ಎರಡು ದಿನದ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಸಂಜೆ ದುಬೈ ಕ್ರಿಕೇಟ್ ಸ್ಟೇಡಿಯಂನಲ್ಲಿ 5000 ಭಾರತೀಯರನ್ನುದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖ ಅಂಶಗಳು ಃ
* ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಪ್ರಧಾನಿ...
ಕಳೆದ ಕೆಲ ದಿನಗಳಿಂದ ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿಯೇ ಬಂಡೆದಿದ್ದ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ನಾಲ್ವರು ನಾಯಕರನ್ನು ಆಮ್ ಆದ್ಮಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದರಿಂದ ಆಪ್ ನಲ್ಲಿ ಎದ್ದಿದ್ದ ಆಂತರಿಕ ಕಲಹ ತಾರಕಕ್ಕೇರಿದೆ.
ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ...
ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ವಿರುದ್ಧ ಆಮ್ ಆದ್ಮಿ ಪಕ್ಷ ಕ್ರಮ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ ಇಬ್ಬರು ನಾಯಕರನ್ನು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಛಾಟನೆ...
ಆಮ್ ಆದ್ಮಿ ಪಕ್ಷದಲ್ಲಿನ ಬಂಡಾಯ ತಣಿಸಲು ಭಿನ್ನಮತೀಯ ನಾಯಕರಾದ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಬಣ ಮತ್ತು ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಬಣದ ಮಧ್ಯೆ ನಡೆದ ಸಂಧಾನ ಮಾತುಕತೆಗಳು ಮುರಿದು ಬಿದ್ದಿವೆ.
ಸಭೆಯ ಬಳಿಕ ಕೇಜ್ರಿವಾಲ್ ಗೆ ಪತ್ರ ಬರೆದಿರುವ ಯಾದವ್...
ಆಮ್ ಆದ್ಮಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ನಾಯಕ ಪ್ರಶಾಂತ್ ಭೂಷಣ್ ಅವರು ಬುಧವಾರ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ.
ಭಿನ್ನಾಭಿಪ್ರಾಯ ಶಮನಕ್ಕಾಗಿ ಮಾ.17ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ವಿರುದ್ಧವೇ ಬಂಡಾಯವೆದ್ದಿದ್ದ ಪ್ರಶಾಂತ್ ಭೂಷಣ್ ಹಾಗೂ ಯೇಗೇಂದ್ರ ಯಾದವ್...
ಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಕಾರಣಕ್ಕೆ ತಮ್ಮನ್ನು ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾಗೊಳಿಸ ಬಹುದು ಎಂಬ ವರದಿಗಳ ಬೆನ್ನಲ್ಲೇ ಹಿರಿಯ ಮುಖಂಡರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಮೆತ್ತಗಾಗಿದ್ದಾರೆ.
ಈ ನಡುವೆ ಇಬ್ಬರೂ ಭಿನ್ನಮತೀಯ ನಾಯಕರು...
ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಮಾಂಝಿ ಮಾಡಿರುವುದು ಬಂಡಾಯವಲ್ಲ, ವಂಚನೆ ಎಂದು ತಿರುಗೇಟು ನೀಡಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ನಾನು ಯಾರ ಕೈಗೊಂಬೆಯೂ ಅಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡು ಹಿರಿಯ ನಾಯಕಿ ಜಯಂತಿ ನಟರಾಜನ್ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಪಕ್ಷದ ವಿರುದ್ಧ ರ್ಯಾಲಿ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ತಾವು ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರದಿದ್ದರೆ, ರಾಜ್ಯ...