ಭಾರತಕ್ಕೆ 3 ದಿನಗಳ ಭೇಟಿ ನೀಡುತ್ತಿರುವ ಶ್ರೀಲಂಕಾದ ನೂತನ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಹೇಳಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ತಮ್ಮ ಪ್ರಥಮ...
ಭಾರತ-ಪಾಕ್ ಸಂಬಂಧಗಳ ಸುಧಾರಣೆ ಬಗ್ಗೆ ಚರ್ಚಿಸಲು ಭಾರತ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ.
ಇದೇ ತಿಂಗಳಲ್ಲಿ ಆರಂಭಗೊಳ್ಳಲಿರುವ ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಿಗೆ ಶುಭಾಶಯ ಕೋರಲು ಪಾಕ್ ಪ್ರಧಾನಿಗೆ ದೂರವಾಣಿ...
'ಶ್ರೀಲಂಕಾ', ಭಾರತದ 37 ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ 'ಜಲಗಡಿ' ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿದ ಹಿನ್ನೆಲೆಯಲ್ಲಿ ಮೀನುಗಾರರನ್ನು ಬಂಧಿಸಿದೆ.
ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಲಂಕಾ ಗಡಿಯಲ್ಲಿ ಅತಿಕ್ರಮಣವಾಗಿ ಪ್ರವೇಶಿಸುವ ದೋಣಿಗಳನ್ನು ವಶಪಡಿಸಿಕೊಳ್ಳುವಂತೆ ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ 37 ಮೀನುಗಾರರನ್ನು ಬಂಧಿಸಿದೆ. ಈ ಬಗ್ಗೆ...
ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ನಮ್ಮ...
ಸೌಹಾರ್ದತೆಯ ಸಂಕೇತವಾಗಿ, ಮಾ.21ರಂದು ಪಾಕಿಸ್ತಾನ, ತನ್ನ ವಶದಲ್ಲಿದ್ದ ಭಾರತೀಯ ಮೀನುಗಾರರ 57 ದೋಣಿಗಳನ್ನು ಬಿಡುಗಡೆ ಮಾಡಿದೆ. ಪಾಕ್ ನಲ್ಲಿದ್ದ ದೋಣಿಗಳನ್ನು ಬಿಡುಗಡೆ ಮಾಡಲು ಕಳೆದ ಮೇ ನಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ವಿದೇಶಾಂಗ ಕಚೇರಿ ತಿಳಿಸಿದೆ.
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್...
ಏಕತೆ ಮತ್ತು ಅಖಂಡತೆಗೆ ಶ್ರೀಲಂಕಾ ಮಾದರಿಯಾಗಿದ್ದು ಲಂಕಾ ಪ್ರಗತಿಯಲ್ಲಿ ಭಾರತ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಾ.13ರಂದು ಶ್ರೀಲಂಕಾ ಸಂಸತ್ ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ ಹಾಗೂ ಶ್ರೀಲಂಕಾ ದಶಕಗಳ ಕಾಲ ಉಗ್ರವಾದವನ್ನು ಅನುಭವಿಸಿವೆ....
ಭಾರತೀಯ ಮೀನುಗಾರರು ಶ್ರೀಲಂಕಾದ ನೀರಿಗೆ ತೆರಳುವುದನ್ನು ಕಾನೂನು ರೀತ್ಯಾ ನೋಡದೆ, ಮಾನವೀಯತೆಯಿಂದ ಕಾಣಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ತಿಳಿಸಿದ್ದಾರೆ.
ವಿಕ್ರಮಸಿಂಘೆ ಅವರ ಜೊತೆ ನಡೆದ ಮಾತುಕತೆಯಲ್ಲಿ, ಸಂಘರ್ಷದ ವಿಷಯವಾದ ಮೀನುಗಾರರ ವಿಷಯವನ್ನು...
ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ದಾಟಿದರೆ ಗುಂಡು ಹಾರಿಸಿ ಸಾಯಿಸುವುದಾಗಿ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮಸಿಂಘೆ ಎಚ್ಚರಿಕೆ ನೀಡಿದ್ದಾರೆ.
ತಮಿಳು ನ್ಯೂಸ್ ಚಾನಲ್ ವೊಂದಕ್ಕೆ ಸಂದರ್ಶನ ನೀಡಿದ ಅವರು, ಒಂದು ವೇಳೆ ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ಪ್ರವೇಶಿಸಿದರೆ ಗುಂಡು ಹಾರಿಸುವುದಾಗಿ. ಶ್ರೀಲಂಕಾ...
ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಗಡಿಯನ್ನು ದಾಟಿದ್ದಾರೆ ಎಂಬ ಕಾರಣಕ್ಕೆ ಭಾರತದ 38 ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ.
ಪಾಕಿಸ್ತಾನದ ಜಲಾಂತರ್ಯ ಭದ್ರತಾ ಪಡೆ ಮೀನುಗಾರರನ್ನು ಬಂಧಿಸಿ ಏಳು ಹಡಗುಗಳನ್ನು ವಶಪಡಿಸಿಕೊಂಡಿದೆ. ಈ ಘಟನೆ ಕರಾಚಿ ಬಂದರಿನ ಹತ್ತಿರ ನಡೆದಿದೆ. ಮೀನುಗಾರರನ್ನು ನಂತರ ಪೊಲೀಸರಿಗೆ...
50 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ.
ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಮೀನುಗಾರರ ವಿರುದ್ಧ ದೇಶದ ಸಮುದ್ರ...
ತಮಿಳುನಾಡಿನ ನಾಗಪಟ್ಟಣಂಗೆ ಸೇರಿದ ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸಿಬ್ಬಂದಿ, ಶ್ರೀಲಂಕಾ ಗಡಿ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಿದೆ.
ನಾಗಪಟ್ಟಣಂನಲ್ಲಿನ ಪುಷ್ಪವನಂ ಗ್ರಾಮದ ನಿವಾಸಿಗಳಾದ ನಾಲ್ವರು ಮೀನುಗಾರರು, ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಕಾಣೆಯಾಗಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು.
ಸಮುದ್ರದಲ್ಲಿ...
ದೇಶದ ಸಾಗರ ಸರಹದ್ದನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ 61 ಭಾರತೀಯ ಮೀನುಗಾರರನ್ನು ಪಾಕಿಸ್ಥಾನದ ಅಧಿಕಾರಿಗಳು ಬಂಧಿಸಿದ್ದಾರೆ.
ಪಾಕಿಸ್ಥಾನದ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,ಬಂಧಿತ ಮೀನುಗಾರರಿಂದ 11 ಬೋಟ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಲ್ಲದೆ ಬಂಧಿತ ಮೀನುಗಾರರ ವಿರುದ್ಧ ವಿದೇಶಿ...
ಡ್ರಗ್ ಕಳ್ಳಸಾಗಾಣೆ ಪ್ರಕರಣದಲ್ಲಿ ಶ್ರೀಲಂಕಾದಿಂದ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರು ತಮಿಳುನಾಡಿಗೆ ವಾಪಸ್ಸಾಗಿದ್ದಾರೆ.
ಕಳೆದ 2 ದಿನಗಳ ಹಿಂದೆ ಶ್ರೀಲಂಕಾ ಸರ್ಕಾರ 5 ಮೀನುಗಾರರ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆ ಮಾಡಿತ್ತು. ನ.21ರ ಮಧ್ಯಾಹ್ನ ರಾಮೇಶ್ವರದ ಮೀನುಗಾರರು, ಏರ್ ಇಂಡಿಯಾ...
ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ್ದರ ಪರಿಣಾಮ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವ ಸಂಬಂಧ ಶ್ರೀಲಂಕಾ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿರುವ...
ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಭಾರತೀಯ ರಾಜತಾಂತ್ರಿಕ...
5 ಜನ ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಮಾದಕ ವಸ್ತು ಕಳ್ಳಸಾಗಣೆ ಆರೋಪದಡಿ ಬಂಧಿಸಲಾಗಿದ್ದ ತಮಿಳುನಾಡಿನ ಐವರು ಮೀನುಗಾರರಿಗೆ ಶ್ರೀಲಂಕಾದ ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿದೆ.
2011ರ ನವೆಂಬರ್ ನಲ್ಲಿ ಮಾದಕ ದೃವ್ಯಗಳ ಕಳ್ಳಸಾಗಣೆ ಆರೋಪಡಿ ಶ್ರೀಲಂಕಾ ನೌಕಾಪಡೆ...
ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಾಗಿದೆ. ಜನತಾ ಜನಾರ್ದನನೇ ನನ್ನ ಪಾಲಿನ ಹೈಕಮಾಂಡ್ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಾಹಾರಾಷ್ಟ್ರ ವಿಧಾನಸಭಾ ಹಿನ್ನಲೆಯಲ್ಲಿ ಮುಂಬೈ ಬಳಿಯ ಪಾಲ್ ಘರ್ ಬಳಿ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ವಿರುದ್ಧ ವಾಗ್ದಾಳಿ...
ಪ್ರಧಾನಿ ನರೇಂದ್ರ ಮೋದಿ ಅವರ ಆಕ್ಟ್ ಈಸ್ಟ್ ಪಾಲಿಸಿಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಗೃಹ ಸಚಿವಾಲಯ, ಮಾಯನ್ಮಾರ್ ಗಡಿಯಲ್ಲಿರುವ ಮಣಿಪುರದ ಉಖ್ರೂಲ್ ನಲ್ಲಿ ಬಾರ್ಡರ್ ಸಂಪರ್ಕ ಕಛೇರಿ ಸ್ಥಾಪಿಸಲು ಯೋಜನೆ ರೂಪಿಸಿದೆ.
ಕಳೆದ ವರ್ಷ ಸ್ಥಳೀಯ ಮಣಿಪುರಿ ಜನರು ಹಾಗೂ ಮಾಯನ್ಮಾರ್...
'ಭಾರತೀಯ ಮೀನುಗಾರ'ರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಟಾಲಿಯ ಹಡಗಿನ ಸಿಬ್ಬಂದಿ ಮಾಸ್ಸಿಮಿಲಿಯಾನೊ ಲಾಟೋರ್ ಗೆ 4 ತಿಂಗಳ ಕಾಲ ಇಟಲಿ ತೆರಳಲು ಸುಪ್ರೀಂ ಕೋರ್ಟ್ ಸೆ.12ರಂದು ಆದೇಶ ನೀಡಿದೆ.
ಮಾಸ್ಸಿಮಿಲಿಯಾನೊ ಲಾಟೋರ್, ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಭಾರತಕ್ಕೆ ವಾಪಸ್ ಬರುವುದಾಗಿ ಘೋಷಿಸಿದರೆ...
'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....
ದೇಶಾದ್ಯಂತ ಮುಂದಿನ 48 ಗಂಟೆಗಳೊಳಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ನಾಲ್ಕು ದಿನಳವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ನಿರ್ಬಂಧ ಹಾಕಬೇಕು ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.
ಅಂಡಮಾನ್ -...
'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...