ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.
ಉತ್ತರ ಪ್ರದೇಶದ ಲಖ್ನೌನಲ್ಲಿನ ಐಶ್ಬಾಗ್ ರಾಮಲೀಲಾ ಮೈದಾನದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ...
ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ.
ಚಂಡಿಗಢ-ಕೊಚ್ಚಿವೇಲಿ ಎಕ್ಸ್ಪ್ರಸ್ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್ಗೆ ಬಂದಿಳಿದು, ಸದ್ಯ ಅವರು...
70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ ಸಿದ್ದರಾಮಯ್ಯ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ್ದ ಹೋರಾಟಗಾರರನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯ...
ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಸಾಯಂಕಾಲ 5 ಗಂಟೆಯ ನಂತರ ಫಲಿತಾಂಶ ಹೊರಬೀಳಲಿದೆ.
ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಐವರು ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ...
ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆದ ಮತದಾನದಲ್ಲಿ, ಓರ್ವ ನಾಮನಿರ್ದೇಶಿತ ಸದಸ್ಯ ಸೇರಿದಂತೆ ಒಟ್ಟು 225 ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಬೆಳಿಗ್ಗೆ 9ಗಂಟೆಯಿಂದ ಮತದಾನ ಆರಂಭಗೊಂಡಿದ್ದು. ಮಧ್ಯಾಹ್ನದ ವೇಳೆಗೆ ಮುಕ್ತಾಯವಾಗಿದೆ. ಸಂಜೆ 5ಗಂಟೆಯಿಂದ ವಿಧಾನಸೌಧದ ಕೊಠಡಿ 106ರಲ್ಲಿ ಮತಎಣಿಕೆ ಕಾರ್ಯ...
ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲೂ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ.
ತಮಿಳುನಾಡಿನ 233, ಕೇರಳದ 140 ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮೂರೂ ರಾಜ್ಯಗಳಲ್ಲಿಯೂ...
ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆ ಚುನಾವಣೆಯ 5 ನೇ ಹಂತದ ಮತದಾನ ಬೆಳಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಆರಂಭಗೊಂಡಿದೆ. ಭುವನೇಶ್ವರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ 53 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಈ ಮತದಾನ ಪ್ರಕ್ರಿಯೆ ಎಲ್ಲರ ಕುತೂಹಲ ಮೂಡಿಸಿದೆ.
ತೃಣಮೂಲ...
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, ಒಟ್ಟು 1.08 ಕೋಟಿ ಮತದಾರು ತಮ್ಮ ಹಕ್ಕನ್ನು ಚಲಾವಣೆ ಮಾಡಲಿದ್ದಾರೆ.
ಪಶ್ಚಿಮ ಬಂಗಾಳದ ಹಲವು ಆಡಳಿತಾ ರೂಢ ತೃಣಮೂಲ ಕಾಂಗ್ರೆಸ್ ನ ಹಲವು ಶಾಸಕರು ಸೇರಿದಂತೆ ವಿವಿಧ ರಾಜಕೀಯ ಘಟಾನುಘಟಿ...
ಪಶ್ಚಿಮ ಬಂಗಾಳದ ವಿಧಾನಸಭೆಗೆ ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಮುರ್ಷಿದಾಬಾದ್ ನಲ್ಲಿ ಮತದಾನ ನಡೆಯುತ್ತಿದ್ದ ವೇಳೆ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು ಸಿಪಿಐ-ಎಂ ಕಾರ್ಯಕರ್ತ ಮತದಾನದ ಏಜೆಂಟ್ 30 ವರ್ಷದ ತಹಿದುಲ್...
ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆ.
ಅರಮನೆ ಮೈದಾನದಲ್ಲಿ ಪ್ರತಿದಿನ ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಉತ್ತಮ ಆರೋಗ್ಯದ ಮಾರ್ಗ ತೋರಿಸಲಿದ್ದಾರೆ. ರೋಗಮುಕ್ತ ಹಾಗೂ ಉತ್ಸಾಹದಾಯಕ ಜೀವನ...
ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಹಿಳಾ...
ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಎರಡನೇ ಹಂತದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಶನಿವಾರ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು ಗ್ರಾಮದಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರೆ, ಕೆಲವೆಡೆ ಘರ್ಷಣೆ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯ 5...
ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ಅವರು ಶುಕ್ರವಾರ ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ಪ್ರಾಯವಾಗಿತ್ತು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮರುಳಯ್ಯ ಅವರನ್ನು ಜನವರಿ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳದಿದ್ದಾರೆ
ಮರಣಾ...
ಭಾರತದಲ್ಲಿ ಹಿಂದೂ ಧರ್ಮದ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿದ ಹಿರಿಯ ಸಂಶೋಧಕ, ಇತಿಹಾಸ ತಜ್ನ ಡಾ ಎಂ ಚಿದಾನಂದಮೂರ್ತಿ ಅವರು, ಈ ದೌರ್ಜನ್ಯವನ್ನು ಮಹಾತ್ಮ ಗಾಂಧೀಜಿ ಕಂಡಿದ್ದರೆ, ಅಹಿಂಸಾ ಪ್ರತಿಪಾದಕರಾಗಿದ್ದ ಅವರೂ ಹಿಂಸೆಗಿಳಿಯುತ್ತಿದ್ದರು ಅಭಿಪ್ರಾಯಪಟ್ಟಿದ್ದಾರೆ.
ಅರಮನೆ ರಸ್ತೆಯಲ್ಲಿರುವ ಟಿ.ಎಚ್. ವೆಂಕಟರಮಣಪ್ಪ ಕಲ್ಯಾಣ ಮಂದಿರದಲ್ಲಿ...
ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ.
ಬೀದರ್, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಭಾನುವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ಒಟ್ಟು 20 ಕ್ಷೇತ್ರಗಳ 25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ. 99.61ರಷ್ಟು ಮತದಾನವಾಗಿದೆ. ಕೋಲಾರ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ...
26/11 ಮುಂಬಯಿ ದಾಳಿ ನಡೆಸಲು ಲಷ್ಕರ್-ಎ-ತಯ್ಯಬಾ ಉಗ್ರರ ಜೊತೆ ಒಲಸಮ್ಚು ರೂಪಿಸಿದ್ದ, ಡೇವಿಡ್ ಹೆಡ್ಲಿ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಒಪ್ಪಿಗೆ ಸೂಚಿಸಿದ ನಂತರ ಮುಂಬಯಿ ವಿಶೇಷ ನ್ಯಾಯಾಲಯ ಕ್ಷಮಾದಾನ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.
ಈಗ ಅಮೆರಿಕದ ಜೈಲಿನಲ್ಲಿರುವ ಹೆಡ್ಲಿ...
ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.
ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ.
6.80 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ...
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...
ಬಿಹಾರ್ ವಿಧಾನಸಭೆಗೆ 5 ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಶುಕ್ರವಾರ ಎರಡನೇ ಹಂತದ ಚುನಾವಣೆ ಪ್ರಾರಂಭವಾಗಿದೆ. ಶುಕ್ರವಾರ 32 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.
ಬೆಳಗ್ಗೆ 9 ಗಂಟೆಗೆ ಶೇಕಡಾ 13 ರಷ್ಟು ಮತದಾನವಾದ ವರದಿಯಾಗಿದೆ.
6 ಜಿಲ್ಲೆಗಳ...
ಬಿಹಾರ ವಿಧಾನಸಭೆಯ ಮೊದಲ ಹಂತದ ಮತದಾನ ಸೋಮವಾರ ಬೆಳಗ್ಗೆ 49 ಕ್ಷೇತ್ರಗಳಲ್ಲಿ ಆರಂಭಗೊಂಡಿದೆ.
ಮೊದಲ ಹಂತದಲ್ಲಿ ಸುಮಾರು 1.35 ಕೋಟಿ ಮಂದಿ ಮತದಾರರು 49 ಮಂದಿ ಶಾಸಕರನ್ನು ಆಯ್ಕೆ ಮಾಡಲಿದ್ದು ಕಣದಲ್ಲಿ 583 ಅಭ್ಯರ್ಥಿಗಳ ಪೈಕಿ 54 ಮಂದಿ ಮಹಿಳೆಯರು.
ಬೆಳಗ್ಗೆ 9...
ಬಿಹಾರ್ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಚುನಾವಣಾ ಅಯೋಗ ಬುಧವಾರ ಬಿಡುಗಡೆ ಮಾಡಿದೆ. 5 ಹಂತಗಳಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ಚುನಾವಣೆಯ ಮತ ಎಣಿಕೆ ನ. 8 ರಂದು ನಡೆಯಲಿದೆ.
ಮೊದಲನೇ ಹಂತ ಅಕ್ಟೋಬರ್ 12, ಎರಡನೇ ಹಂತ ಅ. 16...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಒಟ್ಟು 197 ವಾರ್ಡ್ಗಳಿಗೆ ಚುನಾವಣೆ ನಡೆಯುತ್ತಿದ್ದು, 6,759 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 198 ವಾರ್ಡ್ಗಳ ಪೈಕಿ ಹೊಂಗಸಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ, ಶನಿವಾರ 197...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತದಾನ 5 ಗಂಟೆಗೆ ಮುಕ್ತಾಯಗೊಂಡಿದ್ದು, ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸುಮಾರು 3 ಗಂಟೆಯ ಸಮಯದಲ್ಲಿ ಕೇವಲ ಶೇ. 30 ರಷ್ಟು ಮತದಾನವಾಗಿದ್ದು, 21 ಲಕ್ಷ 99 ಸಾವಿರದಷ್ಟು ಮಂದಿ ಮತದಾನ ಮಾಡಿದ್ದರು. ಹೆಚ್ಚಾಗಿ ಯಾವುದೇ...
ಬಿಹಾರಕ್ಕೆ 'ಅಛ್ಚೇ ದಿನ್' ಆಗಮನವಾಗುತ್ತಿದೆ. ಬಿಹಾರದ ಅರ್ರ್ಹಾದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಅಭಿವೃದ್ಧಿಗಾಗಿ ಕೇಂದ್ರದಿಂದ 1.25 ಲಕ್ಷ ಕೋಟಿ ರೂ. ವಿಶೇಷ ಅನುದಾನ ಘೋಷಿಸಿದ್ದಾರೆ.
ಇಂದು ನಾನು ಬಿಹಾರ್ ಗೆ ಅನುದಾನ ಘೋಷಣೆ ಮಾಡುತ್ತೇನೆ....
ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷ ಬಲವರ್ಧನೆ ಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಪಟ್ನಾ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಶನಿವಾರದಿಂದ ಬಿಹಾರದಲ್ಲಿ ಪ್ರಚಾರ ಪ್ರಾರಂಭಿಸಲಿದ್ದಾರೆ.
ಅಕ್ಟೋಬರ್ ಯಾ ನವೆಂಬರ್ ತಿಂಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ...
ಭಾರೀ ಮಳೆಯ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ತಮ್ಮ ವಾರಣಾಸಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇದರಿಂದ ಸತತ ಎರಡನೇ ಬಾರಿ ಪ್ರಧಾನಿ ತಮ್ಮ ವಾರಣಾಸಿ ಪ್ರವಾಸವನ್ನು ರದ್ದುಗೊಳಿಸಿದಂತಾಗಿದೆ.
ಆದರೆ ಈ ಸಂಬಂಧ ಮಾತನಾಡಿದ ರಾಜ್ಯ ಬಿಜೆಪಿ ಘಟಕದ ನಾಯಕ ಲಕ್ಷ್ಮಿಕಾಂತ್ ಬಾಜಪಾಯಿ, ಎಲ್ಲಾ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ.
ಜುಲೈ 28 ರಂದು ನಡೆಯಬೇಕಿದ್ದ ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...
ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಗ್ರೀಸ್ ನ ಪ್ರಭಾವ ಇತರ ದೇಶಗಳ ಮೇಲೂ ಬೀರತೊಡಗಿವೆ.
ವಿದೇಶಿ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಿಕೊಳ್ಳಲು ಆ ಸಂಸ್ಥೆಗಳು ಹೇರುವ ಕಠಿಣ ಷರತ್ತಿಗೆ ಒಪ್ಪಿಕೊಳ್ಳದೇ ಇರುವ ನಿರ್ಧಾರವನ್ನು ಗ್ರೀಸ್ ಜನತೆ ಕೈಗೊಂಡಿರುವ ಪರಿಣಾಮ...
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಣದಲ್ಲಿರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭವಾಗಿದೆ. ಬೂತ್ ಸಂಖ್ಯೆ 1 ಮತ್ತು 83 ಹೊರತಪಡಿಸಿ ಎಲ್ಲ ಮತಗಟ್ಟೆಗಳಲ್ಲು ಯಾವುದೇ ತೊಂದರೆ ಇಲ್ಲ ವಿದ್ಯುನ್ಮಾನ ಮತಯಂತ್ರಗಳು ಕಾರ್ಯನಿರ್ವಹಿಸಿವೆ. ಆ ಮತಗಟ್ಟೆಗಳಲ್ಲೂ ಕೆಲವು...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ರಾಜಕಾರಣಿಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ ಲಿಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಮತ್ತು...
ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.
ಗುರುವಾರ ಸುದ್ದಿಗೋಷ್ಠಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಘೊಷಣೆ ಮಾಡಿದರು.
ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಚುನಾವಣೆಯ ಉಸ್ತುವಾರಿ...
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಜೂನ್ 21 ರಂದು ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ 7 ಸಾವಿರಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ತಿಳಿಸಿದರು.
ಜೂನ್...
ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಶಾಂತಿಯುತ ಮತದಾನ ನಡೆದಿದೆ.
ಪಂಚಾಯ್ತಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿ ಜಾರಿ ಬಂದಿರುವ ಕಡ್ಡಾಯ ಮತದಾನ ಎರಡನೇ ಹಂತದಲ್ಲೂ ಪರಿಣಾಮ...
ಗ್ರಾಮ ಪಂಚಾಯ್ತಿ ಚುನಾವಣೆಯ ಎರಡನೇ ಹಂತದ ಮತದಾನ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 5 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುತ್ತದೆ.
ಪಂಚಾಯ್ತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸಿದ ಬಳಿಕ ನಡೆಯುತ್ತಿರುವ ಪ್ರಥಮ...
ಗ್ರಾಮ ಪಂಚಾಯ್ತಿಯ ಮೊದಲ ಹಂತದ ಚುನಾವಣೆಯ ಮತದಾನ ಮೇ 29ರಂದು ರಾಜ್ಯದ 15 ಜಿಲ್ಲೆಗಳಲ್ಲಿ ನಡೆಯಲಿದೆ. ಕಡೆಗಳಿಗೆಯ ಬಿರುಸಿನ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ತೊಡಗಿದ್ದಾರೆ.
ಪ್ರಚಾರದ ಭರಾಟೆ ನಿರ್ಣಾಯಕ ಘಟ್ಟ ತಲುಪಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ...
ಕೋಮು ಸಾಮರಸ್ಯಕ್ಕೆ ಸಾಕ್ಷಿ ಎಂಬಂತೆ ಬಿಹಾರದಲ್ಲಿ ನಿರ್ಮಾಣವಾಗುತ್ತಿರುವ ವಿಶ್ವದ ಬೃಹತ್ ಹಿಂದೂ ದೇಗುಲದ ನಿರ್ಮಾಣಕ್ಕೆ ಮುಸ್ಲಿಮರು ಭೂಮಿಯನ್ನು ದಾನವಾಗಿ ನೀಡಿದ್ದಾರೆ.
ಬಿಹಾರದ ಪೂರ್ವ ಚಂಪಾರನ್ ಜಿಲ್ಲೆಯ ಜಾನಕಿ ನಗರ್ ಎಂಬಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ದೇಗುಲವನ್ನು ನಿರ್ಮಾಣ ಮಾಡಲಾಗುತ್ತಿದೆ....
ಬಾಲಿವುಡ್ ನ ಹಿರಿಯ ನಟ ಶಶಿ ಕಪೂರ್ ಅವರಿಗೆ 2015 ನೇ ಸಾಲಿನ ಅತ್ಯುನ್ನತ ಚಲನ ಚಿತ್ರ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಮುಂಬೈಯ ಪ್ರಥ್ವಿ ಚಿತ್ರಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ...
ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಮಹತ್ವದ ಪಂಚಾಯತ್ ರಾಜ್ ವಿಧೇಯಕಕ್ಕೆ ರಾಜ್ಯಪಾಲ ವಾಜುಭಾಯಿ ವಾಲಾ ಕೊನೆಗೂ ಅಂಕಿತ ಹಾಕಿದ್ದಾರೆ.
ಹೊಸದಾಗಿ ರಚನೆಯಾಗಿರುವ 454 ಗ್ರಾಮ ಪಂಚಾಯಿತಿಗಳು ಸೇರಿದಂತೆ 6083 ಗ್ರಾಮ ಪಂಚಾಯಿತಿ ಸೇರಿದಂತೆ ಮುಂದೆ ನಡೆಯುವ ಎಲ್ಲ ಪಂಚಾಯಿತಿಗಳ ಚುನಾವಣೆಯಲ್ಲಿ...
ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...
ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್ ಕಿಸಾನ್ ರ್ಯಾಲಿ ಆಯೋಜಿಸಿದೆ.
ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...
ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಯೋಗಿ ಆದಿತ್ಯನಾಥ್ ಎಲ್ಲರ ಹುಬ್ಬೇರಿಸುವಂತಹ ಮತ್ತೊಂದು ಹೇಳಿಕೆ ನೀಡಿದ್ದಾರೆ.
ಹಿಂದೂಗಳ ಪ್ರಸಿದ್ಧ ಪುಣ್ಯಕ್ಷೇತ್ರ ಹರಿದ್ವಾರದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು, ಅನ್ಯಧರ್ಮದವರಿಗೆ ಪ್ರವೇಶ ನಿಷೇಧಿಸಬೇಕು ಎಂದು ಯೋಗಿ ಆದಿತ್ಯನಾಥ್ ಒತ್ತಾಯಿಸಿದ್ದಾರೆ. ಹರಿದ್ವಾರದ ಪಾವಿತ್ರ್ಯತೆ ಕಾಪಾಡುವ ಉದ್ದೇಶದಿಂದ...
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ...
ಕೃಷಿ ಕ್ಷೇತ್ರಕ್ಕೆ ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಉನ್ನತೀಕರಣದ ಅವಶ್ಯಕತೆ ಇದೆ. ರೈತರಿಗೆ ಉತ್ತಮ ರಸ್ತೆಗಳು, ಕೃಷಿ ಭೂಮಿಯಲ್ಲಿ ನೀರಿನ ಸೌಕರ್ಯ ಹಾಗೂ ವಿದ್ಯುತ್ ಪೂರೈಕೆ ಅಗತ್ಯವಿದೆ. ಆದರೆ ರೈತರಿಗೆ ಅವಶ್ಯವಾಗಿರುವ ಸೌಲಭ್ಯಗಳನ್ನು ಒದಗಿಸುವ ಯೋಜನೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳು ರೈತ ಪರ ಹೋರಾಟದ...
ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್ ಪಂದ್ಯದಲ್ಲಿ ಅಂಪೈರಿಂಗ್ ನಲ್ಲಿ ಗುಣಮಟ್ಟವಿರಲಿಲ್ಲ....
ಬಿಹಾರದ ಬಹದ್ದೂರ್ ಪುರದಲ್ಲಿ ಸ್ಫೋಟಗೊಂಡಿದ್ದ ಬಾಂಬ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಗುರಿಯಾಗಿರಿಸಿಕೊಂಡು ತಯಾರಿಸಲಾಗಿತ್ತು ಎಂದು ತಿಳಿದುಬಂದಿದೆ.
ಮಾ.31ರಂದು ಬಿಹಾರದ ಬಹದ್ದೂರ್ ಪುರದ ಫ್ಲಾಟ್ ಒಂದರಲ್ಲಿ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಗೊಂಡಿತ್ತು. ಬಾಂಬ್ ತಯಾರಿಸುತ್ತಿರುವಾಗಲೇ ಸ್ಫೋಟ ಸಂಭವಿಸಿತ್ತು. ಏ.14ರಂದು...
ಪಂಚಾಯತ್ ವ್ಯವಸ್ಥೆಯ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಕುರಿತ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಮಂಡಿಸಿದೆ.
ಅಲ್ಲದೆ, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ...
'ದೇವರ ದಾಸಿಮಯ್ಯ' ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ, ಇತಿಹಾಸಕಾರ ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ಮಾ.25ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ ಎಂದು...
ಈ ಹಿಂದೆ 'ಅನ್ಯ ಕೋಮಿನವರು 40 ಮಕ್ಕಳನ್ನು ಹೆರುತ್ತಾರೆಂದರೆ, ಹಿಂದುಗಳು 4 ಮಕ್ಕಳನ್ನು ಹೆರುವುದರಲ್ಲಿ ತಪ್ಪಿಲ್ಲ' ಎಂದು ಹೇಳಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಈಗ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.
ಈ ಹಿಂದಿನ ತಮ್ಮ...
'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮನವಿ ಮಾಡಿದೆ.
ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ,...
ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ
ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...
'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...
ತೀವ್ರ ಪೈಪೋಟಿಯಿಂದ ಕೂಡಿದ್ದ ದೆಹಲಿ ವಿಧಾನಸಭೆ ಚುನಾವಣೆ ಅಂತ್ಯಗೊಂಡಿದ್ದು, ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಬಹುಮತ ಗಳಿಸಲಿದೆ ಎಂದು ಆರು ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಇನ್ನು ಭಾರೀ ನಿರೀಕ್ಷೆ ಹೊಂದಿದ್ದ ಬಿಜೆಪಿ ಎರಡನೇ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎಂದು ಸಿಎಂ ಅಭ್ಯರ್ಥಿ ಕಿರಣ್ ಬೇಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಮಾತನಾದಿದ ಅವರು, ಫೆ .10ರಂದು ಪ್ರಕಟವಾಗಲಿರುವ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎನ್ನುವುದು ನನ್ನ ಭಾವನೆ. ಒಂದು ವೇಳೆ ಬಿಜೆಪಿಯೇನಾದರೂ ಸೋತರೆ...
ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟು 1,33,14,215 ಮತದಾರರು ಸುಮಾರು 673 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಕೊರೆಯುವ ಚಳಿಯ ವಾತಾವರಣವಿದ್ದರೂ ರಾಷ್ಟ್ರ ರಾಜಧಾನಿಯ ಹಲವೆಡೆಗಳಲ್ಲಿ ಮತದಾರರು ಉತ್ಸಾಹದಿಂದಲೇ ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ದೆಹಲಿಯ 70 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ....
'ದೆಹಲಿ' ವಿಧಾನಸಭೆಗೆ ಮತದಾನ ನಡೆಯುತ್ತಿರುವ ದಿನದಂದೂ ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪ ಕೇಳಿಬಂದಿದೆ.
ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಸ್ಪರ್ಧಿಸಿರುವ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ ಹಾಕದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ...
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆ ಬಿರುಸುಪಡೆದುಕೊಂಡಿದೆ. ಕೊರೆಯುವ ಚೆಳಿಯನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ.
ಬೆಳಿಗ್ಗೆ 11ಗಂಟೆಯವರೆಗೆ ಶೇ.19.7ರಷ್ಟು ಮತದಾನ ನಡೆದ ಬಗ್ಗೆ ವರದಿಯಾಗಿದೆ. ಈ ನಡುವೆ ರಾಜಕೀಯ ಧುರೀಣರು, ಘಟಾನುಘಟಿ ನಾಯಕರು...
ದೆಹಲಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ತಿಳಿಸಿದ್ದಾರೆ.
ರಾಜೌರಿ ಗಾರ್ಡನ್ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು....
ದೇಶದಲ್ಲಿ ದೆಹಲಿಯಲ್ಲೇ ಅತ್ಯಂತ ಹೆಚ್ಚು ಮತದಾನ ನಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.4ರಂದು ಅಂಬೇಡ್ಕರ್ ನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ದೇಶದಲ್ಲಿ ಅತ್ಯಂತ ಹೆಚ್ಚು ಮತದಾನವಾಗಿರುವುದು ಜಮ್ಮು-ಕಾಶ್ಮೀರದಲ್ಲಿ....
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...
ಫೆ.8ರಂದು ಬೆಂಗಳೂರಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಅದನ್ನು ಯಶಸ್ಸುಗೊಳಿಸಲು ಸಹಕರಿಸುವ ಸಂಬಂಧ ಸಂಘ ಪರಿವಾರದ ಮುಖಂಡರು ರಾಜ್ಯ ಬಿಜೆಪಿ ನಾಯಕರ ಜತೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೇಂದ್ರ ಕಚೇರಿ ಕೇಶವ ಕೃಪಾದಲ್ಲಿ ನಡೆದ ಸಮನ್ವಯ...
ಅನಿವಾಸಿ ಭಾರತೀಯರಿಗೂ ಮತದಾನ ಮಾಡುವ ಹಕ್ಕು ದೊರೆತಿದೆ. ಎನ್.ಆರ್.ಐ ಗಳು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತಚಲಾವಣೆ ಮಾಡುವುದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇ-ವೋಟಿಂಗ್ ಮೂಲಕ ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶ ನೀಡಬೇಕು, ಈ ಸೌಲಭ್ಯವನ್ನು 8 ವಾರಗಳಲ್ಲಿ...
ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು.
ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...
ಪ್ರತಿ ಸಚಿವಾಲಯ ಕೂಡ ಬಜೆಟ್ನಲ್ಲಿ ನೀಡಲಾಗುವು ಅನುದಾನವನ್ನು ವರ್ಷಪೂರ್ತಿ ಸಮಾನವಾಗಿ ಬಳಿಸಿಕೊಳ್ಳಬೇಕು. ರ್ಷದ ಕೊನೆಗೆ ಎಚ್ಚೆತ್ತು ತರಾತುರಿಯಿಂದ ಹಣವನ್ನು ವ್ಯಯಿಸುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳು ಬಾಕಿಯಿರುವಾಗಲೇ ತಮ್ಮ...
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...
ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ.
ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...
ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭೆಗೆ ನಡೆಯುತ್ತಿರುವ ಐದು ಹಂತದ ಚುನಾವಣೆಗಳ ಪೈಕಿ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ.
ಜಮ್ಮು-ಕಾಶ್ಮೀರದಲ್ಲಿ 18 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಹಾಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಮಾಜಿ ಮುಖ್ಯಮಂತ್ರಿ, ಪಿಡಿಪಿ ನಾಯಕ ಮುಫ್ತಿ ಮೊಹಮ್ಮದ್...
ಖಾಪ್ ಪಂಚಾಯತ್ ಗಳೂ ಸೇರಿದಂತೆ ಯಾವುದೇ ಸಾಂಪ್ರದಾಯಿಕ ನ್ಯಾಯಾಲಯಗಳು ಅಸಾಂವಿಧಾನಿಕ ಎಂದು ಕೇಂದ್ರ ಕಾನುನು ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.
ಸಂಸತ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದ ಗೌಡ, ಸಾಂಪ್ರದಾಯಿಕ ನ್ಯಾಯಾಲಯಗಳು ದೇಶದ ಕಾನೂನಿಗೆ ವಿರುದ್ಧವಾಗಿದ್ದು ಇಂತಹ ನ್ಯಾಯಾಲಯಗಳ...
ಜಮ್ಮು-ಕಾಶ್ಮೀರದ 16 ಕ್ಷೇತ್ರಗಳಲ್ಲಿ ಮತ್ತು ಜಾರ್ಖಂಡ್ನ 17ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಶಾಂತಿಯುತವಾಗಿ ಬಿರುಸಿನಿಂದ ನಡೆಯುತ್ತಿದೆ.
ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 4 ಗಂಟೆಯ ವರೆಗೆ ನಡೆಯಲಿದೆ.
ಜಮ್ಮು-ಕಾಶ್ಮೀರದಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಬರುತ್ತಿದ್ದು, ಹೆಚ್ಚಿನ ಮತಗಟ್ಟೆಗಳಲ್ಲಿ ಉದ್ದನೆಯ ಸಾಲುಗಳು...
ಅಡಕೆ ಆರೋಗ್ಯಕ್ಕೆ ಹಾನಿಕರ ಎಂಬ ವ್ಯಾಜ್ಯ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದ್ದು, ಅಡಕೆ ಬೆಳೆಗಾಗರರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ.
ಅಡಕೆಯಲ್ಲಿ ಔಷಧೀಯ ಅಂಶಗಳೂ ಇವೆ. ಈ ಬಗ್ಗೆ ಚೆನ್ನೈನ ವೈದ್ಯಕೀಯ...
ಎಕೆ-47 ರೈಫಲ್ ಗಳ ಟ್ರಿಗರ್ ಚಲಾವಣೆ ಬೆರಳುಗಳಿಗಿಂತ ಇವಿಎಂ(ಎಲೆಕ್ಟ್ರಾನಿಕ್ ಓಟಿಂಗ್ ಮಿಷನ್) ಬಳಕೆ ಮಾಡುವ ಬೆರಳುಗಳು ಹೆಚ್ಚು ಶಕ್ತಿಯುತವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ 3ನೇ ಹಂತದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಿ.8ರಂದು ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...
'ಜಮ್ಮು-ಕಾಶ್ಮೀರ'ದಲ್ಲಿ ಸೇನಾ ಕ್ಯಾಂಪ್ ಗೆ ಉಗ್ರರು ನುಗ್ಗಿದ ಪರಿಣಾಮ ಯೋಧರು, ಉಗ್ರರು ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು, ನಾಲ್ವರು ಉಗ್ರರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.
ಉರಿ ವಲಯದಲ್ಲಿರುವ ಭಾರತೀಯ ಸೇನಾ ಕ್ಯಾಂಪ್ ನಲ್ಲಿ ಈ ಘಟನೆ...
'ಜಮ್ಮು-ಕಾಶ್ಮೀರ'ದಲ್ಲಿ ಯೋಧರು, ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 5ಜನ ಉಗ್ರರನ್ನು ಯೋಧರು ಹತ್ಯೆ ಮಾಡಿದ್ದಾರೆ.
ಕುಪ್ವಾರ ಜಿಲ್ಲೆಯಲ್ಲಿ ಡಿ.3ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿನಡೆದಿದೆ. ಈ ದಾಳಿಯಲ್ಲಿ ಇಬ್ಬರು ಯೋಧರಿಗೆ ಗಂಭೀರ ಗಾಯಗಳುಂಟಾಗಿವೆ ಎಂದು...
ಭಾರಿ ಬಿಗಿ ಭದ್ರತೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಬೆಳಗ್ಗೆಯಿಂದ ಆರಂಭವಾಗಿದ್ದು, ಒಟ್ಟು 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಮೂವರು ಹಾಲಿ ಸಚಿವರು ಸೇರಿದಂತೆ ಒಟ್ಟು 175 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ನಡೆಯಲಿದ್ದು, 2181...
ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ತೊಲಗಿಸಿ, ಪೊಲೀಸರ ಮೇಲಿನ ತಪ್ಪು ಭಾವನೆಯನ್ನ್ನು ಹೋಗಲಾಡಿಸಬೇಕು ಎಂದುಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಅಸ್ಸಾಂನಲ್ಲಿ ಹಮ್ಮಿಕೊಂಡಿದ್ದ 49ನೇ ಡಿಜಿಪಿ ಹಾಗೂ ಐಜಿಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಪೊಲೀಸರ ಕರ್ತವ್ಯ, ತ್ಯಾಗ, ಬಲಿದಾನಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ದೇಶದಲ್ಲಿ...
'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...
ಜಾರ್ಖಂಡ್ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಅತ್ಯಂತ ಕುತೂಹಲ ಕೆರಳಿಸಿರುವ ಈ ಚುನಾವಣೆಯು ನರೇಂದ್ರ ಮೋದಿ ನೇತೃತ್ವದ ಬಿಜೆಪಿ, ಸೋನಿಯಾ ಗಾಂಧಿಯವರ ಕಾಂಗ್ರೆಸ್ ಮತ್ತು ಪ್ರಬಲ ಸ್ಥಳೀಯ ಪಕ್ಷಗಳಿಗೆ ಅಗ್ನಿಪರೀಕ್ಷೆ ಎನ್ನಿಸಿಕೊಂಡಿದೆ.
ಜಮ್ಮು- ಕಾಶ್ಮೀರದ ಕಾರ್ಗಿಲ್, ಲಡಾಖ್...
'ಜಮ್ಮು-ಕಾಶ್ಮೀರ' ಹಾಗೂ ಜಾರ್ಖಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ.
ಉಭಯ ರಾಜ್ಯಗಳಲ್ಲೂ ಶಾಂತಿಯುತ ಮತದಾನ ಪ್ರಕ್ರಿಯೆ ನಡೆದಿದ್ದು ಸಂಜೆ 5:30ರವರೆಗೆ ಜಮ್ಮು-ಕಾಶ್ಮೀರದಲ್ಲಿ ಶೇ.70ರಷ್ಟು ಮತದಾನ ನಡೆದಿದೆ. ಮತದಾನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಪ್ರತಿಯೊಂದು ಹನಿ ನೀರು ಸದ್ಬಳಕೆಯಾಗುವ ಸೂಕ್ಷ್ಮ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಅನುದಾನ ಒದಗಿಸಬೇಕು. ನೀರಾವರಿ ಯೋಜನೆಗಳಲ್ಲಿ ಗರಿಷ್ಠ 40 ಹೆಕ್ಟೇರ್ ಮಾತ್ರ ಸೂಕ್ಷ್ಮ ನೀರಾವರಿ ಅಳವಡಿಸಬೇಕೆಂಬ ನಿರ್ಬಂಧವನ್ನು ಸಡಿಲಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೇಂದ್ರ...
'ನೈತಿಕ ಪೊಲೀಸ್ ಗಿರಿ'ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರನ್ ಬೆಂಗಳೂರಿನ ಎಂ.ಜಿ ರೋಡ್ ನಲ್ಲಿ ಕಿಸ್ ಆಫ್ ಲವ್ ಕಾರ್ಯಕ್ರಮ...
ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್...
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜತೆ ಹಲವಾರು ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ರೈಲ್ವೆ ಖಾತೆಯನ್ನು ನಿರ್ವಹಿಸುತ್ತಿದ್ದ ಡಿ.ವಿ.ಸದಾನಂದಗೌಡ ಅವರ ಖಾತೆ ಬದಲಾವಣೆ ಮಾಡಲಾಗಿದ್ದು,...
ಪ್ರಧಾನಿ ನರೇಂದ್ರ ಮೋದಿ ಅವರ ಚೊಚ್ಚಲ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ಮಧ್ಯಾಹ್ನ 1.30ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 20 ಮಂದಿ ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ಸಿಗ್ಯ್ವ ಸಾಧ್ಯತೆ ಇದೆ.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ...
ನ.9ರಂದು ಮಧ್ಯಾಹ್ನ 1ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಸಂಪುಟ ವಿಸ್ತರಣೆ- ಪುನಾರಚನೆಯಾಗಲಿದೆ. 10 ಹೊಸ ಮುಖಗಳು ಮೋದಿ ಮಂತ್ರಿಮಂಡಲ ಸೇರುವುದು ಬಹುತೇಕ ಖಚಿತವಾಗಿದೆ.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ...
'ಜೆಡಿಎಸ್' ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಪಕ್ಷವನ್ನು ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿರುವ ಅಬ್ದುಲ್ ಅಜೀಂ, ನ.5ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದ ಗೌಡರ ವಿರುದ್ಧ...
ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ.
ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...
'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ.
ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ ನ ದಸರಾ ಮೈದಾನದಲ್ಲಿ 200...
ನಾನು ಎಂದಿಗೂ ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ,ಪ್ರಶಸ್ತಿಗಳನ್ನೂ ಪಡೆದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯ ಏಮ್ಸ್ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಪದಕ ಪ್ರದಾನ ಮಾಡಿದ ಪ್ರಧಾನಿ ಮೋದಿ, ತಮ್ಮ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು. ನಾನು ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ, ಯಾವುದೇ ಪ್ರಶಸ್ತಿಗಳನ್ನು ಗಳಿಸಿರಲಿಲ್ಲ...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಉಭಯ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. ಅ.19ರಂದು ಫಲಿತಾಂಶ ಹೊರಬೀಳಲಿದೆ.
ಉಭಯ ರಾಜ್ಯಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸರತಿ ಸಾಲಿನಲ್ಲಿ ಬಂದು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ...
ಲೋಕಸಭಾ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಸತ್ವ ಪರೀಕ್ಷೆ ಎಂದೇ ಬಿಂಬಿಸಲ್ಪಟ್ಟ 'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭೆಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ.
ಸಂಜೆ 5 ಗಂಟೆ ವರೆಗೂ ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಶೇ.68ರಷ್ಟು ಮತದಾನ ನಡೆದಿದೆ. ಹರ್ಯಾಣದ...
ಬೆಳಗಾವಿಯಲ್ಲಿ ಮರಾಠಿ ನಾಮಫಲಕ ಹಾಕಿ ಪದೇ ಪದೇ ಕ್ಯಾತೆ ತೆಗೆಯುವ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ರಾಜ್ಯದ ಹಿರಿಯ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ...
'ಕಾರ್ತಿಕ್ ಗೌಡ'- ಮೈತ್ರಿಯಾ ಗೌಡ ವಿವಾಹ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಕುಟುಂಬಸ್ಥರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಒಂದೆಡೆ ಪೊಲೀಸರ ಕ್ರಮಕ್ಕೆ ಸದಾನಂದ ಗೌಡ...
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರಿದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಮುಸ್ಲಿಮರಿಗೆ ಶುಭಾಷಯ ತಿಳಿಸಿದ್ದಾರೆ.
ಈ ಸಾಲಿನ ಬಕ್ರಿದ್ ಹಬ್ಬ ಸಮಾಜದಲ್ಲಿ ಸಾಮರಸ್ಯ ಮತ್ತು ಸಹಾನುಭೂತಿಯನ್ನು ಹೆಚ್ಚು ಮಾಡಲಿ ಎಂದು ಪ್ರಧಾನಿ ಹೇಳಿದ್ದಾರೆ.
ಬಲಿದಾನದ ಸಂಕೇತವಾಗಿ ಮುಸ್ಲಿಮರು ಬಕ್ರಿದ್ ಹಬ್ಬವನ್ನು...
'ದಸರಾ' ಆಚರಣೆ ಅಂಗವಾಗಿ ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಲ್ತುಳಿತ ಉಂಟಾಗಿ ಮೂವತ್ತೆರಡು ಜನ ಸಾವನ್ನಪ್ಪಿದ್ದಾರೆ. ಕಾಲ್ತುಳಿತದಲ್ಲಿ ಹಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಸುಮಾರು 20 ಜನ ಮಹಿಳೆಯರು ಹಾಗು 5-6 ಮಕ್ಕಳು ಎಂದು ಬಿಹಾರ ಗೃಹ ಕಾರ್ಯದರ್ಶಿ ಅಮಿರ್...
ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದರ ಪರಿಣಾಮ 12 ಜನ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ.
ಸೆ.30ರ ತಡರಾತ್ರಿ ವಾರಣಾಸಿಯಿಂದ ಗೋರಖ್ಪುರಕ್ಕೆ ತೆರಳುತ್ತಿದ್ದ ಮದ್ವುದೀ-ಲಖನೌ ಕ್ರಿಶಕ್ ಎಕ್ಸ್ಪ್ರೆಸ್...
ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ನ ವಡೋದರಾ ಸೇರಿದಂತೆ 3 ಲೋಕಸಭಾ ಹಾಗೂ 33 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸೆ.16ರಂದು ಫಲಿತಾಂಶ ಹೊರಬೀಳಲಿದೆ.
ಕಳೆದ...
ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಹೋಬಳಿಯ ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್ಘರ್ಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 17 ಕೋಟಿ ರೂ ಅನುದಾನವನ್ನು ಒದಗಿಸಲಾಗಿದೆ. ಮುಂದಿನ ವರ್ಷ ಹಜ್ ಶಿಬಿರ ಈ ನೂತನ ಹಜ್ಘರ್ನಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ...
ಹತ್ತಾರು ಅಮಾಯಕ ಮಕ್ಕಳನ್ನು ಹತ್ಯೆಗೈದು ಭಕ್ಷಿಸಿದ್ದ ಉತ್ತರ ಪ್ರದೇಶದ ನಿಠಾರಿ ಗ್ರಾಮದ ನರಭಕ್ಷಕ ಸುರಿಂದರ್ ಕೋಲಿಯ ಗಲ್ಲು ಶಿಕ್ಷೆ ಜಾರಿಗೆ ಸುಪ್ರೀಂ ಕೋರ್ಟ್ ಒಂದು ವಾರದ ತಡೆ ನೀಡಿ, ಆದೆಶ ಹೊರಡಿಸಿದೆ.
ಮಧ್ಯರಾತ್ರಿ ತಡೆಯಾಜ್ನೆ ಜಾರಿಯಾಗಿರುವುದು ವಿಶೇಷ. ಇದರೊಂದಿಗೆ ಸೆ.8ರ ಬಳಿಕ ಉತ್ತರ...
'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ.
ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...
ಶಿಕ್ಷಕರ ವೃತ್ತಿ ನೌಕರಿಯಲ್ಲ, ಅದು ಧರ್ಮವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯಲಿರುವ 350 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನೌಪಚಾರಿಕ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಶಿಕ್ಷಕ...
'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೋರ್ವರ ಹೃದಯವನ್ನು ಬಿ.ಜಿ.ಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಜೀವಂತವಾಗಿ ಬೇರ್ಪಡಿಸಿದ್ದು ಚೆನ್ನೈ ಗೆ ರವಾನಿಸಿದ್ದಾರೆ. ಈ ಮೂಲಕ ವೈದ್ಯಕೀಯ ಲೋಕದ ಅಪರೂಪದ ಇತಿಹಾಸಕ್ಕೆ ಸಿಲಿಕಾನ್ ಸಿಟಿ ಸಾಕ್ಷಿಯಾಗಿದೆ.
ಸೆ.2ರಂದು ರಸ್ತೆ ಅಪಘಾತದಲ್ಲಿ...
ಕಾರ್ತಿಕ್ ವಿರುದ್ಧದ ನಟಿ ಮೈತ್ರೇಯ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡರಗೆ ಮಾಹಿತಿ ಕೇಳಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ನಟಿ ಮೈತ್ರೇಯಾ ಗೌಡ ಅವರಿಗೆ ವಂಚಿಸಿದ್ದಾರೆ...
ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...
ಬಿಜೆಪಿಯಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಅವರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ನಿರ್ಣಾಯಕರೆನಿಸಿಕೊಳ್ಳುತ್ತಿದ್ದ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿಮನೋಹರ ಜೋಷಿಯವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟು,...
ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಆರಂಭವಾಗಿದೆ.
ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೂರೂ ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ...
ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.
ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಗ್ರಾಮದಲ್ಲಿ...
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆ.15ರಂದು ಮುಖ್ಯ ಕಾರ್ಯಕ್ರಮನಡೆಯುವ ಮಾಣಿಕ್ ಷಾ ಪರೇಡ್ ಮೈದಾನಕ್ಕೆ 1500 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಈ ಬಗ್ಗೆ ವಿವರ ನೀಡಿರುವ ನಗರ ಪೊಲೀಸ್ ಆಯುಕ್ತ...