ಪ್ರಧಾನಿ ಮೋದಿ ಖಂಡನೆ

'ಪಾಕಿಸ್ತಾನ'ದಲ್ಲಿ ವಿದ್ಯಾರ್ಥಿಗಳ ಹತ್ಯೆ ಮಾಡಿರುವ ತಾಲೀಬಾನ್ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು ಮಾತಿನಲ್ಲಿ ವರ್ಣಿಸಲಾಗದ ಕ್ರೂರತೆ ಎಂದಿದ್ದಾರೆ. ಪಾಕ್ ನ ಸೈನಿಕ ಶಾಲೆಯ ಮೇಲೆ ಉಗ್ರರ ದಾಳಿ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಮೋದಿ, ವಿದ್ಯಾರ್ಥಿಗಳ ಸಾವಿಗೆ ಸಂತಾಪ...

ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಫೀಜ್ ಸಯೀದ್ ಎಚ್ಚರಿಕೆ

ಜಮ್ಮು-ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ, 11 ಯೋಧರು ಸೇರಿ 21 ಮಂದಿಯನ್ನು ಉಗ್ರರು ಬಲಿಪಡೆದಿರುವ ಬೆನ್ನಲ್ಲೇ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್, ಧರ್ಮ ಯುದ್ಧವನ್ನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಮೂಲಕ ಭಾರತದ...

ತಾಲೀಬಾನ್ ಉಗ್ರರ ಗುಂಪಿನಿಂದ ಪ್ರಧಾನಿ ಮೋದಿಗೆ ಜೀವ ಬೆದರಿಕೆ

ಪಾಕಿಸ್ತಾನದ ತಾಲೀಬಾನ್ ಸಂಘಟನೆಯಿಂದ ಪ್ರತ್ಯೇಕಗೊಂಡಿರುವ ಜಮತ್ ಉಲ್ ಅಹ್ರಾರ್ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದೆ. ಇತ್ತೀಚೆಗಷ್ಟೇ ಪಾಕಿಸ್ತಾನದ ವಾಘಾ ಗಡಿ ಭಾಗದಲ್ಲಿ ನಡೆದ ಸ್ಫೋಟದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಟ್ವಿಟರ್...

ಜಮ್ಮು-ಕಾಶ್ಮೀರದಲ್ಲಿ ಕಿಡಿಗೇಡಿಗಳಿಂದ ಮತ್ತೊಮ್ಮೆ ಐ.ಎಸ್.ಐ.ಎಸ್ ಧ್ವಜ ಪ್ರದರ್ಶನ

'ಜಮ್ಮು-ಕಾಶ್ಮೀರ'ದಲ್ಲಿ ಮತ್ತೊಮ್ಮೆ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಧ್ವಜವನ್ನು ಪ್ರದರ್ಶಿಸಲಾಗಿದೆ. ಅ.17ರಂದು ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ಜಮ್ಮಾ ಮಸೀದಿಯಲ್ಲಿ ಕೆಲ ಯುವಕರು ರಾಜಾರೋಷವಾಗಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಿದ್ದಾರೆ. ಶುಕ್ರವಾರದ ಸಂಜೆ ಪ್ರಾರ್ಥನೆ ಬಳಿಕ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ಐ.ಎಸ್.ಐ.ಎಸ್...

ಭಾರತದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಉಗ್ರ ಸಂಘಟನೆಗಳ ಸಂಚು

ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐ.ಎಸ್.ಐ.ಎಸ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆ ಸಂಚು ರೂಪಿಸಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ದೇಶದ ಪ್ರವಾಸಿ ತಾಣಗಳು, ಮೆಟ್ರೋ ಸಿಟಿಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಅ.16ರಂದು ದೆಹಲಿಯಲ್ಲಿ...

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 5ಕ್ಕೂ ಹೆಚ್ಚು ಜನರ ಹತ್ಯೆ

'ಪಾಕಿಸ್ತಾನ'ದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 5 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಪ್ಘಾನಿಸ್ತಾನ ಗಡಿ ಪ್ರದೇಶದಲ್ಲಿರುವ ಖೈಬರ್ ಎಂಬ ಬುಡಕಟ್ಟು ಜಿಲ್ಲೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯುತ್ತಿದ್ದ ವೇಳೆ ಈ ಆತ್ಮಾಹುತಿ ದಾಳಿ ನಡೆಸಲಾಗಿದೆ. ಶಾಂತಿ ಸಮಿತಿಯ ಸದಸ್ಯರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited