ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಭವನದ ಬಳಿ ಇರುವ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ವಿದ್ಯಾಲಯದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ...
ದೇಶಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮ. ಈ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದ್ದಾರೆ.
70ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ 3ನೇ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಸ್ವತಂತ್ರ ದಿನೋತ್ಸವದ ಶುಭಾಶಯ...
70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ ಸಿದ್ದರಾಮಯ್ಯ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ್ದ ಹೋರಾಟಗಾರರನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯ...
ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯದಿನದಂದು ಕೆಂಪು ಕೋಟೆಯಲ್ಲಿ ಯಾವ ವಿಷಯಗಳ ಬಗ್ಗೆ ಭಾಷಣ ಮಾಡಬೇಕು ಎಂದು ಸಾರ್ವಜನಿಕರಿಂದ ಸಲಹೆ-ಸೂಚನೆಗಳನ್ನು ಆಹ್ವಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2500ಕ್ಕೂ ಹೆಚ್ಚು ಸಂದೇಶಗಳ ಮಹಾಪೂರವೇ ಬಂದಿವೆ.
ಆಕಾಶವಾಣಿಯಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಹಾಗೂ...
ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ದೇಶಾದ್ಯಂತ ಸಡಗರದ ಸಿದ್ಧತೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನದಂದು ಕೆಂಪುಕೋಟೆ ಮೇಲೆ ಮಾಡುವ ಭಾಷಣದಲ್ಲಿ ಪ್ರಸ್ತಾಪಿಸುವ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.
ಕೆಂಪುಕೋಟೆ ಮೇಲೆ ನಿಂತು...
ಸೆಪ್ಟೆಂಬರ್ 5 ಶಿಕ್ಷಕ್ಷಕರ ದಿನಾಚರಣೆ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರಾಗಿ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ.
ರಾಷ್ಟ್ರಪತಿಯವರಿಂದ ಪಾಠ ಹೇಳಿಸುವ ಈ ಯೋಜನೆ ಆರಂಭವಾದದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್...
ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 22 ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಿಯೋ ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಕೋರಿದರು. ರನ್ ಫಾರ್ ರಿಯೋ ಭಾರತದ ಅಥ್ಲಿಟ್ಗಳನ್ನು ಹುರಿದುಂಬಿಸುವ ಕಾರ್ಯಕ್ರಮ ಎಂದರು.
ಸ್ವಾತಂತ್ರ್ಯಾನಂತರ ಜನಿಸಿದ ಮೊದಲ...
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಡ್ರೋನ್ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಪ್ರಧಾನಿಯವರ ಉನ್ನತ ಮಟ್ಟದ ಭದ್ರತಾ ಸಮಿತಿಯ ಸಭೆಯಲ್ಲಿ ಗುಪ್ತಚರ ಮೂಲಗಳು ಈ ಮಾಹಿತಿ ಬಹಿರಂಗಪಡಿಸಿವೆ....
ಹಿಜ್ಬುಲ್ ಮುಜಾಹಿ ದೀನ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪಾಕಿಸ್ತಾನ ನಡೆಸಿದ್ದ ’ಕರಾಳ ದಿನಾಚರಣೆ’ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಣಿವೆ ರಾಜ್ಯದಲ್ಲಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಿಲ್ಲಿಸಿ ಕಾಶ್ಮೀರ ಬಿಟ್ಟು ತೊಲಗಿ ಎಂದು ಪಾಕಿಸ್ತಾನಕ್ಕೆ ಕಠಿಣ...
70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಈ ವರ್ಷ ಸ್ವಾತಂತ್ರ್ಯೊತ್ಸವವನ್ನು ವಿಭಿನ್ನವಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದ್ದು, ‘ತಿರಂಗಾ ಯಾತ್ರಾ’ ಹೆಸರಿನಲ್ಲಿ ದೇಶಾದ್ಯಂತ ಒಂದು ವಾರ ರ್ಯಾಲಿ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ನಿರ್ಧಾರ...
ಫ್ರಾನ್ಸ್ ನಲ್ಲಿ ಬ್ಯಾಸ್ಟೀಲ್ ಡೇ ಆಚರಿಸುತ್ತಿರುವ ಸಂದರ್ಭದಲ್ಲಿ ಫ್ರಾನ್ಸ್ನ ನೈಸ್ ನಗರದಲ್ಲಿ ಉಗ್ರರ ದಾಳಿ ನಡೆದಿದ್ದು, ಘಟನೆಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಸಂಭ್ರಮಾಚರಣೆ ವೇಳೆ ನೀಸ್ ನಗರದ ಬೀಚ್ ರೆಸಾರ್ಟ್...
ಫ್ರಾನ್ಸ್ನ ನೈಸ್ ನಗರದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಖಂಡಿಸಿದ್ದಾರೆ, ಫ್ರೆಂಚ್ ಸಹೋದರ-ಸಹೋದರಿಯರ ಜತೆಗೆ ಭಾರತವಿದೆ ಎಂಬ ಭರವಸೆ ನೀಡಿದ್ದಾರೆ.
ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಆಚರಣೆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಯಿಂದ 80ಕ್ಕೂ ಅಧಿಕ...
ನಮ್ಮ ವ್ಯಕ್ತಿತ್ವ ವಿಕಸನ ಹಾಗೂ ದೇಹದ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರ್ತವ್ಯ ನಿರ್ವಹಣೆಯ ಸರಿಯಾದ ಮಾರ್ಗವೇ ಧರ್ಮ. ಧರ್ಮ ಮಾರ್ಗದಲ್ಲಿ ನಡೆಯಲು ಆರೋಗ್ಯವು ಸುಸ್ಥಿತಿಯಲ್ಲಿರಬೇಕು. ಶರೀರದ ಅಂಗಗಳಿಗೆ ಸರಿಯಾಗಿ ವ್ಯಾಯಾಮ ಮತ್ತು ಮನಸ್ಸಿಗೆ ಏಕಾಗ್ರತೆಯ ಅಭ್ಯಾಸ ದೊರೆತಾಗ ಯೋಗದಿಂದ ಆರೋಗ್ಯ...
ಯೋಗ ಸಕಲ ರೋಗಕ್ಕೂ ದಿವ್ಯೌಷಧ, ಇದು ಭಾರತೀಯ ಸಂಸ್ಕೃತಿಯ ಆಸ್ತಿಯಾಗಿ ಈಗ ವಿಶ್ವಕ್ಕೆ ಪರಿಚಯವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಲಖ್ನೌ ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,...
2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಚಂಡೀಗಢದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಯೋಗ ದಿನದ ಮುಂದಾಳತ್ವವನ್ನು ಭಾರತವಹಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಯೋಗ ಪರಲೋಕದ ವಿಜ್ಞಾನವಲ್ಲ ಇಹಲೋಕದ ಜ್ಞಾನ ಎಂದು...
2014ರ ಸೆಪ್ಟೆಂಬರ್ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಗ್ಗೆ ಪ್ರಸ್ತಾಪಿಸಿದಾಗ ವಿದೇಶಗಳಿಂದ ಇಷ್ಟು ಪ್ರಮಾಣದ ಉತ್ಸಾಹ ಕಂಡುಬರಬಹುದೆಂಬ ನಿರೀಕ್ಷೆಯಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ನವದೆಹಲಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ...
ವಿಶ್ವ ಯೋಗ ದಿನಾಚರಣೆಯ ಮುನ್ನವೇ, ಉಪ ಯೋಗದ ಉಪಯೋಗವನ್ನು ಪಡೆಯಿರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಬೆಂಗಳೂರಿನ ನಾಗರೀಕರಲ್ಲಿ ಮನವಿ ಮಾಡಿದ್ದಾರೆ.
ಜೂನ್ 21 ರಂದು ನಡೆಯಲಿರುವ ಎರಡನೇ ವಿಶ್ವ ಯೋಗ ದಿನಾಚರಣೆಗೆ...
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ.
ಅಂದು ಕಬ್ಬನ್ ಪಾರ್ಕ್ (ಸಿಟಿ ಸೆಂಟ್ರಲ್ ಲೈಬ್ರರಿಯಿಂದ ಹಡ್ಸನ್ ವೃತ್ತದವರೆಗೆ) ನಲ್ಲಿ ಬೆಳಿಗ್ಗೆ 7-30 ರಿಂದ 8-30...
ಸ್ಥಾಪನಾ ದಿನವನ್ನು ಆಚರಿಸುತ್ತಿರುವ ಭಾರತೀಯ ಜನತಾ ಪಕ್ಷಕ್ಕೆ 36 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಎಲ್ಲ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.
ಇಡಿ ದೇಶವೇ ಬಿಜೆಪಿಯ ಮೇಲೆ ಭರವಸೆ, ವಿಶ್ವಾಸವನ್ನು ಇರಿಸಿದೆ. ಆದುದರಿಂದ ದೇಶದ ಜನರ ಕನಸುಗಳನ್ನು...
ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶುಭಾಶಯ ಕೋರಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದಲ್ಲಿರುವ ಎಲ್ಲಾ ಜನತೆ ರೋಗಗಳಿಂದ ದೂರವಿದ್ದು, ಉತ್ತಮ ಆರೋಗ್ಯದಿಂದ ಜೀವನ...
ಆಧುನಿಕ ಯುಗದಲ್ಲಿ ಕ್ಷಣಮಾತ್ರದಲ್ಲಿ ದೂರದರ್ಶನ, ಇಂಟರ್ನೆಟ್ ಮೂಲಕ ಮಾಹಿತಿಯನ್ನು ತಿಳಿಯುತ್ತೇವೆ. ಆದರೆ ಪತ್ರಿಕೆಗಳ ಓದಿನ ಲಾಭವೇ ಬೇರೆ. ಅದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಈಗ ಶಾಲೆಗಳು ಅಂಕಗಳಿಕೆಗೆ ಮಾತ್ರ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿವೆ. ಆದರೆ ಸ್ನೇಹಶಾಲೆ ಎಲ್ಲಾ ಶಾಲೆಗಳಿಗಿಂತ ವಿಭಿನ್ನ. ಇಲ್ಲಿ ವಿದ್ಯಾರ್ಥಿಗಳಿಗೆ...
ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ, ದಿನಾಂಕ 23 ರಂದು ’ಯೋಗ ಸಪ್ತಾಹ - 2015’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು.
ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ...
ಜೂ.21ರಂದು ನಡೆಯಲಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿವಿಧ ಮುಸ್ಲಿಂ ಧಾರ್ಮಿಕ ಸಂಘಟನೆಗಳು ವಿರೋಧ ಮಾಡಿರುವ ಬೆನ್ನಲ್ಲೇ ದೇಶದ ಪ್ರಮುಖ ಮುಸ್ಲಿಂ ಮಂಡಳಿಗಳಲ್ಲಿ ಒಂದಾದ ದಾರುಲ್ ಉಲೆಮಾ ಬಹಿರಂಗವಾಗಿ ಬೆಂಬಲ ಸೂಚಿಸಿದೆ.
ಉತ್ತರ ಪ್ರದೇಶದ ದೀಯೊಬಂದ್ ನ ದಾರುಲ್ ಉಲೆಮಾದ...
ಜೂ.21ರಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಗಾಸನ ಮಾಡುವುದಿಲ್ಲ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
35000ಕ್ಕೂ ಹೆಚ್ಚು ಜನರು ಭಾಗವಹಿಸಲಿರುವ ರಾಜಪಥದಲ್ಲಿನ ಬೃಹತ್ ಯೋಗ ಕಾರ್ಯಕ್ರಮದ ವೇಳೆ...
ಸದಾ ವಿವಾದಿತ ಹೇಳಿಕೆಗಳಿಂದಲೆ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು...
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಕದಂಬ ಗಿಡ ನೆಡುವ ಮೂಲಕ ಜನರಲ್ಲಿ ಗಿಡ ನೆಟ್ಟು ಪರಿಸರವನ್ನು ಉಳಿಸಿ, ಬೆಳೆಸಿ ಎಂದು ಕರೆ ನೀಡಿದ್ದಾರೆ.
ಗಿಡದ ಜತೆಗೆ ಅವರು, ಸಾಂಪ್ರದಾಯಿಕವಾದ...
ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...
'ಸರ್ಪಂಚ್-ಪತಿ' ಪದ್ಧತಿಗಳು ಕೊನೆಯಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಗ್ರಾಮೀಣ ಭಾಗದಲ್ಲಿ ಬಡತನ ನಿರ್ಮೂಲನೆಯಾಗಬೇಕಾದರೆ ಚುನಾವಣೆಯ ಮೂಲಕ ಆಯ್ಕೆಯಾಗಿರುವ ಗ್ರಾಮಪಂಚಾಯ್ತಿಗಳ ಸದಸ್ಯರೇ ಆಡಳಿತ ನಡೆಸಬೇಕಿದೆ....
ಏ.14ರಂದು ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಆರ್.ಎಸ್.ಎಸ್ ನ ಆರ್ಗನೈಜರ್ ಪಾಂಚಜನ್ಯ ಪತ್ರಿಕೆಗಳು, ಅಂಬೇಡ್ಕರ್ ಅವರ ಬಗ್ಗೆ ವಿಶೇಷ ಸಂಚಿಕೆಗಳನ್ನು ಹೊರತರುತ್ತಿವೆ. ಅಂಬೇಡ್ಕರ್ ಅವರು ಘರ್ ವಾಪಸಿ ಪರವಾಗಿದ್ದರು ಎಂದು ಈ ಸಂಚಿಕೆಯಲ್ಲಿ ಆರ್.ಎಸ್.ಎಸ್ ಹೇಳಿದೆ.
ಆರ್.ಎಸ್.ಎಸ್ ನ ಜಂಟಿ...
ಪತ್ರಕರ್ತರನ್ನು ಪ್ರಾಸ್ಟಿಟ್ಯೂಟ್ಸ್ ಎಂಬರ್ಥ ಬರುವಂತೆ ಪ್ರೆಸ್ಟಿಟ್ಯೂಟ್ಸ್ ಎಂಬ ಪದವನ್ನು ಬಳಸಿ ವ್ಯಂಗ್ಯದಿಂದ ಕರೆದಿರುವ ಕೇಂದ್ರ ಸಚಿವ ಜನರಲ್ ವಿ.ಕೆ.ಸಿಂಗ್ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಈ ಟೀಕೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ.
ವಿ.ಕೆ.ಸಿಂಗ್ ಅವರ ದ್ವಂದ್ವಾರ್ಥ ಮತ್ತು ಧ್ವನ್ಯಾರ್ಥದ ಈ ಪದಬಳಕೆ ಖಂಡನೀಯವಾಗಿದ್ದು...
ಭಾರತದ 'ಯೋಗ'ವನ್ನು ವಿಶ್ವಮಟ್ಟದಲ್ಲಿ ಮಾರ್ಕೆಟಿಂಗ್ ಮಾಡಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಲು ತೀರ್ಮಾನಿಸಿದೆ.
ವಿದೇಶಿ ವ್ಯಾಪಾರ ನೀತಿಯಲ್ಲಿ ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಸಿದ್ಧತೆ ನಡೆಸಲಾಗಿದೆ...
ದುಖ್ತರನ್-ಎ-ಮಿಲ್ಲತ್ ಅಧ್ಯಕ್ಷೆ, ಕಾಶ್ಮೀರ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿ ವಿರುದ್ಧ ಪಾಕಿಸ್ತಾನ ಧ್ವಜಾರೋಹಣೆ ಮಾಡಿರುವ ಆರೋಪ ಕೇಳಿಬಂದಿದ್ದು, ಎಫ್.ಐ.ಆರ್ ದಾಖಲಿಸಲಾಗಿದೆ.
ಮಾ.23ರಂದು ನಡೆದ ಪಾಕಿಸ್ತಾನ ದಿನಾಚರಣೆ ಸಂದರ್ಭದಲ್ಲಿ ನವದೆಹಲಿಯಲ್ಲಿ ಆಸಿಯಾ ಅಂದ್ರಾಬಿ ಪಾಕಿಸ್ತಾನ ಧ್ವಜಾರೋಹಣೆ ಮಾಡಿದ್ದರು. ಅಲ್ಲದೇ ಪಾಕ್ ನ ರಾಷ್ಟ್ರಗೀತೆನ್ನೂ ಕಾರ್ಯಕ್ರಮದಲ್ಲಿ...
ಪಾಕ್ ದಿನಾಚರಣೆಯಲ್ಲಿ ದೇಶವನ್ನು ಪ್ರತಿನಿಧಿಸಿದ ಬಳಿಕ ಕೇಂದ್ರ ಸರ್ಕಾರದ ವಿರುದ್ಧವೇ ಸಚಿವ ಜ|ವಿ.ಕೆ.ಸಿಂಗ್ ಸರಣಿ ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪಾಕಿಸ್ತಾನ ರಾಯಭಾರ ಕಚೇರಿ ಹಮ್ಮಿಕೊಂಡಿದ್ದ ಪಾಕ್ ದಿನಾಚರಣೆಗೆ ತಮ್ಮನ್ನು ಕಳಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕ್ರಮಕ್ಕೆ ಸ್ವತಃ ಮಂತ್ರಿಮಂಡಲದ ಸಚಿವರಾದ ನಿವೃತ್ತ...
'ಪಾಕ್ ದಿನಾಚರಣೆ'ಯಲ್ಲಿ ಪಾಲ್ಗೊಂಡಿದ್ದಕ್ಕೆ ಅಸಮಾಧಾನ ಹೊಂದಿದ್ದರೆ ಜ|ವಿ.ಕೆ ಸಿಂಗ್ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕೇಂದ್ರ ಸರ್ಕಾರದ ಒತ್ತಡದಿಂದ ಪಾಕಿಸ್ತಾನ ದಿನಾಚರಣೆಯಲ್ಲಿ ಭಾಗವಹಿಸಿದ್ದರೆ, ಅವರು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ಪಾಕಿಸ್ತಾನ...
ನವದೆಹಲಿಯಲ್ಲಿ ಪಾಕಿಸ್ತಾನ ದಿನಾಚರಣೆ ಆಚರಿಸುವುದಕ್ಕೆ ಪಕ್ಷಾತೀತವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನ ಹೈಕಮಿಷನರ್ ಇಂದ ಆಹ್ವಾನ ಪಡೆದಿರುವ ಕೇಂದ್ರ ಸರ್ಕಾರದ ಸಚಿವರು ಪಾಕಿಸ್ತಾನ ದಿನಾಚರಣೆಯಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿದೇಶಾಂಗ ಕಾರ್ಯದರ್ಶಿ ಜೈಶಂಕರ್, ಕೇಂದ್ರ ಗೃಹ...
ವಿಶ್ವ ಮಹಿಳಾ ದಿನವಾದ ಮಾರ್ಚ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರಿಗೆ ಶುಭಾಷಯಗಳನ್ನು ತಿಳಿಸಿದ್ದಾರೆ. ದೇಶದ ಮಹಿಳೆಯರ ಧೈರ್ಯ ಮತ್ತು ಸಾಹಸಕ್ಕೆ ನನ್ನ ಸಲಾಂ ಎಂದು ಟ್ವೀಟ್ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧೆಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪ್ರಧಾನಿ...
ನಿಷೇಧಿತ ನಿರ್ಭಯಾ ಸಾಕ್ಷ್ಯಚಿತ್ರ ಅಮೆರಿಕಾದಲ್ಲಿ ಪ್ರಸಾರವಾಗಲು ಸಿದ್ಧವಾಗಿದೆ. ನ್ಯೂಯಾರ್ಕ್ ನ ಸಿಟಿ ಯೂನಿವರ್ಸಿಟಿಯಲ್ಲಿ ಮಾ.9ರಂದು ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭದಲ್ಲಿ ಇತ್ತೀಚೆಗಷ್ಟೇ ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಮೇರಿ ಸ್ಟ್ರೀಪ್ ಸಹ ಭಾಗವಹಿಸಲಿದ್ದಾರೆ. ಈ ಮೂಲಕ ಭಾರತದಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರ ಯೋಗ ದಿನಾಚರಣೆಯ ಅಭಿಯಾನವನ್ನು ವಿಶ್ವಸಂಸ್ಥೆ ಮಾನ್ಯ ಮಾಡಿದ್ದರೆ, ಅಮೆರಿಕಾ ರಾಜಕಾರಣಿಗಳು ಮಾತ್ರ ತಮ್ಮ ನೆಲದಲ್ಲಿ ಯೋಗಾಭ್ಯಾಸವನ್ನು ದಮನಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಯೋಗಾಭ್ಯಾಸ ಮಾಡುವಾಗ ಧರಿಸುವ ಪ್ಯಾಂಟ್(ಯೋಗಾ ಪ್ಯಾಂಟ್) ಪ್ರಚೋದನಾಕಾರಿಯಾಗಿರುವುದರಿಂದ ಅಮೆರಿಕಾಗೆ ಅತಿ ದೊಡ್ಡ ಸವಾಲು...
ಫೆ.14ರಂದು ನಡೆಯುವ ವ್ಯಾಲೆಂಟೈನ್ಸ್ ಡೇಗೆ ಶ್ರೀರಾಮಸೇನೆ ವಿರೋಧ ವ್ಯಕ್ತಪಡಿಸಿದೆ. ಪ್ರೇಮಿಗಳ ದಿನಾಚರಣೆಯಂದು 'ಮಾತಾ ಪಿತ ಪೂಜನೀಯ ದಿನ'ವನ್ನು ಆಚರಿಸಬೇಕೆಂದು ಶ್ರೀರಾಮ ಸೇನೆ ಕರೆ ನೀಡಿದೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಫೆಬ್ರವರಿ 14 ರಂದು ಪಾಶ್ಚಾತ್ಯ...
ಗುಜರಾತ್ ನ ಗಾಂಧೀನಗರದಲ್ಲಿ ನಡೆಯುತ್ತಿರುವ 13ನೇ ಪ್ರವಾಸಿ ಭಾರತೀಯ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಜ.8ರಂದು ಚಾಲನೆ ನೀಡಿದ್ದಾರೆ.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತದ ಸಾಮರ್ಥ್ಯ ಹೆಚ್ಚಿದ್ದು ವಿಶ್ವದ 200ಕ್ಕೂ ಹೆಚ್ಚು ದೇಶದಲ್ಲಿ ಭಾರತೀಯರು ಇದ್ದಾರೆ...
'ವಿಧ್ವಂಸಕ ಕೃತ್ಯ' ನಡೆಸುವ ಬಗ್ಗೆ ಐ.ಎಸ್.ಐ.ಎಸ್ ಸಂಘಟನೆಯ ಎಚ್ಚರಿಕೆ ಸಂದೇಶ ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದೆ.
ವಿಮಾನ ನಿಲ್ದಾಣದ ಗೋಡೆಯ ಮೇಲೆ ಐ.ಎಸ್.ಐ.ಎಸ್ ಉಗ್ರರ ಸಂದೇಶ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂಧಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ...
ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗಕ್ಕೆ ಉಪಾಧ್ಯಕ್ಷರು, ಸದಸ್ಯರನ್ನು ಜ.5ರಂದು ನೇಮಕ ಮಾಡಿದ್ದಾರೆ.
ಯೋಜನಾ ಆಯೋಗದ ಬದಲು ಕಳೆದ 4 ದಿನಗಳ ಹಿಂದೆ ನೀತಿ ಆಯೋಗವನ್ನು ಅಸ್ಥಿತ್ವಕ್ಕೆ ತರಲಾಗಿತ್ತು. ಈ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು...
ಕೇಂದ್ರ ಸರ್ಕಾರ ಯೋಜನಾ ಆಯೋಗಕ್ಕೆ 'ನೀತಿ ಆಯೋಗ'ವೆಂದು ಮರುನಾಮಕರಣ ಮಾಡಲಿದೆ.
ಈ ಬಗ್ಗೆ ಜ.1ರಂದು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಆ.15, ಸ್ವಾತಂತ್ರ್ಯದಿನಾಚರಣೆಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ನೂತನ ಆಯೋಗವನ್ನು ಜಾರಿಗೆ...
ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ.
ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...
ಡಿ.15ರ ಬೆಳಿಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯೊಂದರ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಡಿ.25ರಂದು ಕ್ರಿಸ್ ಮಸ್ ದಿನದಂದು ರಜೆ ನೀಡುವ ಬದಲು ಅಟಲ್ ಬಿಹಾರಿ...
ಉತ್ತರ ಪ್ರದೇಶದ ಅಲ್ಪಸಂಖ್ಯಾತ ಸಚಿವ ಆಜಂ ಖಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ 75ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಆಜಂ ಖಾನ್ ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ.
ನ.21ರಂದು...
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೆಹರು ಅವರ ಪರಂಪರೆಯನ್ನು ಇತಿಹಾಸದ ಪುಟದಿಂದ ಅಳಿಸಿಹಾಕಲು ಯತ್ನಿಸುತ್ತಿದೆ. ಅಲ್ಲದೆ, ನೆಹರು ಅವರ ಕುರಿತಾದ ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸುವುದಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿಯನ್ನು ಉಂಟು ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.
ನೆಹರು ಅವರ 125ನೇ ಜನ್ಮದಿನಾಚರಣೆ ಸ್ಮರಣಾರ್ಥ...
ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...
ನ.14ರಂದು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ.
ನ.14ರಿಂದ 5 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವೀಟ್ ಮೂಲಕ ನೆಹರು ಅವರನ್ನು ನೆನೆದಿರುವ ಪ್ರಧಾನಿ...
ಒಂದೆಡೆ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಫೊಟೋಗಳಿಗೆ ಫೋಸು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ಅಂಗಸಂಸ್ಥೆಗಳು ಬಿತ್ತುತ್ತಿರುವ ಕೋಮುದ್ವೇಷವನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ...
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...
ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಓಟಕ್ಕೆ ಚಾಲನೆ ನೀಡಿದ್ದಾರೆ.
ನವದೆಹಲಿಯ ಪಟೇಲ್ ಚೌಕ್ ನಲ್ಲಿನ ಸರ್ದಾರ್ ವಲ್ಲಭಬಾಯ್ ಪಟೇಲರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು,ಸರ್ದಾರ್ ವಲ್ಲಭಬಾಯ್...
ಪ್ರಧಾನಿ ನರೇಂದ್ರ ಮೋದಿ ಅವರು ಯು.ಎನ್.ಜಿ.ಎ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕರೆಗೆ ವಿಶ್ವದ ಅನೇಕ ದೇಶಗಳ ಬೆಂಬಲ ವ್ಯಕ್ತವಾಗಿದೆ.
ಈಗಾಗಲೇ ಜಪಾನ್, ಅಮೆರಿಕಾ, ಕೆನಡಾ, ಚೀನಾ ಸೇರಿದಂತೆ ವಿಶ್ವದ ಸುಮಾರು 50 ದೇಶಗಳು ಜೂ.21ರಂದು ವಿಶ್ವ ಯೋಗ...
ಕಾಶ್ಮೀರ ಪ್ರತ್ಯೇಕವಾದಿಗಳು ಜಮ್ಮು-ಕಾಶ್ಮೀರ ಬಂದ್ ಗೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು ನಿರ್ಬಂಧ ಹೇರಿದ್ದರು.
1947ರ ಅ.27ರಂದು ಭಾರತದೊಂದಿಗೆ ಕಾಶ್ಮೀರವನ್ನು ವಿಲೀನಗೊಳಿಸಲಾಗಿತ್ತು. ವಿಲೀನ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತ್ಯೇಕವಾದಿಗಳಾದ ಸಯ್ಯದ್...
'ಸರ್ದಾರ್ ವಲ್ಲಭ ಭಾಯ್ ಪಟೇಲ್' ಅವರ 139ನೇ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ರನ್ ಫಾರ್ ಯೂನಿಟಿ ಕಾರ್ಯಕ್ರಮದ ಮೂಲಕ ಉತ್ತಮ ಆಡಳಿತ ಹಾಗೂ...
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.
ಅ.21ರಂದು ಬೆಂಗಳೂರಿನ ಸಿ.ಎ.ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಹೊಸ ಯೋಜನೆಗಳನ್ನು ಘೋಷಿಸಿದ್ದು ಈ ವರೆಗೂ ಮುಖ್ಯಪೇದೆಗಳಿಗೆ ಮಾತ್ರ ಸೀಮಿತವಾಗಿದ್ದ...
ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜತೆ ಸಂವಾದ ನಡೆಸಲಿದ್ದಾರೆ. ಇದರ ವೀಕ್ಷಣೆಗೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಸಿದ್ಧತೆ ನಡೆಸಲಾಗಿದೆ.
ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪ್ರಧಾನಿ ಮೋದಿ ನೇರ ಸಂವಾದ ಕಾರ್ಯಕ್ರಮ...
ಕಠಿಣ ಪರಿಶ್ರಮ ಪಟ್ಟರೆ ಯಾವುದೇ ಕನಸು ನನಸಾಗದೇ ಇರಲು ಸಾಧ್ಯವಿಲ್ಲ, ಓರ್ವ ವಿದ್ಯಾರ್ಥಿಗೆ ಅಪಾರ ಕನಸಿರಬೇಕು, ಕಠಿಣ ಪರಿಶ್ರಮದಿಂದ ಕನಸುಗಳನ್ನು ನನಸಾಗಿಸಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸೆ.5ರಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಮಾಣಿಕ್ ಶಾ ಆಡಿಟೋರಿಯಂ...
ಶಿಕ್ಷಕರ ವೃತ್ತಿ ನೌಕರಿಯಲ್ಲ, ಅದು ಧರ್ಮವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯಲಿರುವ 350 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನೌಪಚಾರಿಕ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಶಿಕ್ಷಕ...
ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಅತ್ಯುತ್ತಮ ಶಿಕ್ಷಕರ ಆಯ್ಕೆಯಲ್ಲಿ ಸ್ವತ: ಪ್ರಧಾನಿ ಮೋದಿಯವರೇ ಆಸಕ್ತಿಹೊಂದಿದ್ದು, ಶಿಕ್ಷಕರ...
'ಸ್ವಾತಂತ್ರ್ಯ ದಿನಾಚರಣೆ' ದಿನ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ಎಂಬ ಟೀಕೆಗೆ ಮೋದಿ ಉತ್ತರಿಸಿದ್ದು ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ ರೋಗ ಎಂದಿದ್ದಾರೆ.
ಆ.19ರಂದು ಹರ್ಯಾಣಕ್ಕೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆ...
'ಯೋಜನಾ ಆಯೋಗ'ದ ಬದಲಿಗೆ ಅಸ್ಥಿತ್ವಕ್ಕೆ ಬರಲಿರುವ ನೂತನ ಸಂಸ್ಥೆ ಕುರಿತಂತೆ ಹೊಸ ಐಡಿಯಾಗಳನ್ನು, ಸಲಹೆಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದಾರೆ.
ಸರ್ಕಾರದೊಂದಿಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯಮಾಡಿಕೊಳ್ಳಲೆಂದೇ ಆರಂಭಿಸಲಾಗಿರುವ mygov.nic.in ವೆಬ್ ಸೈಟ್ ನಲ್ಲಿ...
'ಸ್ವಾತಂತ್ರ್ಯ ದಿನಾಚರಣೆ' ಹಿನ್ನೆಲೆಯಲ್ಲಿ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ಐತಿಹಾಸಿಕ ಭಾಷಣ ಮಾಡಿದರು.
68ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ, ನಾನು ಈ ದೇಶದ ಪ್ರಧಾನ ಮಂತ್ರಿಯಲ್ಲ ಪ್ರಧಾನ...
ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ.
ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...
'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಜಾರ್ಖಂಡ್ ನ ರಾಜ್ಯಪಾಲರು ಅಸ್ವಸ್ಥರಾದ ಘಟನೆ ನಡೆದಿದೆ.
ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿ ಕುಸಿದುಬಿದ್ದ ರಾಜ್ಯಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ ಸಯೀದ್ ಅಹಮದ್ ಅವರಿಗೆ ಯಾವುದೇ ಅಪಾಯವಿಲ್ಲ ಎಂದು...
'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದು, ಈ ಹಿಂದಿನ ಯುಪಿಎ ಸರ್ಕಾರದ ಘೋಷಣೆಗಳನ್ನೇ ನರೇಂದ್ರ ಮೋದಿ ಹೊಸರೂಪದಲ್ಲಿ ಪ್ರಸ್ತುತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಕಳೆದ 3 ತಿಂಗಳಿನಿಂದ ನರೇಂದ್ರ ಮೋದಿ ಮಾಡುತ್ತಿರುವುದು ಹಾಗೂ...
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆ.15ರಂದು ಮುಖ್ಯ ಕಾರ್ಯಕ್ರಮನಡೆಯುವ ಮಾಣಿಕ್ ಷಾ ಪರೇಡ್ ಮೈದಾನಕ್ಕೆ 1500 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಈ ಬಗ್ಗೆ ವಿವರ ನೀಡಿರುವ ನಗರ ಪೊಲೀಸ್ ಆಯುಕ್ತ...
ದೇಶಾದ್ಯಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ತನ್ನ ಹಳೇ ಚಾಳಿ ಬಿಡುತ್ತಿಲ್ಲ, ಒಂದೆಡೆ ಗಡಿ ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದರೆ, ಇನ್ನೊಂಡೆದೆ ಮತ್ತೆ ಜಮ್ಮು-ಕಾಶ್ಮೀರದ ವಿಷಯ ಪ್ರಸ್ತಾಪಿಸುತ್ತಿದೆ.
ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರೆಸಲು ಬಯಸುತ್ತದೆ. ಆದರೆ...
ಭಾರತದೊಂದಿಗೆ ಪಾಕಿಸ್ತಾನ ಸಹ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಭ್ರಮದಲ್ಲಿದೆ. ಪಾಕಿಸ್ತಾನದ 68ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭ ಹಾರೈಸಿದ್ದಾರೆ.
ಪಾಕಿಸ್ತಾನ ಸ್ವಾಂತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಲ್ಲಿನ ಜನತೆಗೆ ಶುಭಾಷಯಗಳನ್ನು ತಿಳಿಸುತ್ತೇನೆ ಎಂದು ಪ್ರಧಾನಿ...
'ಸಮಾಜವಾದಿ ಪಕ್ಷ'(ಎಸ್.ಪಿ)ದ ಮುಖಂಡ ಆಜಂ ಖಾನ್ ಮುಲಾಯಂ ಸಿಂಗ್ ಯಾದವ್ ಅವರಿಗೆ ಆಪ್ತ ಎಂಬುದು ಗೊತ್ತಿರುವ ಸತ್ಯ. ಆದರೆ ಇದೇ ಆಜಂ ಖಾನ್, ಮುಲಾಯಂ ಸಿಂಗ್ ಯಾದವ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರದಲ್ಲಿ ನಡೆದ ರ್ಯಾಲಿಯಲ್ಲಿ...
ಅಸಹನೆಯ ಮತ್ತು ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.14ರ ಸಂಜೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ದೇಶದ ಉಳಿವಿಗಾಗಿ ಉಗ್ರಗಾಮಿತ್ವವನ್ನು ಮಟ್ಟ ಹಾಕಬೇಕಿದೆ ಎಂದು ಕರೆ ನೀಡಿದ್ದಾರೆ.
ಅಸ್ಥಿತ್ವದಲ್ಲಿರುವ ಭೂಪಟವನ್ನು...
ಪೆಟ್ರೋಲ್ ದರ ಇಳಿಕೆಯಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಆ.13ರಂದು ಟ್ವೀಟ್ ಮಾಡಿದ್ದಾರೆ.
ನಾಳೆ (ಗುರುವಾರ) ಮಧ್ಯರಾತ್ರಿಯಿಂದ ಪ್ರತಿ ಲೀಟರ್ ಗೆ 1.89-2.38 ರೂ. ಇಳಿಕೆಯಾಗಲಿದ್ದು ಸ್ವಾತಂತ್ರ್ಯ ದಿನಾಚರಣೆ ವೇಳೆ ವಾಹನ ಮಾಲಿಕರಿಗೆ ಸಿಹಿ ಸುದ್ದಿ ದೊರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ...
'ಆಮ್ ಆದ್ಮಿ ಪಕ್ಷ'ದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಯಾವ ದೇಶದವರು? ಇದೆಂಥ ಪ್ರಶ್ನೆ ಅಂತ ಕುತೂಹಲ ಮೂಡಿದ್ದರೆ ಒಮ್ಮೆ ಆಮ್ ಆದ್ಮಿ ಪಕ್ಷದ ಅಧಿಕೃತ ವೆಬ್ ಸೈಟ್ ನೋಡಿ ಬನ್ನಿ, ನೀವು ಇದೇ ಪ್ರಶ್ನೆ ಕೇಳುತ್ತೀರಾ..
ವಿವಾದಗಳಿಂದಲೇ ಗುರುತಿಸಿಕೊಂಡಿರುವ ಆಮ್ ಆದ್ಮಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಸುಭಾಷ್ ಚಂದ್ರ ಬೋಸ್, ಬಹುಜನ ಸಮಾಜ ಪಕ್ಷದ ಸ್ಥಾಪಕ ಕಾನ್ಶಿ ರಾಮ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ'...