2014ರಲ್ಲಿ ಸೋಲುಕಂಡಿದ್ದ ಲೋಕಸಭಾ ಕ್ಷೇತ್ರಗಳನ್ನು ದತ್ತು ತೆಗೆದುಕೊಂಡು ಅಭಿವೃದ್ದಿ ಕೆಲಸಗಳಲ್ಲಿ ತೊಡಗುವಂತೆ ಎಲ್ಲ ರಾಜ್ಯಸಭಾ ಸದಸ್ಯರುಗಳಿಗೆ ಪ್ರಧಾನಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ.
ನವದೆಹಲಿಯಲ್ಲಿ ನಡೆದ ಬಿಜೆಪಿ ರಾಜ್ಯಸಭಾ ಸದಸ್ಯರುಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಮಾತನಾಡಿದ ಪ್ರಧಾನಿ...
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂವಿಧಾನ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಿಎಸ್ಟಿ ಎಂದರೆ ಪರಿವರ್ತನೆ ಮತ್ತು ಪಾರದರ್ಶಕತೆಯೆಡೆಗೆ ಮಹಾನ್ ಹೆಜ್ಜೆ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,ಎಲ್ಲಾ ರಾಜಕೀಯ ಪಕ್ಷಗಳಿಗೂ ಧನ್ಯವಾದ...
ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನವೇ ನೇರ ಹೊಣೆ. ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪಾಕ್ ಹಣ ನೀಡುತ್ತಿದೆ ಎಂದು ಕೆಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಭಾರತ ದೇಶದ ಕಿರೀಟ ಇದ್ದಂತೆ. ಹಾಗಾಗಿ ಯಾವುದೇ ಪರಿಸ್ಥಿತಿ ಎದುರಿಸಲು ಕೇಂದ್ರ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ 2 ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ...
ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಪಕ್ಷದ ಸಂಸದರು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ...
ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ಉತ್ತರಾಖಂಡದ ಕಾಡ್ಗಿಚ್ಚಿನ ವಿಷಯ ಪ್ರಸ್ತಾಪಿಸಿದರು.ಇದಕ್ಕೆ...
ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಕಿದೆ. ಆಸ್ತಿ ಕ್ಷೇತ್ರದಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕ ಹಿತಾಸಕ್ತಿಗಳನ್ನು ರಕ್ಷಿಸಲು ಸಹಾಯ ಮಾಡುವ ಈ ರಿಯಲ್ ಎಸ್ಟೇಟ್ ವಿಧೇಯಕ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಬರಲಿದೆ.
ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಈ ಮಸೂದೆಯ ಪ್ರಕಾರ,...
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಸಂಸತ್ತಿನ ಕಾರ್ಯ ಕಲಾಪಗಳು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಅವಕಾಶ ಮಾಡಿ ಕೊಡಿ ಎಂದು ಹೇಳಿದರು.
ನಾವು ಸಂಸತ್ತಿನ...
ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...
ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು.
ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ಒಮ್ಮತದ ದಾರಿ ಮಾತ್ರ ನಮ್ಮ ಮುಂದಿರುವುದು ಎಂದು ಹೇಳಿ ಪ್ರತಿಪಕ್ಷದವರನ್ನು ಮನಒಲಿಸುವ ಪ್ರಯತ್ನ ಮಾಡಿದ್ದಾರೆ.
ಲೋಕಸಭೆಯಲ್ಲಿ ಸಂವಿಧಾನದ ಬದ್ಧತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಲ್ಲಿ ಬಹುತೇಕರು ಯಾರೊಬ್ಬರ ಆಸೆಯನ್ನು...
ಅಸಹಿಷ್ಣುತೆ ವಿಚಾರದಲ್ಲಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದ ನಟ ಅಮೀರ್ ಖಾನ್ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ತಮ್ಮ ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳಿಗೆ ಟೀಕೆಗಳನ್ನು ಎದುರಿಸಿದರೂ ಸಹ...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂಬತ್ತು ತಿಂಗಳ ನಂತರದ ಭೇಟಿ ಇದಾಗಿದೆ. ಕಳೆದ ಎರಡು ಭೇಟಿ, ಭಾರಿ ಮಳೆಯ ಕಾರಣದಿಂದ ರದ್ದಾಗಿತ್ತು.
ಶುಕ್ರವಾರ ಮಧ್ಯಾಹ್ನ, ಪ್ರಧಾನಿ ಮೋದಿ ಅವರು 90 ನಿಮಿಷಗಳಲ್ಲಿ...
ಶುಕ್ರವಾರ ಒಂದು ದಿನದ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯ ಭೇಟಿಯ ಸಂದರ್ಭದಲ್ಲಿ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, 501 ಪೆಡಲ್ ರಿಕ್ಷಾಗಳನ್ನು ಮತ್ತು 101 ಇ-ರಿಕ್ಷಾಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖ ಅಂಶಗಳು...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ.
ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...
ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ.
ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬುಧವಾರ ಲಲಿತ್ ಗೇಟ್ ಬಗ್ಗೆ ಮಾಡಿದ ಭಾಷಣದ ಮುಖ್ಯಾಂಶಗಳು ರೋಮನ್ ಲಿಪಿಯಲ್ಲಿ ಬರೆಯಲಾಗಿತ್ತು.
ರೋಮನ್ ಲಿಪಿಯಲ್ಲಿ ಬರೆದಿದ್ದ ಹಾಳೆಗಳು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಈ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಅಲ್ಲದೆ, 'ಮೂರು...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ಪಾಸ್ ಪೋರ್ಟ್ ನವೀಕರಣಕ್ಕೆ ಇನ್ನು ಮುಂದೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇಅದರಿಂದಾಗಿ ಪಾಸ್ ಪೋರ್ಟ್ ನವೀಕರಣಕ್ಕೆ ತಗಲುತ್ತಿದ್ದ ಸಮಯ ಸಾಕಷ್ಟು ಕಡಿತವಾಗಲಿದೆ. ಪೊಲೀಸ್ ಪರಿಶೀಲನೆಗೆ ಸುಮಾರು 15 ರಿಂದ 20 ದಿನಗಳಷ್ಟು ತಗಲುತ್ತಿದ್ದು ಇನ್ನು ಮುಂದೆ...
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಹೆಚ್ ಡಿ ದೇವೇಗೌಡ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರ ಆತ್ಮಹತ್ಯೆಯ ವಿಷಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ರೈತರ ಆತ್ಮಹತ್ಯೆ ಕುರಿತು ಲೋಕಸಭೆಯಲ್ಲಿ ಚರ್ಚೆ...
ಸಂಸತ್ತಿನ ಉಭಯ ಸದನಗಳಲ್ಲೂ ಕಲಾಪಗಳನ್ನು ಗುರುವಾರ ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಲಲಿತ್ ಮೋದಿ ಪ್ರಕರಣ ಮತ್ತು ವ್ಯಾಪಂ ಹಗರಣ ಕುರಿತು ಪ್ರತಿಪಕ್ಷಗಳ ಕೋಲಾಹಲದ ಮಧ್ಯೆ ಕಲಾಪಗಳನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಯಿತು.
ಮುಂಗಾರು ಅಧಿವೇಶನದ ಮೊದಲೆರಡು ದಿನಗಳೂ ಸಹ ವ್ಯರ್ಥವಾಗಿ, ಪ್ರತಿಪಕ್ಷಗಳ ಕೋಲಾಹಲದಲ್ಲಿ ಮುಂದೂಡಲ್ಪಟ್ಟಿತ್ತು.
ರಾಹುಲ್ ಗಾಂಧಿ...
ಸಂಸತ್ತಿನ ಮುಂಗಾರು ಅಧಿವೇಶನದ 2ನೇ ದಿನವಾದ ಬುಧವಾರವೂ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣದ ಕುರಿತಂತೆ ಲೋಕಸಭೆ, ರಾಜ್ಯಸಭೆ ಸೇರಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು.
ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿಯನ್ನು ಧರಿಸಿ ಆಗಮಿಸಿದ್ದರು. ಇದನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ...
ಮಂಗಳವಾರದಿಂದ ಪ್ರಾರಂಭವಾದ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಲಲಿತ್ ಗೇಟ್ ವಿಷಯವನ್ನು ಪ್ರಸ್ತಾಪಿಸಿದೆ.
ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸುಷ್ಮಾ ಸ್ವರಾಜ್ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಯಿಂದ...
ಕೇಂದ್ರ ಸಚಿವ ಸಂಪುಟವು ವಿವಾದಿತ ಭೂ ಸ್ವಾಧೀನ ಮಸೂದೆ ಸುಗ್ರೀವಾಜ್ನೆಯನ್ನು ಮೂರನೇ ಬಾರಿಗೆ ಹೊರಡಿಸಲು ಶಿಫಾರಸು ಮಾಡಿದೆ.
ಎನ್.ಡಿ.ಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ...
ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ.
ಈ ಮಸೂದೆ ಅನ್ವಯ,...
ಬಾಲ ಕಾರ್ಮಿಕ ಕಾನೂನು ತಿದ್ದುಪಡಿಗೆ ಕೇದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, 14 ವರ್ಷದ ಕೆಳಗಿನ ಮಕ್ಕಳು ಕೌಟುಂಬಿಕ ಉದ್ಯಮ ಅಥವಾ ಮನರಂಜನಾ ಉದ್ದಿಮೆಯಲ್ಲಿ ಅವಕಾಶ ನೀಡುವ ಹಾಗೂ ಇನ್ನೆಲೆಡೆ ಸಂಪೂರ್ಣ ನಿಷೇಧಿಸುವ ಕುರಿತು ನಿರ್ಧಾರ ಕೈಗೊಂಡಿದೆ.
ಈ ಹಿಂದೆ ಮೂಲ ಬಾಲ ಕಾರ್ಮಿಕ...
ಅಮೇಥಿಯಲ್ಲಿ ಫುಡ್ ಪಾರ್ಕ್ ನಿರ್ಮಾಣ ಸಂಬಂಧ ಲೋಕಸಭೆಯಲ್ಲಿ ಗದ್ದಲ-ಕೋಲಾಹಲ ನಡೆದು ಕಲಾಪವನ್ನು ಕೆಲಕಾಲ ಮುಂದೂಡಿದ ಘಟನೆ ನಡೆದಿದೆ.
ಕೇಂದ್ರ ಸರ್ಕಾರ ಅಮೇಥಿ ಫುಡ್ ಪಾರ್ಕ್ ನ್ನು ಕಿತ್ತುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ...
ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಹಿರಿಯ...
ಪ್ರಧಾನಿ ನರೇಂದ್ರ ಮೋದಿಯವರು ಬದಲಾವಣೆಯ ರಾಜಕೀಯ ಮಾಡಬೇಕೆ ವಿನ: ದ್ವೇಷ ರಾಜಕಾರಣ ಅಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ತಮ್ಮ ಕ್ಷೇತ್ರವಾದ ಅಮೇಠಿಯಲ್ಲಿನ ಫುಡ್ ಪಾರ್ಕ್ ಸ್ಥಾಪನೆ ಪ್ರಸ್ತಾಪವನ್ನು ಕೇಂದ್ರ ಸರ್ಕಾರ...
ಕೇಂದ್ರ ಎನ್.ಡಿ.ಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್.ಟಿ.ಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಲಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಅತ್ತರೆ...
ನೆಟ್ ನ್ಯೂಟ್ರಾಲಿಟಿ ಅಥವಾ ಅಂತರ್ಜಾಲ ಸಮಾನತೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಟೆಲಿಕಾಂ ಸಚಿವ ರವಿ ಶಂಕರ್ ಪ್ರಸಾದ್ ತಿಳಿಸಿದ್ದಾರೆ.
ನೆಟ್ ನ್ಯೂಟ್ರಾಲಿಟಿ ವಿಷಯ ಲೋಕಸಭೆಯಲ್ಲಿ ಚರ್ಚೆ ಆಗಬೇಕು, ಹೀಗಾಗಿ ಪ್ರಶ್ನೋತ್ತರ ವೇಳೆಯನ್ನು ...
'ಸಂಸತ್ ಅಧಿವೇಶನ'ದ ಲೋಕಸಭೆಯ ಕಲಾಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಬಗ್ಗೆ ಮಾತನಾಡಿದ್ದಾರೆ.
'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದಾಗ ಟೈಮ್ ಮ್ಯಾಗಜೀನ್ ನಲ್ಲಿ ಅಮೆರಿಕದ ಅಧ್ಯಕ್ಷ ...
ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಕಳೆದ 10 ತಿಂಗಳಿಂದ ಉತ್ತಮ ಆಡಳಿತ ನೀಡುತ್ತಿದೆ ಎಂದು ಶೇ.38ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
ಹೆಡ್ ಲೈನ್ಸ್ ಟು ಡೆ ನಡೆಸಿದ ಮೂಡ್ ಆಫ್ ನೇಷನ್ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಆಡಳಿತಕ್ಕೆ ದೇಶದ ಜನತೆ...
ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್ ಡಿಎ ಸರ್ಕಾರದ ಭೂ ಸ್ವಾಧೀನ ಮಸೂಧೆ ಸುಗ್ರೀವಾಜ್ಞೆ ಅವಧಿ ಇದೇ ಏ.5ರಂದು ತನ್ನಿಂದ ತಾನಾಗಿಯೇ ರದ್ದುಗೊಳ್ಳಲಿದೆ.
ಈ ಸುಗ್ರೀವಾಜ್ಞೆ ಘೋಷಿಸಿ, ಏ.5ಕ್ಕೆ ಆರು ತಿಂಗಳು ಪೂರ್ಣವಾಗಲಿದ್ದು, ಬಜೆಟ್ ಅಧಿವೇಶನದಲ್ಲಿ ಒಳಗೆ ಸದನದಲ್ಲಿ...
'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ತೆಗೆದುಕೊಂಡು ಒಂದು ತಿಂಗಳಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಮೇಥಿ ಲೋಕಸಭಾ ಕ್ಷೇತ್ರದ ಜನತೆ, ತಮ್ಮನ್ನು ಪ್ರತಿನಿಧಿಸುವ ಸಂಸದ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಗಳನ್ನು ಹಾಕುತ್ತಿದ್ದಾರೆ.
ರಾಹುಲ್ ಗಾಂಧಿ ಅನುಪಸ್ಥಿತಿಯಿಂದ ತಮಗೆ ಎದುರಾಗಿರುವ 10 ಪ್ರಮುಖ ಸಮಸ್ಯೆಗಳನ್ನು...
ಕೆಲವೊಂದು ಷರತ್ತುಗಳೊಂದಿಗೆ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಪ್ರಸಾರಿಸಲು ಅನುಮತಿ ನೀಡುವ ಪ್ರಸ್ತಾವ ತನ್ನ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ.
ಎಫ್.ಎಂ.ರೇಡಿಯೋ ಎರಡನೇ ಹಂತದ ಯೋಜನೆಯ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಬಿತ್ತರಿಸಲು ಅವಕಾಶ ಇಲ್ಲವಾಗಿದೆ....
ವಿದೇಶಗಳಲ್ಲಿ ಕಪ್ಪು ಹಣವನ್ನು ಬಚ್ಚಿಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಕಪ್ಪು ಹಣ ನಿಯಂತ್ರಣ ಕುರಿತ ವಿಧೇಯಕವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.
ಬಜೆಟ್ನಲ್ಲಿ ನೀಡಿದ್ದ ಆಶ್ವಾಸನೆಯಂತೆ ಲೋಕಸಭೆಯಲ್ಲಿ ಜೇಟ್ಲಿ, 88 ನಿಯಮ...
ಇತ್ತೀಚೆಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ತಡವಾಗಿ ಬಂದ ಸಂಸದರನ್ನು ಬಾಗಿಲ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಲಾಗಿತ್ತು. ಈಗ ಈ ಸಭೆಯಲ್ಲಿ ಇನ್ನೊಂದು ವಿಭಿನ್ನ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.
ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಮತಕ್ಕೆ ಹಾಕುವ ನಿರ್ಣಾಯಕ ದಿನದಂದೇ...
ಬಜೆಟ್ ಮೇಲಿನ ಚರ್ಚೆ ವೇಳೆ ತಾವು ಮಾತನಾಡುತ್ತಿದ್ದ ಸಂದರ್ಭ, ಆಡಳಿತ ಪಕ್ಷದ ಸದಸ್ಯರಿಬ್ಬರು ಹರಟೆಯಲ್ಲಿ ತೊಡಗಿದ್ದನ್ನು ಕಂಡು ಬೇಸರಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಘಟನೆ ನಡೆಯಿತು.
ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ,...
ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ.
ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ...
'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ.
ಮನಮೋಹನ್ ಸಿಂಗ್ ನೆರವಿಗೆ...
ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ.
ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....
ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...
ಸರ್ಕಾರ ರಚನೆಯಾದ ದಿನದಂದೇ ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಲೋಕಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಫ್ತಿ ಮೊಹಮ್ಮದ್ ಸಯೀದ್ ಹೇಳಿಕೆಯ ಬಗ್ಗೆ ವಿಷಯ...
ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.
ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...
'ಹಣಕಾಸು ಬಜೆಟ್' ಗೂ ಮುನ್ನ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಪೂರ್ವಭಾವಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ಸಮೀಕ್ಷೆ ಪ್ರಕಾರ 2015-16ನೇ ಸಾಲಿನಲ್ಲಿ ಶೇ.8ಕ್ಕಿಂತ ಹೆಚ್ಚು ಜಿಡಿಪಿ ಬೆಳವಣಿಗೆಯಾಗಲಿದೆ ಎಂದು ತಿಳಿಸಿದ್ದಾರೆ.
ಹಣದುಬ್ಬರ ದರ...
ಯೋಜನೆಗಳ ಹೆಸರನ್ನು ಬದಲಾಯಿಸುವುದು ನಮ್ಮ ಗುರಿಯಲ್ಲ ಅಲ್ಲ, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್.ಡಿ.ಎ ಸರಕಾರ ಹಳೆಯ ಯೋಜನೆಗಳ...
ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ 2015-16ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ನ್ನು ಸಚಿವ ಸುರೇಶ್ ಪ್ರಭು ಮಂಡಿಸಿದರು.
ಲೋಕಸಭೆಯಲ್ಲಿ ಪ್ರಸ್ತಕ್ತ ಸಾಲಿನ ರೈಲ್ವೆ ಮುಂಗಡಪತ್ರ ಮಂಡಿಸಿದ ಕೇಂದ್ರ ರೈಲ್ವೆ...
ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು.
ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...
ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...
'ಲೋಕಸಭಾ ಚುನಾವಣೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಗೆಲುವು ಭಾರತೀಯತೆಯ ಗೆಲವು ಎಂದಿದ್ದ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಆಕ್ರೋಶಗೊಂಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಮುಖಂಡ ಅಜಯ್ ಮಕೇನ್,...
'ಯುಪಿಎ-2' ಸರ್ಕಾರದಲ್ಲಿ ಸಚಿವೆಯಾಗಿದ್ದ ಕೃಷ್ಣ ತೀರಥ್ ಬಿಜೆಪಿಗೆ ಸೇರ್ಪಡೆಯಾಗಿದ್ದು ದೆಹಲಿ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಅಘಾತ ಉಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷ್ಣ ತೀರಥ್, ತಾವು ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ನನ್ನ ಸ್ಥಾನದ ಬಗ್ಗೆ ಪಕ್ಷದ...
ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...
ಕಾಂಗ್ರೆಸ್ ಪಕ್ಷವು ಕಳೆದ ವರ್ಷದ ಲೋಕಸಭೆ ಚುನಾವಣೆ ಮತ್ತು ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಸತತವಾಗಿ ಸೋತಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಆರ್ಥಿಕ ಸಂಕಷ್ಟ ಉಂಟಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ನಿಧಿಯನ್ನು ಬೇಕಾಬಿಟ್ಟಿ...
ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರಂತರವಾಗಿ ಹೀನಾಯ ಸೋಲುಂಟಾಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ತನ್ನ ಬಗ್ಗೆ ತನಗೇ ಕೆಲವು ಅನುಮಾನಗಳು ಉದ್ಭವಿಸಿದೆ.
ಕಾಂಗ್ರೆಸ್ ಪಕ್ಷವನ್ನು, ಬಿಜೆಪಿ ಸೇರಿದಂತೆ ರಾಜಕೀಯ ವಿರೋಧಿಗಳು ಹಿಂದೂ ದ್ವೇಷಿ ಪಕ್ಷ, ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ ಎಂದೇ ಲೇವಡಿ ಮಾಡಿ ಟೀಕಿಸುತ್ತಿದ್ದರು....
'ಕೇಂದ್ರ ಸರ್ಕಾರ'ದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ) ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಡಿ.19ರಂದು ಲೋಕಸಭೆಯಲ್ಲಿ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ಜಿ.ಎಸ್.ಟಿ ತಿದ್ದುಪಡಿ ಮಸೂದೆ ರಾಜ್ಯ ಹಾಗೂ ಕೇಂದ್ರಗಳಿಗೆ ಉಪಯುಕ್ತವಾಗಲಿದೆ ಎಂದು ಅರುಣ್ ಜೇಟ್ಲಿ...
ಭಾರತ ಶೀಘ್ರವೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಅತಿ ಶೀಘ್ರವೇ ಸಮಸ್ತ ಭಾರತ ಕಾಂಗ್ರೆಸ್ ಮುಕ್ತ ಭಾರತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಪ್ರೊ.ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕರೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಾಷ್ಟ್ರೀಯ ಪ್ರಾಧ್ಯಾಪಕರ ಗೌರವಕ್ಕೆ ಪಾತ್ರರಾಗಲಿರುವ ಮೊದಲ ಕನ್ನಡಿಗ ಭೈರಪ್ಪ ಅವರು ಎಂಬುದು ವಿಶೇಷ.
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ...
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸೇರಿದ್ದ ವೈಕೋ ನೇತೃತ್ವದ ಎಂಡಿಎಂಕೆ, ಎನ್.ಡಿ.ಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಡಿಎಂಕೆ ಪಕ್ಷದ ವರಿಷ್ಠ ವೈಕೋ, ಜಿಲ್ಲಾ ಕಾರ್ಯದರ್ಶಿಗಳ ಸಭೆ...
ವಿವಾದಗಳನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ವಿಪಕ್ಷ ಸದಸ್ಯರಿಗೆ ಮನವಿ ಮಾಡಿದ್ದಾರೆ.
ಸಾಧ್ವಿ ನಿರಂಜನ ಜ್ಯೋತಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಡಿ.5ರಂದೂ ಸಂಸತ್ ನ ಉಭಯ ಕಲಾಪದಲ್ಲೂ ವಿಪಕ್ಷ ಸದಸ್ಯರು...
ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಈಗ ಮತ್ತೆ ಒಂದಾಗಲು ನಿರ್ಧರಿಸಿವೆ.
ಈ ಕುರಿತು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ...
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿದೇಶ ಪ್ರವಾಸದಿಂದ ಭಾರತದ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಲೋಕಸಭೆ ಕಲಾಪದ ವೇಳೆ ಪ್ರತಿಕ್ರಿಯಿಸಿದ ಸುಷ್ಮಾ ಸ್ವರಾಜ್, ಮೋದಿ ವಿದೇಶದಲ್ಲಿ ನೆಲೆಸಿರುವ ಭಾರತೀಯ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಿದರು....
ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ.
ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ...
ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ.
ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...
ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ.
2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ.
ಕಳೆದ...
ಆರು ತಿಂಗಳಾದರೂ ಕಪ್ಪುಹಣ ತರಲು ವಿಫಲವಾಗಿರುವುದರ ವಿರುದ್ಧ ಪ್ರತಿಪಕ್ಷಗಳು ಟೀಕಾ ಪ್ರಹಾರ ನಡೆಸುತ್ತಿರುವ ಸಂದರ್ಭದಲ್ಲೇ, ಅಧಿಕಾರಕ್ಕೇರಿದ ನೂರು ದಿನದೊಳಗೆ ಕಪ್ಪುಹಣ ತರುವುದಾಗಿ ತಾನೆಂದೂ ಹೇಳಿಯೇ ಇಲ್ಲ ಎಂದು ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ.
ಕಪ್ಪುಹಣ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಮಧ್ಯಪ್ರವೇಶಿಸಿದ...
ಇರಾಕ್ನಲ್ಲಿ ಭಾರತೀಯರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರತಿಕ್ರಿಯಸಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯರು ಹತ್ಯೆಯಾಗಿರುವ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷಗಳು ಇರಾಕ್ನಲ್ಲಿ ನಾಪತ್ತೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದವು....
ಸಂಸತ್ ಚಳಿಗಾಲ ಅಧಿವೇಶನ ಆರಂಭವಾಗಿ ಮೂರು ದಿನಗಳಾದರು ಸುಗಮ ಕಲಾಪ ಸಾಧ್ಯವಾಗಿಲ್ಲ, ಮೂರನೇ ದಿನವಾದ ಇಂದು ಕೂಡ ಕಪ್ಪುಹಣದ ವಿಚಾರವಾಗಿ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿವೆ.
ವಿಪಕ್ಷಗಳ ಒತ್ತಾಯದ ಮೇರೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ....
ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...
'ಲೋಕಸಭೆ'ಯಲ್ಲಿ ಪ್ರತಿಪಕ್ಷ ಸ್ಥಾನ ಪಡೆಯುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ ಬಗ್ಗೆ ಬಿಜೆಪಿ ಲೇವಡಿ ಮಾಡಿದ್ದು, ವಿರೋಧಪಕ್ಷ ತೀವ್ರ ದುರ್ಬಲವಾಗಿದ್ದು ವಿಪಕ್ಷ ನಾಯಕನಿಗೆ ಮಾನ್ಯತೆ ನೀಡಲು ಸರ್ಕಾರವೇ ತಿದ್ದುಪಡಿ ತರುವ ಸ್ಥಿತಿ ಎದುರಾಗಿದೆ ಎಂದು ಹೇಳಿದೆ.
ಬಿಜೆಪಿ ಸದಸ್ಯತ್ವ ಜಾಥ ಅಭಿಯಾನದಲ್ಲಿ ಪಾಲ್ಗೊಂಡು...
ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ.
ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಅಣ್ಣಾ ಹಜಾರೆ 2012ರಲ್ಲೇ ಒಪ್ಪಿಗೆ ಸೂಚಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅಣ್ಣಾ ಅವರಿಂದ ಅರವಿಂದ ಕೇಜ್ರಿವಾಲ್ ಅವರು ದೂರವಾಗಿ, ಹೊಸ ಪಕ್ಷ ಕಟ್ಟಿದರು ಎಂದು ಕಾಂಗ್ರೆಸ್ಸಿಗ ಸಲ್ಮಾನ್ ಖುರ್ಷಿದ್ ಅವರು ಹೊಸ ಬಾಂಬ್...
ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಶೀಘ್ರದಲ್ಲೇ ದೇಶಾದ್ಯಂತ ಜನಸಂಪರ್ಕ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷವನ್ನು ಮತ್ತೆ ತಳಮಟ್ಟದಿಂದ ಸಂಘಟಿಸಿ ಜನರ ಬಳಿ ತಲುಪುವ ಉದ್ದೇಶದಿಂದ ದೇಶಾದ್ಯಂತ ಜನಸಂಪರ್ಕ ಯಾತ್ರೆ...
ಅತ್ಯಂತ ಕುತೂಹಲ ಸೃಸ್ಟಿಸಿರುವ ಹಾಗೂ ಪ್ರತಿಷ್ಠೆಯ ಚುನಾವಣಾ ಕಣವಾಗಿರುವ ಜಮ್ಮು-ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ 10 ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ.
ನ.10ರಂದು ಪ್ರಚಾರ ಕೈಗೊಳ್ಳಲಿರುವ ಪ್ರಧಾನಿ ಮೋದಿ ರಾಜ್ಯಾದ್ಯಂತ 10 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ವೇಳಾಪಟ್ಟಿ ಸಿದ್ಧತೆ ಮಾಡಲಾಗುತ್ತಿದ್ದು ಅಂತಿಮ ಹಂತದಲ್ಲಿದೆ...
ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ವೈಂಬ್ರೆಟ್ ಗುಜರಾತ್ ಶೃಂಗಸಭೆಗೆ ಮತ್ತೊಂದು ರಾಷ್ಟ್ರದ ಸಹಭಾಗಿತ್ವ ದೊರೆತಿದೆ. 2015ರಿಂದ ಅಮೆರಿಕಾ ಕೂಡ ವೈಬ್ರೆಂಟ್ ಗುಜರಾತ್ ನಲ್ಲಿ ಸಹಭಾಗಿಯಾಗಲಿದೆ.
ಸೆ.26ರಂದು ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಮೆರಿಕಾ...
'ರಾಹುಲ್ ಗಾಂಧಿ' ನಾಯಕತ್ವದ ಚುನಾವಣೆಗಳಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿಗರು ರಾಹುಲ್ ಹಟಾವೋ, ಪ್ರಿಯಾಂಕ ಲಾವೋ ಎಂಬ ಘೋಷಣೆಯಲ್ಲಿ ಮುಳುಗಿದ್ದರೆ ಇತ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮಾತ್ರ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ವಹಿಸಬೇಕು...
'ಜೆಡಿಎಸ್' ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಪಕ್ಷವನ್ನು ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿರುವ ಅಬ್ದುಲ್ ಅಜೀಂ, ನ.5ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದ ಗೌಡರ ವಿರುದ್ಧ...
'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.
ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್...
2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ನೊಂದಿಗೆ ಕೈಜೋಡಿಸಿದ್ದ ಜೆಡಿಯು ಈಗ ಕಾಂಗ್ರೆಸ್ ವಿರುದ್ಧವೇ ತಿರುಗಿ ಬಿದ್ದಿದೆ.
ಬಿಹಾರದ ಪ್ರಥಮ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರ 127ನೇ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಹಾರ ಮಾಜಿ ಸಿ.ಎಂ...
ಲೋಕಸಭಾ ಚುನಾವಣೆ ವೇಳೆ ಶಿವಸೇನೆ ಬಿಜೆಪಿಗೆ ಬೆಂಬಲ ನೀಡದಿದ್ದರೆ ನರೇಂದ್ರ ಮೋದಿ ಇರಲಿ, ಅವರ ಅಪ್ಪ ದಾಮೋದರದಾಸ್ ಕೂಡ ಬಹುಮತಗಳಿಸಲು ಸಾಧ್ಯವಿರಲಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ...
10 ರಾಜ್ಯಗಳ 33 ವಿಧಾನಸಭೆ ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾದ ಗುಜರಾತ್ ನ ವೋಡೋದರಾ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್...
ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ನ ವಡೋದರಾ ಸೇರಿದಂತೆ 3 ಲೋಕಸಭಾ ಹಾಗೂ 33 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸೆ.16ರಂದು ಫಲಿತಾಂಶ ಹೊರಬೀಳಲಿದೆ.
ಕಳೆದ...
'ರಾಷ್ಟ್ರೀಯ ಸ್ವಯಂ ಸೇವಕ ಸಂಘ' ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರ್ಗದರ್ಶನ ಮಾಡುತ್ತಿಲ್ಲ ಎಂದು ಆರ್.ಎಸ್.ಎಸ್ ಮುಖ್ಯ ವಕ್ತಾರ ಮನಮೋಹನ್ ವೈದ್ಯ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಆರ್.ಎಸ್.ಎಸ್ ನಿಯಂತ್ರಿಸುತ್ತಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯತಾವಾದಿ ಸರ್ಕಾರ ಅಸ್ಥಿತ್ವಕ್ಕೆ...
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ನ್ನು ಉತ್ತರ ಪ್ರದೇಶದ ನ್ಯಾಯಾಲಯ ತಿರಸ್ಕರಿಸಿದೆ.
2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಮಿತ್ ಶಾ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದ ವಿಡಿಯೊ ತುಣುಕನ್ನು ಆಧರಿಸಿ ಮುಜಾಫರ್ನಗರ ಪೊಲೀಸರು ನ್ಯಾಯಾಲಯಕ್ಕೆ ಸೆ.10ರಂದು ಚಾರ್ಜ್ಶೀಟ್...
ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ...
'ಕಾಂಗ್ರೆಸ್' ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಂ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವದ ಅಂಗವಾಗಿ ಸೆ.10ರಂದು ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಎಸ್.ಎಂ...
ಕೆಲವೇ ವರ್ಷಗಳಲ್ಲಿ ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇರಳದಲ್ಲಿ ಬಿಜೆಪಿಗೆ ಕನಿಷ್ಠ ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಕೊರಗುವ ಅಗತ್ಯವಿಲ್ಲ, ಪಕ್ಷ ಚುನಾವಣೆಯಿಂದ ಚುನಾವಣೆಗೆ ಬಲವರ್ಧನೆಯಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ...
ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡ್ಕರಿ ಜತೆ ರಾಜಿಗೆ ಒಪ್ಪಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಎ.ಎ.ಪಿ ನೇತಾರ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಇದು ಪ್ರತಿಷ್ಠೆಗಾಗಿ ನಡೆಯುತ್ತಿರುವ ಪ್ರಕರಣವಾದ್ದರಿಂದ ಎರಡೂ...
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ.
ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...
ನಿವೃತ್ತ ಡಿಜಿಪಿ ಶಂಕರ್ ಬಿದರಿ ಆ.20ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲೇ ಶಂಕರ್ ಬಿದರಿ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆದಿತ್ತಾದರೂ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡಬೇಕು ಎಂಬ ಷರತ್ತು ಹಾಕಿದ್ದರಿಂದ ಮಾತುಕತೆಗೆ ಹಿನ್ನಡೆಯಾಗಿತ್ತು.
ಸಂಸದ ಗದ್ದಿಗೌಡ್ರ ಅವರಿಗೆ ಟಿಕೆಟ್...
'ಸಂವಿಧಾನ'ದ 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಆ.19ರಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ, ನೌಕರಿಗಳಿಂದ ಭಾರತದ...
'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ.
ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ.
ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಪಕ್ಷ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆ.15ರಂದು ಹೇಳಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಹಾಗೂ ತಪ್ಪುಗಳೇ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ ಎಂದು ಅಡ್ವಾಣಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...
'ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ' ಮಸೂದೆಗೆ ಆ.13ರಂದು ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.
ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಆರು ಸದಸ್ಯರ ಸಮಿತಿ ರಚನೆ ಸಂಬಂಧ ಮೋದಿ ನೇತೃತ್ವದ ಸರ್ಕಾರ ಸೋಮವಾರ ನ್ಯಾಯಾಂಗ ನೇಮಕಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಸುದೀರ್ಘ...
ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...
ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...
ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಆ.8ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಸ್ವಂತ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ.
ಗುರುವಾರ ಮಧ್ಯರಾತ್ರಿ ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರಜ್ನೆ...