ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ, ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಬೆಂಗಳೂರು ಉತ್ತರ ತಾಲ್ಲೂಕು...
ಡಿನೋಟಿಫಿಕೇಷನ್ ಉರುಳು ಮತ್ತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಸುತ್ತ ಸುತ್ತಿಕೊಂಡಿದ್ದು, ಲೋಕಾಯುಕ್ತ ಪೊಲೀಸರು ಈ ಇಬ್ಬರೂ ನಾಯಕರ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರ ಬಳಿ ಇರುವ ಮಠದಹಳ್ಳಿ ಲೇಔಟ್ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ.
ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು.
ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ವಿಪಕ್ಷಗಳಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ನಮ್ಮ ಜನಪ್ರಿಯತೆ ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ...
ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಆರಂಭವಾಗುವ ವಿಧಾನಮಂಡಲದ ಕಲಾಪ ರಂಗೇರುವ ಸಾಧ್ಯತೆ ದಟ್ಟವಾಗಿದೆ.
ಅರ್ಕಾವತಿ ಪ್ರಕರಣದಲ್ಲಿ ಚರ್ಚೆಗೆ ಅವಕಾಶ ಪಡೆದು, ಸರ್ಕಾರದ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...
ಅರ್ಕಾವತಿ ಬಡಾವಣೆ ಡಿನೋಟಿಫೀಕೇಷನ್ಗೆ ಸಂಬಂಧಪಟ್ಟಂತೆ ಇದ್ದ ದಾಖಲೆಯ ಕೊಠಡಿಗೆ ಹೊರಗಿನಿಂದ ಬೀಗ ಹಾಕಿಕೊಂಡ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಸಿಬ್ಬಂದಿ, ಒಳಗೆ ಕುಳಿತು ಕಡತ ವಿಲೇವಾರಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕೊಠಡಿಗೆ ಬೀಗ ಹಾಕಿಕೊಂಡು ಕೆಲಸ ಮಾಡುವುದರ ಜತೆಗೆ ಇಬ್ಬರು...
ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು.
ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು.
ಸಿಎಂ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ.
ರಾಜ್ಯಪಾಲ ವಾಜುಭಾಯಿ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...
ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...
ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಎಲ್ಲ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು.
ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...
ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...
ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...
ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು.
ಕೆಪಿಎಸ್...
ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....