ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...
ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...
ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿರಲಿ, ಬಿಲ್ಡರ್ಸ್ಗಳಿರಲಿ, ಯಾರೇ ಇರಲಿ ಒತ್ತುವರಿ ತೆರವುಮಾಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡದಿದ್ದರೆ ಮುಂದೊಂದು ದಿನ ಚೆನ್ನೈನ ಪರಿಸ್ಥಿತಿ ನಮಗೂ ಬಂದೊದಗುತ್ತದೆ. ಆಗ...
ನ್ಯಾಶನಲ್ ಎಲಿಜಿಬಿಲಿಟಿ ಎಂಟ್ರೆನ್ಸ್ ಟೆಸ್ಟ್ (ನೀಟ್) ಮೂಲಕವೇ ವಿದ್ಯಾರ್ಥಿಗಳು ಮೆಡಿಕಲ್, ದಂತವೈದ್ಯಕೀಯ ಕೋರ್ಸ್ಗೆ ಪ್ರವೇಶ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರಗಳು ನಡೆಸುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಗೆ ಕೂಡ ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದೆ....
ಭಾರತದಲ್ಲಿರುವ ಹಿಂದೂಗಳನ್ನು ನಾಶ ಮಾಡುವ ಮೂಲಕ ಹಿಂದೂಸ್ತಾನದಲ್ಲಿ ಷರಿಯಾ ಕಾನೂನು ಜಾರಿಗೊಳಿಸುವ ವಿಶ್ವದ ಅತ್ಯಂತ ಪ್ರಭಾವಿ ಉಗ್ರಗಾಮಿ ಸಂಘಟನೆ ಐಸಿಸ್ ಮುಂದಾಗಿದೆ ಎಂದು ತಿಳಿದುಬಂದಿದೆ.
ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ನೆರವಿನೊಂದಿಗೆ ಭಾರತದ ಮೇಲೆ ಗೆರಿಲ್ಲಾ ದಾಳಿ ನಡೆಸಿ ಹಿಂದುಗಳ...
ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ, ಕೃಷಿ ಭೂಮಿ ಭೋಗ್ಯ ಕಾಯ್ದೆ 2016ರನ್ನು ಜಾರಿಗೊಳಿಸಿದೆ. ಈ ಮೂಲಕ ಭಾರತದಲ್ಲಿ ಭೂಮಿ ಭೋಗ್ಯ ನೀಡುವುದು ಕಾನೂನು ಬದ್ದವಾದಂತಾಗಿದೆ. ಇದರಿಂದ ವ್ಯವಸಾಯದಲ್ಲಿ ದಕ್ಷತೆ, ಬಡತನ ನಿರ್ಮೂಲನೆ ಸಾಧ್ಯವಾಗಬಹುದೆಂದು ಸರ್ಕಾರದ ನಿರೀಕ್ಷೆ ಇದೆ. ಮಾದರಿ...
ಸರ್ಕಾರಕ್ಕೆ ತೆರಿಗೆ ವಂಚಿಸಿ ಹಣವನ್ನು ರಹಸ್ಯ ಕಾನೂನು ಸಂಸ್ಥೆ ಮೊಸ್ಸಾಕ್ ಫೊನ್ಸಿಕಾದಲ್ಲಿ ಇಟ್ಟವರಲ್ಲಿ ಬಾಲಿವುಡ್ ನ ಖ್ಯಾತ ನಟರು, ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು ಸೇರಿದಂತೆ ಸುಮಾರು 500 ಮಂದಿ ಭಾರತೀಯರು ಇದ್ದಾರೆ ಎಂದು ಪನಾಮಾ ಪೇಪರ್ ಸೋರಿಕೆಯಲ್ಲಿ ಬಹಿರಂಗಗೊಂಡಿದೆ.
ಇದು 1.15 ಕೋಟಿ...
ಐ ಎಸ್ ಐ ಎಸ್ ಹಸ್ತಾಕ್ಷರವಿದೆ ಎನ್ನಲಾದ ಅನಾಮಧೇಯ ಪತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
ಗೋವಾ ಪೊಲೀಸರು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮತ್ತು ಭಯೋತ್ಪಾದಕ ನಿಗ್ರಹ ದಳಕ್ಕೆ...
ಸುಪ್ರೀಂ ಕೋರ್ಟ್ ಸ್ಪೋಟಿಸುವುದಾಗಿ ಅನಾಮಧೇಯ ಇ-ಮೇಲೆ ಬಂದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇ-ಮೇಲ್ ಅನ್ನು ಪರೀಕ್ಷಿಸಿ, ಕಳುಹಿಸಿದವರ ಮೂಲವನ್ನು ಇನ್ನೂ ಕಂಡು ಹಿಡಿಯಬೇಕಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್ ಸುತ್ತಮುತ್ತ ಕಟ್ಟೆಚ್ಚರ...
ಐಪಿಎಲ್ ವಿವಾದದಲ್ಲಿ ಸಿಲುಕಿ, ದೇಶದದಿಂದ ಓಡಿ ಹೋದವರ ಪರವಾದ ಧೋರಣೆ ಸರಿಯಲ್ಲ. ಸುಷ್ಮಾ ಸ್ವರಾಜ್ ತಮಗೆ ತಕ್ಕದಲ್ಲದ ಕೆಲಸ ಮಾಡಿದ್ದಾರೆ. ಲಲಿತ್ ಮೋದಿ ಅವರು ವೀಸಾ ಪಡೆಯಲು ಸುಷ್ಮಾ ಸ್ವರಾಜ್ ಅವರು ನೆರವಾದದ್ದು, ಸರಿಯಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮತ್ತು ಸಾಮಾಜಿಕ...
ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಹೊಂದಿರುವ ಆರೋಪದಲ್ಲಿ ಬಂಧಿತರಾದ ಜಿತೇಂದ್ರ ಸಿಂಗ್ ತೋಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸರ್ಕಾರದ ಕಾನೂನು ಸಚಿವ ಸ್ಥಾನಕ್ಕೆ ಕಪಿಲ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.
ದೆಹಲಿಯ ಜಲಮಂಡಳಿ ಅಧ್ಯಕ್ಷರಾಗಿದ್ದ ಆಪ್ ಶಾಸಕ ಕಪಿಲ್...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜಿತೇಂದ್ರ ಸಿಂಗ್ ತೋಮರ್ ಬಂಧನದ ಕುರಿತು ಆಪ್ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ತೋಮರ್ ವಿರುದ್ಧ...
ಭಾರತದ ವ್ಯವಹಾರಗಳಲ್ಲಿ ನೆರೆಯ ಪಾಕಿಸ್ತಾನ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಜಮ್ಮುವಿನಲ್ಲಿ ನಡೆದ ಜನ್ ಕಲ್ಯಾಣ್ ಪರ್ವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ದೇಶದ ಅಭಿವೃದ್ಧಿ ಬಯಸುವುದೇ ಆದಲ್ಲಿ, ಮೊದಲು...
ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ.
ಈ ಮಸೂದೆ ಅನ್ವಯ,...
2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧ ಸುಪ್ರೀಂಕೋರ್ಟ್ ಕಿಡಿಕಾರಿದ್ದು, ಹಗರಣ ಕುರಿತಂತೆ ರಂಜಿತ್ ಸಿನ್ಹಾ ಅವರು ಮೊದಲು ತಮ್ಮನ್ನು ತಾವು ತನಿಖೆಗೊಳಪಡಿಸಿಕೊಳ್ಳಬೇಕು ಎಂದು ಹೇಳಿದೆ.
ಹಗರಣದ ಆರೋಪಿಗಳನ್ನು ಚಾರ್ಜ್ ಶೀಟ್ ಸಲ್ಲಿಸುವ ಮೊದಲೇ ರಂಜಿತ್ ಸಿನ್ಹಾ,...
ಬಾಲ ಕಾರ್ಮಿಕ ಕಾನೂನು ತಿದ್ದುಪಡಿಗೆ ಕೇದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, 14 ವರ್ಷದ ಕೆಳಗಿನ ಮಕ್ಕಳು ಕೌಟುಂಬಿಕ ಉದ್ಯಮ ಅಥವಾ ಮನರಂಜನಾ ಉದ್ದಿಮೆಯಲ್ಲಿ ಅವಕಾಶ ನೀಡುವ ಹಾಗೂ ಇನ್ನೆಲೆಡೆ ಸಂಪೂರ್ಣ ನಿಷೇಧಿಸುವ ಕುರಿತು ನಿರ್ಧಾರ ಕೈಗೊಂಡಿದೆ.
ಈ ಹಿಂದೆ ಮೂಲ ಬಾಲ ಕಾರ್ಮಿಕ...
ಕಾನೂನು ಚೌಕಟ್ಟಿನಲ್ಲಿ ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟು ನಿರ್ಮಾಣ ಮಾಡುತ್ತೇವೆ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ಸ್ಥಾಪನೆ ಸಂಬಂಧ ಇದೇ 22ರಂದು ನವದೆಹಲಿಯಲ್ಲಿ ಸರ್ವಪಕ್ಷಗಳ ನಿಯೋಗಗಳನ್ನು ಕೊಂಡೊಯ್ದು ಪ್ರಧಾನಮಂತ್ರಿ ನರೇಂದ್ರಮೋದಿಯವರನ್ನು ಭೇಟಿಯಾಗಿ ಅಣೆಕಟ್ಟು ಅವಶ್ಯಕತೆ...
ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ.
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು...
'ಲಿವ್ ಇನ್ ಟುಗೆದರ್' ರಿಲೇಶನ್ ಶಿಪ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅವಿವಾಹಿತ ಜೋಡಿ ಪತಿ-ಪತ್ನಿಯರಂತೆ ವಾಸವಾಗಿದ್ದರೆ ಅವರನ್ನು ವಿವಾಹಿತರೆಂದೇ ಪರಿಗಣಿಸಬೇಕೆಂದು ಹೇಳಿದೆ.
ಲಿವ್ ಇನ್ ಟುಗೆದರ್ ನಲ್ಲಿದ್ದ ತನ್ನ ಜತೆಗಾರ ಮರಣಿಸಿದರೆ ಆತನ ಆಸ್ತಿಯಲ್ಲಿ ಮಹಿಳೆಗೆ...
ಕಲ್ಲಿದ್ದಲು ಹಗರಣದಲ್ಲಿ ಆರೋಪಿಯಾಗಿ ಕೋರ್ಟಿಗೆ ಹಾಜರಾಗಲು ಸಮನ್ಸ್ ಪಡೆದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ಕೇಸಿನ ಬಗ್ಗೆ ಇನ್ನು ಕನಿಷ್ಠ 3 ವರ್ಷ ನಿರಾಳವಾಗಿರಬಹುದು. ಏಕೆಂದರೆ 2018ಕ್ಕೆ ಮೊದಲು ಮನಮೋಹನ್ ಸಿಂಗ್ ವಿರುದ್ಧದ ಕಲ್ಲಿದ್ದಲು ಕೇಸು ಸುಪ್ರೀಂ ಕೋರ್ಟಿನ ಮುಂದೆ...
ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ.
ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ....
ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್.ಡಿ.ಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ತಿಳಿಸಿದ್ದಾರೆ.
ನಮ್ಮ ದೇಶದಲ್ಲಿ ಗೋಹತ್ಯೆ ಮಾಡುವಂತಿಲ್ಲ. ಗೋಹತ್ಯೆ ನಿಷೇಧಕ್ಕಾಗಿ ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಗಣತಿಯನ್ನು...
ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.
"ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು....
ಸುಮಾರು 67 ವರ್ಷಗಳಷ್ಟು ಹಳೆಯದಾದ, ನಿಜಾಮರ ಹಣ ವರ್ಗಾವಣೆಗೆ ಸಂಬಂಧ ಪಟ್ಟ ಹಾಗೂ ಇಡಿಯ ವಿಶ್ವದ ಗಮನವನ್ನು ಸೆಳೆದ ’ಹೈದರಾಬಾದ್ ನಿಧಿ ಪ್ರಕರಣ'ದ ಕಾನೂನು ಹೋರಾಟದಲ್ಲಿ ಪ್ರತಿವಾದಿಯಾಗಿರುವ ಭಾರತಕ್ಕೆ 1.50 ಲಕ್ಷ ಪೌಂಡ್ ಕಾನೂನು ಶುಲ್ಕವನ್ನು ಪಾವತಿಸುವಂತೆ ಲಂಡನ್ ನ್ಯಾಯಾಲಯ ಪಾಕಿಸ್ಥಾನಕ್ಕೆ...
'ಮಹಾರಾಷ್ಟ್ರ'ದಲ್ಲಿ ಗೋಹತ್ಯೆ ನಿಷೇಧಿಸಿದ ಬೆನ್ನಲ್ಲೇ ಹರಿಯಾಣದಲ್ಲೂ ಅದೇ ಮಾದರಿಯಲ್ಲಿ ಕಾನೂನು ಜಾರಿಯಾಗಲಿದೆ.
ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿ ಗೋಹತ್ಯೆ ಹಾಗೂ ಗೋಮಾಂಸ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಹರ್ಯಾಣ ಸರ್ಕಾರ ಸಿದ್ಧತೆ ನಡೆಸಿದೆ.
ಹರಿಯಾಣ ಸರ್ಕಾರ ಮಸೂದೆಯನ್ನು ಜಾರಿಗೆ ತಂದದ್ದೇ ಆದಲ್ಲಿ...
ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಾರಿ ಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ದೇಶಾದ್ಯಂತ ವಿಸ್ತರಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಗೋಹತ್ಯೆ ನಿಷೇಧ ಕುರಿತು ರಾಜ್ಯಗಳಿಗೆ ಸಲಹೆ ನೀಡಬಹುದೇ ಎಂದು ಪ್ರಧಾನಿ ಕಾರ್ಯಾಲಯವು...
ಭಾರತೀಯ ಮೀನುಗಾರರು ಶ್ರೀಲಂಕಾದ ನೀರಿಗೆ ತೆರಳುವುದನ್ನು ಕಾನೂನು ರೀತ್ಯಾ ನೋಡದೆ, ಮಾನವೀಯತೆಯಿಂದ ಕಾಣಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ತಿಳಿಸಿದ್ದಾರೆ.
ವಿಕ್ರಮಸಿಂಘೆ ಅವರ ಜೊತೆ ನಡೆದ ಮಾತುಕತೆಯಲ್ಲಿ, ಸಂಘರ್ಷದ ವಿಷಯವಾದ ಮೀನುಗಾರರ ವಿಷಯವನ್ನು...
ಭಾರತದಲ್ಲಿ ವಾಸವಾಗಿದ್ದುಕೊಂಡು ಪಾಕಿಸ್ಥಾನವನ್ನು ಹಾಡಿ ಹೊಗಳುವವರನ್ನು ಬೂಟಿನಿಂದ ಹೊಡೆಯಬೇಕು ಎಂದು ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಬಾಲಿಕಾ ಸರಸ್ವತಿ ಅವರು ಹೇಳಿರುವ ಮಾತುಗಳು ತೀವ್ರ ವಿವಾದವನ್ನು ಸೃಷ್ಟಿಸಿವೆ.
ಕಳೆದ ಮಾರ್ಚ್ 1ರಂದು ಮಂಗಳೂರಿನಲ್ಲಿ ನಡೆದಿದ್ದ ಹಿಂದು ಸಮಾಜೋತ್ಸವದಲ್ಲಿ ಮಾತನಾಡಿದ್ದ ಮಧ್ಯಪ್ರದೇಶದ...
'ವಿಧಾನಮಂಡಲ ಅಧಿವೇಶನ'ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಪಾಲರಿಂದ ಸುಳ್ಳನ್ನು ಹೇಳಿಸಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಫೆ.2ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ...
ಅನಾವಶ್ಯಕ ಕಾರಣಗಳನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪವನ್ನು ವ್ಯರ್ಥ ಮಾಡದಿರುವಂತೆ ವಿರೋಧ ಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ.
ಐಐಟಿ, ಎನ್.ಐ.ಟಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕಳೆದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ಕೋಲಾಹಲದಿಂದ ಸಂಸತ್ ಅಧಿವೇಶನ ವ್ಯರ್ಥವಾಗಿದ್ದರ...
ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ.
1998ರಲ್ಲಿ ಬಾಲಿವುಡ್ ನಟ ಸಲ್ಮಾನ್...
'ಇಂಡಿಯನ್ ಮುಜಾಹಿದ್ದೀನ್' ಸಂಘಟೆನೆ ಬೆಳೆಯಲು ಬಿಜೆಪಿ ಕಾರಣ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಜ.10ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗ 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ...
ಇತ್ತೀಚಿನ ದಿನಗಳಲ್ಲಿ ಕೆಲ ಸಂಸದರು ನೀಡುತ್ತಿರುವ ಹೇಳಿಕೆಯಿಂದ ಪಕ್ಷದ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಗೆ ಭೇಟಿ ನೀಡಿ ಮಾತನಾಡಿದ ಅಮಿತ್ ಶಾ, ಮರುಮತಾಂತರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದ ಕೆಲ...
ಮರು ಮತಾಂತರ ಘರ್ ವಾಪಸಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಇಲ್ಲ ಎಂದು ಕೇರಳ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ಟಿ ರಮೇಶ್ ತಿಳಿಸಿದ್ದಾರೆ.
ವಿವಾದಾತ್ಮಕ ಮರು ಮತಾಂತರ 'ಘರ್ವಾಪಸಿ' ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಘರ್ ವಾಪಸಿ ಕಾರ್ಯಕ್ರಮ ಹೊಸ ವಿದ್ಯಾಮಾನವೇನಲ್ಲ....
ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ತೊಲಗಿಸಿ, ಪೊಲೀಸರ ಮೇಲಿನ ತಪ್ಪು ಭಾವನೆಯನ್ನ್ನು ಹೋಗಲಾಡಿಸಬೇಕು ಎಂದುಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಅಸ್ಸಾಂನಲ್ಲಿ ಹಮ್ಮಿಕೊಂಡಿದ್ದ 49ನೇ ಡಿಜಿಪಿ ಹಾಗೂ ಐಜಿಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಪೊಲೀಸರ ಕರ್ತವ್ಯ, ತ್ಯಾಗ, ಬಲಿದಾನಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ದೇಶದಲ್ಲಿ...
'ಕಂಬಳ' ಕ್ರೀಡೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಕಾನೂನು ತಜ್ನರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.
ಕಂಬಳ, ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆಯಾಗಿದ್ದು, ಇದನ್ನು ನಿಷೇಧಿಸಿದರೆ ಸಾವಿರಾರು...
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜತೆ ಹಲವಾರು ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ರೈಲ್ವೆ ಖಾತೆಯನ್ನು ನಿರ್ವಹಿಸುತ್ತಿದ್ದ ಡಿ.ವಿ.ಸದಾನಂದಗೌಡ ಅವರ ಖಾತೆ ಬದಲಾವಣೆ ಮಾಡಲಾಗಿದ್ದು,...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ.
ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...
ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು.
ನಾನು ಎಂದಿಗೂ ಭಾಷೆ,...
ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾವಣೆ ಮಾಡುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಯಲಲಿತಾ ಪ್ರಕರಣವನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ ಎಂದರು.
ನಿತ್ಯ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ಎಐಎಡಿಎಂಕೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಡಿಎಂಡಿಕೆ ಮುಖ್ಯಸ್ಥ, ನಟ ವಿಜಯಕಾಂತ್ ಖಂಡಿಸಿದ್ದಾರೆ.
ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾಧ್ಯಂತ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ರಾಜ್ಯದ ಜನತೆ ಪ್ರತಿಭಟನೆಯಿಂದ ನಲುಗಿ...
ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ...
2007ರಲ್ಲಿ ಮಾವನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಇಮ್ರಾನ ಪ್ರಕರಣವನ್ನು ನೆನಪಿಸುವವಂತದ್ದೇ ಮತ್ತೊಂದು ಹೇಯ ಕೃತ್ಯ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.
ಮುಜಫರ್ ನಗರದಲ್ಲಿ ಮಾವನಿಂದಲೇ ಅತ್ಯಾಚಾರಕ್ಕೊಳಗಾದ ಮಹಿಳೆ ಇನ್ನು ಮುಂದೆ ತನ್ನ ಗಂಡನನ್ನು ತನ್ನ ಮಗನಂತೆ ಕಂಡು, ತನ್ನ ಮಾವನನ್ನು ಮದುವೆಯಾಗಬೇಕೆಂದು ಸ್ಥಳೀಯ ಮುಲ್ಲಾಗಳು...
ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...
ಸಬ್ಸಿಡಿಯುಕ್ತ ಅಡುಗೆ ಅನಿಲ (ಎಲ್.ಪಿ.ಜಿ ಸಿಲಿಂಡರ್) ಖರೀದಿ ಮೇಲೆ ಯುಪಿಎ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸಚಿವ ಸಂಪುಟ ಆ.27ರಂದು ರದ್ದುಗೊಳಿಸಿದೆ.
ಸಚಿವ ಸಂಪುಟದ ಈ ನಿರ್ಧಾರದಿಂದ ಸಬ್ಸಿಡಿಯುಕ್ತ 14.2 ಕಿಲೋದ 12 ಎಲ್.ಪಿ.ಜಿ ಸಿಲಿಂಡರ್ ಗಳನ್ನು ಗ್ರಾಹಕರು ವರ್ಷದ ಯಾವುದೇ...
'ಹಿಂದೂ ವಿವಾಹ ಕಾಯ್ದೆ'ಯಲ್ಲಿ ಬದಲಾವಣೆ ಮಾಡಬೇಕು ಎಂದು ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಮಕ್ಕಳಿಲ್ಲದ ಹಿಂದೂಗಳು ಎರಡನೇ ವಿವಾಹವಾಗಲು ಅನುಮತಿ ನೀಡಬೇಕೆಂದು ಹೇಳಿದ್ದಾರೆ.
ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಸ್ವರೂಪಾನಂದ...
ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, 1993ರಿಂದ ಈ ವರೆಗಿನ ಎಲ್ಲಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಆರ್.ಎಂ.ಲೋಧಾ ನೇತೃತ್ವದ ತ್ರಿಸದಸ್ಯ ಪೀಠ,...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆ.ಎ.ಟಿ)ಗೆ ಅರ್ಜಿ ಸಲ್ಲಿಸಿದ್ದಾರೆ.
ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿ ಆದೇಶಹೊರಡಿಸಿರುವ ರಾಜ್ಯ ಸಚಿವ ಸಂಪುಟ ಸಭೆಯ ಕ್ರಮ ಖಂಡಿಸಿ, ಅಭ್ಯರ್ಥಿಗಳು 32ದಿನಗಳಿಂದ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ.
ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...
ಪ್ರಧಾನಿ ನರೇಂದ್ರ ಮೋದಿ ಒಬ್ಬ ಪ್ಯಾಸಿಸ್ಟ್ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಾಗ್ದಾಳಿ ನಡೆಸಿದ್ದಾರೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಾಮಾನ್ಯ ರಾಜಧಾನಿಯಾಗಿರುವ ಹೈದ್ರಾಬಾದ್ ನ ಕಾನೂನು ಸುವ್ಯವಸ್ಥೆ ವಿಶೇಷ ಹೊಣೆಗಾರಿಕೆಯನ್ನು ರಾಜ್ಯಪಾಲ ನರಸಿಂಹನ್ ಅವರಿಗೆ ವಹಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯು...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...