ಹೆಂಗಸರ ತಲೆಕೂದಲು ಕತ್ತರಿಸಿದ್ದಾನೆ ಎಂಬ ಅನುಮಾನದ ಮೇರೆಗೆ ಶಂಕಿತ ಆರೋಪಿಯೋರ್ವನನ್ನು ಕಲ್ಲಿನಿಂದ ಹೊಂಡೆದು ಹತ್ಯೆಗೈದ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಕಾಶ್ಮೀರದ ಅನಂತನಾಗ್ ಜಿಲ್ಲೆಯ ದಂತಕ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪದ ಮೇರೆಗೆ ಇದೇ ವ್ಯಕ್ತಿ ಹೆಂಗಸ ತಲೆಕೂಡಲನ್ನು...
ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಒಬ್ಬ ಅತ್ಯಂತ ಪ್ರಭಾವೀ ವ್ಯಕ್ತಿ ಶಾಮೀಲಾಗಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪಾರೀಕರ್ ಸಂಸತ್ತಿನಲ್ಲಿ ಹೇಳುವ ಮೂಲಕ ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರನ್ನು ಹೇಳದೇ ನಿಗೂಢತೆಯನ್ನು ಕಾಯ್ದಿರಿಸಿಕೊಂಡಿದ್ದಾರೆ.
ಅಗಸ್ಟಾ ಹಗರಣದಲ್ಲಿ ಯಾರು ಶಾಮೀಲಾಗಿದ್ದಾರೆ...
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಫೆಬ್ರವರಿ 14ರಂದು ರಥಸಪ್ತಮಿಯ ದಿನ ನಡೆಸಿದರು.
ಸೂರ್ಯನ ಜನ್ಮದಿನವಾದುದರಿಂದ ಸೂರ್ಯನಮಸ್ಕಾರದೊಂದಿಗೆ ಆರಂಭವಾದ ಕಾರ್ಯಾಗಾರದಲ್ಲಿ ಯೋಗಮುದ್ರೆಗಳು, ಬಣ್ಣಚಿಕಿತ್ಸೆ ಹಾಗೂ ಚಕ್ರಧ್ಯಾನಗಳನ್ನು ಪ್ರಾಯೋಗಿಕವಾಗಿ ಕಲಿಸಿದರು....
ಮಕ್ಕಳು ಚಿಕ್ಕವರಾಗಿರುವಾಗಲೇ ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಗೆ ಪೋಷಕರ ಸಕ್ರಿಯ ಭಾಗವಹಿಸುವಿಕೆ ಅಗತ್ಯ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು. ಮಕ್ಕಳು ಮಾಡಿದ ಸಾಧನೆಯನ್ನು ಪ್ರೋತ್ಸಾಹಿಸಿ, ವಿದ್ಯೆ ಎನ್ನುವುದು ಜ್ಞಾನಕ್ಕಾಗಿ ಇದು ನಿಂತ ನೀರಾಗಬಾರದು. ಸ್ಪರ್ಧಾತ್ಮಕ ಮನೋಭಾವಕ್ಕಿಂತ ಸಹಕಾರ ಮನೋಭಾವ ಅಗತ್ಯ...
ಕೇಂದ್ರದಲ್ಲಿರುವುದು ಏಕವ್ಯಕ್ತಿಯ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ಪ್ರಧಾನಿ ಕಾರ್ಯಾಲಯದ ಮೇಲೆ ಅಧಿಕಾರ ಚಲಾಯಿಸುತ್ತಿದ್ದ ಅಸಾಂವಿಧಾನಿಕ ಶಕ್ತಿ ಕೇಂದ್ರ ಸೋನಿಯಾ ಆಗಿದ್ದರು ಎಂದು ಕಿಡಿಕಾರಿದ್ದಾರೆ.
ನಾವು ಸಂವಿಧಾನ...
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಅತ್ಯುತ್ತಮ ಸ್ನೇಹ ಸಂಬಂಧವನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಪ್ರತಿಷ್ಠಿತ ಟೈಮ್ ಮ್ಯಾಗಜೀನ್ ಗೆ ಮೋದಿ ಕುರಿತು ವ್ಯಕ್ತಿಚಿತ್ರಣವನ್ನು( profile write up) ಬರೆದಿದ್ದು, ಮೋದಿಯವರನ್ನು ಭಾರತದ ಸುಧಾರಣೆಯ ಮುಖ್ಯಸ್ಥ (India’s...
ಗ್ರೆನೇಡ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ಅಸ್ಸಾಂನಲ್ಲಿ ನಡೆದಿದೆ.
ಅಸ್ಸಾಂನ ರೌಟಾ ಮಾರ್ಕೆಟ್ ಪ್ರದೇಶದಲ್ಲಿ ಗ್ರೆನೇಡ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿಯನ್ನು ರಾಮಚಂದ್ರ ಬರ್ಮನ್ ಎಂದು ಗುರಿತಿಸಲಾಗಿದ್ದು,...
ಫ್ರಾನ್ಸ್ ನ ಪ್ಯಾರಿಸ್ ನಗರದ ಲಿಯಾನ್ ಬಳಿ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಲ ಸಮಯದ ಹಿಂದಷ್ಟೇ ದಕ್ಷಿಣ ಪ್ಯಾರಿಸ್ ನಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆದ ಬೆನ್ನಲ್ಲೇ ಪ್ಯಾರಿಸ್ ನ ಮಸೀದಿ ಪಕ್ಕದಲ್ಲಿರುವ ಕಟ್ಟದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ...
ಪ್ಯಾರಿಸ್ ನ ಪತ್ರಿಕಾ ಕಛೇರಿಯಲ್ಲಿ ಉಗ್ರರು ಅಟ್ಟಹಾಸ ಮೆರೆದು 12 ಜನರನ್ನು ಬಲಿಪಡೆದುಕೊಂಡಿರುವ ಬೆನ್ನಲ್ಲೇ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ.
ದಕ್ಷಿಣ ಪ್ಯಾರಿಸ್ ಪ್ರಾಂತ್ಯದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾನೆ.
ಘಟನೆಯಲ್ಲಿ...
'ಪಿಕೆ' ಸಿನಿಮಾ ವಿರುದ್ಧ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕಾರ ಮೌನ ವಹಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಿಕೆ ಚಿತ್ರವನ್ನು ವಿರೋಧಿಸಿ ವಿಧ್ವಂಸಕ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಲಿದ್ದಾರೆಯೇ? ಎಂದು...
'ಶಿಕ್ಷಣ ವ್ಯವಸ್ಥೆ' ವಿಶ್ವಕ್ಕೆ ಕೊಡುಗೆ ನೀಡುವಂತಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಡಿ.25ರಂದು ಹಿಂದೂ ಬನಾರಸ್ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ವ್ಯವಸ್ಥೆ ಎಂಬುದು ರೋಬೋಟ್ ಗಳನ್ನು ಉತ್ಪಾದನೆ ಮಾಡಲು ಮಾತ್ರ ಸೀಮಿತವಾಗಬಾರದು, ರೋಬೋಟ್...
'ಎಬೋಲಾ ಖಾಯಿಲೆ' ವಿರುದ್ಧ ಹೋರಾಡುತ್ತಿರುವವರು ಟೈಮ್ ಮ್ಯಾಗಜೀನ್ ನ 2014 ನೇ ವರ್ಷದ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಟೈಮ್ ಮ್ಯಾಗಜೀನ್ ತನ್ನ ವರ್ಷದ ವ್ಯಕ್ತಿಯಾಗಿ ಯಾವುದೇ ವ್ಯಕ್ತಿಯನ್ನು ಘೋಷಣೆ ಮಾಡಲಾಗಿಲ್ಲ. ಬದಲಾಗಿ ಎಬೋಲಾ ರೋಗದ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್,...
ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಿಂಗಾಪುರ್ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪ್ರಧಾನಿ ಮೋದಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅಭಿವೃದ್ಧಿ ಕೇಂದ್ರಿತ ನಾಯಕ ಎಂಬ ಹೆಸರಿನಡಿ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ...
ಟೈಮ್ ಮ್ಯಾಗಜಿನ್ ನ ವರ್ಷದ ವ್ಯಕ್ತಿ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮೋದಿ ಎರಡನೇ ಸ್ಥಾನಕ್ಕೆ ಕುಸಿದಿದ್ದರು. ಆದರೆ ಶೇ.12.8ರಷ್ಟು ಮತಗಳಿಸಿರುವ ಮೋದಿ ಮತ್ತೊಮ್ಮೆ ಪ್ರಥಮ ಸ್ಥಾನಕ್ಕೇರಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಹಿಂದಿಕ್ಕಿದ್ದ 'ಫರ್ಗ್ಯುಸನ್...
ಟೈಮ್ ಮ್ಯಾಗಜಿನ್ನ ವರ್ಷದ ವ್ಯಕ್ತಿ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಹಿಂದಿಕ್ಕಿರುವ ಫರ್ಗ್ಯುಸನ್ ಪ್ರತಿಭಟನಾಕಾರರು ದಿಢೀರನೆ ಮೊದಲ ಸ್ಥಾನಕ್ಕೇರಿದ್ದಾರೆ. ನ.26ರವರೆಗೆ ಟೈಮ್ ಓದುಗರು ಮೋದಿ ಅವರತ್ತ ಹೆಚ್ಚಿನ ಆಸಕ್ತಿ ತೋರಿದರು. ಪರಿಣಾಮ ಮೋದಿ ಶೇ.11.1ರಷ್ಟು...
ಪ್ರಧಾನಿ ನರೇಂದ್ರ ಮೋದಿ ಈಗ ಜಗತ್ತಿನ ಅತಿ ಪ್ರಭಾವಿ ವ್ಯಕ್ತಿಗಳ ಪೈಕಿ ಒಬ್ಬರಾಗಿದ್ದಾರೆ! ಫೋರ್ಬ್ಸ್ ಬಿಡುಗಡೆ ಮಾಡಿರುವ 2014ನೇ ಸಾಲಿನ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ 15ನೇ ಸ್ಥಾನ ಪಡೆದಿದ್ದಾರೆ.
ಫೋರ್ಬ್ಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ 72 ಜನರ...
ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ...
ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು.
ಕೆಪಿಎಸ್...