Untitled Document
Sign Up | Login    
Dynamic website and Portals
  

Related News

ಇನ್ಸಾಟ್-3ಡಿಆರ್ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ

ಕಳೆದ ತಿಂಗಳು 20 ಉಪಗ್ರಹಗಳನ್ನು ಏಕಕಾಲಕ್ಕೆ ಅಂತರಿಕ್ಷಕ್ಕೆ ಉಡಾಯಿಸುವ ಮೂಲಕ ಸಾಧನೆ ಮಾಡಿದ್ದ ಇಸ್ರೋ ಈ ತಿಂಗಳಾಂತ್ಯದಲ್ಲಿ ಇನ್ಸಾಟ್-3ಡಿಆರ್ ಹವಾಮಾನ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಮತ್ತೊಂದು ಮೈಲುಗಲ್ಲು ಸ್ಥಾಪಿಸಲಿದೆ. ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕ ಮೈಲ್​ಸಮಿ ಅಣ್ಣಾದುರೈ,ಈ ಬಗ್ಗೆ ಮಾಹಿತಿ...

ಮಧ್ಯಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ: 35 ಮಂದಿ ಸಾವು, 9 ಜನರು ಕಣ್ಮರೆ

ಮಧ್ಯಪ್ರದೇಶದಲ್ಲಿ ಕಳೆದ ಎರಡು ವಾರಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಈವರೆಗೆ 35 ಮಂದಿ ಸಾವನ್ನಪ್ಪಿದ್ದು, 9 ಮಂದಿ ಕಣ್ಮರೆಯಾಗಿದ್ದಾರೆ. ನಾಪತ್ತೆಯಾದವರೆಲ್ಲರೂ ಮಳೆ ನೀರಿನಲ್ಲಿ ಕೊಚ್ಚಿ ಕೊಂಡು...

ಮಧ್ಯಪ್ರದೇಶದಲ್ಲಿ ಭಾರೀ ಮಳೆ: 15 ಜನರ ಸಾವು

ಮಧ್ಯಪ್ರದೇಶ ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ರಾಜ್ಯಾಧ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶ ಮತ್ತು ಜಲಾವೃತ ಪ್ರದೇಶದ ಜನರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ...

ಕೇರಳಕ್ಕೆ ನೈಋತ್ಯ ಮುಂಗಾರು ಮಾರುತ ಪ್ರವೇಶ: ಭಾರೀ ಮಳೆ

ನೈಋತ್ಯ ಮುಂಗಾರು ಮಾರುತ ಕೇರಳ ಪ್ರವೇಶಿದ್ದು, ತಮಿಳುನಾಡು ಮತ್ತು ಕೇರಳ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಕೇಂದ್ರ ಹವಾಮಾನ ಇಲಾಖೆ ಜೂನ್ 9ಕ್ಕೆ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶ ಮಾಡಲಿವೆ ಎಂದು...

ಮೇ ಕೊನೆ ಅಥವಾ ಜೂನ್ ಆರಂಭದಲ್ಲಿ ಮುಂಗಾರು ಮಾರುತ ಪ್ರವೇಶ

ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ ಅಂತ್ಯ ಅಥವಾ ಜೂನ್‌ ಆರಂಭದಲ್ಲಿ ದೇಶವನ್ನು ಪ್ರವೇಶಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್‌ ತಿಳಿಸಿದ್ದಾರೆ. ನಾಲ್ಕು ದಿನಗಳ ವ್ಯತ್ಯಾಸದೊಂದಿಗೆ ಮೇ 31ರೊಳಗೆ ಮುಂಗಾರು ಮಾರುತಗಳು ಆಗಮಿಸಲಿವೆ. ಈ ಕುರಿತ...

ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

ಹಸಿರು ಮನೆ ಅನಿಲ ಉತ್ಪಾದನೆ ಕಡಿಮೆ ಮಾಡಲು ಹಲವು ನಿಯಮಗಳನ್ನು ಒಳಗೊಂಡಿರುವ ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಭಾರತ, ಅಮೆರಿಕ, ಚೀನಾ ಸೇರಿದಂತೆ ಒಟ್ಟು 175 ರಾಷ್ಟ್ರಗಳು ಸಹಿ ಹಾಕಿವೆ. ಈ ಮೂಲಕ ಜಾಗತಿಕ ತಾಪಮಾನವನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ತುರ್ತು ಅಗತ್ಯವನ್ನು...

ದೇಶದಲ್ಲಿ ಉತ್ತಮ ಮಳೆಯಾದರೆ ಆರ್ಥಿಕ ಪ್ರಗತಿ: ಅರುಣ್ ಜೇಟ್ಲಿ

ಹವಾಮಾನ ಇಲಾಖೆ ಇತ್ತೀಚೆಗೆ ನೀಡಿರುವ ವರದಿಯಂತೆ ಈ ವರ್ಷ ಭಾರತದಲ್ಲಿ ಉತ್ತಮ ಮಳೆಯಾದರೆ ವೇಗವಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಉತ್ತಮ ಮಳೆ ಬಂದರೆ ದೇಶದ ರೈತರು ಚೆನ್ನಾಗಿ ಬೆಳೆ ಬೆಳೆಯಬಹುದು. ಇದರಿಂದ ನಮ್ಮ...

ಪ್ಯಾರಿಸ್ ಒಪ್ಪಂದ ಹವಾಮಾನ ನ್ಯಾಯಕ್ಕೆ ಸಿಕ್ಕ ಜಯಃ ಪ್ರಧಾನಿ ನರೇಂದ್ರ ಮೋದಿ

ಪ್ಯಾರಿಸ್ ನಲ್ಲಿ ಹವಾಮಾನ ಬದಲಾವಣೆ ಒಪ್ಪಂದಕ್ಕೆ 195 ದೇಶಗಳು ಸಹಿ ಹಾಕಿದ ನಂತರ, ಈ ಐತಿಹಾಸಿಕ ಒಪ್ಪಂದದ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇದು ಹವಾಮಾನ ನ್ಯಾಯಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. ಪ್ಯಾರಿಸ್ ಒಪ್ಪಂದದ ಫಲಿತಾಂಶದಲ್ಲಿ ಯಾರೂ ವಿಜೇತರೂ...

ಮಹಾಮಳೆಗೆ ತತ್ತರಿಸಿದ ಚೆನ್ನೈಃ ಜನಜೀವನ ಅಸ್ತವ್ಯಸ್ತ

ಚೆನ್ನೈನಲ್ಲಿ ಮೂರು ದಿನದಿಂದ ಸುರಿದ ಮಳೆ ಗುರುವಾರ ತನ್ನ ಆರ್ಭಟ ಕಡಿಮೆ ಮಾಡಿದೆ. ಆದರೆ ಬುಧವಾರ ರಾತ್ರಿ ಚೆಂಬರಂಬಕ್ಕಂ ಕೆರೆಯಿಂದ ಹೆಚ್ಚು ನೀರು ಹೊರಬಂದಿದರಿಂದ ಹೊಸ ಸ್ಥಳಗಳು ಜಲಪ್ರವಾಹದಿಂದ ಸುತ್ತುವರೆದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ರಾತ್ರಿಯಿಂದ ಮಳೆ ಸುರಿಯದೇ ಇದ್ದರೂ, ಚೆಂಬರಂಬಕ್ಕಂ...

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ಗೆ ಪ್ರಯಾಣ

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ ಗೆ ತೆರಳಿದರು. ಜಾಗತಿಕ ತಾಪಮಾನದ ಕುರಿತು ಮಾತನಾಡುವುದು ಎಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು. ಪ್ಯಾರಿಸ್ ಗೆ ಹೊರಡುವ ಮೊದಲು ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ...

ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ತಮಿಳುನಾಡಿನ ಕರಾವಳಿ, ಪುದುಚೇರಿ ಸೇರಿ...

ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಟರ್ಕಿ ತಲುಪಿದ ಪ್ರಧಾನಿ ನರೇಂದ್ರ ಮೋದಿ

ತಮ್ಮ ಮೂರು ದಿನಗಳ ಯುಕೆ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಜಿ-20 ಶೃಂಗಸಭೆಗಾಗಿ ಶನಿವಾರ ರಾತ್ರಿ ಟರ್ಕಿಯ ಅಂತಾಲಿಯಾ ತಲುಪಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯ ಸಮಸ್ಯೆಗಳು, ಹವಾಮಾನ ಬದಲಾವಣೆ, ಕಪ್ಪುಹಣ ಹೊರತರಲು ಜಾಗತಿಕ ಸಹಕಾರ...

ಮುಂಬೈನಲ್ಲಿ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ

ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರೈಲು ನಿಲ್ದಾಣಗಳು, ತಗ್ಗುಪ್ರದೇಶಗಳು, ಜನನಿಬಿಡ ರಸ್ತೆಗಳು ಹಳ್ಳಗಳಂತಾಗಿದ್ದು, ಎಲ್ಲೆಂದರಲ್ಲಿ ನೀರು ತುಂಬಿಕೊಂಡಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾನಗರಿಯಲ್ಲಿ 283 ಮಿ.ಮೀನಷ್ಟು ಮಳೆಯಾಗಿದೆ....

ಮುಂಬೈ ಬಳಿ ಅಶೋಬಾ ಚಂಡಮಾರುತ: ಭಾರಿ ಮಳೆ ಸಾಧ್ಯತೆ

ಅಶೋಬಾ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಬೈನಿಂದ 570 ಕಿ.ಮೀ ದೂರದಲ್ಲಿ ಚಂಡಮಾರುತ ಕಾಣಿಸಿ ಕೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚು ತೀವ್ರವಾಗುತ್ತಿದೆ. ಪರಿಣಾಮ ಈಗಾಗಲೇ ಮಂಗಳೂರಿನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಅದೇ ರೀತಿ ಕರಾವಳಿ ಭಾಗದಲ್ಲಿ...

ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನಷ್ಟು ಪ್ರಬಲವಾಗುವ ಸಾಧ್ಯತೆ

4 ದಿನದ ವಿಳಂಬದ ಬಳಿಕ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ. ಮುಂಗಾರು ಮುಂದಿನ 48 ಗಂಟೆಗಳಲ್ಲಿ ಇನ್ನಷ್ಟು ಪ್ರಬಲವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮುನ್ನುಗ್ಗಲು ಪೂರಕ ವಾತಾವರಣವಿದೆ. ಕರ್ನಾಟಕ, ತಮಿಳುನಾಡಿನ ಕೆಲ ಭಾಗ, ರಾಯಲ ಸೀಮೆ ಮತ್ತು ಆಂಧ್ರಪ್ರದೇಶದ ಕರಾವಳಿ,...

ಮುಂಗಾರು ಮಾರುತಗಳು ಮತ್ತೆ ವಿಳಂಬ: ಜೂ.3ಕ್ಕೆ ಕೇರಳಕ್ಕೆ ಪ್ರವೇಶ ಸಾಧ್ಯತೆ

ನೈಋತ್ಯ ಮುಂಗಾರು ಮಾರುತಗಳು ಶನಿವಾರವೇ ಕೇರಳ ಪ್ರವೇಶಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಮುಂಗಾರು ತುಸು ವಿಳಂಬವಾಗಿದ್ದು, ಜೂ.1ರ ಸೋಮವಾರ ಅಥವಾ ಜೂನ್‌ 3ರ ಬುಧವಾರ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ. ಸಾಮಾನ್ಯವಾಗಿ ಜೂ.1ರಂದು ಕೇರಳ ಮೂಲಕ ದೇಶವನ್ನು...

ಬಿಸಿಲಿನ ಝಳದೊಂದಿಗೆ ಹೆಚ್ಚಿದ ಅಲ್ಟ್ರಾವಯಲೆಟ್‌

ಬಿಸಿಲಿನ ಝಳ ತಾಳಲಾರದೆ ದೇಶದಲ್ಲಿ ಸಾವಿರಾರು ಮಂದಿ ಸಾವನ್ನಪ್ಪುತ್ತಿರುವುದಕ್ಕೆ ಅಪಾಯಕಾರಿ ಅತಿನೇರಳೆ ಕಿರಣ (ಅಲ್ಟ್ರಾವಯಲೆಟ್‌)ದ ಪಾತ್ರವೂ ಕಾರಣ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಒಂದು ನಿರ್ದಿಷ್ಟ ಸಮಯ ಹಾಗೂ ನಿರ್ದಿಷ್ಟ ತಾಣದಲ್ಲಿ ಬೀಳುವ ಸೂರ್ಯನ ಕಿರಣಗಳ ಸಾಮರ್ಥ್ಯ ಅಳೆಯಲು ಅಲ್ಟ್ರಾವಯಲೆಟ್‌ ಇಂಡೆಕ್ಸ್‌ ಅಥವಾ...

ಬಿಸಿಲ ಝಳ ಹೆಚ್ಚಳ: ರೆಡ್ ಬಾಕ್ಸ್ ಅಲರ್ಟ್ ಘೋಷಣೆ

ದೇಶದ ಹಲವು ರಾಜ್ಯಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ, 4 ರಾಜ್ಯಗಳಲ್ಲಿ ರೆಡ್‌ ಬಾಕ್ಸ್‌ ಅಲರ್ಟ್‌ ಘೋಷಿಸಿದೆ. ಈ ಮೂಲಕ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಭಾರೀ ಬಿಸಿಲಿಗೆ ಕಳೆದ 15 ದಿನಗಳ ಅವಧಿಯಲ್ಲಿ 1000ಕ್ಕೂ ಹೆಚ್ಚು...

ನೇಪಾಳ ಹಾಗೂ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ನೇಪಾಳ, ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಭಾರತ ಹಾಗೂ ಪೂರ್ವ ಭಾರತದ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದೆ. ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ದೆಹಲಿಯಲ್ಲಿ ಸುಮಾರು 20 ಸೆಕೆಂಡುಗಳ ಕಾಲ ಭೂಮಿ...

ನೇಪಾಳದಲ್ಲಿ ಭೂಕಂಪ: ಸಾವಿನ ಸಂಖ್ಯೆ 600ಕ್ಕೆ ಏರಿಕೆ

ನೇಪಾಳದಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, 9 ಅಂತಸ್ತಿನ ಐತಿಹಾಸಿಕ ಭೀಮ್ ಸೇನ್ ಟವರ್ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ನೂರಾರು ಮಂದಿ ಸಿಲಿಕಿರುವುದಾಗಿ ಶಂಕಿಸಲಾಗಿದೆ. ಏತನ್ಮಧ್ಯೆ ನೇಪಾಳದಲ್ಲಿ ಬಾಲಕಿ ಸೇರಿ 600ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ನೇಪಾಳ ಪೊಲೀಸರು ಮಾಹಿತಿ ನೀಡಿದ್ದಾರೆ. ನೇಪಾಳದಲ್ಲಿ...

ಈ ವರ್ಷ ಕಡಿಮೆ ಮುಂಗಾರು ಮಳೆ

ಕಳೆದ ಸಾಲಿನಲ್ಲಿ ಮುಂಗಾರಿನ ಮೇಲೆ ಪರಿಣಾಮ ಬೀರಿದ್ದ ಎಲ್ ನಿನೋ ಈ ಬಾರಿಯೂ ಮಾನ್ಸೂನ್‌ ಮೇಲೆ ಕರಾಳ ಛಾಯೆ ಬೀರಲಿದೆ. ಈ ವರ್ಷ ಸಾಮಾನ್ಯ ಸರಾಸರಿಯ ಶೇ.93ರಷ್ಟು ಮಾತ್ರವೇ ಮುಂಗಾರು ಮಳೆ ಸುರಿಯುವ ನಿರೀಕ್ಷೆ ಇದೆ. ಮಳೆ ಕಡಿಮೆಯ ಪ್ರಮಾಣ, ಈಶಾನ್ಯ...

ಒಂದು ವಾರ ಮೊದಲೇ ಮುಂಗಾರು ಆಗಮನ ನಿರೀಕ್ಷೆ

ಭಾರತದ ಮುಂಗಾರಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕೇರಳಕ್ಕೆ ಈ ವರ್ಷ ಒಂದು ವಾರ ಮೊದಲೇ ಮುಂಗಾರು ಮಳೆ ಆರಂಭವಾಗಲಿದೆ. ಬಹುತೇಕ ಮೇ 24ರಿಂದ 27ರ ನಡುವೆ ಮುಂಗಾರು ಪ್ರವೇಶವಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ಕೇರಳಕ್ಕೆ...

ಎಲ್‌ ನಿನೋ: ಈ ವರ್ಷವೂ ಮಳೆಯ ಮೇಲೆ ಪರಿಣಾಮ

ಕಳೆದ ಸಾಲಿನಲ್ಲಿ ಮುಂಗಾರು ಮಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದ ’ಎಲ್‌ ನಿನೋ' ಪ್ರಭಾವ ಈ ಬಾರಿಯೂ ಸದ್ದು ಮಾಡತೊಡಗಿದೆ. ಈ ಬಾರಿ ’ಎಲ್‌ ನಿನೋ” ಪ್ರಭಾವ ಶೇ.50ರಷ್ಟು ಇರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಮೆರಿಕ ಹಾಗೂ ಆಸ್ಟ್ರೇಲಿಯಾಗಳು...

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ಪ್ರವಾಹದ ಮುನ್ಸೂಚನೆ

ಕಳೆದ ಎರಡು ದಿನಗಳಿಂದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಕಾಶ್ಮೀರದಲ್ಲಿ ಭಾರೀ ಪ್ರವಾಹದ ಎಚ್ಚರಿಕೆ ನೀಡಿದೆ. ಇಲಾಖೆಯ ವರದಿಗಳ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ...

ದೆಹಲಿಯಲ್ಲಿ ಹವಾಮಾನ ವೈಪರಿತ್ಯ:ವಾಯುಪಡೆಯ ಪ್ರದರ್ಶನ ಸ್ಥಗಿತ ಸಾಧ್ಯತೆ

'ದೆಹಲಿ'ಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಿರುವ ಕಾರಣದಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮವಾದ ವಾಯುಪಡೆಯ ಪ್ರದರ್ಶನ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರು ಈಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿದ್ದು, ಎಂದಿನ ಗಣರಾಜ್ಯೋತ್ಸವ ದಿನಾಚರಣೆಗಿಂತಲೂ ಈ ಬಾರಿಯದ್ದು ವಿಶೇಷವಾಗಿದೆ. ಬೆಳಿಗ್ಗೆ...

ನಿಲೋಫರ್ ಚಂಡಮಾರುತದ ಭೀತಿ: ಭಾರಿ ಮಳೆ ಸಾಧ್ಯತೆ

ಹುಡ್ ಹುಡ್ ಚಂಡಮಾರುತವಾಯ್ತು ಈಗ ನಿಲೋಫರ್ ಚಂಡಮಾರುತದ ಭೀತಿ ದೇಶಕ್ಕೆ ಆವರಿಸಿದೆ. ದೇಶದ ಪಶ್ಚಿಮ ಕರಾವಳಿಗೆ ನಿಲೋಫರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಚಂಡಮಾರುತದ ಸ್ವರೂಪ ಪಡೆದು ಗುಜರಾತ್ ನ ಕರಾವಳಿಯಲ್ಲಿ ಕಛ್ ಗೆ ಅಪ್ಪಳಿಸುವ ಸಂಭವವಿದೆ...

ವಾಯುಭಾರ ಕುಸಿತ ಹಿನ್ನಲೆ: ಇನ್ನೂ ಮೂರು ದಿನ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಅ.28ರವರೆಗೂ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ತಜ್ನರು ತಿಳಿಸಿದ್ದಾರೆ. ವಾಯುಭಾರ ಕುಸಿತದ...

ಆಂಧ್ರದಲ್ಲಿ ಹುಡ್ ಹುಡ್ ಅಬ್ಬರಕ್ಕೆ ಮೂರು ಸಾವು

ಆಂಧ್ರಪ್ರದೇಶದಲ್ಲಿ ಹುಡ್ ಹುಡ್ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಚಂಡಮಾರುತ ತನ್ನ ಅಬ್ಬರವನ್ನು ಆರಂಭಿಸಿದ್ದು, ಈವರೆಗೆ ಮೂವರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಕರಾವಳಿ ಭಾಗದಲ್ಲಿ ಹುಡ್ ಹುಡ್ ಚಂಡಮಾರುತದ ತೀವ್ರತೆ ಹೆಚ್ಚಿದ್ದು, ಗಂಟೆಗೆ 190 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ....

ದೇಶಾದ್ಯಂತ ಭಾರೀ ಮಳೆ ಸಂಭವ

ದೇಶಾದ್ಯಂತ ಮುಂದಿನ 48 ಗಂಟೆಗಳೊಳಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ನಾಲ್ಕು ದಿನಳವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ನಿರ್ಬಂಧ ಹಾಕಬೇಕು ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಅಂಡಮಾನ್ -...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited