Untitled Document
Sign Up | Login    
Dynamic website and Portals
  

Related News

ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೂ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ

ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೂ ಈ ಬಾರಿ ನಿಗಮ ಮಂಡಳಿಗಳಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಈ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರ ಜೊತೆ...

ನಿಗಮ-ಮಂಡಳಿಗಳಿಗೆ ನೇಮಕಾತಿ ಪಟ್ಟಿ ಅಂತಿಮ: ಸಿಎಂ ದೆಹಲಿಗೆ

ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್‌ ಒಪ್ಪಿಗೆ ಪಡೆಯಲು ಆ.22ರಂದು ದೆಹಲಿಗೆ ತೆರಳಲಿದ್ದಾರೆ. ಅಂತಿಮಗೊಂಡಿರುವ ಪಟ್ಟಿಯಲ್ಲಿ 20ರಿಂದ 25 ಶಾಸಕರು ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್‌ ಒಪ್ಪುವುದು ಖಚಿತವಿಲ್ಲದ ಕಾರಣ,...

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮರು ಮೌಲ್ಯಮಾಪನ : 19ಕ್ಕೆ ಸಂಪೂರ್ಣ ಫಲಿತಾಂಶ

ಈಗಾಗಲೇ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಜೂ.15ರಂದು, ದ್ವಿತೀಯ ಹಂತದಲ್ಲಿ ಜೂ.17 ಹಾಗೂ ಅಂತಿಮವಾಗಿ...

ಕೆ.ಪಿ.ಎಸ್.ಸಿ: ಸುದರ್ಶನ್‌ ನೇಮಕಕ್ಕೆ ಗವರ್ನರ್‌ ನಕಾರ-ಸರ್ಕಾರಕ್ಕೆ ಹಿನ್ನಡೆ

ಕೆ.ಪಿ.ಎಸ್‌.ಸಿ ಅಧ್ಯಕ್ಷರನ್ನಾಗಿ ವಿ.ಆರ್‌.ಸುದರ್ಶನ್‌ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಡೆಸಿದ ಸತತ ಪ್ರಯತ್ನ ವಿಫ‌ಲವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ಸರ್ಕಾರ ಮಾಡಿದ್ದ ಶಿಫಾರಸನ್ನು ಎರಡನೇ ಬಾರಿಯೂ ತಿರಸ್ಕರಿಸಿದ್ದಾರೆ. ಭೂ ಒತ್ತುವರಿ ಆರೋಪಕ್ಕೆ...

ಮುಖ್ಯಮಂತ್ರಿ ಕಚೇರಿ ದುರುಪಯೋಗ ಪ್ರಕರಣ: ದಿಗ್ವಿಜಯ್‌ಸಿಂಗ್ ವಿರುದ್ಧ ಎಫ್‌.ಐ.ಆರ್

ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌.ಐ.ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...

ಪರೀಕ್ಷಾ ಮಂಡಳಿ ಹಗರಣ: ಮಧ್ಯಪ್ರದೇಶ ರಾಜ್ಯಪಾಲರಿಗೆ ರಾಜೀನಾಮೆಗೆ ಸೂಚನೆ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ. ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್...

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್ ಸಿಂಗ್ ಗೆ ಪ್ರಧಾನಿ ಬುಲಾವ್

ಮಧ್ಯಪ್ರದೇಶದ ಪರೀಕ್ಷಾ ಮಂಡಳಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ, ಶಿವರಾಜ್ ಸಿಂಗ್ ರನ್ನು ಆಹ್ವಾನಿಸಿದ್ದು, ಇಂದು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲಿದ್ದಾರೆ. ಇದೇ...

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್‌ ಸಿಂಗ್‌ ಭಾಗಿ - ಕಾಂಗ್ರೆಸ್ ಆರೋಪ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ನೇಮಕಾತಿ ಹಗರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕೂಡಾ ಭಾಗಿಯಾಗಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವನ್ನು, ತನಿಖೆ ನಡೆಸಿದ್ದ ಎಸ್‌.ಟಿ.ಎಫ್ ಮಾಡಿದೆ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್‌ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...

ನೇಮಕಾತಿ ಪತ್ರ ಕಳಿಸಿದ್ದಕ್ಕೆ ಪಾಕ್ ಐ.ಎಸ್.ಐ ವಿರುದ್ಧ ದೂರು ದಾಖಲಿಸಿದರು!

ಇತ್ತೀಚೆಗಷ್ಟೆ ಪಾಕಿಸ್ತಾನದ ವಿರುದ್ಧ ಮೌಲ್ವಿಯೊಬ್ಬರು ತೀವ್ರ ವಾಗ್ದಾಳಿ ನಡೆಸಿ ಭಾರತ ಸರ್ಕಾರ ಪಾಕ್ ನಲ್ಲಿರುವ ಭಯೋತ್ಪಾದಕರ ನೆಲೆಯನ್ನು ಧ್ವಂಸಗೊಳಿಸಬೇಕೆಂದು ಹೇಳಿಕೆ ನೀಡಿದ್ದರು. ಇಂಥದ್ದೇ ಮತ್ತೊಂದು ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದಲ್ಲಿ ಇಸ್ಲಾಮಿಕ್ ಸಂಸ್ಥೆಯೊಂದನ್ನು ನಡೆಸುತ್ತಿರುವವರಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐ.ಎಸ್.ಐ...

ನಿಗಮ ಮಂಡಳಿ ಪಟ್ಟಿಯನ್ನು ಸೋನಿಯಾ ಗಾಂಧಿಗೆ ಸಲ್ಲಿಸುವಂತೆ ದಿಗ್ವಿಜಯ್ ತಾಕೀತು

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ. ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ...

ಪಕ್ಷ ಸಂಘಟನೆಗಾಗಿ ರಾಹುಲ್ ಸಭೆ: ಸಿಎಂ, ಪರಮೇಶ್ವರ್ ದೆಹಲಿಗೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...

ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ವಿಳಂಬ: ಸ್ಪೀಕರ್ ಅಸಮಾಧಾನ

ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...

ದಿಗ್ವಿಜಯ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...

ನಿಗಮ ಮಂಡಳಿ ನೇಮಕಕ್ಕೆ ದಿಗ್ವಿಜಯ್ ಸಿಂಗ್ ಗಡುವು

ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು. ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿಲ್ಲ: ಡಾ.ಪರಮೇಶ್ವರ್

ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮ

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...

ನಿಗಮ ಮಂಡಳಿ ನೇಮಕಾತಿ: 10ದಿನಗಳಲ್ಲಿ ಫಲಿತಾಂಶ ಸಾಧ್ಯತೆ

ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್...

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿದ್ದರಾಮಯ್ಯ ತರಾಟೆ

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ. ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...

ನಿಗಮ ಮಂಡಳಿ ನೇಮಕಾತಿ ವಿಚಾರ: ಕಾರ್ಯಕಾರಿ ಸಭೆ ಆರಂಭ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ...

ನಿಗಮ ಮಂಡಳಿ ನೇಮಕಾತಿ ವಿಚಾರ: ಮಾತುಕತೆ ವಿಫಲ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ. ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು. ನಿಗಮ ಮಂಡಳಿಗಳಿಗೆ ಮೊದಲ...

ಬಿಜೆಪಿ ನೂತನ ಸಂಘಟನಾ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಕಸರತ್ತು

ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಎಸ್.ಸಂತೋಷ್ ಅವರು ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ತೆರವಾದ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿದೆ. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ನಮೋ ಬ್ರಿಗೇಡ್ ನ ಮುಖಂಡ ಪ್ರದೀಪ್, ರಾಷ್ಟ್ರೀಯ ವಿದ್ಯಾರ್ಥಿ ಪರಿಷತ್...

ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ: ಅಭ್ಯರ್ಥಿಗಳಿಂದ ಕೋರ್ಟ್ ಗೆ ಅರ್ಜಿ

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆ.ಎ.ಟಿ)ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿ ಆದೇಶಹೊರಡಿಸಿರುವ ರಾಜ್ಯ ಸಚಿವ ಸಂಪುಟ ಸಭೆಯ ಕ್ರಮ ಖಂಡಿಸಿ, ಅಭ್ಯರ್ಥಿಗಳು 32ದಿನಗಳಿಂದ...

ಕೆಪಿಎಸ್ ಸಿ ನೇಮಕಾತಿ ರದ್ದು: ಬೃಹತ್ ಪ್ರತಿಭಟನಾ ರ್ಯಾಲಿ

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ. ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ...

ಕೊಲಿಜಿಯಂ ರದ್ದು ವಿಚಾರ: ನ್ಯಾಯಾಂಗದಲ್ಲಿ ಹಸ್ತಕ್ಷೇಪ-ನ್ಯಾ.ಲೋಧ

ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದ ಮಧ್ಯೆ ಪರಸ್ಪರ ಉತ್ತಮ ಗೌರವ ಭಾವನೆಯಿರಬೇಕು. ಸಂವಿಧಾನ, ಪ್ರತಿಯೊಂದು ಅಂಗಕ್ಕೂ ತನ್ನದೇ ಆದ ಸ್ವಾತಂತ್ರ್ಯ ನೀಡಿದೆ. ಒಂದು ಅಂಗ ಮತ್ತೊಂದರಲ್ಲಿ ಹಸ್ತಕ್ಷೇಪಮಾಡಬಾರದು ಎಂದು ಸಾರಿ ಹೇಳಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಆ.ಎಂ.ಲೋಧ ತಿಳಿಸಿದ್ದಾರೆ. ದೇಶದ ಉನ್ನತ...

ಕೆಪಿಎಸ್ ಸಿ ನೇಮಕಾತಿ ರದ್ದು: ಕಾನೂನು ಹೋರಾಟಕ್ಕೆ ಸಜ್ಜು

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....

ನ್ಯಾಯಾಂಗ ನೇಮಕ ಆಯೋಗ ವಿಧೇಯಕ: ನಾರಿಮನ್ ರಿಂದ ಸುಪ್ರೀಂ ಮೆಟ್ಟಿಲೇರಲು ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...

ಮಾಜಿ ಸಿ.ಎಂ ಕುಮಾರಸ್ವಾಮಿಗೆ ಮಾಜಿ ಸಂಸದ ವಿಶ್ವನಾಥ್ 13 ಪ್ರಶ್ನೆ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಹೆಚ್.ವಿಶ್ವನಾಥ್ 13 ಪ್ರಶ್ನೆಗಳನ್ನು ಕೇಳಿದ್ದಾರೆ. ಆಯ್ಕೆಯಾಗಿರುವ 362 ಅಭ್ಯರ್ಥಿಗಳ ಪೈಕಿ 127 ಅಭ್ಯರ್ಥಿಗಳು ಕುಮಾರಸ್ವಾಮಿ ಕಡೆಯವರು ಎಂಬ ಮಾಹಿತಿ...

ಸಿದ್ದರಾಮಯ್ಯರಿಂದ ಭ್ರಷ್ಟರಿಗೆ ಮಣೆ: ಹೆಚ್.ಡಿ.ಕೆ ಆರೋಪ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

'ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ' ಮಸೂದೆಗೆ ಆ.13ರಂದು ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಆರು ಸದಸ್ಯರ ಸಮಿತಿ ರಚನೆ ಸಂಬಂಧ ಮೋದಿ ನೇತೃತ್ವದ ಸರ್ಕಾರ ಸೋಮವಾರ ನ್ಯಾಯಾಂಗ ನೇಮಕಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಸುದೀರ್ಘ...

ನನ್ನ ದೂರವಾಣಿ ಸಂಭಾಷಣೆ ದಾಖಲೆ ಕಲೆ ಹಾಕಲು ಕುಮಾರಸ್ವಾಮಿ ಯಾರು?: ಡಾ.ಮೈತ್ರಿ

'ಕೆ.ಪಿ.ಎಸ್.ಸಿ' ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕೆ.ಪಿ.ಎಸ್.ಸಿ ಅಭ್ಯರ್ಥಿ ಡಾ.ಮೈತ್ರಿ ಎಚ್ಚರಿಸಿದ್ದಾರೆ. ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಪ್ರತಿಭಟನೆ...

ಕೆಪಿಎಸ್ ಸಿ ನೇಮಕಾತಿ ರದ್ದು: ಸಿದ್ದರಾಮಯ್ಯಗೆ ಹೆಚ್.ಡಿ.ಕೆ 12 ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...

ಕೆಪಿಎಸ್ ಸಿ ಹಗರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾ.ವಘೇಲಾ ಹಿಂದೆ ಸರಿದಿದ್ದಾರೆ. 1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಆದರೆ ಹೈಕೋರ್ಟ್...

ಕೆ.ಪಿ.ಎಸ್.ಸಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ, ಎ.ಜಿ ರಾಜೀನಾಮೆಗೆ ಹೆಚ್.ಡಿ.ಕೆ ಒತ್ತಾಯ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತ, ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.ಜಿ ರವಿವರ್ಮ ಕುಮಾರ್...

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಅಕ್ರಮವೆಸಗಿಲ್ಲ: ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...

ಕೆಪಿಎಸ್ಸಿ ನೇಮಕಾತಿ ರದ್ದು ನಿರ್ಧಾರ ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ-ಅನಂತ್ ಕುಮಾರ್

ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ) 2011ನೇ ಸಾಲಿನ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ಖಂಡಿಸಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ಕ್ರಮ, ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ. ಆ.10ರಂದು...

ಹೆಚ್.ಡಿ.ಕೆ ಭ್ರಷ್ಟಾಚಾರದ ಪರವೋ, ವಿರುದ್ಧವೋ: ಸಿದ್ದರಾಮಯ್ಯ ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟ್ಚಾರದ ಪರವೋ ವಿರುದ್ಧವೋ ಎಮ್ಬುದನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಪರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. 2011ರಲ್ಲಿ ಆಯ್ಕೆಯಾದ 362 ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿ,...

ಕೆಪಿಎಸ್ ಸಿ ನೇಮಕಾತಿ ರದ್ದು ಸಮರ್ಥಿಸಿಕೊಂಡ ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹ ಆರಂಭ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳ ಪರ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೆಪಿಎಸ್ ಸಿ...

2011ರ ಕೆಪಿಎಸ್ ಸಿ ನೇಮಕಾತಿ ರದ್ದು: ಸಂಪುಟ ಸಭೆಯಲ್ಲಿ ನಿರ್ಧಾರ

2011ರ ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ನೇಮಕಾತಿಯನ್ನು ರದ್ದು ಪಡಿಸಿ ರಾಜ್ಯ ಸಚಿವ ಸಂಪುಟ ಸಭೆ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2011ನೇ ಸಾಲಿನ ಕೆಪಿಎಸ್...

ಕೆಪಿಎಸ್ ಸಿ ನೇಮಕಾತಿ ರದ್ದು: ಸರ್ಕಾರದ ನಿರ್ಧಾರಕ್ಕೆ ಹೆಚ್.ಡಿ.ಕೆ ಆಕ್ರೋಶ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿ ರಾಜ್ಯ ಸರ್ಕಾರ ದೊಡ್ಡ ಪ್ರಮಾದ ಮಾಡಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 2011ರ 362 ಅಭ್ಯರ್ಥಿಗಳ ಆಯ್ಕೆಯನ್ನು ರದ್ದು ಮಾಡಿ ಸರ್ಕಾರ ಘೋರ...

ತಾಕತ್ ಇದ್ದರೆ ಸಿದ್ದರಾಮಯ್ಯ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ: ಅಭ್ಯರ್ಥಿಗಳ ಸವಾಲು

2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited