ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರು ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಶ್ರೀಗಳಿಗೆ ಜಾಂಡೀಸ್, ಜ್ವರ, ಪಿತ್ತನಾಳ ಸಮಸ್ಯೆ ಹಿನ್ನಲೆಯಲ್ಲಿ ಬೆಂಗಳೂರಿನ ಕೆಂಗೇರಿ ಸಮೀಪದ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಬೆಳಗ್ಗೆ ದಾಖಲಾಗಿದ್ದ...
ಕಳೆದ ಕೆಲದಿನಗಳಿಂದ ಮಧ್ಯಪ್ರದೇಶದಾದ್ಯಂತ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತುರ್ತುಸಭೆ ಕರೆದಿದ್ದಾರೆ.
ಸಾಗರ್ ಜಿಲ್ಲೆಯ ಬನ್ನೆಘಾಟ್ ಪ್ರದೇಶದಲ್ಲಿ ಬೆಳಗ್ಗೆ ಭೋರ್ಗರೆಯುವ ನೀರು ಮನೆಗಳಿಗೆ...
ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...
ಕಾಶ್ಮೀರ ಮುಸಲ್ಮಾನರು ಅಮರನಾಥ್ ಯಾತ್ರಿಕರಿಗೆ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ, ಶಿವ ಸೇನಾ ಕಾರ್ಯಕರ್ತರು, ಜಮ್ಮು ಮತ್ತು ಕಾಶ್ಮೀರ ಕಡೆಗೆ ಹೋಗುತ್ತಿದ್ದ ಲಾರಿಗಳನ್ನು ತಡೆದು ಕಾಶ್ಮೀರಿ ಮುಸ್ಲೀಂ ಚಾಲಕರಿಗೆ ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಹೇಳುವಂತೆ ಒತ್ತಾಯಿಸುತ್ತಿದ್ದಾರೆ.
ಪಂಜಾಬ್ ಘಟಕದ ಶಿವ ಸೇನಾ...
ಜುಲೈ 5ರಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಜುಲೈ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ರಾಷ್ಟ್ರಗಳ ಭೇಟಿಯನ್ನು ಆರಂಭಿಸಲಿದ್ದು ಅದಕ್ಕೆ ಮುನ್ನ ಅಂದರೆ ಜುಲೈ 5ರಂದು ಬೆಳಿಗ್ಗೆ 11ಗಂಟೆಗೆ...
ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್ ಪೆಂಡಾಲ್ ಗಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...
ಪಾಕ್ ಮೂಲದ ಉಗ್ರ ಸಂಘಟನೆ ಲಷ್ಕರ ಎ ತೊಯ್ಯಬಾ ಶಿವಸೇನೆಯ ಮುಖ್ಯಸ್ಥ ಬಾಳ ಠಾಕ್ರೆ ಅವರನ್ನು ಹತ್ಯೆಗೈಯುವ ಪ್ರಯತ್ನ ಮಾಡಿತ್ತು, ಆದರೆ ಆ ದುಷ್ಕರ್ಮಿಯನ್ನು ಬಂಧಿಸಲಾಯಿತು ಎಂದು ಉಗ್ರ ಡೇವಿಡ್ ಹೆಡ್ಲಿ ಗುರುವಾರ ತಿಳಿಸಿದ್ದಾನೆ.
ಠಾಕ್ರೆ ಹತ್ಯೆ ಯತ್ನದ ಬಗ್ಗೆ ನನಗೆ ನೇರ...
ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಆದಿಗುರು ಶಂಕರಾಚಾರ್ಯರಿಂದ ಪ್ರದತ್ತ, ವಿಶಿಷ್ಟವಾದ ಚಂದ್ರಮೌಳೀಶ್ವರ ಲಿಂಗಕ್ಕೆ ಶ್ರೀಗಳಿಂದ ವಿಶೇಷ ಪೂಜೆ, ರುದ್ರಾಭಿಷೇಕ...
ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಮಾರ್ಚ್ 2 ರಿಂದ ರಿಂದ ಮಾರ್ಚ್ 09ರ ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲು...
ಮುಂಬಯಿನ ಕುರ್ಲಾ ಮತ್ತು ವಿದ್ಯಾವಿಹಾರ್ ಸ್ಟೇಶನ್ಗಳ ನಡುವೆ ನಾಲ್ವರು ಗ್ಯಾಂಗ್ ಮನ್ ಗಳು ಲೋಕಲ್ ರೈಲಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟಿರುವ ಘಟನೆ ಎಂದು ತಿಳಿದುಬಂದಿದೆ.
ಶುಕ್ರವಾರ ಬೆಳಗ್ಗೆ 6.15 ಮತ್ತು 6.30ರ ನಡುವೆ ಈ ದುರ್ಘಟನೆ ನಡೆದಿದೆ. ಛತ್ರಪತಿ ಶಿವಾಜಿ ಟರ್ಮಿನಸ್...
ಹೊಸಬೆಳಕು ಎಂಬ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರ ಉದ್ದೇಶಿಸಿರುವ ಎಲ್ ಇ ಡಿ ಬಲ್ಬ್ ವಿತರಣಾ ಕಾರ್ಯ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ.
ಬೆಂಗಳೂರಿನ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಅಥವಾ ಬೆಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಬಲ್ಬ್ ಗಳನ್ನು ಪಡೆಯಬಹುದು ಎಂದು ಇಂಧನ ಸಚಿವ ಡಿ ಕೆ...
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದು, ಭಾರತೀಯ ವಿಜ್ಞಾನ ಕಾಂಗ್ರೆಸ್ಸಿನ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶನಿವಾರ ದೆಹಲಿಯಿಂದ ನೇರವಾಗಿ ಮೈಸೂರಿಗೆ ಸಂಜೆ 5.15ಕ್ಕೆ ಆಗಮಿಸುವ ಪ್ರಧಾನಿ ಮೋದಿ ಅವರು,
ಅವಧೂತ ದತ್ತ ಪೀಠಕ್ಕೆ...
ರಾಜ್ಯಾದ್ಯಂತ ಈ ವರ್ಷ ಮಳೆ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಕನಿಷ್ಠ ಎರಡು ತಾಸು, ಬೇರೆಡೆ ಗರಿಷ್ಠ ಎಂಟು ತಾಸು ವಿದ್ಯುತ್ ಕಡಿತವಾಗಲಿದೆ. ಯಾವ ಭಾಗದಲ್ಲಿ ಎಷ್ಟು...
ವಿಶ್ವ ವಿಖ್ಯಾತ ತಾಜ್ ಮಹಲ್ ಹಿಂದೆ ಶಿವಾಲಯವಾಗಿತ್ತೆ ? ಹೌದೆನ್ನುತ್ತದೆ ಆಗ್ರಾದ ವಕೀಲರುಗಳ ತಂಡವೊಂದು. ಈ ತಂಡ ತಾಜ್ ಮಹಲ್ ಮೂಲತಃ ಶಿವ ಮಂದಿರವಾಗಿತ್ತು, ಅದರ ಒಡೆತನವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದೆ.
17ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎನ್ನಲಾದ...
ಮಂಗಳವಾರದಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನದಲ್ಲಿ ವ್ಯಾಪಂ ಮತ್ತು ಲಲಿತ್ ಮೋದಿ ಪ್ರಕರಣ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎನ್ ಡಿ ಎ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ....
ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಬುಧವಾರ ಆಗಮಿಸುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅಮರನಾಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 1,000 ಕ್ಕೂ ಅಧಿಕ ಯಾತ್ರಾರ್ಥಿಗಳ ಮೊದಲ ತಂಡ ಬುಧವಾರ ಜಮ್ಮುವಿನಿಂದ ಹೊರಡಲಿದೆ.
ಸಮುದ್ರ ಮಟ್ಟದಿಂದ ಸುಮಾರು 14,500 ಅಡಿ ಎತ್ತರದಲ್ಲಿರುವ ಹಿಮಾಲಯ...
ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಹಾನಗರಿ ಮುಂಬೈ ಜನಜೀವನ ಅಸ್ತವ್ಯಸ್ತವಾಗಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗೆ ಚರಂಡಿ ನೀರೆಲ್ಲಾ ಹರಿದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ.
ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯವರಿಗೆ ವೀಸಾ ಒದಗಿಸಲು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಯಾವುದೇ ತಪ್ಪು...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎನ್.ಡಿ.ಎ ಮಿತ್ರಪಕ್ಷ ಶಿವಸೇನೆ, ಅವರಿಗೆ ತಕ್ಕ ಪಾಠ ಕಲಿಸಲು ಭಾರತವೂ ಕದನ ವಿರಾಮ ಉಲ್ಲಂಘಿಸಿ ಆ ದೇಶದೊಳಕ್ಕೆ ಪ್ರವೇಶಿಸಬೇಕು ಎಂದು ಹೇಳಿದೆ.
2013ರಲ್ಲಿ ಪಾಕ್ ಸೈನಿಕರು...
ನೂರು ಜನ ರಾಹುಲ್ ಗಾಂಧಿಗಳೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಲಾರರು ಎಂದು ಶಿವಸೇನೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.
ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿಯವರ ಛರಿಸ್ಮಾದ ಮುಂದೆ ರಾಹುಲ್ ಗಾಂಧಿ ಏನೇನೂ...
ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆದರೆ ಮಂಗೋಲಿಯಾಕ್ಕೆ 1 ಬಿಲಿಯನ್ ಡಾಲರ್ ನೆರವು ಘೋಷಿದ್ದಾರೆ ಎಂದು ಮಿತ್ರಪಕ್ಷವಾದ ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಮೋದಿ ವಿದೇಶ ಪ್ರವಾಸದ ಬಗ್ಗೆ ನೇರ ವಾಗ್ದಾಳಿ ನಡೆಸಿದೆ.
ಹಾಗಾಗಿ ಮಹಾರಾಷ್ಟ್ರಕ್ಕಿಂತ ಮಂಗೋಲಿಯಾ ಅದೃಷ್ಟಶಾಲಿ...
ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿರುವುದಕ್ಕೆ ಎನ್.ಡಿ.ಎ ಮೈತ್ರಿಕೂಟದ ಶಿವಸೇನೆ ಅಸಮಾಧಾನವ್ಯಕ್ತಪಡಿಸಿದ್ದು, ಚೀನಾ ಎದುರಿಗೆ ಅಪ್ಪಿಕೊಳ್ಳುತ್ತೆ, ಆದರೆ ಹಿಂದಿನಿಂದ ಬೆನ್ನಿಗೆ ಚೂರಿ ಹಾಕುತ್ತೆ. ಇದು ಚೀನಾದ ನೀತಿ ಎಂದು ಕಿಡಿಕಾರಿದೆ.
ಚೀನಾದ ನಡವಳಿಕೆ ಈಗಾಗಲೇ ನೋಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಅದ್ದೂರಿಯಾಗಿ...
'ಕಿಸಾನ್ ಪಾದಯಾತ್ರೆ' ಹಮ್ಮಿಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ.
ಅಧಿಕಾರ ಕಳೆದುಕೊಂಡ ನಂತರ ರೈತರ ಪರ ಪಾದಯಾತ್ರೆ ನಡೆಸುವ ಬದಲು ಅಧಿಕಾರದಲ್ಲಿರಬೇಕಾದರೆ, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು ಎಂದು ರಾಹುಲ್ ಗಾಂಧಿಗೆ ಶಿವಸೇನೆ ಹೇಳಿದೆ.
ಇದೇ ವೇಳೆ...
ರಾಜ್ಯ ರಾಜಧಾನಿ ಬೆಂಗಳೂರು ಸಮೀಪ ಫಾರ್ಮುಲಾ ಒನ್ ರೇಸಿಂಗ್ ಟ್ರ್ಯಾಕ್ ಹಾಗೂ ಮೋಟರ್ ನ್ಪೋರ್ಟ್ಸ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅಮೆರಿಕ ಮೂಲದ ಆ್ಯಕ್ಷನ್ ಮೋಟರ್ ನ್ಪೋರ್ಟ್ಸ್ ಇಂಟರ್ನ್ಯಾಷನಲ್ (ಎಎಂಐ) ಕಂಪನಿ ಮುಂದಾಗಿದೆ.
ಈ ಕುರಿತಂತೆ ಸುಮಾರು 250 ಮಿಲಿಯನ್ ಡಾಲರ್ (1500...
'ಕಾಶ್ಮೀರ'ದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದ ಬೆನ್ನಲ್ಲೇ ಓವೈಸಿ ಸಹೋದರರ ವಿರುದ್ಧ ಶಿವಸೇನೆ ಗಂಭೀರ ಆರೋಪ ಮಾಡಿದೆ. ಮಹಾರಾಷ್ಟ್ರದಲ್ಲೂ ಓವೈಸಿ ಸಹೋದರರು, ಪಾಕಿಸ್ತಾನದ ಧ್ವಜಾರೋಹಣ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.
ಶಿವಸೇನೆ ಮುಖವಾಣಿ, ಸಾಮ್ನಾದಲ್ಲಿ ಓವೈಸಿ ಸಹೋದರರ ವಿರುದ್ಧ ವಾಗ್ದಾಳಿ...
ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಳವಾಗುತ್ತಿರುವುದು ಹಿಂದೂ ದೇಶಕ್ಕೆ ಅಪಾಯಕಾರಿ ಬೆಳವಣಿಗೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಕುಟುಂಬ ಯೋಜನೆ ಪದ್ಧತಿ ಅಗತ್ಯವಾಗಿ ಬೇಕಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ.
ಏತನ್ಮಧ್ಯೆ ಸಾಧ್ವಿ ದೇವಾ, ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ರಿಗೆ ಬಲವಂತವಾಗಿ...
ಬಿಜೆಪಿ ನಕಲಿ ರಾಮ ಭಕ್ತರ ಪಕ್ಷವಾಗಿದೆ ಎಂದು ಆರೋಪ ಮಾಡಿರುವ ಶಿವಸೇನೆಯು 2017ರಲ್ಲಿ ನಡೆಯವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಎಲ್ಲ 403 ಸ್ಥಾನಗಳಿಗೂ ತಾನು ಸ್ಫರ್ಧಿಸುವುದಾಗಿ ಹೇಳಿದೆ.
ಕಾನ್ಪುರದ ಕಿದ್ವಾಯಿ ನಗರದಲ್ಲಿ ನಡೆದಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವಸೇನೆಯ ಉತ್ತರ...
'ಮಹಾರಾಷ್ಟ್ರ'ದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದುಗೊಳಿಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರಿ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತಿದ್ದ ಶೇ.5ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಮುಸ್ಲಿಮ್ ಮೀಸಲಾತಿ ರದ್ದುಗೊಳಿಸಿರುವುದರ...
ಭಾರತದಲ್ಲಿರುವ ಮುಸ್ಲಿಮ್ ಸಮುದಾಯಕ್ಕೆ ವಿಶೇಷ ಸ್ಥಾನಮಾನ ಬೇಕಾದರೆ ಅವರೆಲ್ಲರೂ ಪಾಕಿಸ್ತಾನಕ್ಕೆ ಹೋಗಲಿ ಎಂದು ಶಿವಸೇನೆ ಹೇಳಿದೆ.
ಭಾರತದಿಂದ ಮುಸ್ಲಿಮರಿಗೇನಾದರೂ ಬೇಕಾದರೆ ಅವರು ಮೊದಲು ಭಾರತವನ್ನು ತಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳಲಿ ಅಂತೆಯೇ ವಂದೇ ಮಾತರಂ ನ ಒಪ್ಪಿಕೊಳ್ಳಲಿ, ಅವರು ತಮ್ಮ...
ಈ ಬಾರಿಯ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಅನುಸರಿಸುವ ಅವಶ್ಯಕತೆ ಬರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ 300 ರಿಂದ 500 ಮೆಗಾವ್ಯಾಟ್ ವಿದ್ಯುತ್ ಕೊರತೆಯಾಗುವ ಅಂದಾಜಿದ್ದು, ಈ ಬೇಡಿಕೆ ಪೂರೈಸಲು ಅಗತ್ಯ ವ್ಯವಸ್ಥೆ...
ಫೆ.28ರಂದು ನಾಗ್ಪುರದಲ್ಲಿ ನಡೆಯಲಿರುವ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ರ್ಯಾಲಿಗೆ ಅನುಮತಿ ನೀಡಬಾರದು ಎಂದು ಬಿಜೆಪಿ ಹಾಗೂ ಶಿವಸೇನೆ ಒತ್ತಾಯಿಸಿವೆ.
ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆಯಲಿರುವ ಅಸಾವುದ್ದೀನ್ ಓವೈಸಿಯ ಮೊದಲ ರ್ಯಾಲಿ ಇದಾಗಿದ್ದು, ಓವೈಸಿಯ ಪ್ರಥಮ ರ್ಯಾಲಿಗೆ ಬಿಜೆಪಿ, ಶಿವಸೇನೆಯಿಂದ ತೀವ್ರ ವೀರೊಧ...
ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರ ಹುನ್ನಾರವಿತ್ತು ಎಂಬ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಶಿವಸೇನೆ ಸಮರ್ಥಿಸಿಕೊಂಡಿದೆ.
ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಾರತಕ್ಕೆ ಬಂದ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ...
ಮಹಾರಾಷ್ಟ್ರದ ನೂತನ ಸರ್ಕಾರದಿಂದ ಏನು ಬದಲಾವಣೆಯಾಗಿದೆ? ಈ ಬಗ್ಗೆ ಯಾರಿಗಾದರೂ ತಿಳಿದಿದ್ದರೆ ದಯವಿಟ್ಟು ತಿಳಿಸಿ ಎಂದು ಎನ್ ಡಿಎ ಮೈತ್ರಿಕೂಟದ ಶಿವಸೇನೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಶಿವಸೇನಾ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ತನ್ನದೇ ಮೈತ್ರಿಕೂಟದ ಫಡ್ನವೀಸ್...
ಮಧ್ಯಪ್ರದೇಶದ ಪರೀಕ್ಷಾ ಮಂಡಳಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ, ಶಿವರಾಜ್ ಸಿಂಗ್ ರನ್ನು ಆಹ್ವಾನಿಸಿದ್ದು, ಇಂದು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲಿದ್ದಾರೆ.
ಇದೇ...
ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಮಮತಾ ಬ್ಯಾನರ್ಜಿ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ...
'ಎಂಐಎಂ' ಮುಖಂಡ ಅಸಾವುದ್ದೀನ್ ಓವೈಸಿಗೆ ನಿರ್ಬಂಧ ವಿಧಿಸಿರುವುದನ್ನು ಗೃಹ ಸಚಿವ ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಓವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿದೆ. ಪೊಲೀಸರು ತೆಗೆದುಕೊಂಡ ಕ್ರಮದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
ಶಿವಾಜಿನಗರದ...
ಒಂದು ಕಾಲದಲ್ಲಿ ಸನಾತನ ಧರ್ಮದ ಅನುಯಾಯಿಗಳಾಗಿದ್ದ ಮುಸ್ಲಿಮರಿಗೆ ಶಿವನೇ ಮೊದಲ ಪ್ರವಾದಿ ಎಂದು ಜಮೇತ್ ಉಲೇಮಾದ ಮುಫ್ತಿ ಮುಹಮ್ಮದ್ ಇಲಿಯಾಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಫೆ.27ರಂದು ಕೋಮುಸೌಹಾರ್ದ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಸಾಧು, ಸಂತರನ್ನು ಆಹ್ವಾನಿಸಲು ಮುಸ್ಲಿಮ್...
ಭಾರತದಲ್ಲಿ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಅಮೆರಿಕಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದೆ. ವಾಷಿಂಗ್ ಟನ್ ಸ್ಟೇಟ್ ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದ್ದು ದೇವಾಲಯದ ಗೇಟ್ ಮೇಲೆ ಗೆಟ್ ಔಟ್ ಎಂದು ಬರೆಯಲಾಗಿದೆ.
ಹಿಂದೂ ದೇವಾಲಯಗಳ ಮೇಲೆ ದಾಳಿ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ನೇಮಕಾತಿ ಹಗರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡಾ ಭಾಗಿಯಾಗಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವನ್ನು, ತನಿಖೆ ನಡೆಸಿದ್ದ ಎಸ್.ಟಿ.ಎಫ್ ಮಾಡಿದೆ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...
ಮಹಾಶಿವರಾತ್ರಿ ಆಚರಣೆಗೆ ರಾಜಧಾನಿ ಬೆಂಗಳೂರು ಸಿದ್ಧಗೊಂಡಿದೆ. ನಗರದ ಹಲವು ಭಾಗಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಹೋಮ-ಹವನಗಳನ್ನು ನಡೆಸಲಾಗುತ್ತದೆ.
ಶಿವರಾತ್ರಿ ಅಂಗವಾಗಿ ಈ ವರ್ಷ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವನ ದೇವಾಯಲಯದಲ್ಲಿ ಮಹಾಯಜ್ನ...
ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳ ಸಂಬಂಧ ಬಿಗಡಾಯಿಸುತ್ತಿದ್ದರೂ ಉಭಯ ಪಕ್ಷಗಳ ಸಮನ್ವಯ ಸಮಿತಿ ಸಭೆ ಫೆಬ್ರವರಿ 17ರಂದು ನಡೆಯಲಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಬಿಜೆಪಿ ಅಧ್ಯಕ್ಷ ರಾವ್ ಸಾಹೇಬ್ ದಾನ್ವೆ ಮತ್ತು ಸಹಕಾರಿ ಸಚಿವ...
ರಾಜ್ಯದಲ್ಲಿ ವಸತಿ ಗೃಹಗಳು, ವಾಣಿಜ್ಯ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳಲ್ಲಿನ ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದನಾ ಫಲಕಗಳನ್ನು ಸ್ಥಾಪಿಸಿ ಅದರ ಮೂಲಕ ವಿದ್ಯುತ್ನ್ನು ಉತ್ಪಾದಿಸುವ ಯೋಜನೆಯನ್ನು 2014 ರ ನವೆಂಬರ್ 7 ರಿಂದ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು...
ವಿದ್ಯುತ್ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯವಹಾರ ಪ್ರಕರಣ ವಿಧಾನಪರಿಷತ್ ನಲ್ಲಿ ಅತ್ತೆ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರ ಪ್ರತಿಭಟನೆಗೆ ಸಾಕ್ಷಿಯಾಯಿತು.
ವಿದ್ಯುತ್ ಮೀಟರ್ ಖರೀದಿಯಲ್ಲಿ ಅವ್ಯವಹರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ರೂಪಿಸಿದ್ದು, ವಿಧಾನ ಪರಿಷತ್ ಕಲಾಪ...
'ಮುಸ್ಲಿಂ ಮೀಸಲಾತಿ' ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪುಣೆ ಪೊಲೀಸರು ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಂಐಎಂ) ಸಂಘಟನೆ ಮುಖಂಡ ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ್ದಾರೆ. ಪುಣೆ ಪೊಲೀಸರ ಈ ಕ್ರಮವನ್ನು ಶಿವಸೇನೆ ಸ್ವಾಗತಿಸಿದೆ.
ಅಸಾವುದ್ದೀನ್ ಒವೈಸಿ ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಹಿನ್ನೆಲೆಯಲ್ಲಿ ಮುಸ್ಲಿಂ...
ವಿಧಾನಪರಿಷತ್ ನಲ್ಲಿ ಆಡಳಿತ, ವಿಪಕ್ಷಗಳ ನಡುವೆ ವಾಗ್ವಾದ ಆರಂಭವಾಗಿದೆ. ವಿದ್ಯುತ್ ಮೀಟರ್ ಖರೀದಿ ಸಬಂಧ ಉಭಯ ಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯಿತು.
ಸಿಂಗಲ್ ಫೇಸ್ ಎಲೆಕ್ಟ್ರೋ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯಹಾರ ನಡೆದಿದೆ. ಸ್ವತ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಈ...
ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೋಳಿ ಇಬ್ಬರೂ ಆತ್ಮೀಯರು, ಸಿಎಂ ಗೆ ಜಾರಕಿಹೊಳಿ ಸಹಾಯ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರ ಹಿನ್ನೆಲೆಯಲ್ಲಿ ಜ.28ರಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರ ಸಭೆ...
ಶಾಂತಿನಗರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ ಸುಮಾರು ಮೂರು ಸಾವಿರ ಕೋಟಿ ರೂ.ಗಳಷ್ಟು ಅವ್ಯವಹಾರ ಪ್ರಕರಣದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಭೂ ಕಬಳಿಕೆದಾರರ ವಿರೋಧಿ ಹೋರಾಟ ಸಮಿತಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಸಚಿವ ಮಹದೇವ ಪ್ರಸಾದ್ ಅವರ...
'ತಾಲೀಬಾನ್' ಉಗ್ರ ಒಸಾಮ ಬಿನ್ ಲಾಡೆನ್ ನನ್ನು ಹತ್ಯೆ ಮಾಡಲು ಅಮೆರಿಕಾ ನಡೆಸಿದ ಕಾರ್ಯಾಚರಣೆ ಮಾದರಿಯಲ್ಲೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಭಾರತ ಸರ್ಕಾರವೂ ಕಾರ್ಯಾಚರಣೆ ನಡೆಸಬೇಕು ಎಂದು ಶಿವಸೇನೆ ಆಗ್ರಹಿಸಿದೆ.
ಪಾಕಿಸ್ತಾನದ ಖ್ಯಾತ ಉದ್ಯಮಿಯ ಪುತ್ರನೊಂದಿಗೆ...
ಎಂ.ಎನ್.ಸಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿರುವ ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್ ನನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅತ್ಯಾಚಾರದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಶಿವಕುಮಾರ್ ಯಾದವ್ ನನ್ನು ಡಿ.11ರಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಮೂರ್ತಿ...
'ಮಹಾರಾಷ್ಟ್ರ'ದಲ್ಲಿ ಬಿಜೆಪಿ ಸರ್ಕಾರದೊಂದಿಗೆ ಶಿವಸೇನೆ ಸೇರ್ಪಡೆಗೊಂಡ ಬೆನ್ನಲ್ಲೇ, ಈ ಬೆಳವಣಿಗೆಯನ್ನು ವಿರೋಧಿಸಿ ಮುಂಬೈ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿದ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಸಂದರ್ಭದಲ್ಲಿ ಶಿವಸೇನೆ ಸರ್ಕಾರದ ವಿರುದ್ಧ ಮತ ಚಲಾಯಿಸಿತ್ತು....
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡಿಸೆಂಬರ್ 5ರಂದು ನಡೆಯಲಿದೆ.
ಬಿಜೆಪಿ ಹಾಗೂ ಶಿವಸೇನೆ ನಡುವೆ ಇದ್ದ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಫಡ್ನವೀಸ್ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಸಮಾರಂಭವು ಮಹಾರಾಷ್ಟ್ರದ ರಾಜಭವನದಲ್ಲಿ ಸಂಜೆ 4 ಗಂಟೆಗೆ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಕೇಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮದ ಬಗ್ಗೆ ಮಾಹಿತಿ ಸಿಗುತ್ತಿದೆ. ಕಳಂಕಿತ ನಾಲ್ವರು ಸಚಿವರ...
'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂಪುಟಕ್ಕೆ ಶಿವಸೇನೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು 12 ಶಿವಸೇನೆ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಿವಸೇನೆ ಬಿಜೆಪಿ ಸಚಿವ ಸಂಪುಟ ಸೇರುವುದರ ಬಗ್ಗೆ ಡಿ.1ರಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ಮುಖಂಡ...
'ಮಹಾರಾಷ್ಟ್ರ' ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಶಿವಸೇನೆಯೊಂದಿಗಿನ ಮಾತುಕತೆ ಮುಕ್ತಾಯಗೊಂಡಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಡಿ.1ರಂದು ಮುಂಬೈನಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಧಿಕಾರ ಹಂಚಿಕೆ ಸಂಬಂಧ...
'ದೇವೇಂದ್ರ ಫಡ್ನವೀಸ್' ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿವಸೇನೆಯನ್ನು ಸೇರಿಸಿಕೊಳ್ಳುವ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಯೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬಿಜೆಪಿ ನಾಯಕರಾದ ದೇವೇಂದ್ರ ಪ್ರಧಾನ್, ಚಂದ್ರಕಾಂತ್ ಪಾಟೀಲ್ ಅವರು ಶಿವಸೇನೆ ಯೊಂದಿಗೆ ಮಾತುಕತೆ ನಡೆಸಿ ದೇವೇಂದ್ರ ಫಡ್ನವೀಸ್ ಸರ್ಕಾರವನ್ನು...
ನಗರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸುದ್ದಿವಾಹಿನಿಗಳಾದ ಟಿವಿ9 ಹಾಗೂ ನ್ಯೂಸ್9 ಚಾನೆಲ್ಗಳ ಪ್ರಸಾರವನ್ನು ಕಳೆದ 17 ಗಂಟೆಗಳಿಂದ ಸ್ಧಗಿತಗೊಳಿಸಿರುವುದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡುತ್ತಿರುವ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು...
'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...
'ಮಹಾರಾಷ್ಟ್ರ' ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿದ್ದ ಶಿವಸೇನೆ, ಮತ್ತೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.
ಶಿವಸೇನೆ ಹಾಗೂ ಬಿಜೆಪಿ ಮೈತ್ರಿಗೆ ಮೋಹನ್ ಭಾಗವತ್ ಸಂಧಾನ ನಡೆಸಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಲಾಗಿದೆ. ಶಿವಸೇನೆ...
ನೈಸ್ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೆಗೌಡರು ತಮ್ಮ ವಿರುದ್ದ ಮಾಡಿರುವ ಆರೋಪಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ಕುರಿತ ಯಾವುದೇ ತನಿಖೆಗೂ ತಾವು ಸಿದ್ದ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೆಗೌಡರು ತಮ್ಮ...
'ಮಹಾರಾಷ್ಟ್ರ'ದಲ್ಲಿ, ದೇವೇಂದ್ರ ಫಡ್ನವೀಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಿರುವ ಬಗ್ಗೆ ಉದ್ಭವಿಸಿರುವ ಅಸಮಾಧಾನ ಮುಂದುವರೆದಿದ್ದು, ಬಿಜೆಪಿಯ ಕೆಲ ಮುಖಂಡರು ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ವಿಶ್ವಾಸ ಮತ ಸಾಬೀತು ಸಂದರ್ಭದಲ್ಲಿ ಭ್ರಷ್ಟಚಾರದಲ್ಲೇ ಮುಳುಗಿದ್ದ...
ಕೆಲ ದಿನಗಳ ಹಿಂದೆ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ ನ.12 ಅಗ್ನಿಪರೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಫಡ್ನವೀಸ್ ವಿಶ್ವಾಸಮತ ಯಾಚಿಸಬೇಕಿದೆ.
ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಶಿವಸೇನೆ ಸ್ಪಷ್ಟಪಡಿಸಿದ್ದು, ನಾವು ವಿಪಕ್ಷ ಸ್ಥಾನದಲ್ಲಿ ಆಸೀನರಾಗುವುದಾಗಿ ಶಿವಸೇನೆ ಮುಖ್ಯಸ್ಥ...
'ಬಿಬಿಎಂಪಿ' ಗುಮಾಸ್ತನ ಮೇಲೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ಬೆಂಬಲಿಗರು ಅಕ್ರಮ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಲಿಕೆ ಗುಮಾಸ್ತ ತಿಮ್ಮೇಗೌಡ ನೊಟೀಸ್ ನೀಡಿದ್ದರು. ಇದರಿಂದ ಕೋಪಗೊಂಡ ಡಿ.ಕೆ.ಶಿ ಬೆಂಬಲಿಗರು ಬಿಬಿಎಂಪಿ ಕಚೇರಿಗೆ ನುಗ್ಗಿ ಗುಮಾಸ್ತ...
ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...
'ಕೇಂದ್ರ ಸಚಿವ ಸಂಪುಟ ವಿಸ್ತರಣೆ'ಯ ನಂತರ ಪ್ರಥಮ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನ.10ರಂದು ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಸಂಜೆ 5:30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಸರ್ಕಾರದ ಉನ್ನತ ಮೂಕಗಳು ತಿಳಿಸಿವೆ. ನ.9ರಂದು ಸಚಿವ ಸಂಪುಟ ವಿಸ್ತರಣೆಯಾಗಿದ್ದು,...
ನ.10ರಿಂದ ಆರಂಭವಾಗಿರುವ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಶಿವಸೇನೆ ವಿಪಕ್ಷ ಸ್ಥಾನ ಅಲಂಕರಿಸಿದೆ.
ಬೆಳಗ್ಗೆ 11 ಘಂಟೆಗೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮೊದಲು, ರಾಜಭವನದಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್, ಹಿರಿಯ ಶಾಸಕ ಜೀವ...
ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ.
ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....
ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾರ್ಯಗಳು ಆರಂಭವಾಗಿದ್ದು, ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಅವರಿಗೆ ಸ್ವತಂತ್ರ ಖಾತೆ (ರಾಜ್ಯ ಸಚಿವ) ಸ್ಥಾನ ನೀಡುವುದು ಖಚಿತವಾಗಿದೆ.
ರೂಡಿ ಅವರು ಬಿಹಾರದ ಸರನ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಕೇಂದ್ರದಲ್ಲಿ...
ನ.9ರಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಮಿತ್ರಪಕ್ಷ ಶಿವಸೇನೆಗೆ ಎರಡು ಸ್ಥಾನಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.
ಪ್ರಧಾನಿ ಮೋದಿ ನಿರ್ಧಾರಕ್ಕೆ ಶಿವಸೇನೆ ತನ್ನ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಆದರೆ ಈ ಎರಡೂ ಸ್ಥಾನಗಳು ಸಂಪುಟ ದರ್ಜೆಯವೇ ಅಥವಾ...
ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮನೆಗಳ ಛಾವಣಿ ಮೇಲೆ ಸೌರಶಕ್ತಿ ವಿದ್ಯುತ್ ಉತ್ಪಾದಕ ಘಟಕಗಳಿಗೆ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮತ್ತೆ ಬಿಕ್ಕಟ್ಟು ಉಂಟಾಗಿದೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಮೊದಲ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಗೆ ಶಿವಸೇನೆ ಎಚ್ಚರಿಕೆ ನೀಡಿದ್ದು ರಾಜ್ಯದ ಜನತೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಹೇಳಿದೆ.
ಸಾಮ್ನಾ ಸಂಪಾದಕೀಯದ ಮೂಲಕ ಬಿಜೆಪಿ...
'ಮಹಾರಾಷ್ಟ್ರ'ದ 27ನೇ ಹಾಗೂ ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿ ದೇವೇಂದ್ರ ಗಂಗಾಧರ್ ರಾವ್ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅ.31ರಂದು ಮುಂಬೈನ ಪ್ರಸಿದ್ಧ ವಾಂಖೆಡೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭವ್ಯ ಕಾರ್ಯಕ್ರಮದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಫಡ್ನವೀಸ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ....
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಆಯ್ಕೆಯಾಗುತ್ತಿದ್ದಂತೆಯೇ ಶಿವಸೇನೆ ಸರ್ಕಾರ ರಚನೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಆಂತರಿಕ ಚರ್ಚೆ ಆರಂಭಿಸಿದ್ದು, ಈ ಕುರಿತು ಅ.30ರಂದು ನಿರ್ಧಾರ ಕೈಗೊಳ್ಳಲಿದೆ.
ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆ ಈಗಾಗಲೇ ನಡೆದಿದೆಯಾದರೂ...
ಮಂಗಳಯಾನ ನೌಕೆಯ ಉಡ್ಡಯನದ ಮೊದಲ ಯತ್ನದಲ್ಲೇ ಯಶಸ್ವಿಯಾದ ಸಂತಸದಲ್ಲಿರುವ ಇಸ್ರೋ, ಮತ್ತೊಂದು ಮಂಗಳಯಾನಕ್ಕೆ ಸಜ್ಜಾಗುತ್ತಿದೆ.
2018ರಲ್ಲಿ ಮಂಗಳ ಕಕ್ಷೆಗೆ 2ನೇ ನೌಕೆ ಹಾರಿಸಲು ಯೋಜನೆ ರೂಪಿಸಲಗಿದೆ. ಲ್ಯಾಂಡರ್ ಆಂಡ್ ರೋವರ್ ಮೂಲಕ ಹೆಚ್ಚಿನ ಪ್ರಯೋಗ ನಡೆಸಲು ಉದ್ದೇಶಿಸಲಾಗಿದೆ ಎಂದು ಇಸ್ರೋ ನಿರ್ದೇಶಕ ಎಸ್.ಶಿವಕುಮಾರ್...
ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಲು ಸಿದ್ಧ ಎಂದಿರುವ ಶಿವಸೇನೆ, ಯಾರೇ ಮುಖ್ಯಮಂತ್ರಿಯಾದರೂ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದೆ.
ಶಿವಸೇನೆ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರದಲ್ಲಿನ ಬಿಜೆಪಿ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ...
ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಡ್ಖೇಡ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಶಾಸಕ ಗೋವಿಂದ್ ರಾಥೋಡ್ ನಿಧನರಾಗಿದ್ದಾರೆ. ಓರ್ವ ಶಾಸಕನನ್ನು ಕಳೆದುಕೊಂಡಿರುವ ಬಿಜೆಪಿಯ ಸಂಖ್ಯಾಬಲ 121ಕ್ಕೆ ಇಳಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿದ್ದು ಶಾಸಕಾಂಗ ಪಕ್ಷದ ನೂತನ...
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಕಪಾಳಮೋಕ್ಷ ಮಾಡಿ ಜೈಲಿಗೆ ಕಳುಹಿಸಲಿದೆ ಎಂದು ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಪರಿಸ್ಥಿತಿ ಬರಲಿದೆ...
'ಮಹಾರಾಷ್ಟ್ರ'ದಲ್ಲಿ ಸರ್ಕಾರ ರಚನೆ ಬಗ್ಗೆ ಶಿವಸೇನೆ ಹಾಗೂ ಬಿಜೆಪಿಯೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ಆರಂಭವಾಗುವ ಸೂಚನೆ ದೊರೆತಿದೆ. ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿರುವ ಜೊತೆಜೊತೆಗೇ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಪ್ರಾರಂಭವಾಗಿದೆ. ಸಮ್ಮಿಶ್ರ ಸರ್ಕಾರ ರಚನೆಯಾದರೂ ಸಿ.ಎಂ ಹುದ್ದೆ ರೇಸ್ ನಲ್ಲಿ...
ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...
'ಮಹಾರಾಷ್ಟ್ರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ, ತೆರೆ ಮರೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಬಿಜೆಪಿಗೆ ಎನ್.ಸಿ.ಪಿ, ಶಿವಸೇನೆ ಬೆಂಬಲ ನೀಡಲು ಸಿದ್ಧವಿದ್ದರೂ ಏಕಾಂಗಿಯಾಗಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಹೈಕಮಾಂಡ್...
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿರುವ ಎನ್ ಸಿಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ.
ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮುಂದಾಗಿರುವ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಅವಕಾಶವಾದಿ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.
ಮಹಾರಾಷ್ಟ್ರದಲ್ಲಿ...
ಮಹಾರಾಷ್ಟ್ರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ ಅತಂತ್ರ ವಿಧಾನಸಭೆ ರಚನೆಯಾಗಿದೆ. ಸರ್ಕಾರ ರಚನೆಗೆ ಬಿಜೆಪಿ, ಶಿವಸೇನೆ ಜತೆ ಮರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅ.20ರಂದು ನಿರ್ಧಾರವಾಗಲಿದೆ.
ಸರ್ಕಾರ ರಚನೆಗೆ 23 ಸ್ಥಾನಗಳ ಕೊರತೆ ಎದುರಿಸುತ್ತಿರುವ ಬಿಜೆಪಿ ಶಿವಸೇನೆಯತ್ತ ದೃಷ್ಟಿ ಹರಿಸಿದೆ. ಈ ನಡುವೆ...
ಬಿಜೆಪಿಯಿಂದ ಪ್ರಸ್ತಾವನೆ ಬಂದರೆ ಮಾತ್ರ ಮೈತ್ರಿ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ನಾವು ಸಿಂಹದಂತೆ ಏಕಾಂಗಿಯಾಗಿ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.
ಶಿವಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿಕೆ ನೀಡಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...
'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ...
ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ.
ಬೆಳಿಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನ 11ಗಂಟೆ ವೇಳೆಗೆ ಚಿತ್ರಣ ಹೊರ ಬೀಳಲಿದೆ. ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ...
ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆಯಾದರೂ ಸ್ಪಷ್ಟ ಬಹುತ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವಿಸ್, ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ 15 ವರ್ಷಗಳ ದುರಾಡಳಿತಕ್ಕೆ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆಯಿದ್ದು, ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ 45-50 ಸ್ಥಾನಗಳಲ್ಲಿ ಹಿನ್ನಡೆಯಲ್ಲಿದೆ. ಹೀಗಾಗಿ ಸಂಪೂರ್ಣ ಮತ ಎಣಿಕೆ ವೇಳೆ ಬಿಜೆಪಿಗೆ...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2...
'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲು ಇನ್ನು 24ಗಂಟೆಗಳಷ್ಟೇ ಬಾಕಿ ಇದೆ. ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆಯತ್ತ ಎಲ್ಲರ ಗಮನ ನೆಟ್ಟಿದೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಹುಮತ ಪಡೆದು ಸರ್ಕಾರ ರಚಿಸಲು ಅರ್ಹತೆ ಪಡೆಯುವ ಏಕೈಕ ಪಕ್ಷವಾಗಿ ಬಿಜೆಪಿ...
ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಗೆ ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅ.17ರಂದು ಸುಪ್ರೀಂ ಕೋರ್ಟ್ ನೀಡಿರುವ ಈ ಆದೇಶದಿಂದ ಡಿ.ಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ...
ಲೋಕಸಭಾ ಚುನಾವಣೆ ವೇಳೆ ಶಿವಸೇನೆ ಬಿಜೆಪಿಗೆ ಬೆಂಬಲ ನೀಡದಿದ್ದರೆ ನರೇಂದ್ರ ಮೋದಿ ಇರಲಿ, ಅವರ ಅಪ್ಪ ದಾಮೋದರದಾಸ್ ಕೂಡ ಬಹುಮತಗಳಿಸಲು ಸಾಧ್ಯವಿರಲಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ...
ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ-ಹರ್ಯಾಣ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿಯೇ ಮುಂದಿದೆ. ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿಯೂ ಬಿಜೆಪಿಯೇ ಉಭಯ ರಾಜ್ಯಗಳಲ್ಲೂ ಅಧಿಕಾರಕ್ಕೆ ಬರಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.
ಟೈಮ್ಸ್ ನೌ- ಸಿಓಟರ್, ಚಾಣಕ್ಯ, ಎಬಿಪಿ ನೀಲ್ಸನ್ ಸಂಸ್ಥೆಗಳು...
ಕ್ರೂರ ಮೃಗಗಳಿಂದ ನಡೆಯುವ ದುರ್ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಬೇಕೆಂದು ಆದೇಶಿಸಿ ಅರಣ್ಯಾಧಿಕಾರಿಗಳಿಗೆ ಕೇಂದ್ರ ಮೃಗಾಲಯ ಪ್ರಾಧಿಕಾರ ಅ.15ರಂದು ನೊಟೀಸ್ ಜಾರಿ ಮಾಡಿದೆ.
ಮೃಗಾಲಯಗಳಲ್ಲಿ ಕ್ರೂರ ಪ್ರಾಣಿಗಳ ಅಟ್ಟಹಾಸಕ್ಕೆ ಪ್ರವಾಸಿಗರು ಸಾವನ್ನಪ್ಪುವ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ...
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲದಿದ್ದರೂ ಲೋಡ್ ಶೆಡ್ದಿಂಗ್ ಜಾರಿ ಮಾಡಲು ಹೊರಟಿರುವ ಇಂಧನ ಸಚಿವ ಡಿ.ಕೆ.ಶಿವಕುಮರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮತನಾಡಿದ ಅವರು, ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾಗಿವೆ....
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ವೈಯಕ್ತಿಕ ವಿಷಯಗಳನ್ನು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಮೂಲಕ ನರೇಂದ್ರ ಮೋದಿ, ಪ್ರಧಾನಿ ಹುದ್ದೆಗಿರುವ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಹುದ್ದೆ...
ಲೋಡ್ ಶೆಡ್ಡಿಂಗ್ ಜಾರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸರ್ಕಾರ ಕತ್ತಲೆ ರಾಜ್ಯವನ್ನು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಬೇಡಿಕೆಯೂ ಕಡಿಮೆಯಿದೆ. ಬೆಂಗಳೂರಿನಲ್ಲಿ...
ರಾಜ್ಯದ ಜನೆತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ಕೊರತೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ.25ರಷ್ಟು ವಿದ್ಯುತ್...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಹಾಗೂ ಚೀನಾ ದೇಶಗಳು ಭಾರತದ ಮೇಲೆ ನಿರಂತರವಾಗಿ ಅತಿಕ್ರಮಣ ಮಾಡುತ್ತಿದ್ದರೂ ಪ್ರಧಾನಿ ಸುಮ್ಮನಿದ್ದಾರೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಿವಸೇನೆ, ಮೊದಲು ಪಾಕಿಸ್ತಾನದಿಂದ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಬಗ್ಗೆ ಗಮನ ಹರಿಸಿ ನಂತರ ಮಹಾರಾಷ್ಟ್ರದ ಬಗ್ಗೆ ಗಮನ ಹರಿಸಬಹುದು ಎಂದು ಹೇಳಿದೆ.
ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ...
'ಬಿಜೆಪಿ' ವಿರುದ್ಧ ಶಿವಸೇನೆ ವಾಗ್ದಾಳಿ ಮುಂದುವರೆಸಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಸರಣಿ ಪ್ರಚಾರ ಕೈಗೊಂಡಿರುವುದನ್ನು ಟೀಕಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿನ ಕೆಲಸ ಬಿಟ್ಟು ಮಹಾರಾಷ್ಟ್ರಕ್ಕೆ ಬಂದು ಪ್ರಚಾರ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದೆ....
ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂಬ ವಿರೋಧಿಗಳ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ತಾವು ದೆಹಲಿಯಲ್ಲಿರುವವರೆಗೂ ಮಹಾರಾಷ್ಟ್ರವನ್ನು ವಿಭಜಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅ.7ರಂದು ಚುನಾವಣಾ ಪ್ರಚಾರ...
ಬಾಳ ಠಾಕ್ರೆ ಬಗ್ಗೆ ನನಗೆ ಅಪಾರ ಗೌರವವಿದೆ ಹೀಗಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಿರುಗೇಟು ನೀಡಿದ್ದಾರೆ.
ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಾಳ ಠಾಕ್ರೆ ಮೇಲಿನ ವೈಯಕ್ತಿಕ...
ಶಿವಸೇನೆ ಸಂಸ್ಥಾಪಕ ಬಾಳ ಠಾಕ್ರೆ ಮೇಲಿನ ಗೌರವದಿಂದಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಾಂಗ್ಲಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ಶಿವಸೇನೆ ವಿರುದ್ಧ ಯಾಕೆ ಮಾತನಾಡುವುದಿಲ್ಲ...
ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು.
ನಾನು ಎಂದಿಗೂ ಭಾಷೆ,...
ಬಿಜೆಪಿ-ಶಿವಸೇನೆ ನಡುವಿನ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಉಭಯ ಪಕ್ಷಗಳ ಮೈತ್ರಿ ಮುಂದುವರಿದರೆ ಸಂತೋಷ ಎಂದು ತಿಳಿಸಿದ್ದಾರೆ.
ಅಹಮದಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಬಿಜೆಪಿ ಮೈತ್ರಿ ಸುದೀರ್ಘವಾದದ್ದು. ಅಂತಹ...
ಬಿಜೆಪಿ-ಶಿವಸೇನೆ ನಡುವಣ ಸುದೀರ್ಘ 25 ವರ್ಷಗಳ ಮೈತ್ರಿ ಮುರಿಯಲು ಎನ್ ಸಿಪಿ ಮುಖಂಡ ಶರದ್ ಪವಾರ್ ಕಾರಣ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.
ಪ್ಪಶ್ಚಿಮ ಮುಂಬೈನಲ್ಲಿ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಮೈತ್ರಿ ಮುರಿದರೆ ಎನ್...
'ಮಹಾರಾಷ್ಟ್ರ'ದಲ್ಲಿ ಬಿಜೆಪಿ-ಶಿವಸೇನೆ ನಡುವಿನ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದುಬಿದ್ದಿರುವುದಕ್ಕೆ ಶಿವಸೇನೆ ಯುವ ಮುಖಂಡ ಆದಿತ್ಯ ಠಾಕ್ರೆ ತೀರ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಶಿವಸೇನಾ ಯುವ ನಾಯಕ, 25ವರ್ಷಗಳ ಹಳೆಯ ಮೈತ್ರಿ ಮುರಿದುಬೀಳುತ್ತದೆ ಎಂದು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಗ್ಗೆ ಕೇಂದ್ರ ಸಚಿವ ಕಲ್ ರಾಜ್ ಮಿಶ್ರಾ ಪ್ರತಿಕ್ರಿಯಿಸಿದ್ದು ಮಹಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಆದರೂ ಶಿವಸೇನೆಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚಿಂತನೆ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧಿಸಿದಂತೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸಂಪುಟ ತೊರೆಯುವುದಿಲ್ಲ ಎಂದು ಶಿವಸೇನೆ ಮುಖಂಡ, ಕೇಂದ್ರ ಸಚಿವ ಅನಂತ್ ಗೀತೆ ಸ್ಪಷ್ಟಪಡಿಸಿದ್ದಾರೆ.
ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯವಿರಬಹುದು ಆದರೆ ಎಂದಿಗೂ ಶಿವಸೇನೆ...
ಬಿಜೆಪಿ ಜತೆಗಿನ 25 ವರ್ಷಗಳ ಮೈತ್ರಿ ಮುರಿದುಬಿದ್ದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್.ಡಿ.ಎ ಕೂಟದಿಂದ ನಿರ್ಗಮಿಸಲು ಶಿವಸೇನೆ ಚಿಂತನೆ ನಡೆಸಿದೆ.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಶಿವಸೇನೆಯ ಏಕೈಕ ಸಂಸದ ಅನಂತ ಗೀತೆ ಮಂತ್ರಿ ಸ್ಥಾನಕ್ಕೆ...
ಮಹಾರಾಷ್ಟ್ರದಲ್ಲಿ 25 ವರ್ಷಗಳ ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಅಂತ್ಯಗೊಂಡ ಬೆನ್ನಲ್ಲೇ ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಬಿಜೆಪಿ ನಾಯಕರು ಮಹಾರಾಷ್ಟ್ರದ ವೈರಿಗಳು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಬಿಜೆಪಿ-ಶಿವಸೇನೆಯ ಸುದೀರ್ಘ ಮೈತ್ರಿ ಮುಂದುವರೆಯಬೇಕು ಎಂಬುದು ಮೈತ್ರಿಕೂಟದ ಇತರ...
ಮಹಾರಾಷ್ಟ್ರದಲ್ಲಿ ಕಳೆದ 25ವರ್ಷಗಳಿಂದ ಅಭಾದಿತವಾಗಿ ಮುಂದುವರೆದುಕೊಂಡು ಬಂದಿದ್ದ ಬಿಜೆಪಿ-ಶಿವಸೇನೆ ಮೈತ್ರಿ ಬಹುತೇಕ ಅಂತ್ಯವಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ಕ್ಷಣಗಳವರೆಗೂ ನಡೆದ ಉಭಯ ಪಕ್ಷಗಳ ನಡುವಿನ ಮಾತುಕತೆ...
ದೇಶದ ಸ್ವಚ್ಛತೆಗಾಗಿ ನಾವು ಭಿಕ್ಷೆ ಬೇಡೋಣ. ದಿನದ 2 ಗಂಟೆ ನೀವು ನನಗಾಗಿ ಮೀಸಲಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳಿಗೆ ಕರೆ ನೀಡಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಶಿವಕುಮಾರ ಸ್ವಾಮೀಜಿಯವರಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆದರು....
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಸೀಟು ಹಂಚಿಕೆ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆಯಾದರೂ ಬಿಜೆಪಿ ಹಾಗೂ ಶಿವಸೇನೆ ಎರಡೂ ಪಕ್ಷಗಳು ಕೊಂಚ ತಮ್ಮ ಪಟ್ಟು ಸಡಿಲಿಸಿವೆ.
ಬಿಜೆಪಿ ಮೊದಲಿನ 135 ಸ್ಥಾನದ ಪಟ್ಟು ಸಡಿಲಿಸಿ 130 ಸ್ಥಾನಕ್ಕೆ ಬೇಡಿಕೆಯಿಟ್ಟಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿದಿದೆ. ಉಭಯ ಪಕ್ಷಗಳ ನಾಯಕರು ನಡೆಸಿದ ಮಾತುಕತೆ ಸಫಲವಾಗಿದೆ.
ಬಿಜೆಪಿ-ಶಿವಸೇನೆ ನಾಯಕರ ನಡುವೆ ನಡೆದ ಮಹತ್ವದ ಮಾತುಕತೆಯಲ್ಲಿ ಮೈತ್ರಿ ಮುಂದುವರೆಸಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ.
288 ವಿಧಾನಸಭಾ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಹಾಗೂ ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸೆ.22ರಂದು ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.
ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 119 ಸ್ಥಾನ ಬಿಟ್ಟುಕೊಡುವುದಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಮ್ಮ ಕೊನೆ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಕಗ್ಗಂಟಾಗಿಯೇ ಉಳಿದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಪಟ್ಟು ಸಡಿಲಿಸಿ, ಮೈತ್ರಿ ಉಳಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮನವಿ ಮಾಡಿದ್ದಾರೆ ಎಂಬ ಸುದ್ಧಿಯನ್ನು ಉದ್ಧವ್ ಠಾಕ್ರೆ ನಿರಾಕರಿಸಿದ್ದಾರೆ.
ಸೀಟು ಹಂಚಿಕೆ ಗೊಂದಲಕ್ಕೆ...
ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಅವರಿಗೆ ಯಾವುದೇ ಶಿಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸೆ.22ರಂದು ರಾಮನಗರದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್...
ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಸೆ.27 ಕೊನೆ ದಿನವಾಗಿದೆ.
ಅ.1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಅ.19ರಂದು ಫಲಿತಾಂಶ ಘೋಷಣೆಯಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನ.8ರಂದು ಮುಗಿಯಲಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 29...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ಸೀಟು ಹಂಚಿಕೆ ಬಿಕ್ಕಟ್ಟು ಮುಂದುವರೆದಿದೆ. ಈ ನಡುವೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಗೆ ಪ್ರಬಲ ಸಂದೇಶ ರವಾನಿಸಿದ್ದಾರೆ.
ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಶಿವಸೇನೆ ಮಹತ್ವದ ಸಭೆ ನಡೆಯುತ್ತಿದ್ದು, ಈ ವೇಳೆ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ.
ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ.
ತನ್ನ...
'ಉತ್ತರ ಪ್ರದೇಶ'ದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ.
ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಶಿವಸೇನೆಯ ಮೈತ್ರಿ ಭಂಗವಾಗುವ ಸಾಧ್ಯತೆಯಿದ್ದು, ಒಂದು ವೇಳೆ ಉಭಯ ಪಕ್ಷಗಳ ನ್ನಡುವೆ ಮೈತ್ರಿ ಮುರಿದುಬಿದ್ದರೆ ಪ್ಲಾನ್ ಬಿ ಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿವೆ.
ಸ್ಥಾನ ಹೊಂದಾಣಿಕೆ ಹಾಗೂ ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಬಿಜೆಪಿ ಮತ್ತು ಶಿವಸೇನೆಯ...
ಕೆ.ಎಂ.ಎಫ್ ಅಧ್ಯಕ್ಷ ಗಾದಿಗಾಗಿ ಉಂಟಾಗಿದ್ದ ತೀವ್ರ ಪೈಪೋಟಿಗೆ ತೆರೆ ಬಿದ್ದಿದೆ. ಕೆ.ಎಂ.ಎಫ್ ನ ನೂತನ ಅಧ್ಯಕ್ಷರಾಗಿ ಪಿ.ನಾಗರಾಜ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಸ್ಪಷ್ಟಪಡಿಸಿರುವ ಸಹಕಾರ ಸಚಿವ ಮಹದೇವ್ ಪ್ರಸಾದ್, ಮೊದಲ 2 ವರ್ಷಗಳ ಅವಧಿಗೆ ನಾಗರಾಜ್ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ಆಯ್ಕೆ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ.
ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...
ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ನಲ್ಲಿ ನಡೆದ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಡಿ.ಎ ಮೈತ್ರಿ ಪಕ್ಷ ಶಿವಸೇನೆ,ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಪಾಠ ಕಲಿಯಬೇಕು ಎಂದು ಎಚ್ಚರಿಸಿದೆ.
ಮುಂಬೈ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸನಿಹದಲ್ಲೇ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಶಿವಸೇನೆ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಗೊಂದಲಗಳಿಗೆ ಕಾರಣವಾಗಿದೆ.
ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ, 155ಕ್ಕಿಂತಲೂ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಲು...
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...
ಕೇರಳದ 23ನೇ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ.ಸದಾಶಿವಂ ಪದಗ್ರಹಣ ಮಾಡಿದ್ದಾರೆ.
ಶೀಲಾ ದೀಕ್ಷಿತ್ ರಿಂದ ತೆರವಾದ ರಾಜ್ಯಪಾಲರ ಸ್ಥಾನಕ್ಕೆ ಸದಾಶಿವಂ ನೇಮಕಗೊಂಡಿದ್ದು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಶೋಕ್ ಭೂಷಣ್ ಪ್ರಮಾಣ ವಚನ...
ತೀವ್ರ ವಿರೋಧದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾ.ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದೆ.
ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಕಳುಹಿಸಿದ್ದ ಶಿಫಾರಸಿಗೆ ರಾಷ್ಟ್ರಪತಿ ಪ್ರಣಬ್...
ಜಮ್ಮು-ಕಾಶೀರದ ಗಡಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಗುಂಡಿನ ದಾಳಿಯಲ್ಲಿ ತೊಡಗಿರುವ ಪಾಕ್ ಸೇನೆ, ತನ್ನ ಕೃತ್ಯ ಮುಂದುವರೆಸುವ ಮೂಲಕ ಭಾರತವನ್ನು ಇನ್ನಷ್ಟು ಕೆಣಕುವ ಯತ್ನ ನಡೆಸಿದೆ.
ಕಳೆದ 15ದಿನಗಳಲ್ಲಿ ಪಾಕಿಸ್ತಾನ 21ಬಾರಿ ಕದನ ವಿರಾಮ ಉಲ್ಲಂಘನೆಮಾಡಿದೆ. ಆಗಸ್ಟ್ ತಿಂಗಳೊಂದರಲ್ಲೇ 23ಬಾರಿ, ಜು.16ರಿಂದ...
'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಗುತ್ತದೆ. ಅನಂತ ಮೂರ್ತಿ ಅವರ ಕುಟುಂಬಸ್ಥರು ಮತ್ತು ಅವರ...
ಆ.22ರಂದು ನಿಧನರಾಗಿದ್ದ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಸೂರ್ಯ ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ವೇದಘೋಗಳನ್ನು ಪಠಿಸುವ ಮೂಲಕ...
'ರಂಜಾನ್' ಉಪವಾಸದಲ್ಲಿದ್ದ ಕ್ಯಾಟರಿಂಗ್ ಮೇಲ್ವಿಚಾರಕನಿಗೆ ಚಪಾತಿ ತಿನ್ನಿಸಲೆತ್ನಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಆ.22ರಂದು ವಜಾಗೊಳಿಸಿದೆ.
ಬಲವಂತವಾಗಿ ಚಪಾತಿ ತಿನ್ನಿಸಲೆತ್ನಿಸುವ ಮೂಲಕ ಮಹಾರಾಷ್ಟ್ರ ಸದನದ ಮುಸ್ಲಿಂ ಸಿಬ್ಬಂದಿ ಉಪವಾಸಕ್ಕೆ ಅಡ್ಡಿಪಡಿಸಿದ್ದ 11 ಶಿವಸೇನೆ ಸಂಸದರನ್ನು ಅನರ್ಹಗೊಳಿಸಲು ಲೋಕಸಭೆ ಹಾಗೂ ರಾಜ್ಯಸಭಾಧ್ಯಕ್ಷರಿಗೆ ನಿರ್ದೇಶಿಸಬೇಕೆಂದು ಕೋರಿ...
ಜನರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಜನರು ಬಹುದಿನಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ವಾರ್ಥಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾರೆ, ಬಳ್ಳಾರಿ ಸಂಪತ್ತಿನೆ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಬಿದ್ದಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ.
ಶಿಕಾರಿಪುರ, ಬಳ್ಳಾರಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಆ.21ರಂದು ನಡೆಯಲಿರುವ ಉಪಚುನಾವಣೆಯ ಪ್ರಚಾರಕ್ಕೆ ಸಂಜೆ ತೆರೆ...
ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕಷ್ಟೇ ಸೀಮಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆ.21ರಂದು ನಡೆಯಲಿರುವ ಮೂರುಕ್ಷೇತ್ರಗಳ ಉಪಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕಾರಿಪುರದಲ್ಲಿ ಜೆಡಿಎಸ್, ಬಿಜೆಪಿಯ...
ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...
ವಿಧಾನಸಭೆ ಉಪಚುನಾವಣೆ ಭರಾಟೆ ದಿನದಿಂದ ದಿನಕ್ಕೆ ಅಬ್ಬರಪಡೆದುಕೊಳ್ಳುತ್ತಿದ್ದು, ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ ವಿಚಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ಮನೆ...
'ಬಳ್ಳಾರಿ' ಕಾಂಗ್ರೆಸ್ ಒಡೆದ ಮನೆಯಂತಾಗಿದ್ದು ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕರು ಊಟ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಆ.12ರಂದು ಬಳ್ಳಾರಿಯಲ್ಲಿರುವ ಬಿಜೆಪಿ ನಾಯಕ ಶೆಟ್ಟರ್, ಸೋಮಶೇಖರ ರೆಡ್ಡಿ ನಿವಾಸಕ್ಕೆ...