ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್-3 ರಲ್ಲಿ ಪ್ರತಿಷ್ಠಾಪಿಸಿದ್ದ ಜಗತ್ತಿನ ಅತಿದೊಡ್ಡ ಚರಕವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದರು.
ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಚರಕ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜನರಿಗೆ ಸ್ವಾವಲಂಬನೆ ದೊರಕಿಸಿದ ವಸ್ತುವಾಗಿದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ...
ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...
ಬಿಜೆಪಿ ಶಾಸಕರಾದ ಆರ್ ಜಗದೀಶ್ ಅವರು ಹೃದಯಾಘಾತದಿಂದ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 58 ವಯಸ್ಸಿನ ಜಗದೀಶ್ ಅವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಶಾಸಕರಾಗಿದ್ದರು.
ಜಗದೀಶ್ ಆವರು ಸೋಮವಾರದಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಹಾಜರಿದ್ದರು. ಮಧ್ಯಾಹ್ನದ...
ಹತ್ತು ದಿನಗಳ ಉಭಯ ಸದನಗಳ ಚಳಿಗಾಲದ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ.
ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ರೈತರ ಆತ್ಮಹತ್ಯೆ, ಬರ ಪರಿಹಾರ ಕಾಮಗಾರಿಗಳಿಗೆ ಕಾರ್ಯಗತಗೊಳಿಸಲು ವೈಫಲ್ಯ, ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ವಿರುದ್ಧದ ಆರೋಪ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಬಗೆಗಿನ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತೀ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಪುನಃ ಬಿಜೆಪಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.
ಒಟ್ಟು 198 ವಾರ್ಡ್ ಗಳ ಪೈಕಿ 1 ವಾರ್ಡ್ ನಲ್ಲಿ...
ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ನ ಅಂಕಿ ಅಂಶದ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡುತ್ತಿರುವ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ರೊಚ್ಚಿಗೆದ್ದ ಘಟನೆ ನಡೆಯಿತು.
ಕೇಂದ್ರದಿಂದ 4,690 ಕೋಟಿ ರೂಪಾಯಿ ಕೊರತೆಯಾಗಿದೆ ಎಂದು ಸಿದ್ದರಾಮಯ್ಯ...
ಬುಧವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ, ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಹಿ ಹಾಕಬೇಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.
ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ,...
ಈದ್-ಉಲ್-ಫಿತರ್ ಮತ್ತು ಜಗನ್ನಾಥ ರಥ ಯಾತ್ರೆಯ ಸಂದರ್ಭದಲ್ಲಿ ಶನಿವಾರ, ಜು 18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭ ಹಾರೈಸಿದ್ದಾರೆ.
ಈದ್-ಉಲ್-ಫಿತರ್ ಪವಿತ್ರ ಗಳಿಗೆಯಲ್ಲಿ ನನ್ನ ಶುಭಾಶಯಗಳು. ರಂಜಾನ್ ಪವಿತ್ರ ಮಾಸದ ಮುಕ್ತಾಯ ಜಗನ್ನಾಥ ರಥಯಾತ್ರೆಯ ಪುಣ್ಯದಿನದಂದೇ ಬಂದಿರುವುದು ಸಮಾಜದಲ್ಲಿನ...
ಹತ್ತು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಶುಕ್ರವಾರ ಮಧ್ಯಾಹ್ನ ಅಂತ್ಯಗೊಂಡಿದೆ. ರಜೆಯ ಮೂಡಿನಲ್ಲಿದ್ದ ಬಹಳಷ್ಟು ಸಚಿವರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದರು.
ಶುಕ್ರವಾರದ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆ ನಡೆಸಲಾಯಿತು. ಸೋಮವಾರ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ ಸ್ಪೀಕರ್ ಕಾಗೋಡು ತಿಮ್ಮಪ್ಪ,...
ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...
1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಹಾಗೂ ಹಣ ದುರುಪಯೋಗ ಆರೋಪಡಿಯಲ್ಲಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಮತ್ತೆ ಹೊಸ ಎಫ್.ಐ.ಆರ್ ದಾಖಲಿಸುವುದಿಲ್ಲ ಎಂದು ಸಿಬಿಐ ದೆಹಲಿ ಕೋರ್ಟ್ ಗೆ ತಿಳಿಸಿದೆ. ಈ ಪ್ರಕರಣದಲ್ಲಿ...
ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರು ನಗರ ಹೊರವಲಯದ ಖಾಸಗಿ ರೆಸಾರ್ಟ್ವೊಂದರಲ್ಲಿ ಶುಕ್ರವಾರ ನಡೆದಿದ್ದು, ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮುಂಬರುವ...
ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...
1984ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಬೀರಿದ್ದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದ ಸಿಬಿಐಯನ್ನು...
ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ...
'ಗ್ರಾಮ ಪಂಚಾಯ್ತಿ' ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತಿರುವ ಜನತೆ, ಈಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾವಣೆ ಮಾಡಲಿದ್ದಾರೆ, ಈ ಮೂಲಕ...
ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸಿ.ಟಿ.ರವಿ ಅವರು ಮಾತುಕತೆ ನಡೆಸಿ ಮನವೊಲಿಸಿದ ನಂತರ ಆನಂದ್ ಸಿಂಗ್...
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್ನ ಉಪನಾಯಕ ವೈಎಸ್ವಿ ದತ್ತಾ...
ಎರಡು ದಿನಗಳ ಹಿಂದೆ ದಕ್ಷಿಣ ಫ್ರಾನ್ಸ್ ನ ಆಲ್ಪ್ಸ್ ಪರ್ವತ ಶ್ರೇಣಿಗಳಲ್ಲಿ ಜರುಗಿದ ವಿಮಾನ ದುರಂತ ತಾಂತ್ರಿಕ ಕಾರಣದಿಂದ ಸಂಭವಿಸಿದ ದುರಂತವಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಮಾಡಿದ್ದು ಎಂಬುದನ್ನು ಬ್ಲಾಕ್ ಬಾಕ್ಸ್ ಬಹಿರಂಗಮಾಡಿದೆ.
ಸಹ-ಪೈಲಟ್ ಮತ್ತು ಮುಖ್ಯ ಪೈಲಟ್ಗ ಳ ನಡುವಿನ ಜಗಳದಲ್ಲಿ ಈ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ವಿಧಾನಸಭೆ ಕಲಾಪದ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೆಚ್ಚು...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು...
'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...
ತೀರ್ವ ಕುತೂಹಲ ಕೆರಳಿಸಿರುವ ಬಿಸಿಸಿಐ ಚುನಾವಣೆ ಸೋಮವಾರ ನಡೆಯಲಿದ್ದು ಅಧ್ಯಕ್ಷರಾಗಿ ಜಗಮೋಹನ್ ದಾಲ್ಮಿಯಾ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಹುದ್ದೆ ಮೇಲೆ ಕಣ್ಣಿಟ್ಟು ಕೋರ್ಟ್ನಿಂದಲೂ ಛೀಮಾರಿ ಹಾಕಿಸಿಕೊಂಡಿದ್ದ ಪದಚ್ಯುತ ಅಧ್ಯಕ್ಷ ಶ್ರೀನಿವಾಸನ್ ಕಣದಿಂದ ಹಿಂದೆ ಸರಿದು ದಾಲ್ಮಿಯಾರನ್ನು ಬೆಂಬಲಿಸಿದರು. ಹೀಗಾಗಿ...
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಸಿಸಿಐ ಚುನಾವಣೆಯಲ್ಲಿ ಜಗಮೋಹನ್ ದಾಲ್ಮಿಯ ಬಿಸಿಸಿಐನ ಪೂರ್ಣಕಾಲಿಕ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪದಚ್ಯುತ ಅಧ್ಯಕ್ಷ ಎನ್.ಶ್ರೀನಿವಾಸನ್ ಸ್ಪರ್ಧಿಸದೇ ಇದ್ದುದರಿಂದ ಅವರಪರ ದಾಲ್ಮಿಯ ನಾಮಪತ್ರ ಸಲ್ಲಿಸಿದ್ದರು.
ದಾಲ್ಮೀಯ ಅವರಿಗೆ ಎದುರಾಳಿಯಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಚ್ಚಾ ತೈಲ ಬೆಲೆ ಇಳಿಕೆಯಿಂದ ಕೇಂದ್ರಕ್ಕೆ 18-20 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದನ್ನು ರೈಲ್ವೆ ಬಜೆಟ್ ನಲ್ಲಿ ಉಪಯೋಗಿಸಿಕೊಳ್ಳಲು ಅವಕಾಶವಿದ್ದರೂ...
'ಎಐಸಿಸಿ'ಯಿಂದ ರಜೆ ಪಡೆದಿದ್ದ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿಲ್ಲ, ಭಾರತದಲ್ಲೇ ಇದ್ದಾರೆ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ ಅವರ ಮಾಹಿತಿಯನ್ನು ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿಗಳು ಅಲ್ಲಗಳೆದಿದ್ದಾರೆ.
ಸಂಸತ್ ಅಧಿವೇಶನ, ಪಕ್ಷದ ಕೆಲಸಗಳಿಂದ ರಾಹುಲ್ ಗಾಂಧಿ ರಜೆ ಪಡೆದಿರುವ...
ರಾಜ್ಯ ಸರ್ಕಾರ 8 ಗಣಿ ಗುತ್ತಿಗೆ ಕಂಪನಿಗಳ ಗುತ್ತಿಗೆ ನವೀಕರಣಕ್ಕೆ ಆದೇಶ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಣಿ ಕಂಪನಿಗಳ ಲಾಭಿಗೆ ರಾಜ್ಯ ಸರ್ಕಾರ ಮಣಿದಿದೆ. ನಿಯಮ ಉಲ್ಲಂಘಿಸಿ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ...
ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಬೆಂಗಳೂರು ಪ್ರವೇಶಿಸದಂತೆ ನಿಷೇಧ ಹೇರಿರುವುದನ್ನು ಸದನದಲ್ಲಿ ಪ್ರಶ್ನಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಪ್ರವೀಣ್ ತೊಗಾಡಿಯಾ ಬೆಂಗಳೂರು ಪ್ರವೇಶಿಸದಂತೆ ನಿಷೇಧ ಹೇರಿರುವುದು ಪ್ರಜಾಪ್ರಭುತ್ವ...
'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...
'ಇಂಡಿಯನ್ ಮುಜಾಹಿದ್ದೀನ್' ಸಂಘಟೆನೆ ಬೆಳೆಯಲು ಬಿಜೆಪಿ ಕಾರಣ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಜ.10ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗ 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ...
ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...
ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕೆಪಿಎಸ್ಸಿ ನೇಮಕಕ್ಕೆ ಮಾಡಿರುವ ಶಿಫಾರಸನ್ನು ವಾಪಸ್ ಪಡೆಯಬೇಕು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಕೋರ್ಟ್ ಆದೇಶ ಪಾಲನೆಗಾಗಿ ಮುಖ್ಯಮಂತ್ರಿಯವರೇ ಸ್ವಯಂ ಪ್ರೇರಿತವಾಗಿ ಶಿಫಾರಸನ್ನು ವಾಪಸ್ ಪಡೆಯಬೇಕು. ಸದಸ್ಯರ ನೇಮಕಕ್ಕೆ ಶೋಧನಾ ಸಮಿತಿ ರಚಿಸಬೇಕು...
'ಪಂಜಾಬ್' ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬೇಅಂತ್ ಸಿಂಗ್ ಹಂತಕ ಜಗ್ತಾರ್ ಸಿಂಗ್ ನನ್ನು ಥಾಯ್ ಲ್ಯಾಂಡ್ ಪೊಲೀಸರು ಜ.6ರಂದು ಬಂಧಿಸಿದ್ದಾರೆ.
ಇಪ್ಪತ್ತು ವರ್ಷಗಳ ಹಿಂದೆ ಜಗ್ತಾರ್ ಸಿಂಗ್ ಭಾರತದಲ್ಲಿ ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿಯೂ ಸೇರಿದಂತೆ 15 ಜನ ಮೃತಪಟ್ಟಿದ್ದರು.
1995ರ...
ಬೀಜಗಣಿತ ಮತ್ತು ಪೈಥಾಗೊರಸ್ ಪ್ರಮೇಯ ಮೂಲದಲ್ಲಿ ರೂಪಗೊಂಡಿದ್ದು ಭಾರತದಲ್ಲೇ ಆದರೆ ಇವುಗಳ ಮನ್ನಣೆ ಬೇರೆ ದೇಶಗಳು ಪಡೆದಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಭಾರತೀಯ ವಿಜ್ಞಾನ ಸಮಾವೇಶದಲ್ಲಿ ಮಾತನಾದಿದ ಅವರು, ಪ್ರಾಚೀನ ಭಾರತೀಯ ವಿಜ್ಞಾನಿಗಳು ತಾವು...
ಡೀಸೆಲ್ ದರ ಐದು ಸಲ ಇಳಿದರೂ ಒಂದಿಲ್ಲೊಂದು ನೆಪ ಹೇಳುತ್ತ ಪ್ರಯಾಣ ದರ ಕಡಿಮೆ ಮಾಡಲು ನಿರಾಕರಿಸುತ್ತಿದ್ದ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ವಿಧನಸಭೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ...
ಕನಿಷ್ಠ ಬೆಂಬಲ ಯೋಜನೆಯಡಿ ಮೆಕ್ಕೆ ಜೋಳವನ್ನು ಖರೀದಿಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯುವಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಕುರಿತಂತೆ ನಿಯಮ...
ನಿಮ್ಮ ಕನಸು ನನ್ನ ಕನಸಿನ ಭಾರತವೂ ಆಗಿದೆ. ನೀವು ನೋಡಬಯಸುತ್ತಿರುವ ಭಾರತವನ್ನೇ ನಾನೂ ನೋಡಬಯಸುತ್ತೇನೆ, ದೇವರು ನೀಡಿರುವ ಬುದ್ಧಿ, ಶಕ್ತಿ, ಸಮಯವನ್ನು ನಿಮ್ಮ ಕನಸಿನ ಭಾರತ ನಿರ್ಮಾಣಕ್ಕಾಗಿ ವಿನಿಯೋಗಿಸುತ್ತೇನೆ ಎಂದು ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ...
ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಬ್ದುಲ್ ಅಜೀಂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್,...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು ಶಾಸಕರ ಬಲ ಹೊಂದಿರುವ ಬಿಜೆಪಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಲೆಫ್ಟಿನೆಂಟ್ ಗೌರ್ನರ್ ನಜೀಂ ಜಂಗ್ ಗೆ ಸ್ಪಷ್ಟಪಡಿಸಿದೆ.
ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ನ.3ರಂದು ರಾಜ್ಯಪಾಲ ನಜೀಬ್ ಜಂಗ್ ಅವರು...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ...
ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....
ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ, ಹಗರಣದ ಸಂಬಂಧ ತನಿಖೆ ನಡೆಸದಿದ್ದರೆ ಹಾಲಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧವೂ ದೂರು ದಾಖಲಿಸಿ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.
ಜಗದೀಶ್...
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ.
ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...
ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...
'ಬಳ್ಳಾರಿ' ಕಾಂಗ್ರೆಸ್ ಒಡೆದ ಮನೆಯಂತಾಗಿದ್ದು ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕರು ಊಟ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಆ.12ರಂದು ಬಳ್ಳಾರಿಯಲ್ಲಿರುವ ಬಿಜೆಪಿ ನಾಯಕ ಶೆಟ್ಟರ್, ಸೋಮಶೇಖರ ರೆಡ್ಡಿ ನಿವಾಸಕ್ಕೆ...
ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....