ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು...
ಕೇಂದ್ರ ಚುನಾವಣಾ ಆಯೋಗ ಶುಕ್ರವಾರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚರಿ ಈ ಐದು ರಾಜ್ಯಗಳಲ್ಲಿ ನಡೆಯಬೇಕಾದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ.
ಈ ಐದು ರಾಜ್ಯಗಳಲ್ಲಿ ಏಪ್ರಿಲ್ 4 ಮತ್ತು ಮೇ 16 ರ ಮಧ್ಯೆ ಚುನಾವಣೆ ನಡೆಯಲಿದೆ....
ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ.
ಬೀದರ್, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...
ವಿಧಾನಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.9 ಕಡೆಯ ದಿನವಾಗಿದೆ. ಡಿ.10ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಡಿ.12 ಕೊನೆಯ ದಿನವಾಗಿದೆ ಎಂದು ಹೇಳಿದೆ....
ಸುಪ್ರೀಂಕೋರ್ಟ್ ಮುಖ್ಯನ್ಯಾಯಾಪೀಠ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಲು ಆದೇಶ ನೀಡಿದೆ.
ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡುವಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸುಪ್ರೀಂಕೋರ್ಟ್, ಬಿಬಿಎಂಪಿ...
ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ಸೂಚನೆ ನೀಡುತ್ತಿದ್ದಂತೆಯೇ ಇತ್ತ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲು ಅಂತಿಮ ಸಿದ್ಧತೆ ನಡೆಸಿದ್ದು, ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ.
ಜುಲೈ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂಬುದು ಆಯೋಗದ...
ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಈ ಕುರಿತು ತಿಳಿಸಿರುವ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಚಾರಿ, ಸುಪ್ರೀಂ ಕೋರ್ಟ್ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಮುಂಬರುವ ಆ.5ರೊಳಗೆ...
ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಶಾಂತಿಯುತ ಮತದಾನ ನಡೆದಿದೆ.
ಪಂಚಾಯ್ತಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿ ಜಾರಿ ಬಂದಿರುವ ಕಡ್ಡಾಯ ಮತದಾನ ಎರಡನೇ ಹಂತದಲ್ಲೂ ಪರಿಣಾಮ...
ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್ಪಿ, ಆರ್.ಜೆ.ಡಿ, ಜೆಡಿಯು, ಐ.ಎಲ್.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...
ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಹೊಸ ಪಕ್ಷವನ್ನು ಸ್ಥಾಪಿಸಿ ಅದಕ್ಕೆ ಹಿಂದೂಸ್ಥಾನ್ ಅವಾಮಿ ಮೋರ್ಚಾ(ಹೆಚ್.ಎ.ಎಂ) ಎಂದು ನಾಮಕರಣ ಮಾಡಿದ್ದಾರೆ.
ಸದ್ಯದಲ್ಲೇ ನಡೆಯಲಿರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 243 ಕ್ಷೇತ್ರಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು...
'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ.
ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್ ಜೈದಿ ಅಧಿಕಾರ ಸ್ವೀಕರಿಸಿದ್ದಾರೆ. 2017ರ ಜುಲೈನಲ್ಲಿ ನಸೀಮ್ ಅವರಿಗೆ 65 ವರ್ಷ ತುಂಬಲಿದ್ದು, ಅಲ್ಲಿಯ ತನಕ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...
ಮತಪತ್ರಗಳಲ್ಲಿ ಇನ್ನು ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಯ ಜತೆ ಅವರ ಫೋಟೋ ಕೂಡ ಇರಲಿದೆ. ಮತದಾರರಿಗೆ ಕೇವಲ ಹೆಸರು ಹಾಗೂ ಚಿಹ್ನೆಯ ಆಧಾರದಲ್ಲಿ ಅಭ್ಯರ್ಥಿಗಳನ್ನು ಗುರುತಿಸುವುದು ಕಷ್ಟವಾಗುತ್ತದೆ. ಅಲ್ಲದೆ, ಒಂದೇ ಹೆಸರಿನ ಹಲ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವ ಕಾರಣ ಗೊಂದಲ ಉಂಟಾಗುತ್ತದೆ....
'ದೆಹಲಿ' ಚುನಾವಣೆಯಲ್ಲಿ ಶಾಹಿ ಇಮಾಮ್ ಬುಖಾರಿ ಫತ್ವಾ ಹೊರಡಿಸಿದ್ದೇ ತಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ನಾಯಕಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಆರೋಪಿಸಿದ್ದಾರೆ.
ಫೆ.11ರಂದು ಎ.ಎನ್.ಐ ಪ್ರತಿನಿಧಿಯೊಂದಿಗೆ ಮಾತನಾಡಿರುವ ಕಿರಣ್ ಬೇಡಿ, ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್...
ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...
'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ.
ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...
ಬಿಜೆಪಿ, ಕಾಂಗ್ರೆಸ್ ನವರು ಹಣ ನೀಡಿದರೆ ತೆಗೆದುಕೊಳ್ಳಿ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ದೆಹಲಿಯ ಉತ್ತಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿ...
ಅನಿವಾಸಿ ಭಾರತೀಯರಿಗೂ ಮತದಾನ ಮಾಡುವ ಹಕ್ಕು ದೊರೆತಿದೆ. ಎನ್.ಆರ್.ಐ ಗಳು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತಚಲಾವಣೆ ಮಾಡುವುದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇ-ವೋಟಿಂಗ್ ಮೂಲಕ ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶ ನೀಡಬೇಕು, ಈ ಸೌಲಭ್ಯವನ್ನು 8 ವಾರಗಳಲ್ಲಿ...
ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ರಾಜೀನಾಮೆ ಬಳಿಕ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ...
ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ.
2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ.
ಕಳೆದ...
ನಿಗದಿತ ದಿನದೊಳಗೆ ಚುನಾವಣೆಯಲ್ಲಿ ನೀವು ಮಾಡಿದ ಖರ್ಚಿನ ವಿವರ ಕೊಡಿ. ಇಲ್ಲದಿದ್ದರೆ ನಿಮಗೆ ನೀಡಲಾಗಿರುವ ಮಾನ್ಯತೆ ರದ್ದು ಮಾಡಬೇಕಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ 20 ಪಕ್ಷಗಳಿಗೆ ಎಚ್ಚರಿಕೆ ನೀಡಿ, ನೋಟಿಸ್ ಜಾರಿ ಮಾಡಿದೆ.
ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್...
'ಜಮ್ಮು-ಕಾಶ್ಮೀರ'ದಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಬಿಜೆಪಿಗೆ ಮತ ನೀಡಿದರೆ ರಾಜ್ಯಕ್ಕೆ ಹಿಂದೂ ಮುಖ್ಯಮಂತ್ರಿ ಕೈಗೆ ಅಧಿಕಾರ ಕೊಡುತ್ತಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಮತ ನೀಡಬಾರದು ಎಂದು ಪಿಡಿಪಿ ಮುಖ್ಯಸ್ಥ ಪೀರ್ ಮನ್ಸೂರ್ ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...
'ಕೇಂದ್ರ ಚುನಾವಣಾ ಆಯೋಗ' ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಇಂದು ಚುನಾವಣಾ ದಿನಾಂಕ ಘೋಷಿಸಲಿದೆ.
ಸಂಜೆ 4 ಗಂಟೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿರುವ ಚುನಾವಣಾ ಆಯೋಗ, ಉಭಯ ರಾಜ್ಯಗಳಿಗೂ ನಡೆಯಲಿರುವ ಚುನಾವಣೆಯ ದಿನಾಂಕವನ್ನು ಘೋಷಿಸಲಿದೆ. ಜನವರಿ 19ಕ್ಕೆ ಜಮ್ಮು-ಕಾಶ್ಮೀರ ವಿಧಾನಸಭೆ...
ಪ್ರವಾಹ ಪೀಡಿತ ಜಮ್ಮು-ಕಾಶ್ಮೀರಕ್ಕೆ ಅ.18 ಚುನಾವಣಾ ಅಧಿಕಾರಿಗಳು ಭೇಟಿ ನೀಡಲಿದ್ದು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಜಮ್ಮು-ಕಾಶ್ಮೀರದ ಸರ್ಕಾರದ ಅವಧಿ ಮುಂದಿನ ಜನವರಿಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸಲು ನಿರ್ಧರಿಸಿದೆ....
'ಕೇಂದ್ರ ಚುನಾವಣಾ ಆಯೋಗ' ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆಗೆ ನಡೆಯಲಿರುವ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. ಅ.15ರಂದು ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಪತ್ ಕುಮಾರ್ ಹೇಳಿದ್ದಾರೆ.
ಎರಡೂ ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 20ರಂದು...
ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ.
ನೋಯ್ಡಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಚುನಾವಣಾ ನೀತಿ ಸಂಹಿತೆ...
ಆ.25ರಂದು ಉಪಚುನಾವಣೆ ಫಲಿತಾಂಶ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆ.25ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.
ಆ.21ರಂದು ನಡೆದ ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಆ.25ರಂದು ಪ್ರಕಟವಾಗಲಿದ್ದು, ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ...