ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಭಾರತೀಯ ರಾಜತಾಂತ್ರಿಕ...