ಸೆಪ್ಟೆಂಬರ್ 5 ಶಿಕ್ಷಕ್ಷಕರ ದಿನಾಚರಣೆ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರಾಗಿ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ.
ರಾಷ್ಟ್ರಪತಿಯವರಿಂದ ಪಾಠ ಹೇಳಿಸುವ ಈ ಯೋಜನೆ ಆರಂಭವಾದದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್...
ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಮುಖ್ಯಸ್ಥರು. ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ.
ದೆಹಲಿಯ ಆಡಳಿತದ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್...
ಬಿಜೆಪಿ ಶಾಸಕರೊಬ್ಬರು ವಿಧಾನಸಭೆಯೊಳಗೆ ಬೆಂಚ್ ಹತ್ತಿ ಪ್ರತಿಭಟನೆ ನಡೆಸಿದ ಘಟನೆ ದೆಹಲಿ ಅಸೆಂಬ್ಲಿಯಲ್ಲಿ ನಡೆದಿದೆ.
ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ವಿಜೇಂದ್ರ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟದ ಮೂಲಕ ಭೀಕರ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
257 ಜನರ ಸಾವಿಗೆ ಕಾರಣವಾದ 1993ರ ಮುಂಬಯಿ ಸರಣಿ ಬಾಂಬ್ ಸ್ಫೋಟದ...
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ.
ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...
ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ 12 ಮಂದಿ ಶಂಕಿತ ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದ ಪೊಲೀಸರು 12 ಮಂದಿ ಜೆಇಎಂ ಸಂಘಟನೆಗೆ ಸೇರಿದ...
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ರನ್ನು ದೆಹಲಿ ವಿಶ್ವವಿದ್ಯಾಲಯದ ಪಠ್ಯ ಪುಸ್ತಕದಲ್ಲಿ ಭಯೋತ್ಪಾದಕ ಎಂದು ಬಣ್ಣಿಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
’ಭಾರತದ ಸ್ವಾತಂತ್ರ್ಯ ಹೋರಾಟ' ಎನ್ನುವ ಶೀರ್ಷಿಕೆಯ ಈ ಪುಸ್ತಕ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಪುಸ್ತಕದಲ್ಲಿ ಉಲ್ಲೇಖಗೊಂಡಿರುವ...
ನವದೆಹಲಿಯ ಮಂಡಿಹೌಸ್ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ.
ಇದೇ ವೇಳೆ ಬೆಂಕಿ ನಂದಿಸಲು ಆಗಮಿಸಿದ ಇಬ್ಬರು ಅಗ್ನಿಶಾಮಕದಳದ 6 ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಆ ಪೈಕಿ...
ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್ ಮತ್ತೆ ಉಲ್ಟಾ ಹೊಡೆದಿದೆ.
ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್ ಹೈಕಮಿಶನರ್ ಅಬ್ದುಲ್ ಬಾಸಿತ್ ಅವರು ಹೇಳಿದ ಕೆಲವೇ ದಿನಗಳ...
ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆ ಬುಧವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8ರಷ್ಟು ದಾಖಲಾಗಿದೆ.
ದೆಹಲಿ, ಕೋಲ್ಕತಾ, ಗುವಾಹಟಿ, ನೋಯ್ಡಾ, ಡೆಹ್ರಾಡೂನ್, ಅರುಣಾಚಲ ಪ್ರದೇಶ, ಮೆಘಾಲಯ ಹಾಗೂ ಗುರುಗ್ರಾಮ್ ಸೇರಿದಂತೆ ಹಲವು ಕಡೆ...
ನೇಪಾಳದ ರಾಜಧಾನಿ ಕಠ್ಮಂಡು ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ.
ನೇಪಾಳ ರಾಜಧಾನಿ ಕಠ್ಮಂಡುವಿನ ಸಮೀಪದಲ್ಲಿರುವ ಲಲಿತ್ ಪುರ್ ಎಂಬ ಪ್ರದೇಶದಲ್ಲಿ ಭೂಂಕಪನದ ಕೇಂದ್ರ ಬಿಂದು ಎಂದು ತಿಳಿದುಬಂದಿದ್ದು, ಈ...
ಭಾರತದ ಮೊದಲ ಸೆಮಿ-ಹೈಸ್ಪೀಡ್ ರೈಲು ಗತಿಮಾನ್ ಎಕ್ಸ್ಪ್ರೆಸ್ ರೈಲಿಗೆ ಮಂಗಳವಾರ ಚಾಲನೆ ದೊರೆಯಲಿದೆ.
ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುವ ಈ ರೈಲು ದೆಹಲಿ ಮತ್ತು ಆಗ್ರಾ ನಡುವಿನ 210 ಕಿ.ಮೀ ದೂರವನ್ನು ಅಂದಾಜು 100 ನಿಮಿಷಗಳಲ್ಲಿ ಕ್ರಮಿಸಲಿದೆ. ರೈಲ್ವೆ ಸಚಿವ ಸುರೇಶ್...
ಸಿಯಾಚಿನ್ನಲ್ಲಿ ಆರು ದಿನಗಳವರೆಗೆ 25 ಅಡಿಯಷ್ಟು ಹಿಮದ ಕೆಳಗೆ 40 ಡಿಗ್ರಿ ಶೀತದಲ್ಲಿ ಉಸಿರು ಹಿಡಿದುಕೊಂಡು ಪವಾಡ ಸದೃಶ ರೀತಿಯಲ್ಲಿ ಬದುಕಿದ ಧಾರವಾಡದ ವೀರ ಯೋಧ ಲಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಸ್ಥಿತಿ ಚಿಂತಾಜನಕವಾಗಿದೆ.
ನವದೆಹಲಿಯ ಆರ್ ಆಂಡ್ ಆರ್ ಸೇನಾ ಆಸ್ಪತ್ರೆಯ...
ಸಮ-ಬೆಸ ಕಾರಿನ ಪ್ರಯೋಗಿಕ ಸಂಚಾರ ಮುಕ್ತಾಯವಾದ ಹಿನ್ನಲೆಯಲ್ಲಿ ದೆಹಲಿ ಸರ್ಕಾರ ಭಾನುವಾರ ಏರ್ಪಡಿಸಿದ್ದ ಧನ್ಯವಾದ ಸಮರ್ಪಣಾ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಘಟನೆ ನಡೆದಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವಾಗ ವೇದಿಕೆಯವರೆಗೆ ಹೋದ ಮಹಿಳೆಯೊಬ್ಬಳು ಮಸಿ...
ಅಯೋಧ್ಯೆ ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮಭೂಮಿಯಲ್ಲ ಎಂದು ಹಿಂದೂ ಮತ್ತು ಮುಸ್ಲಿಂರಿಗೆ ಗೊತ್ತಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಶ್ರೀರಾಮ ನಮ್ಮ ಹೆಮ್ಮೆ. ಆಯೋಧ್ಯೆ ರಾಮನ ಜನ್ಮಭೂಮಿಯೇ ಹೊರತು ಪ್ರವಾದಿ ಪೈಗಂಬರ್ ಅವರ ಜನ್ಮ ಭೂಮಿಯಲ್ಲ ಎಂದು...
ಜಮ್ಮು-ಕಾಶ್ಮೀರ ಮುಖ್ಯಮಂತ್ರಿ 79 ವರ್ಷ ವಯಸ್ಸಿನ ಮುಫ್ತಿ ಮೊಹಮ್ಮದ್ ಸೈಯದ್ ಗುರುವಾರ ಬೆಳಗ್ಗೆ ನವದೆಹಲಿಯ ಎಐಐಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೆಪ್ಸಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಸೈಯದ್ ಅವರನ್ನು ಕುತ್ತಿಗೆ ನೋವು ಮತ್ತು ಜ್ವರದ ಕಾರಣದಿಂದ ಡಿ. 24 ರಂದು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು...
ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಶನಿವಾರ ಭೂಕಂಪನದ ಅನುಭವವಾಗಿದೆ.
ರಿಕ್ಟರ್ ಮಾಪನದಲ್ಲಿ 5.8 ರಷ್ಟು ತೀವ್ರತೆಯ ಭೂಕಂಪನದ ಕೇಂದ್ರ ಆಫ್ಘಾನಿಸ್ತಾನದ ಹಿಂದ್ ಕುಶ್ ಪರ್ವತ ಶ್ರೇಣಿಗಳು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.
ಜಮ್ಮು-ಕಾಶ್ಮೀರ ಮತ್ತು ಪಾಕಿಸ್ತಾನಗಳಲ್ಲಿ...
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮತ್ತು ಮೀರತ್ ನಡುವಿನ 14 ಪಥಗಳ ಎಕ್ಸ್ ಪ್ರೆಸ್ ಹೈವೇಗೆ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನು ಮಾಲಿನ್ಯ ಮುಕ್ತ ಹಾದಿ ಎಂದು ಬಣ್ಣಿಸಿದರು.
ದೆಹಲಿ-ಮೀರತ್ತ್ ಹೈವೆ ಜನನಿಬಿಡ ಹೆದ್ದಾರಿಯಾಗಿದ್ದು, ಹೊಸ ಎಕ್ಸ್ ಪ್ರೆಸ್ ಹೈವೆಯಿಂದ ಸಿಗ್ನಲ್...
ದೆಹಲಿ ಪಟಿಯಾಲ ನ್ಯಾಯಾಲಯದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಕೆಲವು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸೋಮವಾರ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮತ್ತು ಇತರ ಕೆಲವು ಆಪ್...
ಡಿಡಿಸಿಎ ವಿವಾದದ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಗುರುವಾರ ಆರೋಪ ಮಾಡಿ, ಅವರು ಅಸತ್ಯವನ್ನು ನಂಬಿ, ಉನ್ಮಾದದ ಅಂಚಿನಲ್ಲಿರುವ ಮಾತನಾಡುತ್ತಾರೆ ಎಂದರು.
ಕೇಜ್ರಿವಾಲ್ ಗೆ ಬೆಂಬಲ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿದೆ.
ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಸಿಬಿಐ, ಕಚೇರಿಗೆ ಬೀಗ ಮುದ್ರೆ ಹಾಕಲಾಗಿದೆ. ಬೆಳಗ್ಗೆ ಕಚೇರಿಗೆ ಬಂದ ಕೇಜ್ರಿವಾಲ್ ಮತ್ತು ಇತರ ಆಮ್ ಆದ್ಮಿ ಪಕ್ಷದವರನು ಕಚೇರಿಯ ಒಳಗೆ ಪ್ರವೇಶಿಸದಂತೆ ಸಿಬಿಐ...
ಕಳೆದ ಶುಕ್ರವಾರ ಪ್ಯಾರಿಸ್ ನಲ್ಲಿ 129 ಜನರ ಮರಣಹೋಮಕ್ಕೆ ಕಾರಣವಾದ ಐಸಿಸ್ ಉಗ್ರರ ಅಟ್ಟಹಾಸದ ನಂತರ, ಭಾರತ ಇಸ್ಲಾಮಿಕ್ ಸ್ಟೇಟ್ ( ಐಸಿಸ್ ) ಬೆದರಿಕೆಯಿಂದ ಜಾಗೃತವಾಗಿರಬೇಕು, ಭಾರತದಲ್ಲಿ ದಾಳಿ ನಡೆಸುವುದನ್ನು ತಳ್ಳಿ ಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ...
ಶನಿವಾರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. ಗಳನ್ನು ಘೋಷಿಸಿದ ಪ್ರಧಾನಿ ಮೋದಿ, ಜಮ್ಮು ಕಾಶ್ಮೀರವನ್ನು ಮತ್ತೊಮ್ಮೆ ಪ್ರವಾಸಿಗರ ಕನಸಿನ ತಾಣವನ್ನಾಗಿಸಲು ಬಯಸುತ್ತೇನೆ ಎಂದರು....
69 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿ ತಮ್ಮ ಎರಡನೇ ಸ್ವಾತಂತ್ರ್ಯೋತ್ಸವದ ಭಾಷಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಂತಿವೆ.
ಭಾಷಣದ ಪ್ರಮುಖಾಂಶಗಳು ಃ
* ಭಾರತೀಯರಿಗೆ ಸ್ವಾತಂತ್ರ್ಯೋತ್ಸವದ ಶುಭಾಷಯಗಳು
*...
ಸೋಮವಾರ ಅಪರಾಹ್ನ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪಕ್ಕೆ ಕಾಶ್ಮೀರ ಕಣಿವೆ ಹಾಗೂ ದೆಹಲಿ ಪ್ರದೇಶಗಳು ಸೇರಿದಂತೆ ಉತ್ತರ ಭಾರತದಲ್ಲೂ ಕಂಪನ ಉಂಟಾಗಿದೆ. ಇವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಅಫ್ಘಾನಿಸ್ತಾನದ ಹಿಂದು ಖುಷ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 2 ದಿನಗಳ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ರಾತ್ರಿ 12...
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಹೆಚ್ ಡಿ ದೇವೇಗೌಡ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರ ಆತ್ಮಹತ್ಯೆಯ ವಿಷಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ರೈತರ ಆತ್ಮಹತ್ಯೆ ಕುರಿತು ಲೋಕಸಭೆಯಲ್ಲಿ ಚರ್ಚೆ...
ಶನಿವಾರ ರಾತ್ರಿ ಪಶ್ಚಿಮ ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಐವರು ಸಾವನ್ನಪ್ಪಿ ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಅವಶೇಷಗಳ ಅಡಿಯಿಂದ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು...
ಪಾರದರ್ಶಕ ಮತ್ತು ಪ್ರಾಮಾಣಿಕ ಆಢಳಿತ ನೀಡುತ್ತೇವೆ ಎಂಬ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಂದ ಸುದ್ದಿ ಮಾಡುತ್ತಲೇ ಬಂದಿದೆ.
ಈಗ ವಂಚನೆ, ಹಾಗೂ ನಕಲು ದಾಖಲೆ ಸೃಷ್ಠಿಸಿ ಆಸ್ತಿ...
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಮುಖ್ಯಸ್ಥರಾಗಿ ಹಿರಿಯ ಪೊಲೀಸ್ ಅಧಿಕಾರಿ ಎಂ.ಕೆ.ಮೀನಾ ನೇಮಕ ಪ್ರಶ್ನಿಸಿ ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಸಿಬಿ ಮುಖ್ಯಸ್ಥರನ್ನಾಗಿ ಎಸ್.ಎಸ್.ಯಾದವ್ ಅವರನ್ನು ನೇಮಕ ಮಾಡಿದ್ದರು. ಆದಾಗ್ಯೂ ಜೂನ್ 9ರಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್...
1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಹಾಗೂ ಹಣ ದುರುಪಯೋಗ ಆರೋಪಡಿಯಲ್ಲಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಮತ್ತೆ ಹೊಸ ಎಫ್.ಐ.ಆರ್ ದಾಖಲಿಸುವುದಿಲ್ಲ ಎಂದು ಸಿಬಿಐ ದೆಹಲಿ ಕೋರ್ಟ್ ಗೆ ತಿಳಿಸಿದೆ. ಈ ಪ್ರಕರಣದಲ್ಲಿ...
ದೆಹಲಿ ಕ್ರಿಕೆಟ್ ಸಂಸ್ಥೆಯ ಹಗರಣದಲ್ಲಿ ಅರುಣ್ ಜೇಟ್ಲಿ ಭಾಗಿಯಾಗಿದ್ದು, ಅವರು ತಮ್ಮ ದೂರವಾಣಿ ಕರೆ ವಿವರ ಬಹಿರಂಗಪಡಿಸಲಿ ಎಂದು ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು...
ಸಾವಿರಾರು ಕೋಟಿ ರೂ. ಅಕ್ರಮ ಹಣಕಾಸು ವ್ಯವಹಾರ ಆರೋಪದ ಹಿನ್ನಲೆಯಲ್ಲಿ ಲಂಡನ್ ನಲ್ಲಿರಿವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿರುದ್ಧ ಕ್ರಮಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮುಂದಾಗಿದೆ.
ಲಲಿತ್ ಮೋದಿ ಪಾಸ್ ಪೋರ್ಟ್ ರದ್ದತಿ ಆದೇಶವನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್...
ದೆಹಲಿಯ ಆಪ್ ನೇತೃತ್ವದ ಸರ್ಕಾರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪ್ ನ 21 ಶಾಸಕರ ವಿರುದ್ಧ 24 ಕ್ರಿಮಿನಲ್ ಪ್ರಕರಣಗಳು ಇದ್ದು, ಇದೀಗ ದೆಹಲಿ ಪೊಲೀಸರು ಆಪ್ ಶಾಸಕರ ವಿರುದ್ಧ ಚಾರ್ಜ್ ಶೀಟ್ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಅರವಿಂದ್...
ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಕೊನೆಗೂ ಪೊಲೀಸರ ವಿಚಾರಣೆ ವೇಳೆ ತಮ್ಮ ಬಿಎಸ್ಸಿ ಪದವಿ ನಕಲಿ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಏತನ್ಮಧ್ಯೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಜಿತೇಂದ್ರ ಸಿಂಗ್ ತೋಮರ್ ವಾಪಸ್ ಪಡೆದಿದ್ದಾರೆ....
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಮುಷ್ಕರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕೊಳೆತು ನಾರುತ್ತಿರುವ ಕಸ ಇನ್ನೂ ವಿಲೇವಾರಿಯಾಗಬಹುದು ಎಂದು ಜನರು ನಿಟ್ಟುಸಿರುಬಿಡುತ್ತಿರುವಾಗಲೇ, ಕಸದ ಹೆಸರಿನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಭರ್ಜರಿ ರಾಜಕೀಯ ಆರಂಭವಾಗಿದೆ.
ಉಪಮುಖ್ಯಮಂತ್ರಿ ಮನೀಶ್...
ಬಿಬಿಎಂಪಿ ಚುನಾವಣೆ ಪೂರ್ಣಗೊಳ್ಳುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ತಮ್ಮ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಈ ನಿರ್ಧಾರ ಕೈಗೊಳ್ಳುವ ಮೂಲಕ ಸಚಿವ ಸ್ಥಾನಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ.
ಬಿಬಿಎಂಪಿ ಚುನಾವಣೆ ನಂತರ ಸಚಿವ ಸಂಪುಟ...
ನಕಲಿ ಕಾನೂನು ಪದವಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ.
ಜೀತೆಂದ್ರ ಸಿಂಗ್ ತೋಮರ್ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು...
ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಹೊಂದಿರುವ ಆರೋಪದಲ್ಲಿ ಬಂಧಿತರಾದ ಜಿತೇಂದ್ರ ಸಿಂಗ್ ತೋಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸರ್ಕಾರದ ಕಾನೂನು ಸಚಿವ ಸ್ಥಾನಕ್ಕೆ ಕಪಿಲ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.
ದೆಹಲಿಯ ಜಲಮಂಡಳಿ ಅಧ್ಯಕ್ಷರಾಗಿದ್ದ ಆಪ್ ಶಾಸಕ ಕಪಿಲ್...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ, ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಲೆ.ಗವರ್ನರ್...
ರಾಜ್ಯ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಹಾಗೂ ನಿಗಮ ಮಂಡಳಿಗಳಿಗೆ ಬಾಕಿ ಉಳಿದ ಬೆರಳೆಣಿಕೆಯಷ್ಟುಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ.
ಮೂಲಗಳ...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜಿತೇಂದ್ರ ಸಿಂಗ್ ತೋಮರ್ ಬಂಧನದ ಕುರಿತು ಆಪ್ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ತೋಮರ್ ವಿರುದ್ಧ...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಪಾತ್ರ ಇಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ತೋಮರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್,...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಕಿತ್ತಾಟ ಮತ್ತೆ ತಾರಕಕ್ಕೇರಿದ್ದು, ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯ ಮುಖ್ಯಸ್ಥರಿಗೆ ಅಧಿಕಾರ ವಹಿಸಿಕೊಳ್ಳದಂತೆ ಆಪ್ ಸರ್ಕಾರ ತಡೆ ನೀಡಿದೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಜೂ.8ರಂದು ದೆಹಲಿ...
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಬಿಜೆಪಿಯ ಚುನಾವಣಾ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಎಎಪಿ ಸರ್ಕಾರದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ...
1984ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಬೀರಿದ್ದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದ ಸಿಬಿಐಯನ್ನು...
ನೆಸ್ಲೆ ಕಂಪನಿಯ ಅತ್ಯಂತ ಜನಪ್ರಿಯ ಮ್ಯಾಗಿ ನ್ಯೂಡಲ್ಸ್ ಮಾರಾಟವನ್ನು 15 ದಿನಗಳ ಕಾಲ ದೆಹಲಿ ಸರ್ಕಾರ ನಿಷೇಧಿಸಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಬುಧವಾರ ನಡೆದ ಮಹತ್ವದ ಸಭೆಯಲ್ಲಿ ಮ್ಯಾಗಿಯನ್ನು 15 ದಿನಗಳ ಕಾಲ ಮಾರಾಟ ಮಾಡದಂತೆ ನಿಷೇಧಿಸುವ ತೀರ್ಮಾನ ತೆಗೆದುಕೊಂಡಿದೆ.
ಮ್ಯಾಗಿ ನ್ಯೂಡಲ್ಸ್...
ದೆಹಲಿ ಸರ್ಕಾರದ ಅಧಿಕಾರದ ವ್ಯಾಪ್ತಿ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ಇದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಲೆಫ್ಟಿನೆಂಟ್ ಗವರ್ನರ್ ಕೂಡ ಆಪ್ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳನ್ನು ಸೂಕ್ತವಾಗಿಯೇ ಪರಿಶೀಲಿಸಬೇಕು ಸೂಚಿಸಿದೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...
ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಆಮ್ ಆದ್ಮಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ಮತ್ತೊಂದೆಡೆ ದೆಹಲಿ ಸಚಿವ ಸಂಪುಟದ ಸದಸ್ಯರ ನೆರವು ಹಾಗೂ ಸಲಹೆಯಂತೆ ಉಪರಾಜ್ಯಪಾಲರು...
ಭ್ರಷ್ಟಾಚಾರ ಪ್ರಕರಣಗಳಲ್ಲಿ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬಹುದು ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ...
ದೆಹಲಿ ಉಪರಾಜ್ಯಪಾಲ ನಜೀಬ್ ಜಂಗ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಹಕ್ಕಿಗಾಗಿ ನಡೆದಿರುವ ಜಟಾಪಟಿಯಲ್ಲಿ, ಕೇಂದ್ರ ಸರ್ಕಾರ ಅಧಿಕೃತವಾಗಿ ಜಂಗ್ ಅವರ ಪರವಹಿಸಿದೆ.
ಶನಿವಾರ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದ್ದು, ಪೊಲೀಸ್, ಸಾರ್ವಜನಿಕ...
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದು, ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ.
ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ...
ದೆಹಲಿ ಸರ್ಕಾರದ ಮುಖ್ಯಕಾರ್ಯದರ್ಶಿ ನೇಮಕದ ಕುರಿತಂತೆ ಉಪರಾಜ್ಯಪಾಲ ನಜೀಬ್ ಜಂಗ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...
ಹಿರಿಯ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಸಮರ ತಾರಕಕ್ಕೇರಿದೆ. ಆಡಳಿತಾರೂಢ ಎಎಪಿ ಸರ್ಕಾರ ಕಳೆದ ನಾಲ್ಕು ದಿನಗಳಲ್ಲಿ ನೇಮಕ ಮಾಡಿದ್ದ ಅಧಿಕಾರಿಗಳ ವರ್ಗಾವಣೆಯನ್ನು ಲೆಫ್ಟಿನೆಂಟ್ ಗವರ್ನರ್ ಜಂಗ್ ಬುಧವಾರ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪರಾಜ್ಯಪಾಲ ನಜೀಬ್ ಜಂಗ್ ನಡುವೆ ಜಂಗೀಕುಸ್ತಿ ತಾರಕಕ್ಕೇರಿರುವ ನಡುವೆಯೇ ಸಂವಿಧಾನದ ಪ್ರಕಾರ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಗೆ ಇಲ್ಲ ಎಂದು ಮಾಜಿ...
ದೆಹಲಿಗೆ ಹಂಗಾಮಿ ಮುಖ್ಯ ಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದೆ. ಉಭಯ ನಾಯಕರು ಬಹಿರಂಗವಾಗಿಯೇ ಬಲಾಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ದೆಹಲಿಯ ಹಂಗಾಮಿ ಮುಖ್ಯಕಾರ್ಯದರ್ಶಿಯಾಗಿ ಶಕುಂತಲಾ ಗಾಮ್ಲಿನ್ ಅವರನ್ನು ರಾಜ್ಯಪಾಲರು...
ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮುಖ್ಯ ಸಾಕ್ಷಿಗಳನ್ನು ಮಂಪರು ಪರೀಕ್ಷೆಗೊಳಪಡಿಸಲು ಅನುಮತಿ ಕೇಳಿ ದೆಹಲಿ ಪೊಲೀಸರು ಪಾಟಿಯಾಲ ಹೌಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಸಹಾಯಕ ನಾರಾಯಣ್ ಸಿಂಗ್, ಚಾಲಕ ಬಜರಂಗಿ ಹಾಗೂ...
ನೆರೆ ರಾಷ್ಟ್ರ ನೇಪಾಳ ಹಾಗೂ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆಗಳಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 12.35ಸುಮಾರಿಗೆ ಈ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ನೇಪಾಳದ ಹಲವೆಡೆಗಳಲ್ಲಿ ಮತ್ತೆ ಪ್ರಬಲ ಭೂಕಂಪ ಉಂಟಾಗಿದೆ. ನೇಪಾಳದ ಕಠ್ಮಂಡುವಿನಿಂದ 83...
ಮಾಧ್ಯಮಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ತೀವ್ರ ನಿಗಾ ವಹಿಸಲು ಆಮ್ ಆದ್ಮಿ ಸರ್ಕಾರ ಮಾಹಿತಿ ಮತ್ತು ಪ್ರಸರಣ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ.
ತಮ್ಮ ಪಕ್ಷದ ವರ್ಚಸ್ಸನ್ನು ಕುಗ್ಗಿಸಲು ಮಾಧ್ಯಮಗಳು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ ಬೆನ್ನಲ್ಲೇ ಈ...
'ಆಮ್ ಆದ್ಮಿ ಪಕ್ಷ'ದ ರ್ಯಾಲಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟ ರೈತ ಗಜೇಂದ್ರ ಸಿಂಗ್ ನನ್ನು ಹುತಾತ್ಮನನ್ನಾಗಿ ಘೋಷಿಸುವ ದೆಹಲಿ ಸರ್ಕಾರದ ನಿರ್ಧಾರವನ್ನು ವಕೀಲರೊಬ್ಬರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಆಪ್ ನೇತೃತ್ವದ ದೆಹಲಿ ಸರ್ಕಾರ ಮೃತ ರೈತನನ್ನು ಹುತಾತ್ಮನನ್ನಾಗಿ ಘೋಷಿಸುವುದಕ್ಕೆ ತಡೆ ನೀಡಬೇಕೆಂದು ಅಡ್ವೊಕೇಟ್...
ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಆಮ್ ಆದ್ಮಿ ಪಕ್ಷಕ್ಕೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ.
ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧವೇ ಗಂಭೀರ...
ದೆಹಲಿಯಲ್ಲಿ ಉಗ್ರರ ದಾಳಿ ನಡೆಯುವ ಬಗ್ಗೆ ಎಚ್ಚರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಏ.28ರಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎ ಬಸ್ಸಿ ಅವರು ಎಲ್ಲಾ ಡಿಸಿಪಿಗಳ ಸಭೆ ಕರೆದಿದ್ದಾರೆ.
ಜೈಶಾ ಉಗ್ರ ಸಂಘಟನೆಯಿಂದ ದೆಹಲಿಯಲ್ಲಿ ದಾಳಿ ನಡೆಯುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ...
ಪ್ರಧಾನಿ ನರೇಂದ್ರ ಮೋದಿ ಏ.25ರಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ದೆಹಲಿಯ ಧೌಲಾದಿಂದ ದ್ವಾರಕಾ ವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಎದುರಿಸುವ ಸಮಸ್ಯೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪ್ರಧಾನಿ ಮೋದಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಶ್ರೀಧರನ್ ಅವರು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಂತೆ...
ನೇಪಾಳ, ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಭಾರತ ಹಾಗೂ ಪೂರ್ವ ಭಾರತದ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದೆ.
ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ದೆಹಲಿಯಲ್ಲಿ ಸುಮಾರು 20 ಸೆಕೆಂಡುಗಳ ಕಾಲ ಭೂಮಿ...
ನೇಪಾಳದಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, 9 ಅಂತಸ್ತಿನ ಐತಿಹಾಸಿಕ ಭೀಮ್ ಸೇನ್ ಟವರ್ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ನೂರಾರು ಮಂದಿ ಸಿಲಿಕಿರುವುದಾಗಿ ಶಂಕಿಸಲಾಗಿದೆ. ಏತನ್ಮಧ್ಯೆ ನೇಪಾಳದಲ್ಲಿ ಬಾಲಕಿ ಸೇರಿ 600ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ನೇಪಾಳ ಪೊಲೀಸರು ಮಾಹಿತಿ ನೀಡಿದ್ದಾರೆ.
ನೇಪಾಳದಲ್ಲಿ...
ತಮ್ಮ ಪಕ್ಷ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕ್ಷಮೆಯನ್ನೂ ಕೋರಿದ್ದಾರೆ.
ರೈತ ನೇಣು ಬಿಗಿದುಕೊಂಡಿದ್ದರೂ ಅರವಿಂದ್ ಕೇಜ್ರಿವಾಲ್ ತಮ್ಮ ಭಾಷಣವನ್ನೇ ಮುಂದುವರೆಸುತ್ತಿದ್ದರು...
ಆಪ್ ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ಟಿ.ವಿ ಚಾನಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮತ್ತೊಂದು ನಾಟಕೀಯ ಬೆಳವಣಿಗೆ ನಡೆದಿದೆ.
ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಖಾಸಗಿ ಚಾನೆಲ್ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ...
'ನವದೆಹಲಿ'ಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ತಮ್ಮ ಸರ್ಕಾರ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹಳೆಯ ಹಾಗೂ ತೀರಾ ಗಂಭೀರವಾದ ಸಮಸ್ಯೆಯಾಗಿದೆ....
'ಆಮ್ ಆದ್ಮಿ ಪಕ್ಷ' ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮೃತಪಟ್ಟ ರಾಜಸ್ಥಾನದ ಮೂಲದ ರೈತನ ಕುಟುಂಬಕ್ಕೆ ಆಮ್ ಆದ್ಮಿ ಪಕ್ಷ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಏ.22ರಂದು ನವದೆಹಲಿಯ ಜಂತರ್...
ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿರುವ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಾಗರಿಕ ಸೇವಾ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಏ.21ರಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾಗರಿಕ ಸೇವಾ ಅಧಿಕಾರಿಗಳಿಗೆ ಉತ್ತಮ ಆಡಳಿತದ...
'ಕಾಶ್ಮೀರ' ವಿವಾದಕ್ಕೆ ಸಂಬಂಧಿಸಿದಂತೆ ಉಗ್ರ ಹಫೀಜ್ ಸಯೀದ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಸೇನೆಗೆ ತನ್ನ ಜಮಾತ್-ಉದ್-ದವಾ ಉಗ್ರ ಸಂಘಟನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾನೆ.
ಪಾಕಿಸ್ತಾನದ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿರುವ ಉಗ್ರ ಸಯೀದ್, ಕಾಶ್ಮೀರದಲ್ಲಿ ಸ್ವಾತಂತ್ರ್ಯವನ್ನು ಬಯಸುತ್ತಿರುವ ಲಕ್ಷಾಂತರ ಮಂದಿ...
'ಕಾಶ್ಮೀರ'ದಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಮಸರತ್ ಆಲಂ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಧಾವಿಸಿದ ಬೆನ್ನಲ್ಲೇ ಭಾರತಕ್ಕೆ ಬೇಕಾಗಿರುವ ಪ್ರಮುಖ ಉಗ್ರ ಸಯೀದ್ ಹಫೀಜ್ ಕೂಡ ನೆರವಿಗೆ ಧಾವಿಸಿದ್ದಾನೆ.
ಹಫೀಜ್ ಸಯೀದ್, ದೇಶವಿರೋಧಿ ವ್ಯಕ್ತಿಯಲ್ಲ ಬದಲಾಗಿ ಆತನೊಬ್ಬ ಸ್ವಾತಂತ್ರ್ಯ...
'ಕಾಶ್ಮೀರ'ದಲ್ಲಿ ದೇಶವಿರೋಧಿ ರ್ಯಾಲಿ ನಡೆಸಿ ಬಂಧನಕ್ಕೊಳಗಾಗುತ್ತಿದ್ದರೂ ಪ್ರತ್ಯೇಕತಾವಾದಿಗಳ ಸೊಕ್ಕು ಕಡಿಮೆಯಾಗಿಲ್ಲ.
ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಾರೋಹಣ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ, ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನ ಧ್ವಜಾರೋಣ ಮಾಡುವುದಾಗಿ ತಿಳಿಸಿದ್ದಾರೆ.
ಪಾಕಿಸ್ತಾನ ಧ್ವಜಾರೋಹಣ ಮಾಡಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ...
'ದೆಹಲಿ'ಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ನ ಹಸಿರು ಪೀಠ ತಡೆ ನೀಡಿದೆ.
ದೆಹಲಿ ಸರ್ಕಾರಕ್ಕೆ 2 ವಾರಗಳ ಕಾಲ ಅವಕಾಶ ನೀಡಿರುವ ಕೋರ್ಟ್,10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ರಸ್ತೆಗಿಳಿಯದಂತೆ ಕ್ರಮ...
ಮುಂಬೈ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಿರುವ ಉಗ್ರ ಹಫೀಜ್ ಸಯೀದ್ ಕಾಶ್ಮೀರದಲ್ಲಿ ನಡೆಯುತ್ತಿರುವ ದಾಳಿಯ ಮಾಸ್ಟರ್ ಮೈಂಡ್ ಎನ್ನುವುದು ಸಾಬೀತಾಗಿದೆ.
ಕಳೆದ ಮೂರು ವಾರಗಳಲ್ಲಿ ಉಗ್ರ ಹಫೀಜ್ ಸಯೀದ್, ಜಮ್ಮು-ಕಾಶ್ಮೀರ ಹಾಗೂ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದಾನೆ. ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರ...
ರಾಷ್ಟ್ರ ರಾಜಧಾನಿ ನವದೆಹಲಿ ಮೇಲೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಭಾರೀ ಪ್ರಮಾಣದ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿವೆ.
ಪಾಕ್ ಮೂಲದ ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಯ ನೇತೃತ್ವದಲ್ಲಿ ದೆಹಲಿಯ ಮೇಲೆ...
'ಜನತಾ ಪರಿವಾರ'ವನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ,4ರಂದು ನವದೆಹಲಿಗೆ ತೆರಳಲಿದ್ದಾರೆ.
ಈ ಹಿಂದಿನ ಜನತಾ ಪರಿವಾರದಲ್ಲಿದ್ದ ಆರು ಪಕ್ಷಗಳು ಮತ್ತೊಮ್ಮೆ ಒಗ್ಗೂಡುವ ಸಾಧ್ಯತೆ ಇದ್ದು, ಈ ಬಗ್ಗೆ ಹಳೆ ಜನತಾಪರಿವಾರದ ಮುಖಂಡರ ನಡುವೆ ಮಾತುಕತೆ ನಡೆಯುತ್ತಿದೆ....
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆಯನ್ನು ಏಪ್ರಿಲ್ ನಲ್ಲಿ ನಡೆಸಲು ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ಪ್ರಾಥಮಿಕ ಹಂತದ ಚರ್ಚೆ ನಡೆಸಲು ಏ.5ರಂದು ದೆಹಲಿಗೆ ತೆರಳಲಿದ್ದಾರೆ.
ಕೇಂದ್ರ ಸರ್ಕಾರವು ಏ.5ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ...
'ಏಪ್ರಿಲ್' ಮೊದಲನೇ ದಿನವನ್ನು ಮೂರ್ಖರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ದೆಹಲಿಯಲ್ಲಿ ಮಾತ್ರ ಮೂರ್ಖರ ದಿನವನ್ನು ಅರವಿಂದ್ ಕೇಜ್ರಿವಾಲ್ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.
ದೆಹಲಿ ನಗರಾದ್ಯಂತ ಅರವಿಂದ್ ಕೇಜ್ರಿವಾಲ್ ಭಾವಚಿತ್ರವನ್ನೊಳಗೊಂಡ ಪೋಸ್ಟರ್ ಗಳನ್ನು ಹಾಕಿರುವ ಭಗತ್ ಸಿಂಗ್ ಕ್ರಾಂತಿ ಸೇನೆ ಸಂಘಟನೆ, ಮೂರ್ಖರ...
ತನ್ನ ಪಕ್ಷದ ನಾಯಕ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಮರೆತಿರಬಹುದು, ಆದರೆ ಎನ್.ಡಿ.ಎ ಸರ್ಕಾರ ನವದೆಹಲಿಯಲ್ಲಿ ಪಿ.ವಿ ನರಸಿಂಹ ರಾವ್ ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಿದೆ.
1991ರಲ್ಲಿ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹ ರಾವ್ ಅವರು ಆರ್ಥಿಕ...
ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ತಿಂಗಳಿಗೆ 20,000 ಲೀಟರ್ ಉಚಿತ ನೀರಿನ ಪ್ರಮಾಣವನ್ನು ಮೀರಿ ನೀರನ್ನು ಬಳಸುವ ಮನೆಗಳಿಗೆ ಶೇ.10ರಷ್ಟು ಶುಲ್ಕವನ್ನು ಏರಿಸಿದೆ.
ದೆಹಲಿಗರಿಗೆ ಚುನಾವಣಾ ಭರವಸೆಯ ಪ್ರಕಾರ ಉಚಿತ ನೀರಿನ ಯೋಜನೆಯನ್ನು ಪ್ರಕಟಿಸಿದ ಒಂದು ತಿಂಗಳ ಒಳಗಾಗಿ ಉಪ ಮುಖ್ಯಮಂತ್ರಿ...
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗುತ್ತಿರುವುದಕ್ಕೆ ಕಿಡಿಕಾಡಿರುವ ದೆಹಲಿ ನ್ಯಾಯಾಲಯ, ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸೂಚಿಸಿದೆ.
ಅಲ್ಲದೇ, ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಎಎಪಿ ನಾಯಕ ಯೋಗೇಂದ್ರ ಯಾದವ್...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ರಾಹುಲ್ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸುವುದರಲ್ಲಿ ತಪ್ಪಿಲ್ಲ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.
ರಾಜಕಾರಣದಿಂದ ಕೊಂಚ ನಿರಾಳತೆ ಪಡೆಯುವ...
'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ರೈತರು 56...
ರಜೆ ಮೇಲೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮನೆಗೆ ಹೋಗಿ ಅವರ ಬಣ್ಣ, ಎತ್ತರ, ವಯಸ್ಸು, ಧರಿಸುವ ಬಟ್ಟೆ, ತಂದೆ ಹೆಸರು, ಭೇಟಿ ನೀಡುವ ಸ್ಥಳಗಳ ಬಗ್ಗೆ ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಕೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು...
ಕೆಮ್ಮು ಮತ್ತು ಮಧುಮೇಹಕ್ಕೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುಣಮುಖರಾಗಿದ್ದು, ಮಾ.16 ರಂದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಲಿದ್ದಾರೆ.
ಕೆಮ್ಮು ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಂದಿದೆ. ಸೋಮವಾರದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದು, ಅಂದು...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗಾಗಿ ದೆಹಲಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ರಾಹುಲ್ ಗಾಂಧಿ ರಜೆ ಮೇಲೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಪದೇ ಪದೇ ಹೇಳುತ್ತಿದ್ದರು ಇದನ್ನು ಗಂಭೀರವಾಗಿ ಪರಿಗಣಿಸದ ದೆಹಲಿ ಪೊಲೀಸ್ ರಾಹುಲ್ ಗಾಗಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ.
ರಾಜಕಾರಣದಿಂದ ಕೊಂಚ...
ದಿನದಿಂದ ದಿನಕ್ಕೆ ಆಮ್ ಆದ್ಮಿ ಪಕ್ಷದಲ್ಲಿ ಹೊಸ ಆರೋಪಗಳು ಕೇಳಿಬರುತ್ತಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಖರೀದಿಸಲು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಮುಸ್ಲಿಮರಿಗೆ ಆಪ್ ಪಕ್ಷವೊಂದೇ ಪರ್ಯಾಯ ದಾರಿ ಎಂದು ಕೇಜ್ರಿವಾಲ್ ಹೇಳಿರುವ...
ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಈಗಿನ್ನು ಪಾಕ್ ಪತ್ರಕರ್ತೆ ಮೆಹರ್ ತರಾರ್ ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ.
ಈ ಸಂಬಂಧ ಅಧಿಕೃತ ಪ್ರಕಟನೆಯೊಂದರಲ್ಲಿ ಸದ್ಯದಲ್ಲೇ ಹೊರಡಿಸಲಾಗುವುದು ಎಂದು ದೆಹಲಿ...
ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಭಿನ್ನಮತ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ಮಹಾರಾಷ್ಟ್ರದ ಹಿರಿಯ ಆಪ್ ನಾಯಕಿ ಅಂಜಲಿ ದಮಾನಿಯಾ ಆಪ್ ಗೆ ರಾಜೀನಾಮೆ ನೀಡಿದ್ದಾರೆ.
ನಾನು ಈ ವರೆಗೂ ಅರವಿಂದ್ ಕೇಜ್ರಿವಾಲರನ್ನು ಬೆಂಬಲಿಸಿಕೊಂಡು ಬಂದಿರುವುದು ತತ್ವಗಳಿಗಾಗಿಯೇ ಹೊರತು ಕುದುರೆ ವ್ಯಾಪಾರಕ್ಕೆ ಅಲ್ಲ...
'ಆಮ್ ಆದ್ಮಿ ಪಕ್ಷ'ದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮತ್ತಷ್ಟು ತೀವ್ರಗೊಂಡಿದ್ದು, ಪಕ್ಷದ ಮೂವರು ನಾಯಕರ ಜಾತಕ ಬಯಲಾಗಿದೆ.
ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧ ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್, ಶಾಂತಿ ಭೂಷಣ್ ಅವರು ಕೆಲಸ ಮಾಡಿದ್ದರು ಎಂದು ಎಎಪಿಯ...
'ಲಷ್ಕರ್-ಎ-ತೋಯ್ಬಾ'ಉಗ್ರ ಸಂಘಟನೆಯ ಬಾಂಬ್ ಪರಿಣಿತ ಅಬ್ದುಲ್ ಕರೀಮ್ ತುಂಡಾ ನನ್ನು ಆತನ ವಿರುದ್ಧ 1994ರಲ್ಲಿ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಿಂದ ದೆಹಲಿ ನ್ಯಾಯಾಲಯ ಬಿಡುಗಡೆ ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣಾ ಅವರು ಅಬ್ದುಲ್ ತುಂಡಾನನ್ನು ಟಾಡಾ ಕಾಯ್ದೆಯಡಿ...
ವಿವಾದಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿನ ಗ್ಯಾಂಗ್ ರೇಪ್ ಆರೋಪಿ ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕರು 40 ಸಾವಿರ ರೂಪಾಯಿ ಪಾವತಿಸಿರುವುದಾಗಿ ನವಭಾರತ್ ಟೈಮ್ಸ್ ವರದಿ ತಿಳಿಸಿದೆ.
ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕಿ ಲಿಸ್ಲೇ ಉಡ್ವಿನ್ ಹಲವಾರು ಬಾರಿ ಪ್ರಯತ್ನಿಸಿದ್ದರು. ಆದರೆ...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ. ಅತ್ಯಾಚಾರಿಗಳು ಏನನ್ನು ಯೋಚಿಸಬೇಕು ಎನ್ನುವುದನ್ನು ಕಲಿಸಿಕೊಟ್ಟಿದ್ದು, ಅವರಿಗೆ ಉತ್ತೇಜನ ನೀಡಿದ್ದೂ ಸಮಾಜವೇ ಎಂದು ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ತಿಳಿಸಿದ್ದಾರೆ.
ಇಂಡಿಯಾ...
ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ್ದ ಮತ್ತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಆಕ್ಷೇಪಾರ್ಹವಾಗಿ ಮಹಿಳಾ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಇಬ್ಬರು ವಕೀಲರಿಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ಬಿಬಿಸಿ ಪ್ರಸಾರಮಾಡಿರುವ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿ...
ಎರಡು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ದೆಹಲಿ ಗ್ಯಾಂಗ್ ಪ್ರಕರಣ (ನಿರ್ಭಯಾ ಕೇಸ್)ದ ದೋಷಿಯ ಸಂದರ್ಶನ ಒಳಗೊಂಡ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರದ ನಿರ್ಬಂಧ ಧಿಕ್ಕರಿಸಿ ಬಿಬಿಸಿ-4 ಟೀವಿ ವಾಹಿನಿಯು ಪ್ರಸಾರ ಮಾಡಿದೆ. ಅಲ್ಲದೆ ಆ ಸಾಕ್ಷ್ಯಚಿತ್ರವನ್ನು ಜನಪ್ರಿಯ ಆನ್ ಲೈನ್...
'ಬಿಬಿಸಿ' ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಅಪರಾಧಿ ಮುಖೇಶ್ ಸಿಂಗ್ ಪರ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಅಪರಾಧಿ ಮುಖೇಶ್ ಸಿಂಗ್ ಪರವಾಗಿ ಹೇಳಿಕೆ ನೀಡಿದ್ದೂ ಅಲ್ಲದೇ, ಅತ್ಯಾಚಾರ ನಡೆಯುವುದಕ್ಕೆ ಮಹಿಳೆಯರೇ ಕಾರಣ ಎಂಬ...
'ನಿಷೇಧ'ದ ಹೊರತಾಗಿಯೂ ಬಿಬಿಸಿ ವಾಹಿನಿ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಖೇಶ್ ಸಿಂಗ್ ಸಂದರ್ಶನವನ್ನು ನಿಗದಿಗಿಂತ ಮೊದಲೇ ಪ್ರಸಾರ ಮಾಡಿದೆ.
ಸಂದರ್ಶನ ಪ್ರಸಾರ ಮಾಡುವ ಮೂಲಕ, ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಇಂಗ್ಲೆಂಡ್ ಸೇರಿದಂತೆ ಇತರೆ...
'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ.
ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ...
'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ಇರುವ ವರದಿಗಳನ್ನು ಪಕ್ಷದ ಮುಖಂಡ ಯೋಗೇಂದ್ರ ಯಾದವ್ ತಳ್ಳಿಹಾಕಿದ್ದಾರೆ.
ಆಪ್ ನಲ್ಲಿ ಆಂತರಿಕ ಭಿನ್ನಮತ ಇರುವುದರ ಬಗೆಗಿನ ಪತ್ರಿಕಾ ವರದಿಗಳು ಹಾಸ್ಯಾಸ್ಪದ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಕಳೆದ 2 ದಿನಗಳಿಂದ ಪತ್ರಿಕೆಗಳು ನನ್ನ ಹಾಗೂ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷದಲ್ಲಿ ಇದೀಗ ತೀವ್ರ ಭಿನ್ನಮತ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 4 ರಂದು ಪಕ್ಷದ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿದೆ.
ಆಪ್ ವಕ್ತಾರ ಸಂಜಯ್ ಸಿಂಗ್ ಸುದ್ದಿಗೋಷ್ಠಿ ನಡೆಸಿ...
ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ವಿದ್ಯುತ್ ಶುಲ್ಕ ಕಡಿತ ಹಾಗೂ ಉಚಿತ ಕುಡಿಯುವ ನೀರು ಪೂರೈಕೆ ಸಂಬಂಧ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ.
400 ಯೂನಿಟ್ ವರೆಗೆ ಬಳಸಲಾಗುವ ವಿದ್ಯುತ್ತಿಗೆ ಇನ್ನು ಮುಂದೆ ದೆಹಲಿ ಜನರು ಸದ್ಯ...
ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ.
ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ.
ಚುನಾವಣೆ ಸೋಲಿಗೆ ಯಾರು...
ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...
ಎಲ್ಲಾ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿಯಾಗಿದ್ದು ಪ್ರತಿ ಧರ್ಮಕ್ಕೂ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಇಬ್ಬರು ಭಾರತೀಯ ಕ್ರಿಶ್ಚಿಯನ್ನರಿಗೆ ಸಂತಪದವಿ ದೊರೆತಿರುವ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ಸಮುದಾಯ ದೆಹಲಿಯ ವಿಜ್ನಾನ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಆಮ್ ಅದ್ಮಿ ಪಕ್ಷದ ಅಭೂತಪೂರ್ವ ಗೆಲುವಿಗೆ ಹೊಸ ತಿರುವು ನೀಡಲು ಕಾಂಗ್ರೆಸ್ ಯತ್ನಿಸಿದೆ. ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮಾಡಿದ ಆರ್.ಎಸ್.ಎಸ್ ಯೋಜನೆಯ ಭಾಗ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್...
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯಭೇರಿ ಬಾರಿಸಿದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜನಲೋಕಪಾಲ ವಿಧೇಯಕ ಅಂಗೀಕಾರವಾಗದ ಹಿನ್ನೆಲೆಯಲ್ಲಿ 2014ರ ಫೆ.14ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್...
ಕಾಂಗ್ರೆಸ್ನಲ್ಲಿರುವ ಶೇ.50ರಷ್ಟು ಹಿರಿಯ ನಾಯಕರು ಒಣಗಿದ ಮರಗಳು ಎಂದು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಪುತ್ರ, ಮಾಜಿ ಸಂಸದ ಸಂದೀಪ್ ದೀಕ್ಷಿತ್ ಲೇವಡಿ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಡಗಿದ್ದ ಭಿನ್ನಾಭಿಪ್ರಾಯ ಸ್ಫೋಟಗೊಳ್ಳಲು ಆರಂಭಿಸಿದೆ....
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಎಯಲ್ಲಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ 2ನೇ ಬಾರಿಗೆ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ...
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್, ದೆಹಲಿಯನ್ನು ಭ್ರಷ್ಟಾಚಾರ ಮುಕ್ತ ಮೊದಲ ರಾಜ್ಯವನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
ರಾಮ್ ಲೀಲಾ ಮೈದಾನದಲ್ಲಿ ಪದಗ್ರಹಣ ಮಾಡಿದ ಬಳಿಕ ದೆಹಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ಜನತೆ ಮತ್ತು ದೇವರು ಈ ಬಾರಿ...
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ರದ್ದಾಗಿದೆ.
ಮುಖ್ಯಮಂತ್ರಿ ಕೇಜ್ರಿವಾಲ್ ಅನಾರೋಗ್ಯದಿಂದ ಬಳತ್ತಿರುವ ಕಾರಣ ಸಂಜೆ 4ಗಂಟೆಗೆ ನಡೆಯ ಬೇಕಾಗಿದ್ದ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ. ರದ್ದಾದ ಸಂಪುಟ ಸಭೆ ಸೋಮವಾರ...
ದೆಹಲಿಯ 8ನೇ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಈ ಕುರಿತು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿಯ ಮೊದಲ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ಅವರು ತಮ್ಮ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನಾಯಕತ್ವದ ಆಮ್ ಆದ್ಮಿ ಪಕ್ಷವು ಅಭೂತಪೂರ್ವ ಗೆಲುವು ದಾಖಲಿಸಿರುವುದನ್ನು ದೇಶಕ್ಕೆ ದೇಶವೇ ಅಚ್ಚರಿಯಿಂದ ನೋಡುತ್ತಿದ್ದರೆ ಇಲ್ಲೊಬ್ಬ ಹಿಂದೂ ಮಹಾಸಭಾ ಮುಖಂಡ ಎಂದು ಹೇಳಿಕೊಳ್ಳುತ್ತಿರುವ ವ್ಯಕ್ತಿ ಮುಂಬರುವ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಬಹಿರಂಗ...
'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಿರುವ ಸೋಲಿನ ಬಗ್ಗೆ ಶೀಲಾ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಅಜಯ್ ಮಕೇನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಟೈಮ್ಸ್ ನೌ ಚಾನೆಲ್ ನೊಂದಿಗೆ ಮಾತನಾಡಿರುವ ಶೀಲಾ ದೀಕ್ಷಿತ್, ಅಜಯ್ ಮಕೇನ್...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಅದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
ನವದೆಹಲಿ 7 ರೇಸ್ ಕೋರ್ಸ್ ರಸ್ತೆಯಲ್ಲಿನ, ಪ್ರಧಾನಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ...
ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್, ಫೆ.14ರಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
2015ರ ಹೈವೋಲ್ಟೆಜ್ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದನ್ನು ನಿರ್ಮಿಸಿದ್ದು, ಕೇಜ್ರಿವಾಲ್ ಸುನಾಮಿ ಅಲೆಯಲ್ಲಿ ಬಿಜೆಪಿ ಕೊಚ್ಚಿಹೋಗಿದೆ. ಕಾಂಗ್ರೆಸ್ ಕೂಡಾ ಧೂಳೀಪಟವಾಗಿದೆ....
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 67 ಸ್ಥಾನ ಪಡೆದು ಬಹುತೇಕ ಕ್ಲೀನ್ ಸ್ವೀಪ್ ಮಾಡುವ ಮೂಲಕ ಲೋಕಸಭೆಯಲ್ಲಿ ಕಾಂಗ್ರೆಸ್ಗೆ ಎದುರಾದ ಸ್ಥಿತಿ ಇಲ್ಲಿ ಬಿಜೆಪಿಗಾಗಿದೆ.
ಶಾಸನಸಭೆಗಳಲ್ಲಿ ಅಧಿಕೃತ ಪ್ರತಿಪಕ್ಷ ಸ್ಥಾನಮಾನ ದೊರಕಬೇಕು ಎಂದರೆ ಸದನದ ಒಟ್ಟು ಬಲದ ಶೇ.10ರಷ್ಟು ಸ್ಥಾನವನ್ನು...
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಕೇಂದ್ರ ನಗರಾಭಿವೃಧ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಈ ವೇಳೆ ಕೇಜ್ರಿವಾಲ್...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಘಾತಕಾರಿ ಸೋಲಿನ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಸಂಪುಟ ಸಚಿವರ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದರು.
ಮಂಗಳವಾರ ಕೇಂದ್ರ ಸಂಪುಟ ಸಭೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವ ಅರುಣ್...
'ದೆಹಲಿ'ಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೋಟೀಸ್ ಜಾರಿ ಮಾಡಿದೆ.
ಆಮ್ ಆದ್ಮಿ ಪಕ್ಷ ಸಂಗ್ರಹಿಸಿರುವ ದೇಣಿಗೆಗೆ ಸಂಬಂಧಿಸಿದಂತೆ ಹಲವು ವಿವಾದಗಳು ಕೇಳಿಬಂದಿರುವುದರಿಂದ ಆದಾಯ ತೆರಿಗೆ ಇಲಾಖೆ ಪಕ್ಷಕ್ಕೆ ನೋಟೀಸ್ ಜಾರಿ ಮಾಡಿದೆ....
'ಸುನಂದಾ ಪುಷ್ಕರ್' ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಶಶಿತರೂರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಸುನಂದಾ...
'ದೆಹಲಿ' ಚುನಾವಣೆಯಲ್ಲಿ ಶಾಹಿ ಇಮಾಮ್ ಬುಖಾರಿ ಫತ್ವಾ ಹೊರಡಿಸಿದ್ದೇ ತಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ನಾಯಕಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಆರೋಪಿಸಿದ್ದಾರೆ.
ಫೆ.11ರಂದು ಎ.ಎನ್.ಐ ಪ್ರತಿನಿಧಿಯೊಂದಿಗೆ ಮಾತನಾಡಿರುವ ಕಿರಣ್ ಬೇಡಿ, ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಗೆ ಅಭಿನಂದನೆ ತಿಳಿಸಿದ್ದಾರೆ.
ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಆಪ್ ಗೆಲುವಿಗೆ ಶುಭಕೋರಿದ್ದು, ಕೇಜ್ರಿವಾಲ್ ಅವರಿಗೆ ಚಹಾಗೆ ಬರುವಂತೆ ಆಹ್ವಾನ...
ದೆಹಲಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ತೀವ್ರ ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಇನ್ನು ಕೆಲವೇ ಸಮಯದಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಈ ನಡುವೆ ಬಿಜೆಪಿ ಹಿನ್ನಡೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ...
'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ ದೆಹಲಿ ರಾಜ್ಯದ ಮುಖ್ಯಸ್ಥರಾದ ಅರವಿಂದರ್ ಸಿಂಗ್ ಲೌವ್ಲಿ ಕೂಡಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ...
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಗದ್ದುಗೆಗಾಗಿ ಫೆಬ್ರವರಿ 7ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಸರಿಸುಮಾರು ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ.
ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರದ...
ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದೆ.
56 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿ ಗೆಲುವಿನತ್ತ ನಾಗಾಲೋಟ ಆರಂಭಿಸಿದೆ. ಬಿಜೆಪಿ 12 ಕ್ಷೇತ್ರಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ದ್ 3 ಕ್ಷೇತ್ರಗಳಲ್ಲಿ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 70 ಕ್ಷೇತ್ರಗಳಲ್ಲಿ ಖಾತೆಯನ್ನೇ ತೆರೆಯದೆ ಶೂನ್ಯ ಸ್ಥಾನ ಸಂಪಾದಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿ ಮುಂಭಾಗ ಸೇರಿರುವ ಕಾಂಗ್ರೆಸ್...
'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣಾನಗರ ಕ್ಷೇತ್ರದಿಂದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಿರಣ್ ಬೇಡಿ ಅವರು ಹೀನಾಯ ಸೋಲನುಭವಿಸಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಎಸ್.ಕೆ ಬಗ್ಗಾ ಅವರ ವಿರುದ್ಧ ಕಿರಣ್ ಬೇಡಿ 1,150 ಮತಗಳ ಅಂತರದಿಂದ ಹೀನಾಯ ಸೋಲನುಭವಿಸಿದ್ದಾರೆ....
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. ಇದು ದೆಹಲಿ ಜನತೆಯ ಗೆಲುವು, ಈ ಅಭೂತಪೂರ್ವ ಗೆಲುವು ನೀಡಿದ ದೆಹಲಿ ಜನತೆಗೆ ಅಭಿನಂದನೆ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಆಪ್ ಕಚೇರಿಯ...
'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ವಿಜಯಗಳಿಸಿರುವುದು ದ್ವೇಷ ರಾಜರಾಕರಣದಲ್ಲಿ ತೊಡಗಿದ್ದ ಶಕ್ತಿಗಳಿಗೆ ದೊಡ್ಡ ಹಿನ್ನಡೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ...
ತೀವ್ರ ಕುತೂಹ ಮತ್ತು ಜಿದ್ದಾಜಿದ್ದಿನ ಕಣವಾಗಿದ್ದ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದೆ.
7೦ ವಿಧಾನಸಭಾ ಕ್ಷೇತ್ರಗಳಲ್ಲಿ 67 ಕ್ಷೇತ್ರಗಳಲ್ಲಿ ಆಪ್ ಪಕ್ಷ...
'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ದೆಹಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಪಕ್ಷಗಳು ಮೊದಲಿನಿಂದಲೂ ಪ್ರಾದೇಶಿಕ ಪಕ್ಷಗಳನ್ನು ತುಳಿಯಲು ಯತ್ನಿಸುತ್ತಿವೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ರಾಷ್ಟ್ರೀಯ ಪಕ್ಷಗಳ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ, ಸೋಲಿ ಹೊಣೆ ಹೊತ್ತಿದ್ದು, ಬಿಜೆಪಿ ಹೈಕಮಾಂಡ್ ಕ್ಷಮೆಯಾಚಿಸಿದ್ದಾರೆ.
ಕೃಷ್ಣಾಷ್ಣಾನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿರಣ್ ಬೇಡಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಸ್.ಕೆ.ಬಗ್ಗಾ ವಿರುದ್ಧ 2476 ಮತಗಳ ಅಂತರದಿಂದ...
'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಯಶಸ್ಸಿಗೆ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಸಂತಸ ವ್ಯಕ್ತಪಡಿಸಿದ್ದು, ದೆಹಲಿಯ ತೀರ್ಪು ದೇಶದ ತೀರ್ಪು ಎಂದು ಬಣ್ಣಿಸಿದ್ದಾರೆ.
ದೆಹಲಿ ಎಲ್ಲಾ ರಾಜ್ಯಗಳಿಂದ ಬಂದಿರುವ ಜನರಿಂದ ಆವರಿಸಲ್ಪಟ್ಟಿದ್ದು ಇಡೀ ದೇಶವನ್ನು ಪ್ರತಿನಿಧಿಸುತ್ತಿದೆ. ಧರ್ಮಗಳನ್ನು...
ತೀವ್ರ ಪೈಪೋಟಿಯಿಂದ ಕೂಡಿದ್ದ ದೆಹಲಿ ವಿಧಾನಸಭೆ ಚುನಾವಣೆ ಅಂತ್ಯಗೊಂಡಿದ್ದು, ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಬಹುಮತ ಗಳಿಸಲಿದೆ ಎಂದು ಆರು ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಇನ್ನು ಭಾರೀ ನಿರೀಕ್ಷೆ ಹೊಂದಿದ್ದ ಬಿಜೆಪಿ ಎರಡನೇ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎಂದು ಸಿಎಂ ಅಭ್ಯರ್ಥಿ ಕಿರಣ್ ಬೇಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಮಾತನಾದಿದ ಅವರು, ಫೆ .10ರಂದು ಪ್ರಕಟವಾಗಲಿರುವ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎನ್ನುವುದು ನನ್ನ ಭಾವನೆ. ಒಂದು ವೇಳೆ ಬಿಜೆಪಿಯೇನಾದರೂ ಸೋತರೆ...
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತೀಯ ಜನತಾ ಪಕ್ಷ ಸೋಲೊಪ್ಪಿಕೊಂಡಿರುವುದು ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಹಿರಂಗವಾಗಿದೆ.
ಪ್ರತಿಷ್ಠೆ ಕಣವಾಗಿದ್ದ ದೆಹಲಿ ಚುನಾವಣೆಯಲ್ಲಿ ಬಿಜೆಪಿ 34 ಸ್ಥಾನಗಳು ಲಭಿಸುವ ಸಾಧ್ಯತೆ ಇರುವುದಾಗಿ ಸಮೀಕ್ಷೆ ಹೇಳಿದೆ ಎಂದು...
ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟು 1,33,14,215 ಮತದಾರರು ಸುಮಾರು 673 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಕೊರೆಯುವ ಚಳಿಯ ವಾತಾವರಣವಿದ್ದರೂ ರಾಷ್ಟ್ರ ರಾಜಧಾನಿಯ ಹಲವೆಡೆಗಳಲ್ಲಿ ಮತದಾರರು ಉತ್ಸಾಹದಿಂದಲೇ ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ದೆಹಲಿಯ 70 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ....
'ದೆಹಲಿ' ವಿಧಾನಸಭೆಗೆ ಮತದಾನ ನಡೆಯುತ್ತಿರುವ ದಿನದಂದೂ ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪ ಕೇಳಿಬಂದಿದೆ.
ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಸ್ಪರ್ಧಿಸಿರುವ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ ಹಾಕದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ...
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆ ಬಿರುಸುಪಡೆದುಕೊಂಡಿದೆ. ಕೊರೆಯುವ ಚೆಳಿಯನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ.
ಬೆಳಿಗ್ಗೆ 11ಗಂಟೆಯವರೆಗೆ ಶೇ.19.7ರಷ್ಟು ಮತದಾನ ನಡೆದ ಬಗ್ಗೆ ವರದಿಯಾಗಿದೆ. ಈ ನಡುವೆ ರಾಜಕೀಯ ಧುರೀಣರು, ಘಟಾನುಘಟಿ ನಾಯಕರು...
ದೆಹಲಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ತಿಳಿಸಿದ್ದಾರೆ.
ರಾಜೌರಿ ಗಾರ್ಡನ್ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು....
ನಾಳೆ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಮತದಾರರು ಆಮ್ ಆದ್ಮಿ ಪಕ್ಷಕ್ಕೇ ಮತ ಚಲಾಯಿಸಬೇಕೆಂದು ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಫತ್ವಾ ಹೊರಡಿಸಿದ್ದಾರೆ.
ದೆಹಲಿಯಲ್ಲಿ ಸೆಕ್ಯುಲರ್ ಸರ್ಕಾರ ರಚನೆಯಾಗಬೇಕಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಮತದಾರರು ಆಮ್...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...
ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆಗಳ ವರದಿಗಳನ್ನು ತಳ್ಳಿಹಾಕಿದ್ದಾರೆ.
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ತಯಾರಿ ಬಗ್ಗೆ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್...
'ದೆಹಲಿ' ಚುನಾವಣೆಯಲ್ಲಿ ಬಿಜೆಪಿಗೆ ಬಾಬಾ ರಾಮ್ ರಹೀಮ್ ತಮ್ಮ ಬೆಂಬಲ ಘೋಷಿಸಿದ್ದಾರೆ.
ಡೇರಾ ಸಚ್ಚಾ ಸೌಧ (ಡಿಎಸ್ಎಸ್ ) ಆಧ್ಯಾತ್ಮ ಸಂಘಟನೆಯಿಂದ ಹಲವು ಸಮಾಜ ಮುಖಿ ಕೆಲಸಮಾಡಿರುವ ಬಾಬಾ ರಾಮ್ ರಹೀಮ್, ದೆಹಲಿಯಲ್ಲಿ 20ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಈಗ ಬಿಜೆಪಿಗೆ...
'ದೆಹಲಿ' ವಿಧಾನಸಭಾ ಚುನಾವಣೆ ಫಲಿತಾಂಶ ನರೇಂದ್ರ ಮೋದಿ ಅವರ ಬಗೆಗಿನ ಜನಾಭಿಪ್ರಾಯವಾಗುವುದಿಲ್ಲ ಎಂದು ಬಿಜೆಪಿ ಹೇಳಿದೆ.
ದೆಹಲಿಯಲ್ಲಿ ಚುನಾವಣೆ ನಡೆಯುತ್ತಿರುವುದು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಧಾನ ಮಂತ್ರಿ ಸ್ಥಾನಕ್ಕಾಗಿ ಅಲ್ಲ. ಆದ್ದರಿಂದ ಈ ಚುನಾವಣೆಯ ಫಲಿತಾಂಶವನ್ನು ನರೇಂದ್ರ ಮೋದಿ ಅವರ ಬಗೆಗಿನ ಜನಾಭಿಪ್ರಾಯವೆಂದು...
ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ದಿನ ಮಾತ್ರ ಬಾಕಿಯಿದೆ. ಈ ನಿಟ್ಟಿನಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಬಿಜೆಪಿ, ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಚುನಾವಣಾ ಪ್ರಚಾದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ವಿಫಲರಾದ ಭಯೋತ್ಪಾದಕರು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಹಾಗೂ ಸಂಸತ್ ಭವನದ ಮೇಲೆ ಆತ್ಮಾಹುತಿ ಬಾಂಬ್ ದಾಳಿಗೆ ಸಜ್ಜಾಗಿದ್ದಾರೆ ಎಂದು...
ಮೂರು ಪ್ರಮುಖ ಚುನಾವಣಾ ಸಮೀಕ್ಷೆಯ ಒಟ್ಟಾರೆ ಲೆಕ್ಕಾಚಾರದಲ್ಲಿ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ರ ಆಮ್ ಆದ್ಮಿ ಪಕ್ಷ 37 ಸ್ಥಾನಗಳನ್ನು ಪಡೆಯಲಿದ್ದು, ಇದು ಸದನದ ಒಟ್ಟು 70 ಸ್ಥಾನ ಬಲದ ಅರ್ಧಾಂಶಕ್ಕೂ ಹೆಚ್ಚು ಎನ್ನುವುದು ಗಮನಾರ್ಹವಾಗಿದೆ.
ಬಿಜೆಪಿಗೆ ಈ...
'ಆಮ್ ಆದ್ಮಿ ಪಕ್ಷ'ದ ವಿರುದ್ಧ ದಿನಕ್ಕೊಂದು ಹೊಸ ಆರೋಪ ಕೇಳಿಬರುತ್ತಿದ್ದರೆ, ಇತ್ತ ಸಮಾಜವಾದಿ ಪಕ್ಷ ಆಪ್ ಬೆಂಬಲಕ್ಕೆ ಧಾವಿಸಿದೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ಆಮ್ ಆದ್ಮಿ ಪಕ್ಷ ಜನಪ್ರಿಯತೆಯ ಬಗ್ಗೆ ಬಿಜೆಪಿಗೆ...
ಮಾಜಿ ಐಪಿಎಸ್ ಅಧಿಕಾರಿ, ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ ಚುನಾವಣಾ ರ್ಯಾಲಿ ವೇಳೆ ಜನರೆದುರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ಜನರ ಪ್ರೀತಿ ಕಂಡು ಭಾವುಕರಾದ ಬೇಡಿ ಕಣ್ಣೀರಿಟ್ಟರು.
ಜನರ ಪ್ರೀತಿ...
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ಜಹಾಂಗಿರ್ ಪುರದಲ್ಲಿ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ಹಾಗೂ ನರೇಂದ್ರ ಮೋದಿ...
ದೇಶದಲ್ಲಿ ದೆಹಲಿಯಲ್ಲೇ ಅತ್ಯಂತ ಹೆಚ್ಚು ಮತದಾನ ನಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.4ರಂದು ಅಂಬೇಡ್ಕರ್ ನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ದೇಶದಲ್ಲಿ ಅತ್ಯಂತ ಹೆಚ್ಚು ಮತದಾನವಾಗಿರುವುದು ಜಮ್ಮು-ಕಾಶ್ಮೀರದಲ್ಲಿ....
'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.
ಬಿಹಾರದಲ್ಲಿ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಆರ್.ಜೆ.ಡಿ ಪಕ್ಷದ ಮುಖಂಡ ಲಾಲೂ ಪ್ರಸಾದ್ ಯಾದವ್ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್...
ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...
ಫೆ.7ರಂದು ನಡೆಯಲಿರುವ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು, ಚುನಾವಣಾ ಪ್ರಣಾಳಿಕೆ ಬದಲಾಗಿ ವಿಷನ್ ಡಾಕ್ಯೂಮೆಂಟ್ ಬಿಡುಗಡೆ ಮಾಡಿದೆ.
ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ ಹಾಗೂ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ...
'ದೆಹಲಿ' ಜನರ ಪ್ರೀತಿ ವಿಶ್ವಾಸಗಳನ್ನು ಅಭಿವೃದ್ಧಿ ರೂಪದಲ್ಲಿ ಬಡ್ಡಿ ಸಮೇತ ವಾಪಸ್ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.3ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 'ಲೋಕಸಭಾ ಚುನಾವಣೆ...
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಿರಣ್ ಬೇಡಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನರೇಂದ್ರ ಟಂಡನ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಫೆ.7ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಚುನಾವಣೆಗೆ ಕೆಲ ದಿನಗಳ ಮೊದಲು ನರೇಂದ್ರ ಟಂಡನ್ ಬಿಜೆಪಿಗೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಟಂಡನ್, ಕಿರಣ್...
'ದೆಹಲಿ-ಅಮೃತಸರ' ಶತಾಬ್ದಿ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಭಾವಚಿತ್ರವಿರುವ ಪ್ಲಾಸ್ಟಿಕ್ ಕಪ್ ಬಳಕೆಯಾಗುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಚುನಾವಣಾ ಕಣವಾಗಿರುವ ದೆಹಲಿಯಲ್ಲಿ ಈ ರೀತಿ ಬಿಜೆಪಿ ಪರವಾಗಿರುವ ಪ್ಲ್ಯಾಸ್ಟಿಕ್ ಟೀ ಕಪ್ ಗಳು ಬಳಕೆಯಾಗುತ್ತಿರುವುದರ ಬಗ್ಗೆ ರೈಲ್ವೇ...
'ದೆಹಲಿ ವಿಧಾನಸಭಾ ಚುನಾವಣೆ'ಗೆ ಕೆಲವೇ ದಿನಗಳಿದ್ದು, ಆಮ್ ಆದ್ಮಿ ಪಕ್ಷದ ವಿರುದ್ಧ ಹೊಸ ಆರೋಪ ಕೇಳಿಬಂದಿದೆ.
ಈ ಬಾರಿ ಆಮ್ ಆದ್ಮಿ ಪಕ್ಷದ ಸ್ವಯಂ ಸೇವಕ ಘಟಕದ ಸದಸ್ಯರೇ ಆಮ್ ಆದ್ಮಿ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಹವಾಲ ಮೂಲಕ ದೇಣಿಗೆ...
ದೆಹಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಇರುವ ಬೆನ್ನಲ್ಲೇ 100 ಕಾರ್ಪೊರೇಟ್ ದಿಗ್ಗಜರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬ್ಯಾಂಕ್ ಅಧಿಕಾರಿಗಳು, ಉದ್ಯಮಿಗಳು ಸೇರಿದಂತೆ ಸುಮಾರು 100 ಮಂದಿ ಬಿಜೆಪಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಮತ್ತು ಯುವ ಮೋರ್ಚಾ ಅಧ್ಯಕ್ಷ ಅನುರಾಗ್ ಠಾಕೂರ್ ಸಮ್ಮುಖದಲ್ಲಿ...
'ದೆಹಲಿ' ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಫೆ.4ರಂದು ದೆಹಲಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜ.27ರಂದು ನಡೆದ ರ್ಯಾಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ಫೆ4ರಂದು ಮತ್ತೊಂದು ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ದೆಹಲಿಯ...
ದೆಹಲಿಯಲ್ಲಿ ಅಭಿವೃದ್ಧಿ ವಾತಾವರಣೆ ನಿರ್ಮಾಣವಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.
ಫೆ.7ರಂದು ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಬಿಜೆಪಿ ಮತ್ತು ಎಎಪಿ ಪಕ್ಷಗಳು...
ದೆಹಲಿ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದೆಹಲಿ ಬಿಜೆಪಿ, ಆಮ್ ಆದ್ಮಿಯ ನೇತಾರ ಅರವಿಂದ ಕೇಜ್ರಿವಾಲ್ ಅವರಿಗೆ ಮತ್ತೆ 5 ಪ್ರಶ್ನೆಗಳನ್ನು ಮುಂದಿಟ್ಟಿದೆ.
ತಾವು ಪದೇ ಪದೇ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿ ಸುತ್ತಿರುವುದೇಕೆ? ನಿಮಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ...
ಫೆ.7ರಂದು ನಡೆಯಲಿರುವ ದೆಹಲಿ ಚುನಾವಣೆ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್, ಆಶಿಷ್ ಕೇತನ್ ನೇತೃತ್ವದಲ್ಲಿ ಸಿದ್ಧಗೊಂಡ 70 ಅಂಶಗಳ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
ಎಎಪಿ ಈ ಬಾರಿ ಮೊಹಲ್ಲಾ ಸಭಾ...
ಚುನಾವಣಾ ಆಯೋಗದ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನರೇಶ್ ಬಲ್ಯಾನ್ ಅವರ ದೆಹಲಿಯಲ್ಲಿನ ನಿವಾಸದ ಮೇಲೆ ದಾಳಿ ನಡೆಸಿ ಸಾವಿರಾರು ಸಂಖ್ಯೆಯ ಮದ್ಯದ ಬಾಟಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ 5,000 ಲಿಕ್ಕರ್ ಬಾಟಲುಗಳನ್ನು ವಶಪಡಿಸಿಕೊಂಡಿರುವ ಚುನಾವಣಾ ಆಯೋಗದ ಅಧಿಕಾರಿಗಳು, ಚುನಾವಣಾ ನೀತಿ...
ಮತದಾರರು ಒಂದು ಬಾರಿ ತಪ್ಪು ಮಾಡಬಹುದು. ಆದರೆ ಪದೇ ಪದೇ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಆಪ್ ನೇತಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಫೆ.7ರಂದು ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ವಿಷನ್ ಡಾಕ್ಯುಮೆಂಟ್(ದೂರದೃಷ್ಟಿಯ ದಾಖಲೆ)ಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಈ ವಿಷಯವನ್ನು ಬಿಜೆಪಿ...
ಭಾರತ ಅಮೆರಿಕಕ್ಕೆ ಬೆಸ್ಟ್ ಫ್ರೆಂಡ್, ವಿಜ್ನಾನ ತಂತ್ರಜ್ನಾನದಲ್ಲಿ ಭಾರತ ಹಾಗೂ ಅಮೆರಿಕ ಸಮಾನ ಸಾಮರ್ಥ್ಯ ಹೊಂದಿದೆ, ಭಾರತವನ್ನು ನೋಡಿದಾಗ ನಮ್ಮದೇ ಪ್ರತಿಬಿಂಬ ಕಾಣುತ್ತದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ.
ಜ.27ರಂದು ನವದೆಹಲಿಯಲ್ಲಿ ಸಿರಿಪೋರ್ಟ್ ಸಭಾಂಗಣದಲ್ಲಿ ನಲ್ಲಿ ವಿಶೇಷ ಆಮಂತ್ರಿತರನ್ನುದ್ದೇಶಿಸಿ...
'ದೆಹಲಿ'ಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಿರುವ ಕಾರಣದಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮವಾದ ವಾಯುಪಡೆಯ ಪ್ರದರ್ಶನ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರು ಈಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿದ್ದು, ಎಂದಿನ ಗಣರಾಜ್ಯೋತ್ಸವ ದಿನಾಚರಣೆಗಿಂತಲೂ ಈ ಬಾರಿಯದ್ದು ವಿಶೇಷವಾಗಿದೆ.
ಬೆಳಿಗ್ಗೆ...
'ನವದೆಹಲಿ'ಯಲ್ಲಿ ಐತಿಹಾಸಿಕ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪರೇಡ್ ಮುಕ್ತಾಯಗೊಂಡಿದೆ.
ರಾಷ್ಟ್ರಗೀತೆ ಹಾಡುವ ಮೂಲಕ ರಾಜ್ ಪಥ್ ನಲ್ಲಿ ಪರೇಡ್ ಕಾರ್ಯಕ್ರಮವನ್ನು ಅಂತ್ಯಗೊಳಿಸಲಾಯಿತು. ಈ ವೇಳೆ, ಭಾರತಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಎದ್ದು ನಿಂತು ರಾಷ್ಟ್ರಗೀತೆಗೆ...
ದೆಹಲಿ ಮತದಾರರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆದು ಆಪ್ ಪಕ್ಷಕ್ಕೆ ವೋಟ್ ಮಾಡುವಂತೆ ಕರೆ ಕೊಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಆ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವನ್ನು ಶುದ್ಧಗೊಳಿಸಲು ನೀಡಿದ ಪ್ರತಿಕ್ರಿಯೆ ಅದು ಎಂದು...
ದೆಹಲಿಯ ಕೃಷ್ಣಾನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಹುರಿಯಾಳಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ, 11.65 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ.
ವಿಶೇಷವೆಂದರೆ ಇವರ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ತಮ್ಮ ಒಟ್ಟು ಆಸ್ತಿ ಮೌಲ್ಯದ ಪೈಕಿ 11,04,02,677...
ಕಿರಣ್ ಬೇಡಿ ಖಂಡಿತವಾಗಿಯೂ ಉತ್ತಮ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಹೊಗಳಿಕೆ ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಂತಿ ಭೂಷಣ್, ಬಿಜೆಪಿ ಕಿರಣ್ ಬೇಡಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಯನ್ನಾಗಿ ಆಯ್ಕೆ ಮಾಡಿರುವುದು ಒಂದು...
ನಿರೀಕ್ಷೆಯಂತೆಯೇ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಹೆಸರನ್ನು ರಾತ್ರಿ ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮತ್ತು ಚುನಾವಣಾ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ....
ಫೆ.7ರಂದು 70 ಕ್ಷೇತ್ರಗಳಿಗೆ ನಡೆಯುತ್ತಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 60 ಸ್ಥಾನಗಳನ್ನಾದರೂ ಗೆಲ್ಲಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಕ್ಷದ ದೆಹಲಿ ಘಟಕಕ್ಕೆ ಸೂಚನೆ ಕೊಟ್ಟಿದ್ದಾರೆ. ಆದರೆ ದೆಹಲಿ ಬಿಜೆಪಿ ಘಟಕ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹಣ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಡೆದು, ಮತ ಮಾತ್ರ ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಕರೆ ನೀಡಿದ್ದ ಆಮ್ ಅದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ....
ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.
ವೆಬ್ ಸೈಟನ್ನ ಮಾಸ್ಟರ್ಮೈಂಡ್ ಸುದಿಪ್ತ್ ಚಟರ್ಜಿ ಎಂಬುವವರನ್ನು ಬಂಧಿಸಿದ್ದು, ಈತ ನಕಲಿ ವೆಬ್...
ಫೆ.7ರಂದು ದೆಹಲಿ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ದೆಹಲಿಯ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೆಹಲಿಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಹೆಸರನ್ನು...
ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರಿಗೆ ದೆಹಲಿ ಪೋಲೀಸರು ನೋಟೀಸ್ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆರಡು ದಿನಗಳಲ್ಲಿ ಶಶಿ ತರೂರ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸ್ ಆಯುಕ್ತ...
'ಯುಪಿಎ-2' ಸರ್ಕಾರದಲ್ಲಿ ಸಚಿವೆಯಾಗಿದ್ದ ಕೃಷ್ಣ ತೀರಥ್ ಬಿಜೆಪಿಗೆ ಸೇರ್ಪಡೆಯಾಗಿದ್ದು ದೆಹಲಿ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಅಘಾತ ಉಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷ್ಣ ತೀರಥ್, ತಾವು ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ನನ್ನ ಸ್ಥಾನದ ಬಗ್ಗೆ ಪಕ್ಷದ...
ಯಾವುದೇ ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವುದಿಲ್ಲ, ಅಥವಾ ಕೆಂಪು ದೀಪದ ವಾಹನಗಳಲ್ಲಿ ಚಲಿಸುವುದಿಲ್ಲ ಎಂದಿದ್ದ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದ ನಂತರ ಹೇಳಿದಕ್ಕೆ ವಿರುದ್ಧವಾಗಿ ನಡೆದುಕೊಂಡರು ಎಂದು ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಅಧ್ಯಕ್ಷರ ವಿರುದ್ಧ ಹರಿಹಾಯ್ದಿದೆ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ...
ಬಿಜೆಪಿಗೆ ಸೇರ್ಪಡೆಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿಯವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ತೀರ್ಮಾನವಾಗಿಲ್ಲ ಎಂದು ಗೃಹ ಸಚಿವ ರಾಜನಾಥ್ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಅವರು ಪ್ರಧಾನಿ ನರೇಂದ್ರಮೋದಿ ನಾಯಕತ್ವ ಮೆಚ್ಚಿ...
ಎರಡು ದಿನಗಳ ಹಿಂದಷ್ಟೆ ಬಿಜೆಪಿ ಸೇರಿದ್ದ ಕಿರಣ್ ಬೇಡಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಶತಾಯಗತಾಯ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸಿದ್ದು, ಪ್ರಮುಖವಾಗಿ ಐದು ಕಡೆಗಳಲ್ಲಿ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ರಾಲಿ ಆಯೋಜಿಸಿದೆ. ಅಲ್ಲದೇ...
'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ.
ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...
'ದೆಹಲಿ' ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಈ ಪಟ್ಟಿಗೆ ಈಗ ಮಾಜಿ ಆಮ್ ಆದ್ಮಿ ಪಕ್ಷದ ನಾಯಕಿ ಶಾಜಿಯಾ ಇಲ್ಮಿ ಸಹ ಸೇರ್ಪಡೆಗೊಂಡಿದ್ದಾರೆ.
ಜ.16ರಂದು ನವದೆಹಲಿಯಲ್ಲಿ ಬಿಜೆಪಿ ದೆಹಲಿ ಅಧ್ಯಕ್ಷ ಸತೀಶ್ ಉಪಾಧ್ಯಾಯ...
ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ದೆಹಲಿ ಚುನಾವಣೆ ಎದುರಿಸುವುದು ಖಚಿತವಾಗಿದೆ.
ಜ.15ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಕಿರಣ್ ಬೇಡಿ ಬಿಜೆಪಿ ಸೇರ್ಪಡೆಗೊಂಡರು. ಕಿರಣ್ ಬೇಡಿ ಬಿಜೆಪಿಗೆ ಸೇರ್ಪಡೆಗೊಂಡಿರುವುದರಿಂದ ಅವರು ಆಮ್ ಆದ್ಮಿ ಪಕ್ಷದ...
ದೆಹಲಿ ಚುನಾವಣೆ ಎದುರಾಗುತ್ತಿದ್ದಂತೆಯೇ ಆಪ್ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿಯ ಮೌಲಿಕ್ ಭಾರತ್ ಎಂಬ ಎನ್.ಜಿ.ಒ ಸಂಸ್ಥೆ ಅರವಿಂದ್ ಕೇಜ್ರಿವಾಲ್ ದೆಹಲಿಯವರಲ್ಲ ಎಂದು ಆರೋಪಿಸಿದೆ.
ಕೇಜ್ರಿವಾಲ್ ಮತದಾರರ ಗುರುತಿನ ಚೀಟಿಯಲ್ಲಿ ತಮ್ಮ ವಿಳಾಸವನ್ನು ಬದಲಿಸಬೇಕೆಂದು...
ಆಮ್ ಆದ್ಮಿ ಪಕ್ಷದ ಮಾಜಿ ನಾಯಕಿ ಶಾಜಿಯಾ ಇಲ್ಮಿ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.
ಫೆ.7ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಶಾಜಿಯಾ ಇಲ್ಮಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಬಗ್ಗೆ ಜ.15ರಂದು...
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ.
ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಈ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಲವು ವಿಚಾರಗಳು ಚರ್ಚೆಗೆ ಬರುವುದರಿಂದ ಈ ಸಭೆ ಮಹತ್ವ...
ಮುಂಬರುವ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ . ದೆಹಲಿ ಮಾದರಿಯಲ್ಲಿ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ಆಮ್ ಆದ್ಮಿ ಪಾರ್ಟಿ ಘಟಕದಿಂದ ಈಗಾಗಲೇ ತಯಾರಿ ನಡೆದಿದ್ದು, ಜನರ ಅಹವಾಲು ಸ್ವೀಕರಿಸಲು...
ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು.
ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...
'ದೆಹಲಿ ಚುನಾವಣೆ' ಎದುರಿಸಲು ಸಜ್ಜುಗೊಂಡಿರುವ ಆಮ್ ಆದ್ಮಿ ಪಕ್ಷ ಹೊಸ ವಿವಾದದಲ್ಲಿ ಸಿಲುಕಿಕೊಂಡಿದೆ. ದೆಹಲಿಯ ಕಂಟೋನ್ಮೆಂಟ್ ಬೋರ್ಡ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಗಾಳಿಯಲ್ಲಿ ಹಣದ ನೋಟುಗಳನ್ನು ತೂರುವ ಮೂಲಕ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದಾನೆ....
ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣ ಕುರಿತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಸುನಂದಾ ಸಾವಿನ ಬಗ್ಗೆ ನನಗೆ ಹಲವು ಸಂದೇಹವಿದೆ. ಸುನಂದಾ ಪತಿಯಾಗಿ ಆಕೆಯ ಹತ್ಯೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಬೇಕಿದೆ ಎಂದಿದ್ದಾರೆ.
ಕೇವಲ...
ದೇಶ ಬಯಸಿದ್ದನ್ನು ದೆಹಲಿಯೂ ಬಯಸುತ್ತದೆ. ಕೇವಲ ಭಾಷಣ ಮಾಡಿದರೆ ದೇಶ ಅಭಿವೃದ್ಧಿಯಾಗುವುದಿಲ್ಲ, ಮಾತಿನ ಜತೆಗೆ ಕೃತಿಯೂ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,...
ತನ್ನ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣವನ್ನು ಕೊಲೆ ಕೇಸು ಎಂದು ಪರಿಗಣಿಸಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನ.7 ಮತ್ತು ನ.8ರಂದು ಪೊಲೀಸರು ನನ್ನ ಮನೆಯ ನೌಕರ ನಾರಾಯಣ...
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ದೆಹಲಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಜ.6ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಆಯುಕ್ತ ಬಿ.ಎಸ್ ಬಸ್ಸಿ, ಸುನಂದಾ ಪುಷ್ಕರ್ ಅವರಿಗೆ ಬಲವಂತವಾಗಿ ವಿಶಪ್ರಾಶನ ಮಾಡಿಸುವ ಮೂಲಕ...
ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ರಾಜೀನಾಮೆ ಬಳಿಕ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ...
ದೆಹಲಿ-ಕಾಬೂಲ್ ಮಾರ್ಗದ ವಿಮಾನ ಅಪಹರಣವಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಅಲ್ಲದೇ ಏರ್ ಇಂಡಿಯಾ ಉಗ್ರಗಾಮಿಗಳ ಗುರಿ ಎಂದು ಸೂಚನೆ ನೀಡಿವೆ.
ವಿಮಾನನಿಲ್ದಾಣದ ಐ ಜಿ ಐ ಅವರು ಎಲ್ಲ ವಿಮಾನನಿಲ್ದಾಣಗಳನ್ನು ಹೈ ಅಲರ್ಟ್ ನಲ್ಲಿಟ್ಟಿದ್ದು, ತಪಾಸಣೆಯನ್ನು ತೀವ್ರಗೊಳಿಸುವಂತೆ ಭದ್ರತಾ...
'ದೆಹಲಿ ವಿಧಾನಸಭೆ'ಗೆ ನಡೆಯಲಿರುವ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಪಕ್ಷದ ಕೆಲವು ನಾಯಕರು, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸೇರಿರುವ ಹಿನ್ನೆಲೆಯಲ್ಲಿ...
'ಹೊಸ ವರ್ಷಾಚರಣೆ' ವೇಳೆ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ತಾನದಿಂದ ದೆಹಲಿಗೆ 10 ಉಗ್ರರು ನುಸುಳಿದ್ದು ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ....
ದೆಹಲಿಯಲ್ಲೀಗ ಬಿಜೆಪಿ ಅಲೆ ಇದ್ದು, ಮುಂದಿನ ಸರ್ಕಾರವನ್ನು ಬಿಜೆಪಿಯೇ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಶಾನ್ಯ ದೆಹಲಿಯ ಬರಾಲಾ ಪ್ರದೇಶದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೆಹಯಲ್ಲಿ ಈ ಬಾರಿ ಬಿಜೆಪಿ ಸಂಪೂರ್ಣ...
'ಜಮ್ಮು-ಕಾಶ್ಮೀರ', ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ದೆಹಲಿ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಬಿಜೆಪಿಯಲ್ಲಿ ಸೂಕ್ತ ನಾಯಕತ್ವ, ಅಜೆಂಡಾ ಇಲ್ಲ, ಬಿಜೆಪಿಯದ್ದು...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟನೆಯ ಮಂಜು ಮುಸುಕಿದ್ದ ಕಾರಣ 36ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿವೆ. ಅನೇಕ ರೈಲುಗಳೂ ಸಹ ತಡವಾಗಿ ಸಂಚರಿಸುತ್ತಿವೆ.
ಡಿ.22ರಂದು ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 4.2 ಡಿಗ್ರಿ ಸೆ. ದಾಖಲಾಗಿದೆ. ಇದು ದೆಹಲಿಯಲ್ಲಿ ಕಳೆದ ಐದು ವರ್ಷಗಳಲ್ಲೇ...
'ಜನತಾ ಪರಿವಾರ' ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ನಾವು ದೆಹಲಿಯಲ್ಲಿ ಅಧಿಕಾರ ಪಡೆಯುವುದು ಖಚಿತ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಡಿ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ...
'ಆರ್.ಎಸ್.ಎಸ್' ನ ಘರ್ ವಾಪಸಿ ಬಗ್ಗೆ ದೆಹಲಿಯ ಪ್ರಧಾನ ಬಿಷಪ್ ಪ್ರತಿಕ್ರಿಯಿಸಿದ್ದು ಉತ್ತರ ಪ್ರದೇಶದಲ್ಲಿ ನಡೆದಿರುವ ಮಾತೃಧರ್ಮಕ್ಕೆ ವಾಪಸ್ಸಾಗುವ ಕಾರ್ಯಕ್ರಮ ಶಾಂತಿ, ಸೌಹಾರ್ದತೆಗೆ ಮಾರಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಮತಾಂತರ ನಿಷೇಧ ಕಾಯ್ದೆಗೆ ಕ್ರಿಶ್ಚಿಯನ್ ಸಮುದಾಯ ವಿರುದ್ಧವಾಗಿದೆ ಎಂದು ಬಿಷಪ್ ತಿಳಿಸಿದ್ದಾರೆ....
ನೂತನ ವರ್ಷಾರಂಭದಿಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಭಾರೀ ಕೆಲಸ ಮಾಡಲಿದೆ ಎಂಬುದು ಅಭಿಮತ ಸಮೀಕ್ಷೆಯ ಅಭಿಪ್ರಾಯ.
ಸಮೀಕ್ಷೆಯ ಪ್ರಕಾರ 70 ಸ್ಥಾನ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲು ಅವಶ್ಯವಿರುವ 45 ಸ್ಥಾನಗಳು...
'ದೆಹಲಿ'ಯ ಕೆಲವು ಮೆಟ್ರೊ ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಸಂಬಂಧ ರಚಿಸಲಾಗಿದ್ದ ಸಮಿತಿತ ಸಲಹೆಯಂತೆಯೇ ಮೆಟ್ರೋ ನಿಲ್ದಾಣವೊಂದಕ್ಕೆ ಕನ್ನಡಿಗ, ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ನಿರ್ಧರಿಸಲಾಗಿದೆ.
ದೆಹಲಿಯಲ್ಲಿರುವ ಮೋತಿ ಬಾಗ್ ಮೆಟ್ರೋ ರೈಲು ನಿಲ್ದಾಣ ಇನ್ನು ಮುಂದೆ ಸರ್.ಎಂ. ವಿಶ್ವೇಶ್ವರಯ್ಯ...
ಎಂ.ಎನ್.ಸಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿರುವ ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್ ನನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅತ್ಯಾಚಾರದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಶಿವಕುಮಾರ್ ಯಾದವ್ ನನ್ನು ಡಿ.11ರಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಮೂರ್ತಿ...
ಮಾಜಿ ಕೇಂದ್ರ ಸಚಿವ ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನವದೆಹಲಿಯಲ್ಲಿ ವಾಯುವಿಹಾರಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಶರದ್ ಪವಾರ್ ಅವರಿಗೆ ತೀವ್ರ ಗಾಯ ಉಂಟಾಗಿದ್ದು ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.
73 ವರ್ಷದ...
ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ.
ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ...
ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ.
ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...
ಫೆಬ್ರವರಿಯಲ್ಲಿ ನಡೆಯಬಹುದಾದ ದೆಹಲಿ ವಿಧಾನಸಭಾ ಚುನಾವಣೆಗೂ ಮೊದಲು ಪಕ್ಷದ ವ್ಯಾಪಾರಿಗಳ ವಿಭಾಗ ಆಯೋಜಿಸಿದ್ದ ಪಕ್ಷದ ನಿಧಿ ಸಂಗ್ರಹ ಔತಣಕೂಟದಲ್ಲಿ ಎಎಪಿ ಪಕ್ಷ 50 ಲಕ್ಷ ರೂ ಸಂಗ್ರಹಿಸಿದೆ.
ಬೇರೆ ರಾಜ್ಯಗಳಿಗಿಂತ ಮೌಲ್ಯಾಧಾರಿತ ತೆರಿಗೆ ಹೆಚ್ಚಿರುವ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಿ ವ್ಯಾಟ್ ಮೇಲೆ...
'ದೆಹಲಿ'ಯಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜುಗೊಳ್ಳುತ್ತಿರುವ ಬಿಜೆಪಿ ಈ ಬಾರಿ ವಿನೂತನವಾಗಿ ಪ್ರಣಾಳಿಕೆ ಬಿಡುಗಡೆ ಮಾಡಲು ಮುಂದಾಗಿದೆ.
ದೆಹಲಿ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಗರಸಭೆ(ಎನ್.ಡಿ.ಎಂ.ಸಿ)ಯಿಂದ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ಪಕ್ಷದ ಪ್ರಣಾಳಿಕೆ ತಯಾರು ಮಾಡಲು ಬಿಜೆಪಿ ನಿರ್ಧರಿಸಿದೆ. ಜನರ...
ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನ ಮಂತ್ರಿ ಸುಶೀಲ್ ಕೊಯಿರಾಲ ಬುಧವಾರ ಕಾಠ್ಮಂಡು-ದೆಹಲಿ ಬಸ್ ಸೇವೆ "ಪಶುಪತಿನಾಥ್ ಎಕ್ಸ್ ಪ್ರೆಸ್" ಗೆ ಚಾಲನೆ ನೀಡಿದ್ದಾರೆ.
ಹಸಿರು ನಿಶಾನೆ ತೋರುವುದಕ್ಕಿಂತಲೂ ಮುಂಚೆ ಬಲೂನುಗಳು ಮತ್ತು ಹೂಗಳಿಂದ ಅಲಂಕರಿಸಿದ ಬಸ್ಸಿನೊಳಕ್ಕೆ ಹೊಕ್ಕ ಇಬ್ಬರೂ ಪ್ರಧಾನಿಗಳು...
'ಕಲ್ಲಿದ್ದಲು ನಿಕ್ಷೇಪ ಹಂಚಿಕೆ' ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ದೆಹಲಿ ವಿಶೇಷ ನ್ಯಾಯಾಲಯ ಸಿಬಿಐನ್ನು ಪ್ರಶ್ನಿಸಿದೆ.
ಯುಪಿಎ ಸರ್ಕಾರದ ಬಹುಕೋಟಿ ಕಲ್ಲಿದ್ದಲು ಹಗರಣ ತನಿಖೆ ನಡೆಸುತ್ತಿರುವ ಸಿಬಿಐ, ಉದ್ಯಮಿ ಕೆ.ಎಂ....
ಭಾರತ ಎಂದಿಗೂ ಆಕ್ರಮಣಕಾರಿ ನಿಲುವು ತಳೆಯಲು ಬಯಸುವುದಿಲ್ಲ ಆದರೆ ಯಾವುದೇ ರಾಷ್ಟ್ರಗಳು ನಮ್ಮ ಮೇಲೆ ಆಕ್ರಮಣ ನಡೆಸುವ ಧೈರ್ಯ ಮಾಡಬಾರದು ಅಂತಹ ಭಾರತವನ್ನು ನಿರ್ಮಿಸುವುದಾಗಿ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಹೇಳಿದ್ದಾರೆ.
ನವದೆಹಲಿಯ ವಾಯುಪಡೆ ಕೇಂದ್ರದಲ್ಲಿ ಮಾತನಾಡಿದ ರಕ್ಷಣಾ ಸಚಿವರು,...
ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನು ಮಾನ್ಯತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ತನ್ನ ಪುತ್ರನನ್ನು ಮಸೀದಿಗೆ ಉತ್ತರಾಧಿಕಾರಿಯಾಗಿ ನೇಮಕ ಮಾಡುವುದನ್ನು ವಿರೋಧಿಸಿ ಕೋರ್ಟ್...
ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ಕೇಂದ್ರ ವಕ್ಫ್ ಬೋರ್ಡ್ ಹಾಗೂ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ.
ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್...
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ, ಯುವಕರನ್ನು ಸೆಳೆಯಲು ಭರಪೂರ ಭರವಸೆಗಳನ್ನು ನೀಡಿದೆ. ಜೊತೆಗೆ 5 ವರ್ಷ ಕೇಜ್ರಿವಾಲ್ ಎಂಬ ಹೊಸ ಧ್ಯೇಯಘೋಷವನ್ನೂ ಬಿಡುಗಡೆ ಮಾಡಿದೆ.
ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ...
'ದೆಹಲಿ' ವಿಧಾನಸಭೆ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ ಜನವರಿ/ಫ್ರೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ಆಮ್ ಆದ್ಮಿ ಪಕ್ಷಕ್ಕೆ ಸವಾಲು ಹಾಕಿದೆ.
ಭಾರತೀಯ ಆಮ್ ಆದ್ಮಿ ಪರಿವಾರ್(ಬಿ.ಎ.ಎ.ಪಿ) ಮೂಲಕ ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಎದುರಿಸಲು...
ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ತಿಳಿಸಿವೆ.
ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ 46 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಅಧಿಕಾರ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...
ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ.
ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....
'ದೆಹಲಿ' ವಿಧಾನಸಭೆ ವಿಸರ್ಜನೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 2015ಫೆಬ್ರವರಿ ವೇಳೆಗೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಸರ್ಕಾರ ರಚನೆ ಮಾಡಲು ಬಿಜೆಪಿ ನಿರಾಕರಿಸಿದ ಕಾರಣ ವಿಧಾನಸಭೆ ವಿಸರ್ಜಿಸುವಂತೆ ರಾಜ್ಯಪಾಲ ನಜೀಬ್ ಜಂಗ್ ಶಿಫಾರಸ್ಸು...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು ಶಾಸಕರ ಬಲ ಹೊಂದಿರುವ ಬಿಜೆಪಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಲೆಫ್ಟಿನೆಂಟ್ ಗೌರ್ನರ್ ನಜೀಂ ಜಂಗ್ ಗೆ ಸ್ಪಷ್ಟಪಡಿಸಿದೆ.
ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ನ.3ರಂದು ರಾಜ್ಯಪಾಲ ನಜೀಬ್ ಜಂಗ್ ಅವರು...
ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ.
ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್,...
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ...
'ದೆಹಲಿ'ಯಲ್ಲಿ ಮತ್ತೆ ಸರ್ಕಾರ ರಚನೆ ಕಸರತ್ತು ನಡೆಯಲಿದೆ. ಅತಂತ್ರ ರಾಜಕೀಯ ಸ್ಥಿತಿ ಎದುರಿಸುತ್ತಿರುವ ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವಂತೆ ಲೆಫ್ಟಿನೆಂಟ್ ಗೌರ್ನರ್ ಬಿಜೆಪಿಯನ್ನು ಆಹ್ವಾನಿಸಲಿದ್ದಾರೆ.
ಉನ್ನತ ಮೂಲಗಳ ಪ್ರಕಾರ, ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ಬಹುಮತವಿಲ್ಲದಿದ್ದರೂ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ...
ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...
ಅಧಿಕಾರಕ್ಕೆ ಬರುವ ಮುನ್ನ ಸರ್ಕಾರಿ ಬಂಗಲೆ, ಭದ್ರತೆ ಇತರ ಸೌಲಭ್ಯಗಳನ್ನು ತಿರಸ್ಕರಿಸುತ್ತೇನೆ, ಸಾಮಾನ್ಯನಂತೆ ಅಧಿಕಾರ ನಡೆಸುತ್ತೇನೆ ಎಂದು ಹೇಳಿದವರನ್ನು ನೋಡಿದ್ದೇವೆ. ಆದರೆ ಅಧಿಕಾರಕ್ಕೂ ಮುನ್ನ ಯಾವುದೇ ಆಶ್ವಾಸನೆ ನೀಡದೇ ಅಧಿಕಾರ ದೊರೆತ ಬಳಿಕ ಸಾಮಾನ್ಯ ವ್ಯಕ್ತಿಯಂತೆ ಇರುವವರಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ....
ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...
ಮಹಾರಾಷ್ಟ್ರ, ಹರ್ಯಾಣದ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ದೊರೆತ ಬೆನ್ನಲ್ಲೇ ದೆಹಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸುವಂತೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ.
ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿರುವ ಬಿಜೆಪಿಗೆ ದೆಹಲಿ ಚುನಾವಣೆ...
ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ.
ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...
ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ವೈದ್ಯಕೀಯ ವಿಜ್ಞಾನ ಅಖಿಲ ಭಾರತ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ.
ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಏಮ್ಸ್ ಹಣದ ಕೊರತೆ ಎದುರಿಸುತ್ತಿದೆ ಎಂದು ಸ್ವತಃ...
ಗಾಂಧಿ ಜಯಂತಿ ಅಂಗವಾಗಿ ಅತ್ತ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ್ದರೆ ಇತ್ತ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನಿವಾಸದ ಬಳಿಯೇ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ದೆಹಲಿಯಲ್ಲಿ ಪ್ರತ್ಯೇಕವಾಗಿ ಸ್ವಚ್ಛತಾ ಅಭಿಯಾನವನ್ನು ಕೈಗೊಂಡಿರುವ...
ಕಳೆದ ವಾರ ಜವಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಚುನಾವಣೆಯಲ್ಲಿ 4ಸ್ಥಾನಗಳನ್ನು ಗೆದ್ದಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ಇದೀಗ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಮೋದಿ ಮಾದರಿ ಅನುಸರಿಸಲು ನಿರ್ಧರಿಸಿದೆ.
ದೆಹಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘಟನೆಯ...
'ಆಮ್ ಆದ್ಮಿ ಪಕ್ಷ'ದ ನಾಯಕ ಅರವಿಂದ್ ಕೇಜ್ರಿವಾಲ್ ದೆಹಲಿ ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದಾರೆ.
ಪ್ರವಾಹ ಪರಿಸ್ಥಿತಿಯಲ್ಲಿರುವ ಜಮ್ಮು-ಕಾಶ್ಮೀರಕ್ಕೆ ಸಹಾಯ ಧನ ಕಳಿಸದಂತೆ ತಮ್ಮ ಪಕ್ಷ ಶಾಸಕರನ್ನು ದೆಹಲಿ ರಾಜ್ಯಪಾಲ ನಜೀಬ್ ಜಂಗ್ ತಡೆಯುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ....
ಸುಪ್ರೀಂ ಕೋರ್ಟ್ ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕಳ ನೀಡಿರುವ ಆರೋಪ ಕೇಳಿಬಂದಿದೆ.
ಹಿರಿಯ ವಕೀಲೆ ನಿಶಾ ಪ್ರಿಯಾ ಭಾಟಿಯಾ(51) ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮಗೆ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ಅವರ ಕಂಪನಿಗೆ ಅಕ್ರಮವಾಗಿ ನೀಡಲಾಗಿದ್ದ ಪರವಾನಗಿ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ಹರ್ಯಾಣದಲ್ಲಿ, ರಾಬರ್ಟ್ ವಾದ್ರ ಅವರದ್ದೂ ಸೇರಿದಂತೆ ಹಲವು ಡೆವಲಪರ್ ಹಾಗೂ ಬಿಲ್ಡರ್ಸ್...
'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ.
ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...
ದೆಹಲಿಯಲ್ಲಿ ತಮಗೆ ಸಿಎಂ ಆಗಲು ಬಿಜೆಪಿ ಆಫರ್ ನೀಡಿದೆ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್, ಈಗ ಅರವಿದ್ ಕೇಜ್ರಿವಾಲ್ ವಿರುದ್ಧವೇ ತಿರುಗಿಬಿದ್ದಿದ್ದಾರೆ.
ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಮೋದಿಯವರ ಜಪಾನ್...
ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಯಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ನಾಯರು, ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿದ್ದಾರೆ.
ಎ.ಎ.ಪಿ ನಾಯಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ, ದೆಹಲಿ...
ಜಮ್ಮು-ಕಾಶ್ಮೀರದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಪರಿಸ್ಥಿತಿ ತಹಬದಿಗೆ ಬಂದಿಲ್ಲ. ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಸೇನಾ ಕಾರ್ಯಾಚರಣೆ ಮುಂದುವರೆದಿದೆ.
ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸೇನಾ ಸಿಬ್ಬಂದಿಗಳು, ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ ಪೂಂಚ್ ಜಿಲ್ಲೆಯಲ್ಲಿ ವಾಹನ ಸಂಚಾರ ಸುಗಮವಾಗಲು...
'ಆಮ್ ಆದ್ಮಿ ಪಕ್ಷ' ಬಿಜೆಪಿ ವಿರುದ್ಧ ಬಿಡುಗಡೆ ಮಾಡಿರುವ ಸಿ.ಡಿಯಲ್ಲಿ ಬಿಜೆಪಿ ಮುಖಂಡ ಶೇರ್ ಸಿಂಗ್ ದಾಗರ್ ಕಾಣಿಸಿಕೊಂಡಿರುವುದರಿಂದ ಅವರಿಗೆ ಪಕ್ಷ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ದೆಹಲಿಯಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿ ಹಿರಿಯ ಮುಖಂಡರು ಆಪ್ ಶಾಸಕರಿಗೆ ಹಣದ...
ದೆಹಲಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ನಜೀಮ್ ಜಂಗ್ ಅವರನ್ನು ಭೇಟಿ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಗಾಜಿಯಾಬಾದ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ನಡೆಸಿದ್ದು,...
'ದೆಹಲಿ'ಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ ಆಪ್ ಪಕ್ಷದ ಶಾಸಕರನ್ನು ಖರೀದಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ.
ಆಮ್ ಆದ್ಮಿ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುತ್ತಿರುವ ವಿಡಿಯೋ ಒಂದನ್ನು ಆಪ್ ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಸರ್ಕಾರ ರಚನೆಗೆ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆಯ ಯತ್ನಕ್ಕೆ ಚಾಲನೆ ದೊರೆತಿದೆ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುವ ಸಾಧ್ಯತೆಯಿದೆ. ಆದರೆ ಆಮ್ ಆದ್ಮಿ ಪಕ್ಷ ಮರು ಚುನಾವಣೆಗೆ ಪಟ್ಟು ಹಿಡಿದಿದೆ.
ರಾಜಧಾನಿಯಲ್ಲಿ ಮರು ಚುನಾವಣೆ ಅಗತ್ಯವಿದೆ. ಮೈತ್ರಿ ಸರ್ಕಾರದಿಂದ ಭ್ರಷ್ಟಾಚಾರ...
ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ.
ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ...
ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಶಾಹದರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಏಕಾಏಕಿ 4 ಸುತ್ತಿನ ಗುಂಡಿನ ದಾಳಿ ನಡೆಸಿರುವುದು...
ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...
ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...
ಗೃಹ ಸಚಿವ ರಾಜನಾಥ್ ಸಿಂಗ್ ವಾಸಿಸುತ್ತಿರುವ ನಿವಾಸ ಭದ್ರತಾ ಗುಣಮಟ್ಟಕ್ಕೆ ಅನುಗುಣವಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.
ದೆಹಲಿ ಪೊಲೀಸ್ ಅಧಿಕಾರಿಗಳು, ಗುಪ್ತಚರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದ ಭದ್ರತಾ...
'ರಂಜಾನ್' ಉಪವಾಸದಲ್ಲಿದ್ದ ಕ್ಯಾಟರಿಂಗ್ ಮೇಲ್ವಿಚಾರಕನಿಗೆ ಚಪಾತಿ ತಿನ್ನಿಸಲೆತ್ನಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಆ.22ರಂದು ವಜಾಗೊಳಿಸಿದೆ.
ಬಲವಂತವಾಗಿ ಚಪಾತಿ ತಿನ್ನಿಸಲೆತ್ನಿಸುವ ಮೂಲಕ ಮಹಾರಾಷ್ಟ್ರ ಸದನದ ಮುಸ್ಲಿಂ ಸಿಬ್ಬಂದಿ ಉಪವಾಸಕ್ಕೆ ಅಡ್ಡಿಪಡಿಸಿದ್ದ 11 ಶಿವಸೇನೆ ಸಂಸದರನ್ನು ಅನರ್ಹಗೊಳಿಸಲು ಲೋಕಸಭೆ ಹಾಗೂ ರಾಜ್ಯಸಭಾಧ್ಯಕ್ಷರಿಗೆ ನಿರ್ದೇಶಿಸಬೇಕೆಂದು ಕೋರಿ...
ಪ್ರಪಂಚದಲ್ಲಿ ಬೇರೆ ವಿಜ್ನಾನಿಗಳಿಗಿಂತಲೂ ಭಾರತದ ವಿಜ್ನಾನಿಗಳು ಮುಂದಿರಬೇಕು. ಕಾಲಮಿತಿಗಿಂತಲೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸುವಂತಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಂಶೋಧಕರಿಗೆ ಕರೆ ನೀಡಿದ್ದಾರೆ.
ಪ್ರಪಂಚದ ಬೇರೆ ವಿಜ್ನಾನಿಗಳು ಅವರ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಭಾರತದ ಸಂಶೋಧಕರು ತಮ್ಮ ಕೆಲಸ ಮುಗಿಸಿರಬೇಕು, ಈ...
'ಮುಂಬೈ'ನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಮುಂಬೈ ನಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭದಲ್ಲಿ ಇಂಡಿಗೋ6-E 176 ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ವಿಮಾನದಲ್ಲಿದ್ದ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಎನ್.ಡಿ.ಎ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ. ಈ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್, ದಾವೂದ್ ಇಬ್ರಾಹಿಂ ನನ್ನು ಬಂಧಿಸಲಿದ್ದೇವೆ ಎಂದು ಹೇಳಿದ್ದಾರೆ.
ದಾವೂ ಇಬ್ರಾಹಿಂನನ್ನು ಬಂಧಿಸಲು...