ಪಾಕಿಸ್ತಾನದ ಉದ್ಧಟತನಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ಉಭಯ ದೇಶಗಳ ರಾಷ್ಟ್ರೀಯ ರಕ್ಷಣಾ ಸಲಹೆಗಾರರ (ಎನ್.ಎಸ್.ಎ.) ಮಾತುಕತೆಗೆ ಮೊದಲು ಕಾಶ್ಮೀರಿ ಪ್ರತ್ಯೇಕತಾವಾದಿಗಳನ್ನು ಪಾಕ್ ಎನ್.ಎಸ್.ಎ. ಸರ್ತಾಜ್ ಅಝಿಝ್ ಜೊತೆಗೆ ಮಾತುಕತೆಗೆ ಅಹ್ವಾನಿಸಿರುವ ಹಿನ್ನಲೆಯಲ್ಲಿ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ ಸರಕಾರ ಪ್ರತ್ಯೇಕತಾವಾದಿಗಳನ್ನು...
ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ವಿರೋಧಿಸಿ ಶನಿವಾರ ಜು. 18 ರಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಮತ್ತು ಐಸಿಸ್ ಧ್ವಜ ಪ್ರದರ್ಶಿಸಲಾಯಿತು.
ಗಿಲಾನಿ ಮತ್ತು ಇತರ ಪ್ರತ್ಯೇಕತಾವಾದಿ ನಾಯಕರನ್ನು ನಗರದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ....
ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿಯನ್ನು ಶನಿವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ.
ಜೂನ್ 14ರ ಭಾರತ ವಿರೋಧಿ ಸಭೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳು ಹೇಳಿವೆ.
ಭಾರತ ವಿರೋಧಿ,...
ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ಹುರಿಯತ್ ನಾಯಕ ಸೈಯದ್ ಅಲಿ ಶಾ ಗೀಲಾನಿ ಪಾಸ್ ಪೋರ್ಟ್ ಪಡೆಯುವ ಸಲುವಾಗಿ ಪಾಸ್ ಪೋರ್ಟ್ ಅಧಿಕಾರಿಗಳ ಮುಂದೆ ಹಾಜರಾಗಿ ತಾನು ಭಾರತೀಯ ಎಂದು ಘೋಷಿಸಿಕೊಂಡಿದ್ದಾನೆ.
ಪಾಸ್ ಪೋರ್ಟ್ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಿ ಹೊರಬಂದೊಡನೆಯೇ ಮಾತನಾಅಡಿದ ಗಿಲಾನಿ, ಬೇರೆ ಉಪಾಯವಿಲ್ಲದೆ,...
ಪಾಕಿಸ್ತಾನದ ಧ್ವಜ ಹಾರಿಸುವುದು ಅಪರಾಧವಲ್ಲ ಎಂದು ಪ್ರತ್ಯೇಕತಾವಾದಿ ಪಕ್ಷವಾದ ಹುರಿಯತ್ ಕಾನ್ಫರೆನ್ಸ್ ಈಗ ಹೊಸ ವರಸೆ ಆರಂಭಿಸಿದೆ.
ಇತ್ತೀಚೆಗೆ ಪ್ರತ್ಯೇಕತಾವಾದಿ ನಾಯಕರಾದ ಸಯ್ಯದ್ ಅಲಿ ಶಾ ಗಿಲಾನಿ ಮತ್ತು ಮಸರತ್ ಆಲಂನ ರ್ಯಾಲಿಗಳಲ್ಲಿ ಪಾಕ್ ಧ್ವಜಗಳು ರಾರಾಜಿಸಿದ ಬೆನ್ನಲ್ಲೇ ಹುರಿಯತ್ ಈ...
'ಕಾಶ್ಮೀರಿ ಪಂಡಿತ'ರಿಗೆ ಪುನರ್ವಸತಿ ಕಲ್ಪಿಸುವ ಯೋಜನೆ ಬಗ್ಗೆ ಪಾಕಿಸ್ತಾನದ ನಿಲುವನ್ನು ಭಾರತ ಸರ್ಕಾರ ಖಂಡಿಸಿದೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಿದರೆ, ಜನಸಂಖ್ಯೆಯಲ್ಲಿ ವ್ಯತ್ಯಯವಾಗುವುದರಿಂದ ವಿಶ್ವಸಂಸ್ಥೆ ನಿರ್ಣಯಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಪಾಕಿಸ್ತಾನ ಅಭಿಪ್ರಾಯಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ...
ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಧ್ವಜ ಹಾರಾಡಿದೆ. ಮೇ.1ರಂದು ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಶಾ ಗಿಲಾನಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಬಾವುಟ ಪ್ರದರ್ಶಿಸಿದ್ದಾರೆ.
ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್ ಅಲಿ ಶಾ ಗಿಲಾನಿ, ಕಾಶ್ಮೀರದಲ್ಲಿ ನಡೆಯುವ ಪ್ರಸಿದ್ಧ...
'ಪಾಕಿಸ್ತಾನ'ದ ಮಾನವ ಹಕ್ಕುಗಳ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲೂಚೀಸ್ಥಾನದ ಪ್ರದೇಶದಲ್ಲಿ ಈ ಕೃತ್ಯ ನಡೆಸಲಾಗಿದೆ.
ಸಬೀನ್ ಮಹಮೂದ್ ಹತ್ಯೆಗೀಡಾಗಿರುವ ಮಾನವಹಕ್ಕುಗಳ ಕಾರ್ಯಕರ್ತೆಯಾಗಿದ್ದು, ಕರಾಚಿಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾನವ ಹಕ್ಕುಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರಬೇಕಾದರೆ ಶಸ್ತ್ರಧಾರಿಗಳ ಗುಂಪು...
'ಕಾಶ್ಮೀರ'ದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದ ಬೆನ್ನಲ್ಲೇ ಓವೈಸಿ ಸಹೋದರರ ವಿರುದ್ಧ ಶಿವಸೇನೆ ಗಂಭೀರ ಆರೋಪ ಮಾಡಿದೆ. ಮಹಾರಾಷ್ಟ್ರದಲ್ಲೂ ಓವೈಸಿ ಸಹೋದರರು, ಪಾಕಿಸ್ತಾನದ ಧ್ವಜಾರೋಹಣ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.
ಶಿವಸೇನೆ ಮುಖವಾಣಿ, ಸಾಮ್ನಾದಲ್ಲಿ ಓವೈಸಿ ಸಹೋದರರ ವಿರುದ್ಧ ವಾಗ್ದಾಳಿ...
'ಕಾಶ್ಮೀರ' ವಿವಾದಕ್ಕೆ ಸಂಬಂಧಿಸಿದಂತೆ ಉಗ್ರ ಹಫೀಜ್ ಸಯೀದ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಸೇನೆಗೆ ತನ್ನ ಜಮಾತ್-ಉದ್-ದವಾ ಉಗ್ರ ಸಂಘಟನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾನೆ.
ಪಾಕಿಸ್ತಾನದ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿರುವ ಉಗ್ರ ಸಯೀದ್, ಕಾಶ್ಮೀರದಲ್ಲಿ ಸ್ವಾತಂತ್ರ್ಯವನ್ನು ಬಯಸುತ್ತಿರುವ ಲಕ್ಷಾಂತರ ಮಂದಿ...
'ಜಮ್ಮು-ಕಾಶ್ಮೀರ'ದ ನರ್ಬಾಲ್ ಎಂಬ ಪ್ರದೇಶದಲ್ಲಿ ಪೊಲೀಸರು ಗುಂಡು ಹಾರಿಸಿರುವ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕಳೆದ ವಾರ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿ ಸೇನಾ ಪಡೆ ಗುಂಡಿಗೆ ಇಬ್ಬರು ಯುವಕರು ಬಲಿಯಾದ ಹಿನ್ನೆಲೆಯಲ್ಲಿ ಕೆಲ ಯುವಕರು ಪ್ರತಿಭಟನೆ ನಡೆಸುತ್ತಿದ್ದರು....
'ಕಾಶ್ಮೀರ'ದಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ನನ್ನು ಪೊಲೀಸರು ಬಂಧಿಸಿದ್ದಾರೆ.
ಏ.16ರಂದು ರಾತ್ರಿ ಶ್ರೀನಗರದ ಜೈಂದಾರ್ ಏರಿಯಾದಲ್ಲಿ ಮಸರತ್ ಆಲಂ ಹಾಗೂ ಸಯೀದ್ ಅಲಿ ಗಿಲಾನಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಏ.17ರಂದು ಬೆಳಿಗ್ಗೆ ಮಸರತ್ ಆಲಂ...
ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೊಸ ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ, ಇಡೀ ದೇಶವೇ ಶಪಿಸುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ನನ್ನು ಸಾಹೇಬ್ ಎಂದು ಗೌರವದಿಂದ ಸಂಬೋಧಿಸುವ ಮೂಲಕ ದಿಗ್ವಿಜಯ್ ಸಿಂಗ್...
'ಕಾಶ್ಮೀರ' ಪ್ರತ್ಯೇಕತಾವಾದಿ ಮಸರತ್ ಆಲಂನನ್ನು ಬಂಧಿಸಿರುವುದನ್ನು ವಿರೋಧಿಸಿ ಆಲಂ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಇನ್ನೊಬ್ಬ ಪ್ರತ್ಯೇಕತವಾದಿ ಸಯೀದ್ ಅಲಿ ಗಿಲಾನಿ ಏ.15ರಂದು ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿ ಮಸರತ್ ಆಲಂ, ಪಾಕಿಸ್ತಾನದ ಧ್ವಜ ಹಾರಿಸಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ...
'ಕಾಶ್ಮೀರ'ದಲ್ಲಿ ದೇಶವಿರೋಧಿ ರ್ಯಾಲಿ ನಡೆಸಿ ಬಂಧನಕ್ಕೊಳಗಾಗುತ್ತಿದ್ದರೂ ಪ್ರತ್ಯೇಕತಾವಾದಿಗಳ ಸೊಕ್ಕು ಕಡಿಮೆಯಾಗಿಲ್ಲ.
ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಾರೋಹಣ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ, ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನ ಧ್ವಜಾರೋಣ ಮಾಡುವುದಾಗಿ ತಿಳಿಸಿದ್ದಾರೆ.
ಪಾಕಿಸ್ತಾನ ಧ್ವಜಾರೋಹಣ ಮಾಡಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ...
ಭಾರತ ವಿರೋಧಿ, ಪ್ರತ್ಯೇಕತಾವಾದಿ ಮಸರತ್ ಆಲಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಗೆ ಸೂಚಿಸಿದ್ದಾರೆ.
ರಾಷ್ಟ್ರದ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ದೂರವಾಣಿ...
'ಕಾಶ್ಮೀರ' ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿರುವ ಜಮ್ಮು-ಕಾಶ್ಮೀರದ ಜನತೆ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಜನಾಥ್ ಸಿಂಗ್...
ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪ್ರತ್ಯೇಕತಾವಾದಿ ಮುಖಂಡರಾದ ಮಸರತ್ ಆಲಂ ಹಾಗೂ ಯಾಸಿನ್ ಮಲಿಕ್ ರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ನಾಯಕರು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪುಲ್ವಾಮಾ ಜಿಲ್ಲೆಯ...
'ಕಾಶ್ಮೀರ ಪ್ರತ್ಯೇಕತಾವಾದಿ' ಯಾಸೀನ್ ಮಲೀಕ್ ನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಯಾಸೀನ್ ಮಲೀಕ್ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು...
'ಕಾಶ್ಮೀರಿ ಪಂಡಿತ'ರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪ್ರತ್ಯೇಕತಾವಾದಿಗಳ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಉಲ್ಟಾ ಹೊಡೆದಿದ್ದಾರೆ.
ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಫ್ತಿ ಮೊಹಮದ್ ಸಯೀದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ...
'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಸಿ.ಎಂ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರು ವಿರೋಧ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ.
ಕಾಶ್ಮೀರಿ ಪಂಡಿತರಿಗಾಗಿ ಟೌನ್ ಶಿಪ್ ಮಾಡಲು ಸರ್ಕಾರ ಜಾಗ...
ದುಖ್ತರನ್-ಎ-ಮಿಲ್ಲತ್ ಅಧ್ಯಕ್ಷೆ, ಕಾಶ್ಮೀರ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿ ವಿರುದ್ಧ ಪಾಕಿಸ್ತಾನ ಧ್ವಜಾರೋಹಣೆ ಮಾಡಿರುವ ಆರೋಪ ಕೇಳಿಬಂದಿದ್ದು, ಎಫ್.ಐ.ಆರ್ ದಾಖಲಿಸಲಾಗಿದೆ.
ಮಾ.23ರಂದು ನಡೆದ ಪಾಕಿಸ್ತಾನ ದಿನಾಚರಣೆ ಸಂದರ್ಭದಲ್ಲಿ ನವದೆಹಲಿಯಲ್ಲಿ ಆಸಿಯಾ ಅಂದ್ರಾಬಿ ಪಾಕಿಸ್ತಾನ ಧ್ವಜಾರೋಹಣೆ ಮಾಡಿದ್ದರು. ಅಲ್ಲದೇ ಪಾಕ್ ನ ರಾಷ್ಟ್ರಗೀತೆನ್ನೂ ಕಾರ್ಯಕ್ರಮದಲ್ಲಿ...
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆಯಾಗಲೀ ಹಿಂಸೆಯಾಗಲೀ ಇಲ್ಲವೇ ಇಲ್ಲ; ಇರುವುದಾದರೆ ಅದು ಸರ್ಕಾರ ಪ್ರವರ್ತಿತ ಭಯೋತ್ಪಾದನೆ ಮಾತ್ರ ಎಂದು ಪ್ರತ್ಯೇಕತಾವಾದಿ ಹುರಿಯತ್ ನಾಯಕ ಸೈಯದ್ ಅಲಿ ಶಾ ಗೀಲಾನಿ ಹೇಳಿದ್ದಾರೆ.
ಪಾಕಿಸ್ಥಾನದ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ಪ್ರಧಾನಿ...
ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸೀತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ-ಪಾಕಿಸ್ತಾನ ಪ್ರಧಾನಿಗಳ ಉದ್ದೇಶ ಒಂದೇ ಆಗಿದ್ದು, ಉಭಯ ದೇಶಗಳ ನಡುವಿನ ಮಾತುಕತೆ ಮುಂದುವರೆಸಲು ಇದು ಸೂಕ್ತ ಸಮಯ ಎಂದು ಬಸೀತ್...
ನವದೆಹಲಿಯಲ್ಲಿ ಪಾಕಿಸ್ತಾನ ದಿನಾಚರಣೆ ಆಚರಿಸುವುದಕ್ಕೆ ಪಕ್ಷಾತೀತವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನ ಹೈಕಮಿಷನರ್ ಇಂದ ಆಹ್ವಾನ ಪಡೆದಿರುವ ಕೇಂದ್ರ ಸರ್ಕಾರದ ಸಚಿವರು ಪಾಕಿಸ್ತಾನ ದಿನಾಚರಣೆಯಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿದೇಶಾಂಗ ಕಾರ್ಯದರ್ಶಿ ಜೈಶಂಕರ್, ಕೇಂದ್ರ ಗೃಹ...
ಜಮ್ಮು-ಕಾಶ್ಮೀರ ಸರ್ಕಾರ ಪ್ರತ್ಯೇಕತಾವಾದಿಗಳ ಪರವಾಗಿರುವುದು ಆಡಳಿತಾರೂಢ ಮೈತ್ರಿಪಕ್ಷವಾಗಿರುವ ಬಿಜೆಪಿಗೆ ತ್ರಿಶಂಕು ಸ್ಥಿತಿಯನ್ನು ತಂದೊಡ್ಡಿದ್ದು, ಇದೀಗ ಕಾಶ್ಮೀರ ವಿವಾದ ಬಗೆಹರಿಯದಿದ್ದರೆ ಕಣಿವೆ ರಾಜ್ಯದಲ್ಲಿ ಪಿಡಿಪಿ ಜೊತೆಗಿನ ಮೈತ್ರಿ ಕಡಿದುಕೊಳ್ಳುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.
ದೇಶದ ಹಿತಾಸಕ್ತಿ ವಿಚಾರದಲ್ಲಿ ಪಕ್ಷ...
'ಕಾಶ್ಮೀರ' ಪ್ರತ್ಯೇಕತಾವಾದಿಗಳು ಮಾ.23ರಂದು ದೆಹಲಿಯಲ್ಲಿ ಪಾಕಿಸ್ತಾನ ದಿನವನ್ನು ಆಚರಿಸಲಿದ್ದಾರೆ.
ನವದೆಹಲಿಯಲ್ಲಿರುವ ಚಾಣಕ್ಯಪುರಿಯಲ್ಲಿನ ಪಾಕಿಸ್ತಾನ ಹೈಕಮಿಷನ್ ನಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಗಣತಂತ್ರ ದಿನವನ್ನು ಆಚರಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಪಾಕ್ ನ ರಾಯಭಾರಿ ಅಬ್ದುಲ್ ಬಸಿತ್, ಕಾಶ್ಮೀರ ಪ್ರತ್ಯೇಕತಾವಾದಿ ಸಯೀದ್ ಶಾ...
ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆ ಮಾಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿರುವಾಗಲೇ, ಜಮ್ಮು-ಕಾಶ್ಮೀರ ಒಂದು ವಿವಾದಿತ ಪ್ರದೇಶವಾಗಿದ್ದು, ಭಾರತದ ಭಾಗವಲ್ಲ ಎಂದು ಪ್ರತ್ಯೇಕತಾವಾದಿ ಮುಖಂಡ ಸೈಯ್ಯದ್ ಅಲಿ ಷಾ ಗಿಲಾನಿ ವಿವಾದಿತ ಹೇಳಿಕೆ ನೀಡಿದ್ದಾರೆ.
ಕಾಶ್ಮೀರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ರಾಜ್ಯದಲ್ಲಿ ಯಾವುದೇ...
ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೇ ಜಮ್ಮು-ಕಾಶ್ಮೀರದ...
ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ, ಸರ್ಕಾರಕ್ಕೆ ಸವಾಲು ಹಾಕಿದ್ದು, ಕೇಂದ್ರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳಿಗೆ ತಲೆನೋವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.
ತನ್ನನ್ನು ನಿಜವಾದ ಪ್ರತ್ಯೇಕತಾವಾದಿ ನಾಯಕ ಎಂದು ಹೇಳಿಕೊಂಡಿರುವ ಮಸ್ರತ್ ಆಲಂ, ಜನಾಭಿಪ್ರಾಯ ಸಂಗ್ರಹಣೆ ಮೂಲಕ ತನ್ನ...
ಬಿಜೆಪಿ ಆದ್ಯತೆ ದೇಶದ ಭದ್ರತೆ ಹೊರತು ಜಮ್ಮು-ಕಾಶ್ಮೀರ ಸರ್ಕಾರದ ಜೊತೆಗಿನ ಮೈತ್ರಿಕೂಟಕ್ಕೆ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಕುರಿತಂತೆ ...
ದೇಶದ ಅಖಂಡತೆ-ಏಕತೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಪ್ರತ್ಯೇಕತಾವಾದಿಗಳ ವಿರುದ್ಧ ನಮ್ಮೆಲ್ಲರ ಧ್ವನಿಯೂ ಒಂದೇ ಆಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಪ್ರತ್ಯೇಕತಾವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ವಿವಾದ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಈ ಕುರಿತು ಪ್ರಧಾನಿ...
2010ರಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಭಾರತ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸಿ, 112 ಯುವಕರ ಸಾವಿಗೆ ಕಾರಣನಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂನನ್ನು ಜಮ್ಮು-ಕಾಶ್ಮೀರ ಸರ್ಕಾರ ಬಂಧಮುಕ್ತಗೊಳಿಸಿದೆ. ಇದರಿಂದ ಬಿಜೆಪಿ ಮತ್ತೂಮ್ಮೆ ಮುಜುಗರ ಅನುಭವಿಸುವಂತಾಗಿದೆ.
ಮುಸ್ಲಿಂ ಲೀಗ್ ಮುಖ್ಯಸ್ಥ, ಹುರಿಯತ್...
ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪಾಕಿಸ್ತಾನಿ ಪರ ಪ್ರತ್ಯೇಕತವಾದಿ ನಾಯಕ ಮಸರತ್ ಆಲಂ ಬಾರಮುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಜಮ್ಮು ಕಾಶ್ಮೀರ ಸರ್ಕಾರದ ಈ ನಡೆಗೆ ಆರ್ ಎಸ್ಎಸ್ ಕಿಡಿಕಾರಿದೆ.
ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ರಾಜಕೀಯ ಕೈದಿಗಳ ಬಿಡುಗಡೆ ಆದೇಶದ...
ಜಮು-ಕಾಶ್ಮೀರ ಶತಮಾನದ ಪ್ರವಾಹ ಪರಿಸ್ಥಿತಿಯಿಂದ ನಲುಗಿ ಹೋಗಿದ್ದರೂ, ತಮ್ಮ ಸಣ್ಣತನದ ಮೂಲಕ ಪ್ರತ್ಯೇಕತಾವಾದಿ ಮುಖಂಡರು ಭಾರತೀಯ ಸೇನೆ ನಡೆಸುತ್ತಿರುವ ಪರಿಹಾರ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ.
ಪ್ರತ್ಯೇಕತಾವಾದಿ ನಾಯಕ, ಜಮು-ಕಾಶ್ಮೀರ ಮುಕ್ತಿ ರಂಗ (ಜೆಕೆ ಎಲ್ ಎಫ್) ಮುಖಂಡ ಯಾಸಿನ್ ಮಲಿಕ್, ತನ್ನ ಕೆಲ ಸಹವರ್ತಿಗಳೊಂದಿಗೆ...
ಕಾಶ್ಮೀರ ಪ್ರತ್ಯೇಕತಾವಾದಿಗಳ ಜತೆ ಮಾತುಕತೆ ನಡೆಸುವುದು ನಮ್ಮ ಹಕ್ಕು. ನಾವು ಅದನ್ನು ಮುಂದುವರೆಸುತ್ತೇವೆ ಎಂದು ಪಾಕಿಸ್ತಾನ ವಿದೇಶಾಂಗ ವಕ್ತಾರೆ ತಸ್ಲೀಂ ಅಸ್ಲಾಂ ತಿಳಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿರುವ ಅವರು ಕಾಶ್ಮೀರಿ ಪ್ರತ್ಯೇಕತಾವಾದಿಗಳೊಂದಿಗಿನ ಚರ್ಚೆ ಇದೇ ಮೊದಲಲ್ಲ, ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಅವರೊಂದಿಗೆ ಚರ್ಚೆ ನಡೆಸುವುದು...
ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆಗಳಿಂದ ಮಾತ್ರ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರತ್ಯೇಕತಾವಾದಿ ಸಂಘಟನೆಯ ನಾಯಕ ಶಬ್ಬೀರ್ ಅಹ್ಮದ್ ಷಾ ಅಭಿಪ್ರಾಯ ಪಟ್ಟಿದ್ದಾರೆ.
ಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಪ್ರಮುಖವಾಗಿ ಕಾಶ್ಮೀರದ ಜನತೆ ಇದರಲ್ಲಿ ಪಾತ್ರವಹಿಸಬೇಕು. ಭಾರತ-ಪಾಕಿಸ್ತಾನ ನಡುವೆ ಮಾತುಕತೆಗಳು ನಡೆಯುವುದನ್ನು...