ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯಕ್ರಮ ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದ ರಾಯಭಾರಿ ಯಾರಾಗಬಹುದು ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಬ್ರ್ಯಾಂಡ್ ಅಂಬಾಸಿಡರ್ ಆಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಆಯ್ಕೆ ಮಾಡಲಾಗಿದೆ.
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯ ತೀವ್ರ ಚರ್ಚೆಗೆ ಕಾರಣವಾಗಿದ್ದ...
ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಹೇಳಿದ್ದ ಪಾಕಿಸ್ತಾನ ಪ್ರಸ್ತಾವನೆಗೆ ಭಾರತ ತಿರುಗೇಟು ನೀಡಿದೆ.
ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ...
ಯುದ್ಧ ವಿಮಾನಗಳಿಗೆ ಇಂಧನ ಪೂರೈಕೆ ಮಾಡುವ 6 ವಿಮಾನಗಳ ಖರೀದಿಗೆ ಕೇಂದ್ರ ರಕ್ಷಣಾ ಸಚಿವಾಲಯ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಫ್ಲೈಟ್ ರಿಫ್ಯೂಯೆಲಿಂಗ್ ಏರ್ಕ್ರಾಫ್ಟ್ (ಎಫ್ಆರ್ಎ) ಮೂಲಕ ಬಾಂಬರ್ ಮತ್ತು ಯುದ್ಧ ವಿಮಾನಗಳಿಗೆ ಯುದ್ಧದ ಸಂದರ್ಭಗಳಲ್ಲಿ ತ್ವರಿತವಾಗಿ ಇಂಧನ ಪೂರೈಕೆ ಮಾಡುವ ಸಲುವಾಗಿ...
ಸ್ಮಾರ್ಟ್ ಸಿಟಿ ಪಟ್ಟಿಗೆ ಬೆಂಗಳೂರು ಸೇರಿದಂತೆ 9 ನಗರಗಳನ್ನು ಸೇರ್ಪಡೆಗೊಳಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿವೆ.
9 ನಗರಗಳು ಹೊಸದಾಗಿ ಸೇರ್ಪಡೆಯಾಗುವ ಮೂಲಕ ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಂಡಿರುವ ನಗರಗಳ ಸಂಖ್ಯೆ 100 ರಿಂದ 109 ಕ್ಕೆ ಏರಿಕೆಯಾಗಲಿದೆ.
ಈ...
ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7ರಿಂದ ಆಫ್ರಿಕಾದ 4 ದೇಶಗಳಿಗೆ 5 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಮೊದಲು ಮೊಜಾಂಬಿಕ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಜು.8, 9 ರಂದು ಅಲ್ಲಿನ ಅಧ್ಯಕ್ಷ...
ಪಠಾಣ್ಕೋಟ್ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್ಕೋಟ್ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು,...
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಒಬಾಮ ಹೊಂದಿರುವ ಅತ್ಯಂತ ಭದ್ರತೆಯುಳ್ಳ "ಏರ್ ಫೋರ್ಸ್ ಒನ್' ಮಾದರಿಯ ವಿಮಾನದಲ್ಲಿ ಶೀಘ್ರವೇ ಸಂಚರಿಸಲಿದ್ದಾರೆ. ಯಾವುದೇ ರೀತಿಯ ಬಾಹ್ಯ ದಾಳಿಗಳಿಂದ ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಈ ವಿಶೇಷ ವಿಮಾನಕ್ಕಿದೆ.
2 ವಷ೯ಗಳ ಆಡಳಿತಾವಧಿಯಲ್ಲಿ 40 ರಾಷ್ಟ್ರಗಳಿಗೆ...
ಸೋಮವಾರ ಬುಧ ಗ್ರಹ ಭೂಮಿಯ ಸಮೀಪದಲ್ಲಿ ಹಾದುಹೋಗಲಿದೆ. ಸೂರ್ಯನ ಸುತ್ತ ಹಾದುಹೋಗುವ ಬುಧ ಗ್ರಹವನ್ನು ವೀಕ್ಷಿಸುವ ಅದೃಷ್ಟ ಈ ಬಾರಿ ಭಾರತೀಯರಿಗೆ ಒಲಿದಿದ್ದು, ಸಂಜೆ 4.41ರಿಂದ ಮರ್ಕ್ಯುರಿಯನ್ನು ವೀಕ್ಷಿಸಬಹುದು.
ಈ ಬಾರಿಯ 7 ಗಂಟೆ ಮತ್ತು 30 ನಿಮಿಷದ ಕಾಲಾವಧಿಯಲ್ಲಿ ಸೂರ್ಯನನ್ನು...
ಕೊನೆಗೂ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ.
ಏ.26 ರಂದು ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಹಾರ್ಟ್ ಆಫ್ ಏಷ್ಯಾ...
ರೈಲ್ವೇ ಸಚಿವಾಲಯ ಪ್ರಯಾಣಿಕರ ಅನುಕೂಲತೆಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
ಇನ್ನು ಮುಂದೆ ರೈಲಿನಲ್ಲಿ ಪ್ರಯಾಣ ಮಾಡುವಾಗ 25 ಬಗೆಯ ಚಹಾ ಸವಿಯಬಹುದು ಮತ್ತು ರೈಲ್ವೇ ಒದಗಿಸುವ ಬೆಡ್ಶೀಟ್ ಮತ್ತು ದಿಂಬನ್ನು ಮನೆಗೊಯ್ಯಬಹುದಾಗಿದೆ.
ಐಆರ್ಸಿಟಿಸಿ ಖಾಸಗಿ ಸಂಸ್ಥೆಯೊಂದಿಗೆ ಪ್ರಯಾಣಿಕರಿಗೆ ವೈವಿಧ್ಯಮಯ ಚಹಾ ಸರಬರಾಜು...
ಅಕ್ರಮ ಆಸ್ತಿ ಗಳಿಕೆ ಹಾಗೂ ಲಂಚ ನೀಡಿ ಉನ್ನತ ಹುದ್ದೆ ಗಿಟ್ಟಿಸಿದ ಆರೋಪ ಸಂಬಂಧ ಸೇವೆಯಲ್ಲಿರುವ ಇಬ್ಬರು ಮೇಜರ್ ಜನರಲ್ಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಕ್ಷಣಾ ಸಚಿವಾಲಯ ಹೇಳಿದೆ.
ಗುರುವಾರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಇಬ್ಬರು ಮೇಜರ್ ಜನರಲ್ಗಳ...
ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯುವ ವಿಧಾನವನ್ನು ಇನ್ನಷ್ಟು ಸುಲಭವಾಗಿಸಿದೆ. ಅರ್ಜಿಯ ಜೊತೆ ಆಧಾರ್, ಮತದಾರನ ಗುರುತಿನ ಚೀಟಿ ಮತ್ತು ಪಾನ್ಕಾರ್ಡ್ ಜೊತೆ ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಕೇಸುಗಳು ಬಾಕಿ ಇಲ್ಲ ಎಂಬ ಅಫಿಡವಿಟ್ ಹೇಳಿಕೆ ನೀಡಿದರೆ ಒಂದು ವಾರದಲ್ಲಿ...
ಉಗ್ರಗಾಮಿಗಳ ಒಳನುಸುಳುವಿಕೆಯನ್ನು ತಡೆಯಲು, ಭಾರತ - ಪಾಕಿಸ್ತಾನ ಗಡಿಪ್ರದೇಶದಲ್ಲಿನ 40 ಜಾಗಗಳನ್ನು ಗುರುತಿಸಿ ಅಲ್ಲಿ ಲೇಸರ್ ಗೋಡೆಗಳನ್ನು ನಿರ್ಮಿಸಲು ಗೃಹ ಸಚಿವಾಲಯ ನಿರ್ಧರಿಸಿದೆ. ಪಠಾಣ್ ಕೋಟ್ ದಾಳಿಯ ನಂತರ ಉಗ್ರರ ಒಳನುಸುಳುವಿಕೆ ತಡೆಯಲು ಗೃಹ ಸಚಿವಾಲಯ ಅತ್ಯಂತ ಪ್ರಾಮುಖ್ಯತೆ ಕೊಟ್ಟ ಹಿನ್ನಲೆಯಲ್ಲಿ...
ಹೊಸ ವರ್ಷದ ಆರಂಭಕ್ಕೆ ಪ್ರತಿ ಲೀಟರ್ ಪೆಟ್ರೋಲ್ 63 ಪೈಸೆ ಮತ್ತು ಡೀಸೆಲ್ 1.06 ರೂ. ಇಳಿಕೆ ಮಾಡಿ ತೈಲ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ಜಾಗತಿಕ ತೈಲ ಬೆಲೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಒಂದು ತಿಂಗಳಿನಲ್ಲಿ ಮೂರನೇ ಬಾರಿ ಬಾರಿಗೆ ಪೆಟ್ರೋಲ್...
ದಿನೇ ದಿನೇ ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಮೋದಿ ಸರಕಾರ ಕೇಂದ್ರ ಸರಕಾರಿ ಸ್ವಾಮ್ಯದ ಎಂಎಂಟಿಸಿ ಗೆ ನಿರ್ದೇಶಿಸಿದೆ.
ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳಿ (ಎನ್ಎಎಫ್ಇಡಿ) 10 ಸಾವಿರ ಟನ್ ಈರುಳ್ಳಿಯನ್ನು ಆಮದು...
ಮಧ್ಯಪ್ರದೇಶದ ಹರ್ದಾ ಬಳಿ ಮಂಗಳವಾರ ರಾತ್ರಿ ನಡೆದ ಎರಡು ರೈಲು ಅಪಘಾತದಲ್ಲಿ ಈವರೆಗೆ ಸುಮಾರು 24 ಜನ ಮೃತಪಟ್ಟಿರುವ ವರದಿಯಾಗಿದೆ. 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ವಾರಣಾಸಿ-ಮುಂಬಯಿ ಮಾರ್ಗದ ಕಾಮಯಾನಿ ಎಕ್ಸ್ ಪ್ರೆಸ್ ರೈಲು ಮಂಗಳವಾರ...
ಭಾಷೆ ಪರದೇಶಗಳಲ್ಲಿ ಅಪರಿಚತರನ್ನೂ ಒಂದುಗೂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಷ್ಯಾ ಹಾಗೂ 5 ಮಧ್ಯ ಏಷಿಯಾ ದೇಶಗಳ ಪ್ರವಾಸದಲ್ಲಿರುವ ಮೋದಿ ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್ ನಲ್ಲಿ ಜು.7ರಂದು ಅನಿವಾಸಿ ಭಾರತೀಯರನ್ನು, ಹಿಂದಿ ಭಾಷೆ ಕಲಿಯುವ ವಿದ್ಯಾರ್ಥಿಗಳನ್ನು ಹಾಗೂ ಭಾರತ...
ದೇಶದ ಮೋಸ್ಟ್ ವಾಂಟೆಡ್ ಉಗ್ರರಾದ ದಾವೂದ್ ಇಬ್ರಾಹಿಂ, ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್, ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೂಮ್ಮೆ ಒತ್ತಡ ಹೇರಲು ಮುಂದಾಗಿದೆ. ಈ ಸಂಬಂಧ...
ಕಾಣೆಯಾದ ಮಕ್ಕಳ ಪತ್ತೆಗೆ, ಸಿಕ್ಕಿದ ಮಕ್ಕಳನ್ನು ಅವರ ಹೆತ್ತವರೊಂದಿಗೆ ಸೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜೂ.2ರಿಂದ ವೆಬ್ ಸೈಟ್ ವೊಂದನ್ನು ಆರಂಭಿಸಲಿದೆ.
ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 11 ಮಕ್ಕಳು ಕಾಣೆಯಾಗುತ್ತಿದ್ದು ಅಂಥ ಮಕ್ಕಳ ಬಗ್ಗೆ ಸುದ್ದಿಯನ್ನು ಪ್ರಕಟಿಸಲು, ಕಾಣೆಯಾದ ಮಕ್ಕಳ ಬಗ್ಗೆ ಮಾಹಿತಿ...
ನಾಲ್ವರು ಮಹಿಳಾ ಕ್ರೀಡಾಪಟುಗಳು ಆತ್ಮಹತ್ಯೆಗೆ ಯತ್ನಿಸಿ, ಅವರಲ್ಲಿ ಓರ್ವ ಕ್ರೀಡಾ ಪಟು ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.
ತಿರುವನಂತಪುರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್ ನ ಕ್ರೀಡಾ ತರಬೇತುದಾರರು ನೀಡುತ್ತಿದ್ದ ಕಿರುಕುಳದಿಂದ ನೊಂದಿರುವ ಬಾಲಕಿಯರು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ 15...
ಅಪಘಾತಗಳನ್ನು ತಪ್ಪಿಸಿ ರಸ್ತೆಗಳನ್ನು ಹೆಚ್ಚು ಸುರಕ್ಷಿತ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಅಕ್ಟೋಬರ್ 1ರಿಂದ ಬಸ್, ಲಾರಿ, ಟ್ರಕ್, ಡಂಪರ್, ಮಿನಿ ಲಾರಿ, ಮಿನಿ ಬಸ್ ಮತ್ತತಿರ ಎಲ್ಲ ಹೊಸ ವಾಣಿಜ್ಯ ವಾಹನಗಳಿಗೆ ತಾಸಿಗೆ ಗರಿಷ್ಠ 80 ಕಿ. ಮೀ.ವೇಗಮಿತಿ ಖಾತರಿಪಡಿಸುವ...
ಕಾಶ್ಮೀರದ ಆಡಳಿತವು ಇನ್ನು 6 ತಿಂಗಳ ಅವಧಿಯ ಕಾಲ ಶ್ರೀನಗರದಿಂದ ನಡೆಯಲ್ಪಡಲಿದೆ. ಚಳಿಗಾಲದ ರಾಜಧಾನಿ ಜಮ್ಮು ತನ್ನ 6 ತಿಂಗಳ ಅವಧಿ ಪೂರೈಸಿದ್ದು, ಮೇ 5ರಿಂದ ಕಾಶ್ಮೀರ ದರ್ಬಾರು ಶ್ರೀನಗರಕ್ಕೆ ಸ್ಥಳಾಂತರಗೊಳ್ಳಲಿದೆ.
ರಾಜಭವನ, ಸಚಿವಾಲಯ ಮತ್ತು ಇತರ ಕಚೇರಿಗಳು ಏಪ್ರಿಲ್ 24ರಂದು ಜಮ್ಮುವಿನಲ್ಲಿ...
ವಿದೇಶಿ ದೇಣಿಗೆ ಸ್ವೀಕರಿಸುತ್ತಿರುವ ಎನ್.ಜಿ.ಒಗಳ ಬಗ್ಗೆ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. ಯು.ಎಸ್ ಮೂಲದ ಫೋರ್ಡ್ ಫೌಂಡೇಶನ್ ರಾಜಕೀಯ ಪಕ್ಷಕ್ಕೆ ಹಾಗೂ ಲಾಭದ ಉದ್ದೇಶ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಅಕ್ರಮವಾಗಿ, ದೇಣಿಗೆ ನೀಡುತ್ತಿದೆ ಎಂಬುದು ತನಿಖೆ ಮೂಲಕ ಬಹಿರಂಗವಾಗಿದೆ.
ಫೋರ್ಡ್ ಫೌಂಡೇಷನ್ ವಹಿವಾಟಿನ...
ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...
ಭಯೋತ್ಪಾದಕರು ಜೈಲಿನಲ್ಲಿ ತಮ್ಮೊಂದಿಗಿರುವ ಖೈದಿಗಳನ್ನು ಉಗ್ರವಾದ ನಡೆಸುವಂತೆ ಪ್ರಚೋದಿಸುತ್ತಿರುವುದು ಕಂಡುಬಂದಿದ್ದು, ಭಯೋತ್ಪಾದಕರಿಗಾಗಿಯೇ ಪ್ರತ್ಯೇಕ ಜೈಲು ವವಸ್ಥೆ ಮಾಡಬೇಕಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಭಯೋತ್ಪಾದಕರು ಇತರ ಕ್ರಿಮಿನಲ್ ಅಪರಾಧಿಗಳನ್ನು ತಮ್ಮೊಂದಿಗೆ ಸೇರುವಂತೆ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರದ ಭದ್ರತಾ...
ಭೀಕರ ಭೂಕಂಪಕ್ಕೆ ತತ್ತರಿಸಿರುವ ನೇಪಾಳದಲ್ಲಿ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇತ್ತೀಚಿನ ವರದಿ ಪ್ರಕಾರ 4,352 ಜನರು ಭೂಕಂಪಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 6 ಸಾವಿರ ದಾಟುವ ಸಾಧ್ಯತೆ ಇದೆ.
ಸಾವಿನ ಸಂಖ್ಯೆ ಬಗ್ಗೆ ನೇಪಾಳದ ಗೃಹ ಸಚಿವಾಲಯ ಅಧಿಕೃತ ಮಾಹಿತಿ...
'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ.
ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...
ಭಾರತದ ರಾಷ್ಟ್ರೀಯ ಪ್ರಾಣಿ ಪಟ್ಟದಿಂದ ಹುಲಿಯನ್ನು ಕೆಳಗಿಳಿಸಿ, ಗುಜರಾತ್ ನಲ್ಲಿ ಮಾತ್ರವೇ ಕಂಡುಬರುವ ಸಿಂಹವನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.
ದೇಶದ 17 ರಾಜ್ಯಗಳಲ್ಲಿ ವ್ಯಾಘ್ರ ಸಂತತಿ ಇದ್ದು, ಹುಲಿಯನ್ನು 1972ರಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲಾಗಿದೆ. ಇದೀಗ ಹುಲಿ...
ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ.
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು...
2024ರ ಒಲಂಪಿಕ್ಸ್ ಕ್ರೀಡಾಕೂಟದ ಆಥಿತ್ಯ ವಹಿಸಲು ಭಾರತ ಚಿಂತನೆ ನಡೆಸುತ್ತಿದೆ. 2024ರ ಒಲಂಪಿಕ್ಸ್ ಆಯೋಜನೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮೋದಿ, ಅಹಮದಾಬಾದ್ ನಲ್ಲಿ ಒಲಂಪಿಕ್ಸ್ ಕ್ರಿಡಾಕೂಟ ನಡೆಸಲು ಉತ್ಸುಕರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅಂತರರಾಷ್ಟ್ರೀಯ ಒಲಂಪಿಕ್ ಸಮಿತಿ...
ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ.
ನಟ ಸೈಫ್ ಅಲಿ ಖಾನ್ ಮುಂಬೈನ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...
ಬೆಂಗಳೂರಿನ ಜಿಂದಾಲ್ ಪ್ರಕೃತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮುಂದಿನ ವಾರದಿಂದ ದೆಹಲಿಯಲ್ಲಿ 5 ರೂಂಗಳನ್ನೊಳಗೊಂಡ ಬಂಗಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸಿವಿಲ್ ಲೈನ್ಸ್ ನಲ್ಲಿರುವ ಬಂಗಲೆಯಲ್ಲಿ ಈಗಾಗಲೇ ಎಲ್ಲಾ ಸಿದ್ಧತೆಗಳೂ ಬಹುತೇಕ ಪೂರ್ಣಗೊಂಡಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ...
ತಮ್ಮ ವಿರುದ್ಧ ಕೇಳಿ ಬಂದಿರುವ ಕಪ್ಪು ಹಣದ ಆರೋಪ ಕುರಿತಂತೆ ತನಿಖೆ ನಡೆಸಬೇಕು ಎಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಜಿಲಾಂಗ್ ಅವರೇ ಸ್ವತಃ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಜಿಲಾಂಗ್ ವಿರುದ್ಧ 80ಕೋಟಿ ರೂ. ಅವ್ಯವಹಾರದ ಆರೋಪ ಕೇಳಿ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ.
ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್...
ಪೆಟ್ರೋಲಿಯಂ ಸಚಿವಾಲಯದ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಗಳಲ್ಲಿ ಬಂಧಿತರಾಗಿರುವ ಶಂತನು ಸೈಕಿಯಾ ಎಂಬ ಪತ್ರಕರ್ತ ವಿಚಾರಣೆ ವೇಳೆ ತಾನು ಈ ಹಗರಣದಲ್ಲಿ ಭಾಗಿಯಾಗಿಲ್ಲ. ನನಗೆ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿ ಏನಾಗಬೇಕಿದೆ? ನಾನು ಅಂಥಾ ಕೆಲಸ ಮಾಡಿಲ್ಲ ಎಂದು ಹೇಳಿದ್ದಾರೆ.
ನಾನು...
ವಿದ್ಯುತ್ ದರವನ್ನು ಶೇ.50ರಷ್ಟು ಇಳಿಸುವ ಕುರಿತು ವರದಿ ನೀಡಿ ಎಂದು ಸೂಚನೆ ನೀಡಿದ ಬೆನ್ನಲ್ಲೇ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಕ್ಷ, ತನ್ನ ಪ್ರಣಾಳಿಕೆಯಲ್ಲಿನ ಮತ್ತೂಂದು ಭರವಸೆಯನ್ನು ಈಡೇರಿಸಿದೆ.
ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1 ಲಕ್ಷ ಗುತ್ತಿಗೆ...
ಕಳೆದ ವರ್ಷ ಡಿಸೆಂಬರ್ 31ರಂದು ಗುಜರಾತ್ ನ ಪೋರಬಂದರ್ ಕರಾವಳಿ ತೀರದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಪಾಕ್ ಉಗ್ರರ ಬೋಟನ್ನು ನಾವು ಸುಟ್ಟಿಲ್ಲ, ಅವರೇ ಸ್ಫೋಟಿಸಿಕೊಂಡಿದ್ದು ಎಂದು ಕೋಸ್ಟ್ಗಾರ್ಡ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಬಿ.ಕೆ.ಲೋಶಾಲಿ ಸ್ಪಷ್ಟನೆ ನೀಡಿದ್ದಾರೆ.
ದೋಣಿಯನ್ನು ಸ್ಪೋಟಿಸಿಬಿಡಿ. ನಾವು ಅವರಿಗೆ ಬಿರಿಯಾನಿ...
ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...
ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಅಮಿತಾಭ್ ಕುಂದು ಮೌಲ್ಯಮಾಪನ ಸಮಿತಿ ವರದಿಗೆ ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಅಮಿತಾಭ್ ಕುಂದು ಸಮಿತಿ ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ...
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ-ಧನ ಯೋಜನೆಯಡಿ ಬ್ಯಾಂಕ್ ಖಾತೆ ತೆರೆದವರಿಗೆ ಓವರ್ ಡ್ರಾಫ್ಟ್ (ಓ.ಡಿ.) ನೀಡುವ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವಾಲಯ ಆರಂಭಿಸಿದೆ. ಆದರೆ ಇದಕ್ಕೆ ಹಲವಾರು ಷರತ್ತುಗಳನ್ನೂ ವಿಧಿಸಲಾಗಿದೆ.
ಕುಟುಂಬದಲ್ಲಿ ಎಷ್ಟೇ ಮಂದಿ ಜನ-ಧನದಡಿ ಬ್ಯಾಂಕ್ ಖಾತೆ ಮಾಡಿಸಿಕೊಂಡಿದ್ದರೂ...
'ಅಗ್ನಿ-5 ಕ್ಷಿಪಣಿ' ಯೋಜನಾ ನಿರ್ದೇಶಕ ಆರ್.ಕೆ ಗುಪ್ತಾ ಅವರ ವರ್ಗಾವಣೆಯನ್ನು ರಕ್ಷಣಾ ಸಚಿವಾಲಯ ತಡೆಹಿಡಿದಿದೆ.
ಸ್ವತಃ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಅವರೇ ಆರ್.ಕೆ ಗುಪ್ತಾ ಅವರ ವರ್ಗಾವಣೆಯ ಆದೇಶವನ್ನು ಅಮಾನತ್ತು ಮಾಡುವಂತೆ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು...
'ಕೇಂದ್ರ ಸೆನ್ಸಾರ್ ಮಂಡಳಿ' ಅಧ್ಯಕ್ಷ ಸ್ಥಾನಕ್ಕೆ ಲೀಲಾ ಸ್ಯಾಮ್ ಸನ್ ರಾಜೀನಾಮೆ ನೀಡಿದ್ದಾರೆ. ಮೆಸೆಂಜರ್ ಆಫ್ ಗಾಡ್ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸೆನ್ಸಾರ್ ಮಂಡಳಿ ಅನುಮತಿ ನೀಡಿದ್ದು, ಲೀಲಾ ಸ್ಯಾಮ್ ಸನ್ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ಈ...
ಇನ್ನು ಮುಂದಿನ ದಿನಗಳಲ್ಲಿ ಪರವಾನಗಿ ಶಸ್ತ್ರಾಸ್ತ್ರಗಳನ್ನು ಖರೀದಿಸುವುದು ಭಾರತದಲ್ಲಿ ಸುಲಭವಾಗಲಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಪರವಾನಗಿ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳ ಮತ್ತು ಸಾರ್ವಜನಿಕ ಸ್ನೇಹಿಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.
ಎಕನಾಮಿಕ್ ಟೈಮ್ಸ್ ಗೆ ಗೃಹ ಸಚಿವಾಲಯದ...
ಅರಬ್ಬಿ ಸಮುದ್ರದಲ್ಲಿ ಪತ್ತೆಯಾದ ಹಡಗುಗಳು ಪಾಕಿಸ್ತಾನದ ಹಡಗುಗಳಲ್ಲ. ಭಾರತದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾರತಕ್ಕೆ ಮಾಹಿತಿ ರವಾನಿಸಿದೆ.
ಕರಾಚಿಯಿಂದ ಯಾವುದೇ ಹಡಗು ಭಾರತದತ್ತ ಬಂದಿಲ್ಲ. ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿದ್ದು ಪಾಕಿಸ್ತಾನದ ಹಡಗುಗಳಲ್ಲ. ಕೇಟಿ ಬಂದರಿನಿಂದ...
ಡಿ.17ರ ಬೆಳಿಗ್ಗೆಯಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿದ್ದು ವಿಮಾನಕ್ಕಾಗಿ ಕಾದುಕುಳಿತ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿರುವುದಕ್ಕೆ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಕಾರಣ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಪೈಸ್...
ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.
ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ...
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್ ದೇವ್ಗೆ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ.
ಬಾಬಾ ರಾಮ್ ದೇವ್ಗೆ ಜೀವ ಬೆದರಿಕೆಯಿದೆ ಎಂಬ ಭದ್ರತಾ ಸಂಸ್ಥೆಗಳ ಮಾಹಿತಿಯನ್ವಯ ಕೇಂದ್ರ ಗೃಹ ಸಚಿವಾಲಯ ಸೂಕ್ತ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ದೇಶದ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ.
ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...
'ಯೋಜನೇತರ ವೆಚ್ಚ'ಗಳನ್ನು ಶೇ.10ರಷ್ಟು ಕಡಿಮೆ ಮಾಡಲು ಕಠಿಣ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಸರ್ಕಾರಿ ಅಧಿಕಾರಿಗಳು ವಿದೇಶಗಳಿಗೆ ಭೇಟಿ ನೀಡುವಾಗ ಪ್ರಥಮ ದರ್ಜೆ ಪ್ರಯಾಣ ಮಾಡುವುದಕ್ಕೆ ಕಡಿವಾಣ ಹಾಕಿದೆ.
2014-15ನೇ ಸಾಲಿನಲ್ಲಿ ವಿತ್ತೀಯ ಕೊರತೆಯನ್ನು ಶೇ.4.1ಕ್ಕೆ...
ಮಹತ್ವಾಕಾಂಕ್ಷಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.
ಅ.15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು. ಪ್ರತಿಯೊಬ್ಬ ಸಂಸದರು 2016ರ ವೇಳೆಗೆ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಬೇಕು....
ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ.
ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...
'ಸಾಯಿ ಬಾಬಾ' ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮತ್ತೊಂದು ಹೇಳಿಕೆ ನೀಡಿದ್ದು ದೇಶಾದ್ಯಂತ ಇರುವ ಸಾಯಿ ಬಾಬಾ ದೇವಾಲಯಗಳಿಗೆ ವಿದೇಶದಿಂದ ಬರುತ್ತಿರುವ ದೇಣಿಗೆ ಬಗ್ಗೆ ತನಿಖೆ ನಡೆಸಬೇಕೆಂದು ಹೇಳಿದ್ದಾರೆ.
ಸನಾತನ ಧರ್ಮವನ್ನು ವಿರೂಪಗೊಳಿಸುವುದಕ್ಕಾಗಿ ಸಾಯಿ...
ಏಳು ವರ್ಷಗಳ ನಂತರ ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆಗಳಿವೆ. ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಪೆಟ್ರೋಲ್ ದರವನ್ನು ಕಡಿತಗೊಳಿಸಿರುವ ಎನ್.ಡಿ.ಎ ಸರ್ಕಾರ, ಇದೀಗ ಡೀಸೆಲ್ ದರವನ್ನೂ ಇಳಿಕೆ ಮಾಡಲು ಮುಂದಾಗಿದೆ.
ಕಳೆದ 3 ತಿಂಗಳಲ್ಲಿ ಪೆಟ್ರೋಲ್ ದರ ಇಳಿಕೆಯಾಗಿತ್ತಾದರೂ ಡೀಸೆಲ್...
ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....
ಅಸ್ಸಾಂ ನಲ್ಲಿ ಬೋಡೋ ಉಗ್ರ ಸಂಘಟನೆ ಅಟ್ಟಹಾಸ ಮಿತಿಮೀರಿದ್ದು ಚಿರಂಗ್ ಜಿಲ್ಲೆಯಲ್ಲಿ ಅಸ್ಸಾಂ ಯುವತಿಯೋರ್ವಳನ್ನು ಹತ್ಯೆ ಮಾಡಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಹತ್ಯೆಗೀಡಾಗಿರುವ ಯುವತಿ ಬೋಡೋ ಸಂಘಟನೆ ಬಗ್ಗೆ ಮಾಹಿತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಉಗ್ರರು ಹೇಳಿದ್ದಾರೆ. ಐವರು...
ಸರ್ಕಾರದ ಮುಂದಿರುವ ಸಾವಾಲುಗಳು ಹಾಗೂ ಅಗತ್ಯತೆಗಳನ್ನು ಗುರುತಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ಪ್ರಮುಖ ಸಚಿವಾಲಯಗಳ ಹೆಸರು ಬದಲಿಸಿ ಅದಕ್ಕೆ ಹೊಸ ರೂಪ ನೀಡಲು ನಿರ್ಧರಿಸಿದೆ. ಜತೆಗೆ ಪರಸ್ಪರ ಸಾಮ್ಯವಿರುವ ಸಚಿವಾಲಯಗಳನ್ನು ಒಂದೇ ಸೂರಿನಡಿಯಲ್ಲಿ...
ತಲೆಗೆ ಪೆಟ್ಟು ಬಿದ್ದು ಶಸ್ತ್ರಚಿಕಿತ್ಸೆಗೊಳಗಾಗಿರುವ ಬಿಜೆಪಿ ಮಾಜಿ ಮುಖಂಡ ಜಸ್ವಂತ್ ಸಿಂಗ್ ಕೋಮಾ ಸ್ಥಿತಿಗೆ ಜಾರಿದ್ದಾರೆ. ಜಸ್ವಂತ್ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ.
ರಕ್ಷಣಾ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಜಿ ಕೇಂದ್ರ ಸಚಿರ ಆರೋಗ್ಯ ತೀರಾ ಗಂಭೀರವಾಗಿದೆ ಎಂದು...